ಕರ್ನಾಟಕದಲ್ಲಿ ಐತಿಹಾಸಿಕ ರೀತಿಯಾಗಿ ವೈದ್ಯರ ನೇಮಕ: ಸಚಿವ ಸುಧಾಕರ್
ಬೆಂಗಳೂರು, ಜೂನ್ 2: ಸರ್ಕಾರಿ ಆಸ್ಪತ್ರೆಗಳಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆ ದೊರೆಯುವ ಮಟ್ಟಿಗೆ ಕೆಲಸ ಮಾಡಿ, ಸರ್ಕಾರಿ ಆಸ್ಪತ್ರೆಗಳ ಬಗೆಗಿನ ಜನರ ಮನೋಧೋರಣೆ ಬದಲಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೊಸ ವೈದ್ಯರಿಗೆ ಕರೆ ನೀಡಿದರು.
ಆರೋಗ್ಯ ಇಲಾಖೆಯಿಂದ 715 ಹಿರಿಯ ತಜ್ಞರು, 1,048 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಸೇರಿದಂತೆ ಒಟ್ಟು 1,763 ವೈದ್ಯರ ನೇಮಕ ಪೂರ್ಣಗೊಂಡಿದ್ದು, ನೂತನ ವೈದ್ಯರನ್ನು ಉದ್ದೇಶಿಸಿ, ಆನ್ಲೈನ್ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.

ವಿಶ್ವದರ್ಜೆಯ ಆಸ್ಪತ್ರೆಯಾಗಿ ಪರಿವರ್ತಿಸಬೇಕು
ಕೋವಿಡ್ ಆರ್ಥಿಕ ಸಂಕಷ್ಟದ ನಡುವೆ ಐತಿಹಾಸಿಕ ರೀತಿಯಲ್ಲಿ ರಾಜ್ಯ ಸರ್ಕಾರವು ಕೇವಲ ಐದಾರು ತಿಂಗಳಲ್ಲಿ ವೈದ್ಯರ ನೇರ ನೇಮಕ ಮಾಡಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಸಿಗುವ ಗುಣಮಟ್ಟದ ಸೇವೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗುವುದಿಲ್ಲ ಎಂಬ ಭಾವನೆ ಜನರಲ್ಲಿದೆ. ಆದರೆ ವಾಸ್ತವವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಬಹಳಷ್ಟು ಮೂಲಸೌಕರ್ಯವಿದೆ. ಹೊಸ ವೈದ್ಯರು ಗ್ರಾಮೀಣ ಪ್ರದೇಶಗಳ ಆಸ್ಪತ್ರೆಗಳಲ್ಲಿ ಕೆಲಸ ಮಾಡಿ, ಆ ಆಸ್ಪತ್ರೆಯನ್ನು ವಿಶ್ವದರ್ಜೆಯ ಆಸ್ಪತ್ರೆಯಾಗಿ ಪರಿವರ್ತಿಸಬೇಕು. ಕಾರ್ಪೋರೇಟ್ ವಲಯದ ಮಾದರಿಯಲ್ಲಿ ಕಾರ್ಯನಿರ್ವಹಿಸಿ, ಸರ್ಕಾರಿ ಆಸ್ಪತ್ರೆಗಳ ಗುಣಮಟ್ಟ ಹೆಚ್ಚಿಸುವ ಸಂಕಲ್ಪ ತೊಡಬೇಕು ಎಂದರು.

1 ಸಾವಿರ ಜನಸಂಖ್ಯೆಗೆ ಒಬ್ಬ ವೈದ್ಯ
ಸರ್ಕಾರಿ ಆಸ್ಪತ್ರೆಗೆ ಬಡವರು, ಕೆಳ ಮಧ್ಯಮ ವರ್ಗದ ಜನರು ಬರುತ್ತಾರೆ. ಇಂತಹವರು ಆರೋಗ್ಯಕ್ಕಾಗಿ ಹೆಚ್ಚು ಹಣ ಖರ್ಚು ಮಾಡಬಾರದೆಂದು ಸರ್ಕಾರ ಉಚಿತ ಸೇವೆ ನೀಡುತ್ತಿದೆ. ಈ ಸೇವೆಯನ್ನು ಜನರಿಗೆ ತಲುಪಿಸುವ ಸೇತುವೆಯಾಗಿ ವೈದ್ಯರು ಕಾರ್ಯನಿರ್ವಹಿಸಬೇಕು ಎಂದು ಸಚಿವ ಸುಧಾಕರ್ ಹೇಳಿದರು.
1 ಸಾವಿರ ಜನಸಂಖ್ಯೆಗೆ ಒಬ್ಬ ವೈದ್ಯ ಇರಬೇಕೆಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಆದರೆ ದೇಶದಲ್ಲಿ 1,511 ಮಂದಿಗೆ ಒಬ್ಬ ಅಲೋಪತಿ ವೈದ್ಯ ಇದ್ದಾರೆ ಎಂದು 15ನೇ ವೇತನ ಆಯೋಗ ತಿಳಿಸಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ವೈದ್ಯರ ನೇಮಕ ಮಾಡಿರುವುದು ಸಕಾಲಿಕವಾಗಿದೆ. ಕೋವಿಡ್ ಪರಿಸ್ಥಿತಿಯಿಂದಾಗಿ, ಈಗ ವೈದ್ಯರು ಕೇವಲ ವೈದ್ಯರಾಗಿ ಉಳಿಯದೆ ಯೋಧರಾಗಿ ಬದಲಾಗಿದ್ದಾರೆ. ವೈದ್ಯರು ಸಮಾಜಶಾಸ್ತ್ರಜ್ಞ, ಆಡಳಿತಾಧಿಕಾರಿ, ನೀತಿ ನಿರೂಪಕರು, ಮಾನಸಿಕ ತಜ್ಞರಾಗಿ ಅನೇಕ ಪಾತ್ರಗಳನ್ನು ವಹಿಸುತ್ತಿದ್ದಾರೆ ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ
ರಾಜ್ಯದಲ್ಲಿ 2,508 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 204 ಸಮುದಾಯ ಆರೋಗ್ಯ ಕೇಂದ್ರಗಳಿವೆ. ಹಳ್ಳಿಗಳಲ್ಲಿ ಕಡ್ಡಾಯ ಸೇವೆ ಸಲ್ಲಿಸುವ ಕಾನೂನು ಹೇರಿಕೆಗೆ ಅವಕಾಶ ನೀಡದೆ ವೈದ್ಯರು ಈ ಭಾಗಗಳಲ್ಲಿ ಕೆಲಸ ಮಾಡಿದರೆ, ಹಳ್ಳಿ ಜನರು ಆರೋಗ್ಯ ಸೇವೆಗಾಗಿ ದೂರದ ಪ್ರದೇಶಕ್ಕೆ ಪ್ರಯಾಣಿಸುವ ಅಗತ್ಯವೇ ಇರುವುದಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವುದರ ಜೊತೆಗೆ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ರೂಪಿಸಲಾಗುತ್ತಿದೆ. ಎಚ್ಡಬ್ಲ್ಯೂಸಿ ನಿರ್ಮಾಣದಲ್ಲಿ ಕೇಂದ್ರ ಸರ್ಕಾರ ನೀಡಿದ ಗುರಿಗಿಂತ ಶೇ.125 ರಷ್ಟು ಹೆಚ್ಚು ಸಾಧನೆಯಾಗಿದೆ. ಆದರೆ ವೈದ್ಯರು ಹಳ್ಳಿಗಳಲ್ಲಿ ಕಾರ್ಯನಿರ್ವಹಿಸಿದಾಗ ಮಾತ್ರ ಈ ಸಾಧನೆ ಸಾರ್ಥಕವಾಗಲು ಸಾಧ್ಯ ಎಂದರು.
Recommended Video

ವೈದ್ಯರೇ ದೇವರು
ವೈದ್ಯೋ ನಾರಾಯಣೋ ಹರಿ.. ಎಂದರೆ ವೈದ್ಯರೇ ದೇವರು. ಅನಾರೋಗ್ಯಕ್ಕೊಳಗಾದಾಗ ನೋವು ಕಡಿಮೆ ಮಾಡಿ, ಧೈರ್ಯ ಆತ್ಮವಿಶ್ವಾಸ ತುಂಬುವವರು ವೈದ್ಯರು. ಶ್ರೀಗಂಧದ ಕೊರಡು ತನ್ನನ್ನು ಸವೆಸಿಕೊಂಡಂತೆ ವೈದ್ಯರು ಸಮಾಜಕ್ಕಾಗಿ ಜೀವನ ಸವೆಸುತ್ತಾರೆ. ಎಲ್ಲಾ ವೈದ್ಯರು ತನು, ಮನ ಅರ್ಪಿಸಿ ಕೆಲಸ ಮಾಡಿದರೂ ಜನರು ವೈದ್ಯರ ಮೇಲೆ ವಿಶ್ವಾಸ ಕಡಿಮೆ ಮಾಡಿಕೊಂಡಿದ್ದಾರೆ. ಈ ಮನಸ್ಥಿತಿಯನ್ನು ಬದಲಿಸುವಂತೆ ಕೆಲಸ ಮಾಡಬೇಕು ಎಂದರು.
ಕೋವಿಡ್ನ ಎರಡನೇ ಅಲೆಯಿಂದ ದೇಶದಲ್ಲಿ 600ಕ್ಕೂ ಹೆಚ್ಚು ವೈದ್ಯರು ಮೃತಪಟ್ಟಿದ್ದಾರೆ. ಇವರೆಲ್ಲರೂ ಕೊರೊನಾ ಯುದ್ಧದಲ್ಲಿ ಹುತಾತ್ಮರಾದ ಯೋಧರು. ಇಂತಹ ಸನ್ನಿವೇಶ ತಪ್ಪಿಸಲು ವೈದ್ಯರು ತಮ್ಮ ಹಾಗೂ ತಮ್ಮ ಕುಟುಂಬದ ಆರೋಗ್ಯದ ಬಗ್ಗೆಯೂ ಯೋಚಿಸಬೇಕು. ಲಸಿಕೆ ಬಗ್ಗೆ ಜನರು ತಪ್ಪು ಅರಿವಿನಿಂದ ಕೂಡಿರುವ ಈ ಸಮಯದಲ್ಲಿ ಎಲ್ಲಾ ವೈದ್ಯರು ಲಸಿಕೆ ಪಡೆದು, ಜನರಿಗೆ ಮಾದರಿಯಾಗಿ ಹಾಗೂ ತಮ್ಮ ಆರೋಗ್ಯ ಕಾಪಾಡಿಕೊಂಡು ಕೆಲಸ ಮಾಡಬೇಕು ಎಂದು ಸಚಿವರು ಕೋರಿದರು. ಆರೋಗ್ಯ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಜಾವೇದ್ ಅಕ್ತರ್, ಆಯುಕ್ತ ತ್ರಿಲೋಕ್ ಚಂದ್ರ ಪಾಲ್ಗೊಂಡಿದ್ದರು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications