ದ್ವಿತೀಯ PUC ಪರೀಕ್ಷೆ-2: ನೋಂದಣಿ ಆರಂಭ, ಯಾರಿಗೆ ಶುಲ್ಕ ವಿನಾಯಿತಿ? ಇಲ್ಲಿದೆ ಮಾಹಿತಿ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2 (ಪೂರಕ ಪರೀಕ್ಷೆ) ಬರೆಯಲಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದನ್ನು ಪ್ರಕಟಿಸಿದೆ. ಪರೀಕ್ಷೆ-2ರ ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಈ ಹಿಂದೆ ನಿಗದಿಯಾಗಿದ್ದ ಪರೀಕ್ಷಾ ದಿನಾಂಕಗಳನ್ನು ಮರುನಿಗದಿಗೊಳಿಸಲಾಗಿದೆ. ಹೊಸ ವೇಳಾಪಟ್ಟಿಯ ಪ್ರಕಾರ ಏಪ್ರಿಲ್ 30, 2026 ರಿಂದ ಪರೀಕ್ಷೆಗಳು ಶುರುವಾಗಲಿವೆ.
ಯಾರಿಗೆ ಶುಲ್ಕ ವಿನಾಯಿತಿ?
2026ರಲ್ಲಿ ರೆಗ್ಯುಲರ್ ವಿದ್ಯಾರ್ಥಿಗಳಾಗಿ ನೋಂದಾಯಿಸಿಕೊಂಡು, ಇತ್ತೀಚೆಗೆ ಪ್ರಕಟವಾದ ಮೊದಲನೇ ಪರೀಕ್ಷೆಯ ಫಲಿತಾಂಶದಲ್ಲಿ ಪೂರ್ಣಗೊಳಿಸದ (Not Completed / ಅನುತ್ತೀರ್ಣ) ವಿದ್ಯಾರ್ಥಿಗಳಿಗೆ ಮಂಡಳಿಯು ಸಿಹಿಸುದ್ದಿ ನೀಡಿದೆ. ಈ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ. ಸಂಪೂರ್ಣ ಉಚಿತವಾಗಿ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಮಂಡಳಿ ಅವಕಾಶ ಕಲ್ಪಿಸಿದೆ.

ಅರ್ಜಿ ಸಲ್ಲಿಕೆ ಹೇಗೆ ಹಾಗೂ ಕೊನೆಯ ದಿನಾಂಕ?
ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಲು ಏಪ್ರಿಲ್ 09, 2026 ರಿಂದ ಏಪ್ರಿಲ್ 17, 2026 ರ ವರೆಗೆ ಕಾಲಾವಕಾಶ ನೀಡಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ಲಿಂಕ್ ಬಳಸಿ ನೇರವಾಗಿ ನೋಂದಾಯಿಸಿಕೊಳ್ಳಬಹುದು. ಅಥವಾ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ ಪಿಯು ಎಕ್ಸಾಮ್ ಪೋರ್ಟಲ್ ಮುಖಾಂತರವೂ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.
ಪ್ರಾಂಶುಪಾಲರಿಗೆ ಮಂಡಳಿಯ ಸೂಚನೆ
2026ರ ಮೊದಲ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ವಿವಿಧ ಕಾರಣಗಳಿಂದ ಪರೀಕ್ಷೆಗೆ ಗೈರುಹಾಜರಾದ ವಿದ್ಯಾರ್ಥಿಗಳನ್ನು ತಮ್ಮ ಪಿಯು ಎಕ್ಸಾಮ್ ಪೋರ್ಟಲ್ ಲಾಗಿನ್ ಮುಖಾಂತರ ನೋಂದಣಿ ಮಾಡಲು ಕಾಲೇಜು ಪ್ರಾಂಶುಪಾಲರಿಗೆ ಸೂಚಿಸಲಾಗಿದೆ. ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಈ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿ, ಶುಲ್ಕ ವಿನಾಯಿತಿಯ ಲಾಭ ಪಡೆಯಲು ನೆರವಾಗಬೇಕು ಎಂದು ಮಂಡಳಿ ನಿರ್ದೇಶಿಸಿದೆ.
ಪರೀಕ್ಷೆ-2ಕ್ಕೆ ಯಶಸ್ವಿಯಾಗಿ ನೋಂದಾಯಿಸಿಕೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ನಿಗದಿತ ಸಮಯದಲ್ಲಿ ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರುಗಳ ಲಾಗಿನ್ನಲ್ಲಿ ಪ್ರವೇಶ ಪತ್ರಗಳನ್ನು ಲಭ್ಯಗೊಳಿಸಲಾಗುವುದು. ವಿದ್ಯಾರ್ಥಿಗಳು ಮಂಡಳಿಯ ಜಾಲತಾಣದ ಪಿಯುಸಿ ವಿದ್ಯಾರ್ಥಿ ಅಂಕಣದಲ್ಲಿ ಲಭ್ಯವಿರುವ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಳಸಿ ಯಾವುದೇ ಆತಂಕವಿಲ್ಲದೆ, ಶಾಂತ ಚಿತ್ತದಿಂದ ಪರೀಕ್ಷೆಗೆ ಸಿದ್ಧತೆ ನಡೆಸುವಂತೆ ಮಂಡಳಿ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
CBSE ಫಲಿತಾಂಶಕ್ಕಾಗಿ ಕಾಯಬೇಡಿ: ಈಗಲೇ ನಿಮ್ಮ ಡಿಜಿಲಾಕರ್ ಖಾತೆ ತೆರೆಯಿರಿ, ಕ್ಷಣಾರ್ಧದಲ್ಲಿ ರಿಸಲ್ಟ್ ಪಡೆಯಿರಿ -
CBSE 10ನೇ ತರಗತಿ ಫಲಿತಾಂಶ 2026: ನಾಳೆ ಪ್ರಕಟಗೊಳ್ಳಲಿದೆಯೇ ರಿಸಲ್ಟ್? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications