Get Updates
Get notified of breaking news, exclusive insights, and must-see stories!

ಡಿಕೆಶಿಯನ್ನು ಭೇಟಿಯಾಗಿ ಮಾತನಾಡಿದ್ದು ನಿಜ: ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ ಜಿಟಿ ದೇವೇಗೌಡ- ಎಚ್‌ಡಿಕೆಗೆ ಹೊಸ ಅಪಾಯ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತನಾಡಿದ್ದು ನಿಜವೆಂದು ಜೆಡಿಎಸ್‌ ಶಾಸಕ ಜಿಟಿ ದೇವೇಗೌಡ ಹೇಳಿದ್ದಾರೆ. ಜೆಡಿಎಸ್‌ನ ನಾಯಕರನ್ನು ಕಾಂಗ್ರೆಸ್‌ ಸೆಳೆಯುವ ಯತ್ನದಲ್ಲಿದೆ ಎಂಬ ವರದಿಗಳ ನಡುವೆಯೇ ಈ ಸುದ್ದಿ ಹೊರಬಿದ್ದಿದೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಚಾಮುಂಡೇಶ್ವರಿ ಶಾಸಕ ಹಾಗೂ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ದೇವೇಗೌಡ ಅವರು, ಶಿವಕುಮಾರ್ ಅವರನ್ನು ಇತ್ತೀಚೆಗೆ ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿದ್ದು ನಿಜ. ಕಾಂಗ್ರೆಸ್ ಸೇರಲು ಅವರು ಮುಕ್ತ ಸ್ವಾಗತವನ್ನು ನೀಡಿದ್ದಾರೆ ಎಂಬ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

ಬಿಜೆಪಿ ನಾಯಕ ಎಸ್ ಟಿ ಸೋಮಶೇಖರ್ ಮತ್ತು ಇತರ ಕೆಲವು ಶಾಸಕರು ಅವರೊಂದಿಗಿದ್ದರು ಎಂದು ದೇವೇಗೌಡ ಹೇಳಿದ್ದಾರೆ.

jd-s-leader-gt-devegowda

ನಮ್ಮ ಮನೆಯ ಕುಟುಂಬದ ಕಾರ್ಯಕ್ರಮವೊಂದರ ಬಗ್ಗೆ ಅನೌಪಚಾರಿಕವಾಗಿ ಮಾತನಾಡಲು ದೇವೇಗೌಡ ಅವರು ಶಿವಕುಮಾರ್ ಬಂದಿದ್ದಾಗಿ ಹೇಳಿಕೊಂಡಿದ್ದಾರೆ.

ಪಕ್ಷಕ್ಕೆ ಸೇರುವ ಹಿಂದಿನ ಪ್ರಸ್ತಾಪವನ್ನು ಏಕೆ ತಿರಸ್ಕರಿಸಿದ್ದೀರಿ ಎಂದು ಶಿವಕುಮಾರ್ ಅವರು ನನ್ನನ್ನು ಕೇಳಿದರು. ಮೊದಲೇ ಪಕ್ಷಕ್ಕೆ ಸೇರಿದ್ದರೆ ಇಷ್ಟೊತ್ತಿಗೆ ಮಂತ್ರಿಯಾಗಬಹುದಿತ್ತು ಎಂದು ಅವರು ಹೇಳಿದರು ಎಂಬುದಾಗಿ ಜಿಟಿಡಿ ತಿಳಿಸಿದ್ದಾರೆ.

ಈಗಲಾದರೂ ಕಾಂಗ್ರೆಸ್ ಸೇರಲು ಬಾಗಿಲು ತೆರೆದಿದೆ ಎಂಬುದಾಗಿ ಶಿವಕುಮಾರ್ ಹೇಳಿದ್ದಾರೆ ಎಂದು ಗೌಡರು ಹೇಳಿದ್ದಾರೆ.

ಇತ್ತೀಚೆಗಷ್ಟೇ ಜೆಡಿಎಸ್‌ನ ಇಬ್ಬರು ಮಾಜಿ ಶಾಸಕರಾದ ಆರ್‌ ಮಂಜುನಾಥ್‌ ಮತ್ತು ಡಿಸಿ ಗೌರಿಶಂಕರ್‌ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದಾರೆ.

ಡಿಕೆಶಿ ಅವರು ನನ್ನನ್ನು ಸ್ವಾಗತಿಸಿದ್ದು ನಿಜ. ಆದರೆ, ನಾನು ಕಾಂಗ್ರೆಸ್‌ ಸೇರುವುದಿಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ.

jd-s-leader-gt-devegowda

ಜಿಟಿಡಿ ಕಾಂಗ್ರೆಸ್‌ ಸೇರಲಿದ್ದಾರೆ ಎಂದ ದೇವೇಗೌಡ

ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಶಾಸಕ ಜಿಟಿ ದೇವೇಗೌಡ ಶೀಘ್ರದಲ್ಲೇ ಕಾಂಗ್ರೆಸ್‌ ಸೇರಲಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸಹಕಾರಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮಧು ಬಂಗಾರಪ್ಪ, ಈಗಾಗಲೇ ಹಲವು ಶಾಸಕರು ಕಾಂಗ್ರೆಸ್‌ಗೆ ಸೇರಿದ್ದಾರೆ. ಪಕ್ಷದೊಂದಿಗೆ ಅವಿನಾಭಾವ ಸಂಬಂಧ ಹೊಂದಿರುವ ದೇವೇಗೌಡರು ಕೂಡ ಇದೇ ಕೆಲಸವನ್ನು ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ದೇವೇಗೌಡ ಅವರು ಈ ಹಿಂದೆ ಕಾಂಗ್ರೆಸ್‌ನ ಭಾಗವಾಗಿದ್ದರು. ಹಲವಾರು ವರ್ಷಗಳಿಂದ ಹಿರಿಯ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ. ಆದರೂ ಕಳೆದ ಕೆಲವು ವರ್ಷಗಳಿಂದ ಅವರು ಪಕ್ಷದಿಂದ ದೂರವಾಗಿದ್ದಾರೆ. ಆದರೆ ಶೀಘ್ರದಲ್ಲೇ ಅವರು ಕಾಂಗ್ರೆಸ್‌ಗೆ ಮರಳುತ್ತಾರೆ. ನಾವು ಕೂಡ ಶ್ರಮಿಸುತ್ತೇವೆ. ಇನ್ನು ಮುಂದೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಶ್ರಮಿಸುತ್ತೇವೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+