ಏಷ್ಯಾದಲ್ಲೇ ಅತಿ ಹೆಚ್ಚು ಎಥನಾಲ್ ಉತ್ಪಾದಿಸುವ ರಾಜ್ಯ ಕರ್ನಾಟಕ: ವಿಜಯ್ ನಿರಾಣಿ
ಬೆಂಗಳೂರು, ನ.3: ಕರ್ನಾಟಕದಲ್ಲಿ ಏಷ್ಯಾದಲ್ಲಿಯೇ ಅತಿಹೆಚ್ಚು ಎಥನಾಲ್ ಉತ್ಪಾದನೆ ಆಗುತ್ತದೆ. ಈ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆಗೆ ಸಾಕಷ್ಟು ಅವಕಾಶಗಳಿದ್ದು, ಉದ್ಯಮಿಗಳು ಮುಂದೆ ಬರಬೇಕು ಎಂದು ಎಂಆರ್ಎನ್ ಸಮೂಹದ ವ್ಯವಸ್ಥಾಪಕ ನಿದೇರ್ಶಕ ವಿಜಯ್ ಎಂ ನಿರಾಣಿ ಸಲಹೆ ನೀಡಿದರು.
ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಗುರುವಾರ ಇಂಧನ ಕ್ಷೇತ್ರ ಕುರಿತ ಸಂವಾದಲ್ಲಿ ಪಾಲ್ಗೊಂಡು ಮಾತನಾಡಿದ ವಿಜಯ್ ನಿರಾಣಿ, "ಏಷ್ಯಾದಲ್ಲೇ ಅತಿ ಹೆಚ್ಚು ಎಥನಾಲ್ ಉತ್ಪಾದನೆ ಮಾಡುವ ರಾಜ್ಯ ಕರ್ನಾಟಕ. ಪವನ ಹಾಗೂ ಸೌರ ವಿದ್ಯುತ್ ಉತ್ಪಾದನೆ ಯೋಜನೆಯನ್ನು ಅಭಿವೃದ್ಧಿಪಡಿಸಿ, ಮುಂದಿನ ಐದು ವರ್ಷಗಳಲ್ಲಿ ಕರ್ನಾಟಕದ ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು 10 ಪಟ್ಟು ಹೆಚ್ಚಿಸಲು ಯೋಜಿಸಲಾಗಿದೆ," ಎಂದರು.
"ಡೀಸೆಲ್ ಮತ್ತು ಪೆಟ್ರೋಲ್ ದರ ದಿನೇದಿನೇ ಹೆಚ್ಚುತ್ತಿದ್ದು, ಈ ತೈಲಗಳ ಮೇಲಿನ ಅವಲಂಬನೆ ಕಡಿಮೆ ಆಗಬೇಕು. ಅದಕ್ಕಿರುವ ಪರ್ಯಾಯ ಮಾರ್ಗ ಎಥನಾಲ್ ಬಳಕೆ. ಪರಿಸರ ಸ್ನೇಹಿ ಎಥನಾಲ್ ಹೆಚ್ಚುತ್ತಿರುವ ಜಾಗತಿಕ ತಾಪಮಾನ ತಡೆಗಟ್ಟಲು ಸಹಕಾರಿ," ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ವಿಜಯ್ ನಿರಾಣಿ, "ರಾಜ್ಯದಲ್ಲಿ ಎಥೆನಾಲ್ನಂತಹ ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಸಾಕಷ್ಟು ಅವಕಾಶವಿದೆ,"ಎಂದರು.
"ಕಬ್ಬಿನಿಂದ ಸಕ್ಕರೆ ಉತ್ಪಾದನೆ ಮಾತ್ರವಲ್ಲದೇ, ಎಥೆನಾಲ್ ಸೇರಿದಂತೆ ಕಬ್ಬಿನ ಹಲವಾರು ಉಪ ಉತ್ಪನ್ನಗಳನ್ನು ತಯಾರಿಸಬಹುದು. ಪೆಟ್ರೋಲ್, ಡೀಸೆಲ್ ಜತೆಗೆ 20 ಪ್ರತಿಶತ ಎಥೆನಾಲ್ ಮಿಶ್ರಣದ ಗುರಿಯನ್ನು ಸಾಧಿಸುವ ಪ್ರಧಾನಿ ಮೋದಿಯವರ ಆಶಯವನ್ನು ನಾವು ಈಗಾಗಲೇ ಸಾಧಿಸಿದ್ದೇವೆ. ಮಾರುಕಟ್ಟೆಯ ಬೇಡಿಕೆಗೆ ಅನುಗುಣವಾಗಿ ಪೂರೈಸುವ ಸಾಮರ್ಥ್ಯವನ್ನು ಗಳಿಸಿದ್ದೇವೆ," ಎಂದು ವಿಜಯ್ ನಿರಾಣಿ ಹೇಳಿದರು.
"ರೈತರ ಆದಾಯವನ್ನು ದ್ವಿಗುಣಗೊಳಿಸುವ ಪ್ರಧಾನಿ ಮೋದಿಯವರ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಎಂಆರ್ಎನ್ ಸಮೂಹ ಕೆಲಸ ಮಾಡುತ್ತಿದೆ. ಕಬ್ಬಿನ ಉಪ ಉತ್ಪನ್ನಗಳ ಸಮಪರ್ಕ ಬಳಕೆ, ಕೃಷಿ ಆಧಾರಿತ ಉದ್ಯಮಕ್ಕೆ ಒತ್ತು ನೀಡಿದ್ದೇವೆ. ಜತೆಗೆ, ಡೀಸೆಲ್ ಇಂಜಿನ್ಗಳನ್ನು ಬಯೋ-ಸಿಎನ್ಜಿ ಇಂಜಿನ್ ಟ್ರ್ಯಾಕ್ಟರ್ಗಳಾಗಿ ಪರಿವರ್ತಿಸುವ ಮೂಲಕ ಅವರ ರೈತರ ಆರ್ಥಿಕ ಹೊರೆ ತಗ್ಗಿಸುವಲ್ಲಿ ನೆರವಾಗುತ್ತಿದ್ದೇವೆ," ಎಂದು ಅವರು ಹೇಳಿದರು.
"ಜಾಗತಿಕವಾಗಿ ಬ್ರ್ಯಾಂಡ್ ಇಂಡಿಯಾಗೆ ಕರ್ನಾಟಕವು ಅತಿದೊಡ್ಡ ಕೊಡುಗೆಯನ್ನು ನೀಡಿದೆ. ವಿಶೇಷವಾಗಿ, ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರು ಜಾಗತಿಕ ಮಟ್ಟದಲ್ಲಿ ಸ್ಥಾನಗಿಟ್ಟಿಸಿಕೊಂಡಿದೆ," ಎಂದು ವಿಜಯ್ ನಿರಾಣಿ ಹೇಳಿದರು.
"ಮುಂಬರುವ ದಿನಗಳಲ್ಲಿ ಎಲೆಕ್ಟ್ರಾನಿಕ್ ವಸ್ತು ರಫ್ತು ಮಾಡುವಲ್ಲಿ ಭಾರತ ಮುಂಚೂಣಿಗೆ ಬರುವ ಕನಸು ನನಸು ಆಗುವಲ್ಲಿ ಕರ್ನಾಟಕ ಪ್ರಮುಖ ಪಾತ್ರ ವಹಿಸಲಿದೆ. ಮುಖ್ಯವಾಗಿ, ಎಲೆಕ್ಟ್ರಾನಿಕ್ಸ್ ವಸ್ತುಗಳ ಆಮದನ್ನು ತಗ್ಗಿಸುವುದು ನಮ್ಮ ಮುಂದಿನ ಗುರಿಯಾಗಬೇಕು," ಎಂದು ಅವರು ಹೇಳಿದರು.
"ಈ ಮೊದಲು ಜಾಗತಿಕ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಕೋಟಿ ರೂ. ಬಂಡವಾಳ ಹರಿದು ಬರುವ ನಿರೀಕ್ಷೆ ಇತ್ತು. ಈಗ ನಮ್ಮ ನಿರೀಕ್ಷೆಗೂ ಮೀರಿ ಮೊತ್ತ ದುಪ್ಪಟ್ಟಾಗುವ ಸಾಧ್ಯತೆ ಇದೆ. ಇದರಿಂದ ಕರ್ನಾಟಕ ಉದ್ಯಮ ಸ್ನೇಹಿ ರಾಜ್ಯ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಅಗ್ರಮಾನ್ಯ ಉದ್ಯಮಿಗಳನ್ನು ಒಂದೇ ವೇದಿಕೆಯಡಿ ಕರೆ ತರುವಲ್ಲಿ ಈ ಸಮಾವೇಶ ಯಶಸ್ವಿಯಾಗಿದೆ," ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂವಾದದಲ್ಲಿ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ ಕುಮಾರ್ ನಾಯ್ಕ್, ಪೆಟ್ರೋನಸ್ ಹೈಡ್ರೋಜನ್ ಕಂಪನಿ ಸಿಇಓ ಅದ್ಲಾನ್ ಅಹ್ಮದ್, ಹಿಟಾಚಿ ಎನರ್ಜಿ ಕಂಪನಿ ವ್ಯವಸ್ಥಾಪಕ ನಿರ್ದೇಶಕ ವೇಣು ನುಗೂರಿ ಭಾಗವಹಿಸಿದ್ದರು.
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications