17 ಸ್ಥಾನ ಪಡೆದಿರುವ ಜೆಡಿಎಸ್ ಹೇಗೆ ಅಧಿಕಾರಕ್ಕೆ ಬರುತ್ತಾರೆ: ಸಿ.ಎಂ ಸಿದ್ದರಾಮಯ್ಯ
17 ಸ್ಥಾನ ಪಡೆದಿರುವವರು ಅಧಿಕಾರಕ್ಕೆ ಹೇಗೆ ಬರುತ್ತಾರೆ ಜೆಡಿಎಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ. ಕಾಂಗ್ರೆಸ್ 140 ಸ್ಥಾನ ಗಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ದಾವೋಸ್ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂನಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕೈಗಾರಿಕಾ ಸಚಿವರು ಪಾಲ್ಗೊಂಡಿದ್ದು, ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ವಾತಾವರಣವಿದೆ. ನಮ್ಮಲ್ಲಿ ಕೌಶಲ್ಯವಿರುವ ಮಾನವ ಸಂಪನ್ಮೂಲದ ಲಭ್ಯತೆಯಿದೆ. ಇದಕ್ಕೆ ತರಬೇತಿಯೂ ನೀಡಲಾಗುತ್ತಿದೆ, ತರಬೇತಿ ಪಡೆವರಿಗೆ ನೂರರಷ್ಟು ಕೆಲಸ ದೊರೆಯುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ವಿಧಾನ ಮಂಡಲದ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ತಿಳಿಸಿದ್ದಾರೆ. ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಬೇಕೆಂದು ಸಂವಿಧಾನದ 176 ಮತ್ತು 163 ಪರಿಚ್ಛೇದದಲ್ಲಿ ಸ್ಪಷ್ಟವಾಗಿ ಹೇಳಿದೆ. ಸರ್ಕಾರ ಕೊಟ್ಟಿರುವ ಭಾಷಣವನ್ನು ಅವರು ಓದಲೇಬೇಕು. ನಾವು ಬರೆದುಕೊಟ್ಟಿರುವುದನ್ನು ಅವರು ಬದಲಾಯಿಸುವ ಸಾಧ್ಯತೆ ಇರುತ್ತದೆ.

ಗಣರಾಜ್ಯೋತ್ಸವದ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಪತ್ರ ವ್ಯವಹಾರವೆಲ್ಲಾ ಆಗಿದ್ದರೂ, ಕೇಂದ್ರ ಸರ್ಕಾರ ಆಯ್ಕೆ ಮಾಡಿಲ್ಲ ಎನ್ನುವುದು ದುರದೃಷ್ಟಕರ. ಕಾನೂನಿನ ಪ್ರಕಾರ ಪ್ರಜ್ವಲ್ ರೇವಣ್ಣ ಅವರ ಬಂಧನವಾಗಿದ್ದು, ಸರ್ಕಾರ ಅದರಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಇದೊಂದೇ ಪ್ರಕರಣವಲ್ಲ. ಯಾವುದೇ ಪ್ರಕರಣದಲ್ಲಿಯೂ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ. ಅಧಿಕಾರಿಗಳಿಗೆ ಸರ್ಕಾರ ಬಹುಮಾನ ಕೊಟ್ಟಿಲ್ಲ. ಅದೆಲ್ಲಾ ಸುಳ್ಳು.
ನಮಗೂ ಸಮಯ ಬರುತ್ತದೆ ಎಂಬ ಹೆಚ್. ಡಿ.ದೇವೇಗೌಡರ ಮಾತಿನ ಅರ್ಥ ನಮಗೆ ಗೊತ್ತಿಲ್ಲ. 17 ಸ್ಥಾನ ಪಡೆದಿರುವವರು ಅಧಿಕಾರಕ್ಕೆ ಹೇಗೆ ಬರುತ್ತಾರೆ ಜೆಡಿಎಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ. ಕಾಂಗ್ರೆಸ್ 140 ಸ್ಥಾನ ಗಳಿಸಿದೆ. 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು ಎನ್ನುವ ಭರವಸೆ ನಮಗಿದೆ. ಜೆಡಿಎಸ್ ಮತ್ತು ಬಿಜೆಪಿಯವರು ಮೈತ್ರಿ ಮಾಡಿಕೊಂಡರು ಅಧಿಕಾರಕ್ಕೆ ಬರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದೇನು
ದಾವೋಸ್ನ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಚರ್ಚೆಯಾದ ಹೂಡಿಕೆ, ವ್ಯವಹಾರ, ಆಡಳಿತ ನೀತಿ ಸೇರಿದಂತೆ ಹಲವು ವಿಷಯಗಳ ಕುರಿತು, ಬಿಡಿಎ ಅಧ್ಯಕ್ಷರಾದ ಎನ್.ಎ. ಹ್ಯಾರಿಸ್ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರೊಂದಿಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದಾರೆ.
ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಭಾಗವಹಿಸಿದ್ದು ನನಗೆ ಹೊಸ ಹಾಗೂ ಮಹತ್ವದ ಅನುಭವವಾಗಿತ್ತು. ದೇಶ-ರಾಜ್ಯಗಳನ್ನು ಪ್ರತಿನಿಧಿಸುವ ಈ ವೇದಿಕೆಯಲ್ಲಿ ಕರ್ನಾಟಕಕ್ಕೂ ಸ್ಥಾನ ದೊರೆತಿತ್ತು. ಭಾರತದಿಂದ 10 ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ 65ಕ್ಕೂ ಹೆಚ್ಚು ದೇಶಗಳ ಮುಖ್ಯಸ್ಥರು, ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಸೇರಿದಂತೆ ಅನೇಕ ಉದ್ಯಮಿಗಳು ಭಾಗವಹಿಸಿದ್ದರು.
ಸಮ್ಮೇಳನದಲ್ಲಿ 100ಕ್ಕೂ ಹೆಚ್ಚು ಸಭೆಗಳು, ಚರ್ಚೆಗಳು ನಡೆದಿದ್ದು, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ನಾಯಕರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿತು. ಭಾರತವನ್ನು, ವಿಶೇಷವಾಗಿ ಬೆಂಗಳೂರು ಮುಖಾಂತರ, ಜಗತ್ತು ನೋಡುತ್ತಿರುವುದು ಸ್ಪಷ್ಟವಾಯಿತು. ನಗರೀಕರಣ, ಸಂಚಾರ ವ್ಯವಸ್ಥೆ, 2 ಮತ್ತು 3 ಟೈರ್ ನಗರಗಳ ಅಭಿವೃದ್ಧಿ ಕುರಿತು ಸಲಹೆಗಳು ಬಂದವು. ಮುಂದಿನ 25 ವರ್ಷಗಳಿಗೆ ತಕ್ಕಂತೆ ರಿಂಗ್ ರೋಡ್, ಬಿಸಿನೆಸ್ ಕಾರಿಡಾರ್ ಯೋಜನೆಗಳನ್ನು ಈಗಿನಿಂದಲೇ ರೂಪಿಸುವ ನಿರ್ಧಾರ ಕೈಗೊಳ್ಳಲಾಗುತ್ತದೆ. ರಾಜ್ಯದಲ್ಲಿ ಸುಮಾರು 11 ಲಕ್ಷ ಕೋಟಿ ರೂ. ಹೂಡಿಕೆಗೆ ಹೂಡಿಕೆದಾರರು ಸಿದ್ಧರಾಗಿದ್ದಾರೆ. ಈ ಎಲ್ಲಾ ಪ್ರಯತ್ನಗಳ ಮೂಲಕ ರಾಜ್ಯಕ್ಕೆ ಹೊಸ ರೂಪ ನೀಡುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications