ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ಭ್ರೂಣ ತೆಗೆಸಲು ಹೈಕೋರ್ಟ್ ಅನುಮತಿ
ಬೆಂಗಳೂರು, ನವೆಂಬರ್ 12: ಅತ್ಯಾಚಾರಕ್ಕೆ ಸಂಬಂಧಿತ ಪ್ರಕರಣವೊಂದರ ವಿಚಾರಣೆ ನಡೆಸಿರುವ ಕರ್ನಾಟಕ ರಾಜ್ಯ ಹೈಕೋರ್ಟ್ ನ್ಯಾಯಪೀಠ, ಸಂತ್ರಸ್ತೆಯ 25 ವಾರಗಳ ಭ್ರೂಣ ತೆಗೆಸಲು ಅನುಮತಿ ನೀಡಿ ಆದೇಶ ಹೊರಡಿಸಿದೆ.
13 ವರ್ಷದ ಬಾಲಕಿಯೊಬ್ಬರ ಮೇಲೆ ಅತ್ಯಾಚಾರ ನಡೆದಿತ್ತು. ಈ ವೇಳೆ ಸಂತ್ರಸ್ತೆ ಬಾಲಕಿ ಗರ್ಭಧರಿಸಿದ್ದರಿಂದ ಅದನ್ನು ತೆಗೆಸಲು ನಿರ್ಧರಿಸಿದ್ದರು. ಈ ಕಾರಣಕ್ಕೆ ಸಂತ್ರಸ್ತೆ ಕರ್ನಾಟಕ ರಾಜ್ಯ ಹೈಕೋರ್ಟ್ಗೆ ಗರ್ಭಪಾತ ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ್ದರು.
ಆ ಸಂತ್ರಸ್ತ ಬಾಲಕಿ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠದ ಮುಂದೆ ತನ್ನ ಹೊಟ್ಟೆಯಲ್ಲಿರುವ 25 ವಾರಗಳ ಭ್ರೂಣದ ಗರ್ಭಪಾತಕ್ಕೆ ಮನವಿ ಮಾಡಿದ್ದರು. ಬಾಲಕಿ ಅಪ್ರಾಪ್ತ ವಯಸ್ಕಳಾಗಿದ್ದು, ಆಕೆಯ ಶಾಲಾ ಪ್ರಮಾಣಪತ್ರ ಮತ್ತು ರೇಡಿಯಾಲಜಿಸ್ಟ್ ನೀಡಿದ ಸ್ಕ್ಯಾನ್ ವರದಿಯನ್ನು ನ್ಯಾಯಪೀಠ ಪರಿಶೀಲಿಸಿತು. ಅದರ ಪ್ರಕಾರ ಆಕೆ 25 ವಾರಗಳ ಗರ್ಭಿಣಿ ಎಂದು ಸಂತ್ರಸ್ತೆಯ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದರು. ಬಳಿಕ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಬಾಲಕಿಯ ಗರ್ಭಪಾತಕ್ಕೆ ವಾಣಿವಿಲಾಸ್ ಆಸ್ಪತ್ರೆಗೆ ಸೂಚನೆ ನೀಡುವ ಮೂಲಕ ಗರ್ಭಪತಾಕ್ಕೆ ಅವಕಾಶ ಮಾಡಿಕೊಟ್ಟರು.

ವೈದ್ಯರು ಸಂತ್ರಸ್ತ ಬಾಲಕಿಯನ್ನು ತಪಾಸಣೆಗೊಳಪಡಿಸಿ ಅವರ ಜೀವಕ್ಕೆ ಹಾನಿಯಾಗುವಂತಿದ್ದರೆ, ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಭ್ರೂಣ ತೆಗೆಸಿದ ನಂತರ ಪ್ರಕರಣದ ತನಿಖೆಗೆ ನೆರವಾಗುವುದಕ್ಕಾಗಿ ಭ್ರೂಣವನ್ನು ಡಿಎನ್ಎ ಪರೀಕ್ಷೆಗಾಗಿ ಕಾಯ್ದಿರಿಸಬೇಕು ಆದೇಶದಲ್ಲಿ ಪೀಠ ತಿಳಿಸಿದೆ.

ಇನ್ನೂ ಬಾಲಕಿಯನ್ನು ಆಸ್ಪತ್ರೆಗೆ ಹೋಗುವುದು ಹಾಗೂ ಬರುವುದಕ್ಕಾಗಿ ಪೊಲೀಸರು ವ್ಯವಸ್ಥೆ ಮಾಡಬೇಕು. ಜೊತೆಗೆ ವೈದ್ಯರ ಸೂಚನೆ ಮೇರೆಗೆ ಸಂತ್ರಸ್ತ ಬಾಲಕಿಗೆ ಹೆಚ್ಚುವರಿ ಚಿಕಿತ್ಸೆಗೂ ಇದೇ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿ ಆದೇಶಿಸಿತು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ












Click it and Unblock the Notifications