ಕರ್ನಾಟಕದಲ್ಲಿ ಇ -ಸಿಗರೇಟ್ ಸಂಪೂರ್ಣ ನಿಷೇಧ
ಬೆಂಗಳೂರು, ಜೂನ್ 15: ರಾಜ್ಯದಲ್ಲಿ ಇ -ಸಿಗರೇಟ್ ಉತ್ಪಾದನೆ, ಮಾರಾಟ ಹಾಗೂ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿ ರಾಜ್ಯ ಸರ್ಕಾರ ಬುಧವಾರ(ಜೂನ್ 15) ಅಧಿಕೃತ ಅದೇಶ ಹೊರಡಿಸಿದೆ.
ಬೆಂಗಳೂರಿನಲ್ಲಿ ಈ ಬಗ್ಗೆ ವಿವರಣೆ ನೀಡಿದ ಆರೋಗ್ಯ ಸಚಿವ ಯು.ಟಿ.ಖಾದರ್ ಅವರು, ಇ-ಸಿಗರೇಟ್ ತಂಬಾಕುಪೂರಿತ ಸಿಗರೇಟ್ಗೆ ಪರ್ಯಾಯವಲ್ಲ. 18 ವರ್ಷದ ಒಳಗಿನವರು ಇದನ್ನು ಉಪಯೊಗಿಸಬಾರದು ಎಂದು ಎಚ್ಚರಿಕೆ ನೀಡಿದರೂ ಬಳಕೆ ಜಾರಿಯಲ್ಲದೆ, ಇ ಸಿಗರೇಟ್ ನಿಂದ ದುಷ್ಪರಿಣಾಮಗಳಿಲ್ಲ ಎಂಬುದಕ್ಕೆ ಸರಿಯಾದ ವೈಜ್ಞಾನಿಕ ಪುರಾವೆಗಳಿಲ್ಲ. ಹೀಗಾಗಿ ಇ -ಸಿಗರೇಟ್ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಒಂದು ವೇಳೆ ನಿಷೇಧದ ನಂತರವೂ ಮಾರಾಟ ಕಂಡುಬಂದಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಧೂಮಪಾನಿಗಳನ್ನು ವ್ಯಸನಮುಕ್ತಗೊಳಿಸುವ ಉದ್ದೇಶ ಇ-ಸಿಗರೇಟ್ ಗಳು ಮಾರುಕಟ್ಟೆ ಪ್ರವೇಶಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಆದರೆ, ನಿಕೋಟಿನ್ ಯುಕ್ತ ಮಾಮೂಲಿ ಸಿಗರೇಟ್ ಸೇದುವ ಚಟ ಬಿಟ್ಟವರು ಹಾಗೂ ಸಿಗರೇಟ್ ಸೇದುವ ಆಸೆಯುಳ್ಳವರು ಎಲ್ಲರೂ ಇ ಸಿಗರೇಟ್ ದಾಸರಾಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬಂದ ಬಳಿಕ ಎಚ್ಚೆತ್ತುಕೊಂಡ ಸರ್ಕಾರ, ವರದಿ ಪರಿಶೀಲಿಸಿ ಈ ಕ್ರಮ ತೆಗೆದುಕೊಂಡಿದೆ.
ಮಹಾರಾಷ್ಟ್ರ, ಚಂಡೀಗಢ, ಪಂಜಾಬ್ಗಳಲ್ಲಿ ಈಗಾಗಲೇ ಇ-ಸಿಗರೇಟ್ ನಿಷೇಧಿಸಲಾಗಿದೆ. ಇ ಸಿಗರೇಟ್ ನಲ್ಲೂ ನಿಕೋಟಿನ್ ಅಂಶ ಇರುವುದರಿಂದ ನಿಷೇಧಿಸಲು ಅರ್ಹವಾಗಿದೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸರ್ಕಾರಕ್ಕೆ ವರದಿ ನೀಡಿದ್ದರು.
ಆದರೆ, ಹಲವು ಮೆಡಿಕಲ್ ಸ್ಟೋರ್ ಗಳಲ್ಲಿ ಔಷಧಿಯಂತೆ ಇ ಸಿಗರೇಟ್ ಮಾರಾಟವಾಗುತ್ತಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಿಕ್ಕ ಬಳಿಕ, ಆರೋಗ್ಯ ಸಚಿವ ಖಾದರ್ ಅವರು ಇ ಸಿಗರೇಟು ಮಾರಾಟಕ್ಕೆ ನಿಷೇಧ ಹೇರಿದ್ದಾರೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications