ಪ್ರಸಾದ್ ಮತ್ತು ಗಣಪತಿ 8 ವರ್ಷದಿಂದ ಭೇಟಿಯೇ ಆಗಿಲ್ಲ!
ಬೆಂಗಳೂರು, ಜುಲೈ, 08: ಡಿವೈಎಸ್ ಪಿ ಎಮ್ ಕೆ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಗುಪ್ತಚರದಳದ ಅಡಿಶನಲ್ ಜನರಲ್ ಆಫ್ ಪೊಲೀಸ್ ಎ ಎಂ ಪ್ರಸಾದ್ ಅವರ ಹೆಸರು ಕೇಳಿ ಬಂದಿದೆ. ಪ್ರಸಾದ್ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಅಪವಾದವೂ ಕೇಳಿ ಬಂದಿದೆ.
ಆದರೆ ಪೊಲೀಸ್ ಇಲಾಖೆ ಒನ್ ಇಂಡಿಯಾಕ್ಕೆ ನೀಡಿರುವ ಮಾಹಿತಿ ಇನ್ನೊಂದು ಆಯಾಮವನ್ನು ತೆಗೆದಿರಿಸುತ್ತದೆ. ಪೊಲೀಸ್ ಮೂಲಗಳು ಹೇಳುವಂತೆ ಎ ಎಂ ಪ್ರಸಾದ್ ಮತ್ತು ಆತ್ಮಹತ್ಯೆ ಮಾಡಿಕೊಂಡ ಕಳೆದ ಗಣಪತಿ ಎಂಟು ವರ್ಷಗಳಿಂದ ಭೇಟಿಯೇ ಆಗಿಲ್ಲ![ಡಿವೈಎಸ್ಪಿ ಎಂ.ಕೆ.ಗಣಪತಿ ಡೆತ್ ನೋಟ್ ಎಲ್ಲಿ?]

2008 ರಲ್ಲಿ ಎ ಎಂ ಪ್ರಸಾದ್ ಪಶ್ಚಿಮ ವಲಯದ ಐಜಿಪಿಯಾಗಿ ಕೆಲಸ ನಿರ್ವಹಿಸುತ್ತಿದ್ದಾಗ ಗಣಪತಿ ಕದ್ರಿ ಠಾಣೆಯ ಇನ್ಸ್ ಪೆಕ್ಟರ್ ಆಗಿದ್ದರು. ಈ ಸಂದರ್ಭದಲ್ಲಿ ಪ್ರಸಾದ್ ಗಣಪತಿ ಅವರನ್ನು ಒಂದೆರಡು ಸಾರಿ ಭೇಟಿ ಮಾಡಿದ್ದರು. ಗಣಪತಿ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿದ್ದ ಎನ್ ಸತೀಶ್ ಕುಮಾರ್ ಅವರಿಗೆ ವರದಿ ಮಾಡಿಕೊಳ್ಳುತ್ತಿದ್ದರು. ಇದೇ ಸಂದರ್ಭದಲ್ಲೇ ಗಣಪತಿ ಹೆಸರು ಚರ್ಚ್ ಗಲಾಟೆಯೊಂದಿಗೆ ತಳುಕು ಹಾಕಿಕೊಂಡಿದ್ದು.[ಸಮವಸ್ತ್ರದಲ್ಲೇ ನೇಣಿಗೆ ಶರಣಾದ ಡಿವೈಎಸ್ಪಿ ಗಣಪತಿ]
2008 ರ ನಂತರ ಪ್ರಸಾದ್ ಗುಪ್ತಚರ ದಳಕ್ಕೆ ನಿಯೋಜನೆಗೊಂಡರು. ಇದಾದ ಮೇಲೆ ಗಣಪತಿ ಮತ್ತು ಪ್ರಸಾದ್ ಭೇಟಿಯಾಗಿದ್ದೇ ಇಲ್ಲ. ಆದರೆ ಸಾವಿಗೂ ಮುನ್ನ ಗಣಪತಿ ಪ್ರಸಾದ್ ಅವರ ಹೆಸರನ್ನು ಯಾಕೆ ಹೇಳಿದ್ದಾರೋ ಗೊತ್ತಿಲ್ಲ ಎಂದು ಪೊಲೀಸ್ ಇಲಾಖೆ ಅಧಿಕಾರಿಗಳು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.[ಡಿವೈಎಸ್ಪಿ ಗಣಪತಿ ಆತ್ಮಹತ್ಯೆ : ಯಾರು, ಏನು ಹೇಳಿದರು?]
ಅಲ್ಲದೇ ಗಣಪತಿ ಪ್ರಸಾದ್ ಅವರ ಬಳಿ ಬಂದು ಸಹಾಯ ಕೇಳಿದ್ದರೂ ಎಂಬ ಸಂಗತಿಯನ್ನು ಇಲಾಖೆ ಮೂಲಗಳು ತಳ್ಳಿಹಾಕುತ್ತವೆ. ಒಟ್ಟಿನಲ್ಲಿ ಗಣಪತಿ ಅವರ ಸಾವು ರಾಜ್ಯದ ಪೊಲೀಸ್ ಇಲಾಖೆಗೆ ಆದ ನಷ್ಟ. ಆದರೆ ಅನೇಕ ಪ್ರಶ್ನೆಗಳಿಗೆ ಉತ್ತರ ಮಾತ್ರ ಸಿಗುವುದು ಯಾವಾಗಲೋ?
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications