ಹಳ್ಳಿಹಕ್ಕಿ ಎಚ್.ವಿಶ್ವನಾಥ್ ಬಿಜೆಪಿಯಲ್ಲಿ 'ಮೂಕಹಕ್ಕಿ'ಯಾದ ಕಥೆ
ರಾಜಕೀಯದಲ್ಲಿ ಪಳಗಿದವರಿಗೆ ಕೆಲವೊಂದು ಒಳಗುಟ್ಟು, ಚುನಾವಣೆ, ಉಪಚುನಾವಣೆಯಲ್ಲಿ ಏನಾಗಬಹುದು ಎನ್ನುವ ಅರಿವಿರುತ್ತದೆ. ಅವರ ಸಲಹೆಯನ್ನು ತಿರಸ್ಕರಿಸಿದರೆ ಏನಾಗುತ್ತದೆ ಎನ್ನುವುದಕ್ಕೆ ಬಿಜೆಪಿಯ ಹಿರಿಯ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಉದಾಹರಣೆಯಾಗಬಲ್ಲರು.
ಹುಣಸೂರು ಅಸೆಂಬ್ಲಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಣಕ್ಕೆ ಇಳಿಯಬೇಡಿ, ಕ್ಷೇತ್ರದಲ್ಲಿ ನಿಮಗೆ ಪೂರಕವಾದ ವಾತಾವರಣ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪರಿಪರಿಯಾಗಿ ಹೇಳಿದ್ದರೂ, ವಿಶ್ವನಾಥ್ ಹಠಕ್ಕೆ ಬಿದ್ದು ಕಣಕ್ಕಿಳಿದಿದ್ದರು.
ಚುನಾವಣೆಯ ಫಲಿತಾಂಶ ಯಡಿಯೂರಪ್ಪನವರ ನಿರೀಕ್ಷೆಯಂತೆ ಬಂತು. ಕಾಂಗ್ರೆಸ್ಸಿನ ಎಚ್.ಮಂಜುನಾಥ್ ಅವರು ವಿಶ್ವನಾಥ್ ಅವರನ್ನು ಸುಮಾರು ನಲವತ್ತು ಸಾವಿರ ಮತಗಳ ಅಂತರದಿಂದ ಸೋಲಿಸಿದ್ದರು. ಯಾವುದೇ ವಿಧಾನಸಭಾ ಚುನಾವಣೆಯಲ್ಲಿ ಇದು ಅಗಾಧ ಅಂತರದ ಗೆಲುವು ಎಂದೇ ಹೇಳಬಹುದು.
ಅಂದು ಯಡಿಯೂರಪ್ಪನವರ ಮಾತನ್ನು ಕೇಳದೇ, ಈಗ ಚುನಾವಣಾ ಸೋಲಿಗೆ ಅವರು ಕಾರಣ, ಇವರು ಕಾರಣ ಎಂದು ಹೇಳಿಕೆ ನೀಡುತ್ತಿರುವ ಎಚ್.ವಿಶ್ವನಾಥ್ ಗೆ ಹೈಕೋರ್ಟ್ ಭಾರೀ ಶಾಕ್ ನೀಡಿದೆ. ವಿಶ್ವನಾಥ್ ಅವರು ನಾಮನಿರ್ದೇಶನಗೊಂಡ ವಿಧಾನಪರಿಷತ್ ಸದಸ್ಯರಾಗಿರುವುದರಿಂದ ಅವರು ಮಂತ್ರಿಯಾಗುವಂತಿಲ್ಲ ಎಂದು ಕೋರ್ಟ್ ಹೇಳಿದೆ.

ಹೈಕೋರ್ಟ್ ನೀಡಿದ ತೀರ್ಪು
ಮೇಲ್ನೋಟಕ್ಕೆ ಇದು ಬಿಜೆಪಿಗೆ ಹಿನ್ನಡೆಯಾದರೂ, ಮುಖ್ಯಮಂತ್ರಿ ಅಥವಾ ಬಿಜೆಪಿ, ಕೋರ್ಟ್ ಆದೇಶದಿಂದ ಕಳೆದುಕೊಳ್ಳುವುದು ಏನೂ ಇಲ್ಲ. ಬದಲಿಗೆ, ಈ ತೀರ್ಪು ಬಿಜೆಪಿ ಮತ್ತು ಸಿಎಂ ಬಿಎಸ್ವೈಗೆ ವರದಾನವೇ ಆಗಿದೆ. ಮೇಲಿಂದ ಮೇಲೆ, ಸಚಿವ ಸ್ಥಾನಕ್ಕೆ ದಂಬಾಲು ಬೀಳುತ್ತಿದ್ದ ವಿಶ್ವನಾಥ್ ಅವರ ಒತ್ತಡದಿಂದ ಮುಖ್ಯಮಂತ್ರಿಗಳಿಗೆ ಮುಕ್ತಿ ಸಿಕ್ಕಂತಾಗಿದೆ.

ಆಪರೇಶನ್ ಕಮಲ
ಆಪರೇಶನ್ ಕಮಲ ಆರಂಭವಾದ ದಿನದಿಂದ ಸದಾ ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದ ಎಚ್.ವಿಶ್ವನಾಥ್ ಗೆ ಎಂ.ಟಿ.ಬಿ ನಾಗರಾಜ್ ಮತ್ತು ಆರ್.ಶಂಕರ್ ಜೊತೆ, ಪರಿಷತ್ ಚುನಾವಣೆಗೆ ಬಿಜೆಪಿ ಟಿಕೆಟ್ ಸಿಕ್ಕಿರಲಿಲ್ಲ. ಆದರೂ, ಹಠ ಹಿಡಿದು ಸಾಹಿತಿ ಕೋಟಾದಿಂದ ಪರಿಷತ್ತಿಗೆ ವಿಶ್ವನಾಥ್ ನಾಮನಿರ್ದೇಶನಗೊಂಡರು.

ವಿಶ್ವನಾಥ್ ಜೊತೆಗಿದ್ದ ರಮೇಶ್ ಜಾರಕಿಹೊಳಿ, ಸೋಮಶೇಖರ್
ಅಂದು ಎಚ್.ವಿಶ್ವನಾಥ್ ಜೊತೆಗಿದ್ದ ರಮೇಶ್ ಜಾರಕಿಹೊಳಿ, ಸೋಮಶೇಖರ್, ಡಾ.ಸುಧಾಕರ್ ಆಗಲಿ ಈಗ ತಟಸ್ಥರಾಗಿದ್ದಾರೆ. ಕೋರ್ಟ್ ತೀರ್ಪಿನ ವಿರುದ್ದ ಮಾತನಾಡಲೂ ಆಗದೆ, ಯಾರೂ ವಿಶ್ವನಾಥ್ ಪರವಾಗಿ ನಿಂತಿಲ್ಲ ಎನ್ನುವುದು ಸ್ಪಷ್ಟ. ಕೋರ್ಟ್ ತೀರ್ಪು ಬರುವುದಕ್ಕಿಂತ ಮುಂಚಿತವಾಗಿಯೂ ಆಪರೇಶನ್ ಕಮಲ ಮಂಡಳಿ ಸದಸ್ಯರು ಎಚ್.ವಿಶ್ವನಾಥ್ ಅವರ ಪರವಾಗಿ ಲಾಬಿ ನಡೆಸಿದವರಲ್ಲ.
Recommended Video

ಹಳ್ಳಿಹಕ್ಕಿ ಎಚ್.ವಿಶ್ವನಾಥ್ ಬಿಜೆಪಿಯಲ್ಲಿ ಮೂಕಹಕ್ಕಿಯಾದ ಕಥೆ
ಒಟ್ಟಿನಲ್ಲಿ ಅಂದಿನ ಸ್ಪೀಕರ್ ರಮೇಶ್ ಕುಮಾರ್ ಏನು ವಿಶ್ವನಾಥ್ ಗೆ ಅನರ್ಹ ಎನ್ನುವ ಪಟ್ಟವನ್ನು ಕಟ್ಟಿದ್ದರೋ, ಅದು ಇನ್ನೂ ಮುಂದುವರಿದಿದೆ. ಅಂದು ಮುಖ್ಯಮಂತ್ರಿಯವರ ಮಾತನ್ನು ಕೇಳಿ, ಚುನಾವಣೆಗೆ ಸ್ಪರ್ಧಿಸದೇ ಇದ್ದಿದ್ದರೆ, ಎಂಟಿಬಿ, ಶಂಕರ್ ರೀತಿಯಲ್ಲಿ ಪರಿಷತ್ತಿಗೆ ಚುನಾವಣೆಯ ಮೂಲಕವೇ ಆಯ್ಕೆಯಾಗಬಹುದಾಗಿತ್ತು. ಇದೇ ಭರವಸೆಯನ್ನು ಸಿಎಂ ನೀಡಿದ್ದದ್ದು ಕೂಡಾ.. ಸದ್ಯ, ಹಳ್ಳಿಹಕ್ಕಿ ಎಚ್.ವಿಶ್ವನಾಥ್ ಬಿಜೆಪಿಯಲ್ಲಿ ಮೂಕಹಕ್ಕಿ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications