ಕರ್ನಾಟಕದಲ್ಲಿ ಇ -ಸಿಗರೇಟ್ ಸಂಪೂರ್ಣ ನಿಷೇಧ
ಬೆಂಗಳೂರು, ಜೂನ್ 15: ರಾಜ್ಯದಲ್ಲಿ ಇ -ಸಿಗರೇಟ್ ಉತ್ಪಾದನೆ, ಮಾರಾಟ ಹಾಗೂ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿ ರಾಜ್ಯ ಸರ್ಕಾರ ಬುಧವಾರ(ಜೂನ್ 15) ಅಧಿಕೃತ ಅದೇಶ ಹೊರಡಿಸಿದೆ.
ಬೆಂಗಳೂರಿನಲ್ಲಿ ಈ ಬಗ್ಗೆ ವಿವರಣೆ ನೀಡಿದ ಆರೋಗ್ಯ ಸಚಿವ ಯು.ಟಿ.ಖಾದರ್ ಅವರು, ಇ-ಸಿಗರೇಟ್ ತಂಬಾಕುಪೂರಿತ ಸಿಗರೇಟ್ಗೆ ಪರ್ಯಾಯವಲ್ಲ. 18 ವರ್ಷದ ಒಳಗಿನವರು ಇದನ್ನು ಉಪಯೊಗಿಸಬಾರದು ಎಂದು ಎಚ್ಚರಿಕೆ ನೀಡಿದರೂ ಬಳಕೆ ಜಾರಿಯಲ್ಲದೆ, ಇ ಸಿಗರೇಟ್ ನಿಂದ ದುಷ್ಪರಿಣಾಮಗಳಿಲ್ಲ ಎಂಬುದಕ್ಕೆ ಸರಿಯಾದ ವೈಜ್ಞಾನಿಕ ಪುರಾವೆಗಳಿಲ್ಲ. ಹೀಗಾಗಿ ಇ -ಸಿಗರೇಟ್ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಒಂದು ವೇಳೆ ನಿಷೇಧದ ನಂತರವೂ ಮಾರಾಟ ಕಂಡುಬಂದಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಧೂಮಪಾನಿಗಳನ್ನು ವ್ಯಸನಮುಕ್ತಗೊಳಿಸುವ ಉದ್ದೇಶ ಇ-ಸಿಗರೇಟ್ ಗಳು ಮಾರುಕಟ್ಟೆ ಪ್ರವೇಶಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಆದರೆ, ನಿಕೋಟಿನ್ ಯುಕ್ತ ಮಾಮೂಲಿ ಸಿಗರೇಟ್ ಸೇದುವ ಚಟ ಬಿಟ್ಟವರು ಹಾಗೂ ಸಿಗರೇಟ್ ಸೇದುವ ಆಸೆಯುಳ್ಳವರು ಎಲ್ಲರೂ ಇ ಸಿಗರೇಟ್ ದಾಸರಾಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬಂದ ಬಳಿಕ ಎಚ್ಚೆತ್ತುಕೊಂಡ ಸರ್ಕಾರ, ವರದಿ ಪರಿಶೀಲಿಸಿ ಈ ಕ್ರಮ ತೆಗೆದುಕೊಂಡಿದೆ.
ಮಹಾರಾಷ್ಟ್ರ, ಚಂಡೀಗಢ, ಪಂಜಾಬ್ಗಳಲ್ಲಿ ಈಗಾಗಲೇ ಇ-ಸಿಗರೇಟ್ ನಿಷೇಧಿಸಲಾಗಿದೆ. ಇ ಸಿಗರೇಟ್ ನಲ್ಲೂ ನಿಕೋಟಿನ್ ಅಂಶ ಇರುವುದರಿಂದ ನಿಷೇಧಿಸಲು ಅರ್ಹವಾಗಿದೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸರ್ಕಾರಕ್ಕೆ ವರದಿ ನೀಡಿದ್ದರು.
ಆದರೆ, ಹಲವು ಮೆಡಿಕಲ್ ಸ್ಟೋರ್ ಗಳಲ್ಲಿ ಔಷಧಿಯಂತೆ ಇ ಸಿಗರೇಟ್ ಮಾರಾಟವಾಗುತ್ತಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಿಕ್ಕ ಬಳಿಕ, ಆರೋಗ್ಯ ಸಚಿವ ಖಾದರ್ ಅವರು ಇ ಸಿಗರೇಟು ಮಾರಾಟಕ್ಕೆ ನಿಷೇಧ ಹೇರಿದ್ದಾರೆ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications