ತುಮಕೂರು ಜೆಡಿಎಸ್ ಅಭ್ಯರ್ಥಿ ಎ ಕೃಷ್ಣಪ್ಪ ವಿಧಿವಶ
ಬೆಂಗಳೂರು, ಏ 23: ಜಾತ್ಯಾತೀತ ಜನತಾದಳದ (ಜೆಡಿಎಸ್) ರಾಜ್ಯಾಧ್ಯಕ್ಷ ಮತ್ತು ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಎ ಕೃಷ್ಣಪ್ಪ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ತೀವ್ರ ಎದೆನೋವು ಕಂಡುಬಂದ ಹಿನ್ನಲೆಯಲ್ಲಿ ಕೃಷ್ಣಪ್ಪ ಅವರನ್ನು ನಗರದ ಕೆ ಆರ್ ಪುರಂನಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಬುಧವಾರ (ಏ 23) ರಾತ್ರಿ 7.40ಕ್ಕೆ ಕೃಷ್ಣಪ್ಪ ಕೊನೆಯುಸಿರೆಳೆದರು.

ಆಸ್ಪತ್ರೆಗೆ ದಾಖಲಿಸುವಾಗಲೇ ಕೃಷ್ಣಪ್ಪ ಅವರು ಕೋಮಾ ಸ್ಥಿತಿಗೆ ಬಂದಿದ್ದರು. 68 ವರ್ಷದ ಕೃಷ್ಣಪ್ಪ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕು ಹುಟ್ಟೂರು ಮೂಲದವರು. ಈ ಹಿಂದೆ ಐಟಿಐ ಕಾರ್ಖಾನೆಯಲ್ಲಿ ಯೂನಿಯನ್ ಮುಖಂಡರಾಗಿದ್ದ ಕೃಷ್ಣಪ್ಪ ಯಾದವ ಸಮುದಾಯದ ಪ್ರಭಾವಿ ಮುಖಂಡರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದ ಕೃಷ್ಣಪ್ಪ, ಸೆಪ್ಟಂಬರ್ 13, 2013ರಂದು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ನಾಲ್ಕು ಬಾರಿ ಕಾಂಗ್ರೆಸ್ಸಿನ ಶಾಸಕರಾಗಿದ್ದ ಕೃಷ್ಣಪ್ಪ ವೀರಪ್ಪ ಮೊಯ್ಲಿ ಸರಕಾರದಲ್ಲಿ ಸಚಿವರಾಗಿದ್ದರು. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷ ಟಿಕೆಟ್ ನಿರಾಕರಿಸಿದ ಹಿನ್ನಲೆಯಲ್ಲಿ ಕೃಷ್ಣಪ್ಪ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು.
ಹದಿನಾರನೇ ಲೋಕಸಭೆಗೆ ತುಮಕೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಎ ಕೃಷ್ಣಪ್ಪ ಲೋಕಸಭೆಗೆ ಆಯ್ಕೆ ಬಯಸಿದ್ದರು. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಬಸವರಾಜ್ ಮತ್ತು ಕಾಂಗ್ರೆಸ್ಸಿನಿಂದ ಮುದ್ದಹನುಮೇಗೌಡ ಕಣದಲ್ಲಿದ್ದಾರೆ.
ಕೃಷ್ಣಪ್ಪ ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ. ಎ ಕೃಷ್ಣಪ್ಪ ಅವರ ನಿಧನಕ್ಕೆ ಜೆಡಿಎಸ್ ವರಿಷ್ಠ ದೇವೇಗೌಡ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
ಕೃಷ್ಣಪ್ಪ ಅವರ ನಿಧನದ ವಾರ್ತೆ ತಿಳಿಯುತ್ತಿದ್ದಂತೇ ಸಿಂಗಾಪುರ ಪ್ರವಾಸಕ್ಕೆ ತೆರಳಿದ್ದ ಎಚ್ ಡಿ ಕುಮಾರಸ್ವಾಮಿ ಪ್ರವಾಸ ಮೊಟಕುಗೊಳಿಸಿ ಗುರುವಾರ ಬೆಂಗಳೂರಿಗೆ ವಾಪಸಾಗಲಿದ್ದಾರೆ.
ಸಂತಾಪ: ಕೃಷ್ಣಪ್ಪ ಅವರ ನಿಧನಕ್ಕೆ ಸಂತಾಪಗಳ ಮಹಾಪೂರವೇ ಹರಿದುಬರುತ್ತಿದೆ. ಪಕ್ಷಭೇದ ಮೆರೆತು ಎಲ್ಲರೂ ಕೃಷ್ಣಪ್ಪ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications