ದೇಶದ್ರೋಹ ಆರೋಪ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು!
ಬೆಂಗಳೂರು: ದೇಶದ ಗಮನವನ್ನೇ ಸೆಳೆದಿದ್ದ ಬೀದರ್ನ ಶಾಹೀನ್ ಶಾಲೆ ಆಡಳಿತ ಮಂಡಳಿ ವಿರುದ್ಧದ ಕೇಸ್ ದೊಡ್ಡ ಟ್ವಿಸ್ಟ್ ಪಡೆದುಕೊಂಡಿದೆ. ದೇಶದ್ರೋಹದ ಆರೋಪ ಹೊರಿಸಿ ದಾಖಲಿಸಿದ್ದ ಈ ಪ್ರಕರಣದಲ್ಲಿ ಮಹತ್ವದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ನೀಡಿದೆ. ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠ ನೀಡಿದ ಮಹತ್ವದ ತೀರ್ಪಿನ ಮಾಹಿತಿ ಇಲ್ಲಿದೆ.
2020ರಲ್ಲಿ ಪಿಎಂ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರ ಟೀಕಿಸಿದ್ದ ನಾಟಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಾಗಿತ್ತು. ಬೀದರ್ ಶಾಹೀನ್ ಶಾಲೆ ಆಡಳಿತ ಮಂಡಳಿ ವಿರುದ್ಧ ಬೀದರ್ ಮೂಲದವರು ದಾಖಲಿಸಿದ್ದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಕಲಬುರಗಿಯ ಪೀಠ ಮಹತ್ವದ ತೀರ್ಪು ನೀಡಿದೆ. ಶಾಲೆ ವಿರುದ್ಧದ ದೇಶದ್ರೋಹ ಇತರ ಆರೋಪಗಳನ್ನು ಕೈಬಿಟ್ಟಿದೆ. ಇನ್ನು ಶಾಹೀನ್ ಶಾಲಾಡಳಿತದ ಪರ ವಕೀಲ ಅಮಿತ್ ಕುಮಾರ್ ದೇಶಪಾಂಡೆ ವಾದ ಆಲಿಸಿದ ಜಸ್ಟಿಸ್ ಹೇಮಂತ್ ಚಂದನ್ಗೌಡರ್ ಈ ಪ್ರಕರಣ ವಜಾಗೊಳಿಸಿದ್ದಾರೆ. ಈ ಪ್ರಕರಣ ಕೆಲವು ವರ್ಷಗಳ ಹಿಂದೆ ದೇಶಾದ್ಯಂತ ಸಂಚಲನ ಸೃಷ್ಟಿ ಮಾಡಿತ್ತು. ಹಾಗಾದರೆ ಈ ಪ್ರಕರಣದ ಹಿನ್ನೆಲೆ ಏನು? ಕೇಸ್ ದಾಖಲಾಗಿದ್ದು ಹೇಗೆ? ತಿಳಿಯೋಣ ಬನ್ನಿ.

ಘಟನೆಯ ಹಿನ್ನೆಲೆ ಏನು? ನಡೆದಿದ್ದು ಹೇಗೆ?
ಅಂದಹಾಗೆ ಅದು ಜನವರಿ 2020, ಕರ್ನಾಟಕದ ಗಡಿ ಜಿಲ್ಲೆ ಬೀದರ್ನ ಶಾಹೀನ್ ಶಾಲೆಯ 4, 5, 6ನೇ ತರಗತಿ ವಿದ್ಯಾರ್ಥಿಗಳು ಸಿಎಎ ವಿರೋಧಿ ಕಥಾವಸ್ತು ಹೊಂದಿದ ನಾಟಕವನ್ನ ಪ್ರದರ್ಶಿಸಿದ್ದರು ಎಂದು ಆರೋಪಿಸಲಾಗಿತ್ತು. ಇದೇ ಘಟನೆಗೆ ಸಂಬಂಧಿಸಿ ಶಾಲಾಡಳಿತದ ವಿರುದ್ಧ ಕೇಸ್ ಕೂಡ ದಾಖಲಾಗಿತ್ತು. ಇದೇ ನಾಟಕದಲ್ಲಿ ಪಿಎಂ ಮೋದಿ ಅವರ ವಿರೋಧಿ ಘೋಷಣೆ & ಮತೀಯ ನಿಂದನೆ ಪದ ಇದ್ದವು ಎಂದು ಗಂಭೀರ ಆರೋಪ ಮಾಡಲಾಗಿತ್ತು. ಅಲ್ಲದೆ ಬೀದರ್ನ ಪೊಲೀಸರು ನಿಲೇಶ್ ರಕ್ಷಲ ಎಂಬವವರ ದೂರಿನ ಆಧಾರದಲ್ಲಿ ಐಪಿಸಿ ಸೆಕ್ಷನ್ 504, 505(2), 124(ಎ), 153(ಎ) ಅನ್ವಯ ಕೇಸ್ ದಾಖಲು ಮಾಡಿದ್ದರು.
ಮಕ್ಕಳ ಮೇಲೆ ಪೊಲೀಸರ ಒತ್ತಡ?
ಹೌದು, ಇಂತಹ ಗಂಭೀರ ಆರೋಪ ಕೂಡ ಇದೇ ಪ್ರಕರಣದಲ್ಲಿ ಕೇಳಿಬಂದಿತ್ತು. ನಾಟಕ ನಡೆದ ಬಳಿಕ ಕೇಸ್ ದಾಖಲಾಗಿತ್ತು, ಆ ನಂತ್ರ ಶಾಲೆ ಆಡಳಿತ ಮಂಡಳಿ ಕೂಡ ಆರೋಪ ನಿರಾಕರಿಸಿತ್ತು. ಆದರೆ ಪೊಲೀಸರು ಮಕ್ಕಳನ್ನ ʻದೇಶ-ವಿರೋಧಿಗಳುʼ ಎಂಬಂತೆ ನೋಡ್ತಾರೆ ಹಾಗೂ ಶಾಲೆಗೆ ಪ್ರತಿದಿನ ಭೇಟಿ ನೀಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿತ್ತು. ಕೇಸ್ನಲ್ಲಿ ಮಕ್ಕಳನ್ನು ವಿಚಾರಣೆ ನಡೆಸುವಾಗ ಸಶಸ್ತ್ರ ಪೊಲೀಸ್ ಅಧಿಕಾರಿಗಳು ಹಾಜರಿದ್ದರು ಎಂದು ಆರೋಪಿಸಲಾಗಿತ್ತು. ಹೀಗೆ ಸಶಸ್ತ್ರ ಪೊಲೀಸ್ ಅಧಿಕಾರಿಗಳ ಉಪಸ್ಥಿತಿ ಬಾಲ ನ್ಯಾಯ ಕಾಯಿದೆ 2015 ಮತ್ತು ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆಗಸ್ಟ್ 17, 2021 ರಂದು ಕರ್ನಾಟಕ ಹೈಕೋರ್ಟ್ ಬೆಂಗಳೂರು ಪೀಠವು ಹೇಳಿತ್ತು. ಇಂದು ಈ ಪ್ರಕರಣವನ್ನೇ ವಜಾಗೊಳಿಸಿ ಹೈಕೋರ್ಟ್ ಪೀಠವು ಆದೇಶ ಹೊರಡಿಸಿದೆ.
ಇಷ್ಟೆಲ್ಲದರ ನಡುವೆ ಮಕ್ಕಳ ಹಕ್ಕಿಗೆ ಸಂಬಂಧಿಸಿದಂತೆ ಹೈಕೋರ್ಟ್ಗೆ ಮೂಡಿಗೆರೆಯ ಹಾಲಿ ಶಾಸಕಿ ನಯನಾ ಮೋಟಮ್ಮ ಅರ್ಜಿ ಸಲ್ಲಿಸಿದ್ದರು. 9 ವರ್ಷದಷ್ಟು ಕಿರಿಯ ಮಕ್ಕಳು ಸೇರಿದಂತೆ 85 ಮಕ್ಕಳು ಪೊಲೀಸ್ ವಿಚಾರಣೆ ಎದುರಿಸಬೇಕಾಯಿತು. ಇದು ಮಕ್ಕಳ ಮನಃಸ್ಥಿತಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು. ಇನ್ನು ಹೈಕೋರ್ಟ್ ಪೀಠ ನೀಡಿರುವ ತೀರ್ಪಿನಿಂದ ಶಾಲಾ ಆಡಳಿತ ಮಂಡಳಿ ನಿಟ್ಟುಸಿರು ಬಿಟ್ಟಿದೆ. ಹಾಗೇ ಮಕ್ಕಳ ಪೋಷಕರು ಕೂಡ ನಿಟ್ಟುಸಿರು ಬಿಟ್ಟಿದ್ದಾರೆ. ಶಾಲಾ ಆಡಳಿತ ಮಂಡಳಿ ತೀರ್ಪಿನ ಬಗ್ಗೆ ಸಂತಸ ವ್ಯಕ್ತಪಡಿಸಿದೆ. ಇದರ ಜೊತೆಗೆ ಇನ್ನೊಂದು ಮಹತ್ವದ ತೀರ್ಪೊಂದನ್ನು ಹೈಕೋರ್ಟ್ ಪೀಠವು ನೀಡಿದಂತಾಗಿದೆ.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications