ವೈದ್ಯಕೀಯ ಶಿಕ್ಷಣ ಶುಲ್ಕವನ್ನು ಮೂರು ಪಟ್ಟು ಹೆಚ್ಚಿಸಿದ ಸರ್ಕಾರ
ಬೆಂಗಳೂರು, ಡಿಸೆಂಬರ್ 18 : ಕರ್ನಾಟಕ ಸರ್ಕಾರ ವೈದ್ಯಕೀಯ ಶಿಕ್ಷಣ ಶುಲ್ಕವನ್ನು ಮೂರು ಪಟ್ಟು ಹೆಚ್ಚಳ ಮಾಡಿದೆ. ಅನಿವಾಸಿ ಭಾರತೀಯ ಕೋಟಾವನ್ನು ಸಹ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನೀಡಲಾಗುತ್ತದೆ ಎಂದು ಸರ್ಕಾರ ಹೇಳಿದೆ.
ಬೆಳಗಾವಿಯಲ್ಲಿ ಮಂಗಳವಾರ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶುಲ್ಕ ಹೆಚ್ಚಳದ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶುಲ್ಕಗಳು ಮೂರುಪಟ್ಟು ಹೆಚ್ಚಳವಾಗಿದೆ.
ಎಂಬಿಬಿಎಸ್ ಶುಲ್ಕವನ್ನು 17 ಸಾವಿರದಿಂದ 50 ಸಾವಿರಕ್ಕೆ. ಸ್ನಾತಕೋತ್ತರ ಪದವಿ ಶುಲ್ಕವನ್ನು 50 ಸಾವಿರದಿಂದ 3 ಲಕ್ಷದ ತನಕ ಹೆಚ್ಚಳ ಮಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಸಭೆಯ ಬಳಿಕ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್, 'ಸರ್ಕಾರಿ ಕೋಟಾದಡಿ ಇರುವ ಸೀಟುಗಳನ್ನು ಹೆಚ್ಚಿಸಲಾಗುತ್ತದೆ. ಅನಿವಾಸಿ ಭಾರತೀಯ ಕೋಟವಾವನ್ನು ಸರ್ಕಾರಿ ಕಾಲೇಜಿನಲ್ಲಿ ನೀಡುತ್ತೇವೆ. ಇದರಿಂದ ಸರ್ಕಾರಕ್ಕೆ ಹೆಚ್ಚಿನ ಹಣ ಬರುತ್ತದೆ. ಈ ಹಣದಿಂದ ವೈದ್ಯಕೀಯ ಕಾಲೇಜು ಸಿಬ್ಬಂದಿ ವೇತನವನ್ನು ಸಹ ಹೆಚ್ಚಳ ಮಾಡಬಹುದು' ಎಂದು ಹೇಳಿದರು.
ಕೆಲವು ದಿನಗಳ ಹಿಂದೆ ಡಿ.ಕೆ.ಶಿವಕುಮಾರ್ ಅವರು, 'ಖಾಸಗಿ ಕಾಲೇಜುಗಳಿಗೆ ಹೋಲಿಕೆ ಮಾಡಿದರೆ ಸರ್ಕಾರಿ ಕಾಲೇಜುಗಳಲ್ಲಿ ಶುಲ್ಕ ಬಹಳ ಕಡಿಮೆ ಇದೆ. ಸರ್ಕಾರ ಪ್ರತಿ ವಿದ್ಯಾರ್ಥಿ ಮೇಲೆ ಸುಮಾರು 10 ಲಕ್ಷ ವೆಚ್ಚ ಮಾಡುತ್ತದೆ. ಆದರೆ, ವಾರ್ಷಿಕ 16 ಸಾವಿರ ರೂ. ಮಾತ್ರ ವಿದ್ಯಾರ್ಥಿಗಳು ಪಾವತಿ ಮಾಡುತ್ತಾರೆ' ಎಂದು ಹೇಳಿದ್ದರು.
-
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
CBSE ಗಣಿತ ಪ್ರಶ್ನೆಪತ್ರಿಕೆಯ QR ಕೋಡ್ ಸ್ಕ್ಯಾನ್ ಮಾಡಿದ್ರೆ ಬರ್ತಿದೆ ಇಂಗ್ಲಿಷ್ ಹಾಡು: ಸಿಬಿಎಸ್ಇ ಸ್ಪಷ್ಟನೆ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?












Click it and Unblock the Notifications