ಯಾವ ರಾಜ್ಯಕ್ಕೆ ಹೋದರೂ ನಿಮ್ಮ ರಾಜ್ಯಕ್ಕೆ ಏನಾಗಿದೆ ಎಂದು ಕೇಳ್ತಾರೆ : ಶೋಭಾ ಕರಂದ್ಲಾಜೆ ಹೀಗೆ ಹೇಳಿದ್ಯಾಕೆ?
ಬೆಂಗಳೂರು, ಮೇ 06: ಕರ್ನಾಟಕದಲ್ಲಿ ಪ್ರತಿನಿತ್ಯ ಒಂದು- ಎರಡು, ಮೂರು ನಾಲ್ಕು ಎಂಬ ರೀತಿಯಲ್ಲಿ ಕೊಲೆ ನಡೆಯುತ್ತಿದೆ. ಕರ್ನಾಟಕದಲ್ಲಿ ರಾಜ್ಯ ಸರಕಾರ ಬದುಕಿದೆಯೇ ಅಥವಾ ಸತ್ತಿದೆಯೇ ಎಂಬ ಸಂಶಯ ಕೇವಲ ನಮ್ಮ ರಾಜ್ಯದ ಜನರಿಗೆ ಅಲ್ಲ. ನಾವು ಯಾವ ರಾಜ್ಯಕ್ಕೆ ಹೋದರೂ ಕೂಡ 'ನಿಮ್ಮ ರಾಜ್ಯಕ್ಕೆ ಏನಾಗಿದೆ?' ಎಂಬ ಪ್ರಶ್ನೆ ಕೇಳುತ್ತಿದ್ದಾರೆ ಎಂದು ಬೆಂಗಳೂರು ಉತ್ತರ ಸಂಸದೆ ಮ್ತತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕರ್ನಾಟಕವು ಅಪರಾಧಿ ರಾಜ್ಯವಾಗುತ್ತಿದೆ. ಹಿಂದೆ, ಬಿಹಾರದಲ್ಲಿ ಪ್ರತಿನಿತ್ಯ ಅಪರಾಧ ನಡೆಯುತ್ತಿದೆ ಎಂದು ದಕ್ಷಿಣದಲ್ಲಿ ನಾವು ಕುಳಿತು ಮಾತನಾಡುತ್ತಿದ್ದೆವು. ಈಗ ಬಿಹಾರದಲ್ಲಿ ಶಾಂತಿ ನೆಲೆಸಿದೆ. ಕರ್ನಾಟಕದಲ್ಲಿ ಪ್ರತಿನಿತ್ಯ ಒಂದು- ಎರಡು, ಮೂರು ನಾಲ್ಕು ಎಂಬ ರೀತಿಯಲ್ಲಿ ಕೊಲೆ ನಡೆಯುತ್ತಿದೆ. ಸಿದ್ದರಾಮಯ್ಯನವರ ಸರಕಾರ ಯಾವಾಗ ಆಡಳಿತಕ್ಕೆ ಬರುತ್ತದೋ, ಕರ್ನಾಟಕ ರಾಜ್ಯದಲ್ಲಿ ಅಪರಾಧಿಗಳ ಕೈ ಮೇಲಾಗುತ್ತದೆ ಎಂದು ಕಿಡಿಕಾರಿದರು.

2013ರಲ್ಲಿ ಸಿದ್ದರಾಮಯ್ಯನವರ ಸರ್ಕಾರ ಆಡಳಿತ ಮಾಡಿತ್ತು. ಅವತ್ತು ಅಪರಾಧಿಗಳ ಕೈ ಮೇಲಾಗಿತ್ತು. ಅವತ್ತು ಇದ್ದ ಪಿಎಫ್ಐ, ಕೆಎಫ್ಡಿ- ಹೀಗೆ ಬೇರೆ ಬೇರೆ ಹೆಸರಿನಲ್ಲಿ ಕಾರ್ಯಾಚರಣೆ ಮಾಡುತ್ತಿದ್ದ ಭಯೋತ್ಪಾದಕರನ್ನು, ಸಮಾಜಘಾತುಕರನ್ನು, ರುದ್ರೇಶ್ ಅವರ ಕೊಲೆ ಸೇರಿ ಬೇರೆ ಬೇರೆ ಕೇಸಿನಲ್ಲಿ ಬಂಧನಕ್ಕೆ ಒಳಗಾದವರ ಮೊಕದ್ದಮೆಗಳನ್ನು ಕ್ಯಾಬಿನೆಟ್ ಸಭೆಯಲ್ಲಿ ಹಿಂದಕ್ಕೆ ಪಡೆದಿದ್ದರು ಎಂದು ಶೋಭಾ ಕರಂದ್ಲಾಜೆ ಅವರು ಆರೋಪಿಸಿದರು.
ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ ಸುಡುವ ಘಟನೆ ನಡೆಯಿತು. ಮೈಸೂರಿನಲ್ಲಿ ಪೊಲೀಸ್ ಠಾಣೆಗೆ ನುಗ್ಗುವ ಕೆಲಸ ಮಾಡಿದರು. ಪೊಲೀಸರಿಗೆ ಹೊಡೆದರು. ಅಂಥ 43 ಕೇಸುಗಳನ್ನು ಮತ್ತೆ ಹಿಂಪಡೆಯುವ ಒಂದು ಪ್ರಸ್ತಾಪವನ್ನು ಸಂಪುಟ ಸಭೆಗೆ ಸಿದ್ದರಾಮಯ್ಯನವರು ತಂದರು. ರಾಜ್ಯದಲ್ಲಿರುವ ಸಮಾಜಘಾತುಕರನ್ನು, ಭಯೋತ್ಪಾದಕರನ್ನು ರಸ್ತೆಯಲ್ಲಿ ಬಿಡುವ ಕೆಲಸವನ್ನು ಸಿದ್ದರಾಮಯ್ಯನವರು ಮಾಡಿದ್ದಾರೆ. ಯಾರು ಜೈಲಿನಲ್ಲಿ ಇರಬೇಕೋ ಅವರನ್ನು ಬೀದಿಗೆ ಬಿಟ್ಟರು. ಅವರನ್ನು ರಾಜಾರೋಷವಾಗಿ ತಿರುಗಲು ಬಿಟ್ಟಿದ್ದಾರೆ; ಅಲ್ಲದೆ ಅವರು ಅಪರಾಧ ಮಾಡಲು ಕುಮ್ಮಕ್ಕು ನೀಡಿದ್ದಾರೆ ಎಂದು ಟೀಕಿಸಿದರು.
ಇದರ ಪರಿಣಾಮವಾಗಿ ಕಳೆದ ಅವರ ಸರಕಾರದಲ್ಲಿ 23 ಹಿಂದೂ ಯುವಕರನ್ನು, ಕಾರ್ಯಕರ್ತರನ್ನು ನಾವು ಕಳೆದುಕೊಂಡೆವು. ಎನ್ಐಎ, ಅಮಿತ್ ಶಾ ಅವರಿಗೆ ಪತ್ರ ಬರೆದ ಪರಿಣಾಮವಾಗಿ ರುದ್ರೇಶ್ ಕೇಸ್, ಪ್ರವೀಣ್ ನೆಟ್ಟಾರು ಅವರ ಕೇಸನ್ನು ತನಿಖೆ ಮಾಡಲಾಯಿತು. ಎನ್ಐಎ ತನಿಖೆ ಮೂಲಕ ರಾಜ್ಯದಲ್ಲಿ ಯಾರ್ಯಾರು ಬೇರೆಬೇರೆ ದೇಶಗಳ ಜೊತೆ ಸಂಪರ್ಕ ಇಟ್ಟುಕೊಂಡಿದ್ದರೋ, ಬೇರೆಬೇರೆ ದೇಶಗಳಲ್ಲಿ ತರಬೇತಿ ಪಡೆದಿದ್ದರೋ, ಬೇರೆಬೇರೆ ರಾಜ್ಯÀಗಳಲ್ಲಿ ಕೊಲೆ ಮಾಡಿ ಅವಿತುಕೊಂಡಿದ್ದರೋ ಅವರು ಸಿಕ್ಕಿ ಹಾಕಿಕೊಂಡರು ಎಂದು ಹೇಳಿದರು.
ಮಂಗಳೂರು, ಮೈಸೂರು, ಪುತ್ತೂರು, ಸುಳ್ಯ ಇಂಥ ಭಾಗಗಳಲ್ಲಿ ಯಾರು ಭಯೋತ್ಪಾದಕರು, ಸಮಾಜದ್ರೋಹಿ ಚಟುವಟಿಕೆಗಳಿಗೆ ಕುಮ್ಮಕ್ಕು ಕೊಡುತ್ತಿದ್ದರೋ, ಹಣಕಾಸಿನ ನೆರವು ನೀಡುತ್ತಿದ್ದವರು ಸಿಕ್ಕಿ ಹಾಕಿಕೊಂಡರು. ಅವರೀಗ ಜೈಲಿನಲ್ಲಿ ಇದ್ದಾರೆ. ಇದರ ಪರಿಣಾಮವಾಗಿ ಕೇಂದ್ರ ಸರಕಾರಕ್ಕೆ ಒಂದು ಬಲವಾದ ಆಧಾರ ಸಿಕ್ಕಿದೆ. ಪಿಎಫ್ಐ ನಿಷೇಧದ ಕೋರಿಕೆ ಮುಂದಿಟ್ಟಿದ್ದೆವು. ಸರಿಯಾದ ಸಬೂಬು, ಸಮರ್ಪಕ ಮಾಹಿತಿ, ಸರಿಯಾದ ಕೇಸುಗಳು ಕೇಂದ್ರ ಸರಕಾರಕ್ಕೆ ಸಿಕ್ಕಿರಲಿಲ್ಲ. ಪ್ರವೀಣ್ ನೆಟ್ಟಾರು ಕೇಸಿನಲ್ಲಿ ಪಿಎಫ್ಐ ಕೈವಾಡ ಗೊತ್ತಾಯಿತು. ಇದರ ಪರಿಣಾಮವಾಗಿ ಕೇಂದ್ರ ಸರಕಾರವು ಪಿಎಫ್ಐ ನಿಷೇಧಿಸಿದೆ ಎಂದು ತಿಳಿಸಿದರು.
ಪಿಎಫ್ಐ ಕಾರ್ಯಕರ್ತರು ಎಲ್ಲಿ ಹೋದರು? ಅವರು ಇನ್ನೂ ಕಾರ್ಯಾಚರಣೆಯಲ್ಲಿ ಇದ್ದಾರೆ. ಅವರೆಲ್ಲ ರಾಜಕೀಯ ಸಂಸ್ಥೆ ಎಸ್ಡಿಪಿಐ ಸೇರಿಕೊಂಡಿದ್ದಾರೆ. ಸಿದ್ದರಾಮಯ್ಯನವರ ಕುಮ್ಮಕ್ಕಿನ ಕಾರಣಕ್ಕಾಗಿ, ಸಿದ್ದರಾಮಯ್ಯನವರು ಕೇಸನ್ನು ಹಿಂಪಡೆದ ಪರಿಣಾಮವಾಗಿ ಅಲ್ಲಿರುವ ಎಲ್ಲ ಅಪರಾಧಿಗಳು ಮತ್ತೆ ಕೊಲೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಆರೋಪಿಸಿದರು.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications