ಜ.10ರಂದು ಕರ್ನಾಟಕ ಕಲಾಶ್ರೀ ಪ್ರಶಸ್ತಿ ಪ್ರದಾನ
ಬೆಂಗಳೂರು, ಜನವರಿ 7 : ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಜನವರಿ 10ರಂದು ಸಂಜೆ 6 ಗಂಟೆಗೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕರ್ನಾಟಕ ಕಲಾಶ್ರೀ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಂಡಿದೆ.
ಕನ್ನಡ ಮತ್ತು ಸಂಸ್ಕೃತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವೆ ಉಮಾಶ್ರೀ ಅವರು ಉದ್ಘಾಟನೆ ಹಾಗೂ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಈ ಸಂದರ್ಭದಲ್ಲಿ ಪ್ರಶಸ್ತಿ ಪುರಸ್ಕೃತರ ಪರಿಚಯ ಪುಸ್ತಕ ಬಿಡುಗಡೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಅವರು ನೆರವೇರಿಸಲಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಕೆ.ಎ. ದಯಾನಂದ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷೆ ಗಂಗಮ್ಮ ಕೇಶವಮೂರ್ತಿ ಅವರು ವಹಿಸಲಿದ್ದಾರೆ.
2016-17ನೇ ಸಾಲಿನ ಪ್ರಶಸ್ತಿ ಪುರಸ್ಕೃತರು
ಧಾರವಾಡದ ಪಂಡಿತ್ ರವೀಂದ್ರ ಯಾವಗಲ್ ಅವರು ಹಿಂದೂಸ್ಥಾನಿ ಸಂಗೀತ (ತಬಲ) ಹಾಗೂ ಕಾಸರಗೋಡುನ ತೆಕ್ಕೆಕೆರೆ ಸುಬ್ರಹ್ಮಣ್ಯ ಭಟ್ಟ ಅವರಿಗೆ (ಗಮಕ) ಗೌರವ ಪ್ರಶಸ್ತಿ ಲಭಿಸಿದೆ.
ಈ ಸಾಲಿನ ವಿವಿಧ ಪ್ರಕಾರಗಳ ವಾರ್ಷಿಕ ಪ್ರಶಸ್ತಿ ಪಡೆದವರು
ಹೊನ್ನಾವರದ ಪರಮೇಶ್ವರ ಹೆಗಡೆ - ಹಿಂದೂಸ್ತಾನಿ ಗಾಯನ
ಬೆಂಗಳೂರಿನ ಬಿ.ಎನ್. ಸುಕುಮಾರ್ ಬಾಬು - ಸುಗಮ ಸಂಗೀತ -ಲಯವಾದ್ಯ
ಬೆಳಗಾವಿಯ ಜಿ.ಎ. ಕುಲಕರ್ಣಿ - ತಬಲಾ
ಗದಗದ ವೀರೇಶ್ ಕಿತ್ತೂರ - ಸುಗಮ ಸಂಗೀತ ಹಾಗೂ ಸುರಪುರದ ಆಮಯ್ಯ ಎಲ್ ಮಠ - ಸುಗಮ ಸಂಗೀತ
ಬೆಳಗಾವಿಯ ಭಾರತಿ ಎಂ.ಭಟ್ - ಗಮಕ ಹಾಗೂ ಮಂಡ್ಯದ ಶೈಲಜಾ ಚಂದ್ರಶೇಖರ್ - ಗಮಕ
ಬೀದರ್ನ ರಾಮುಲು ಗಾದಗಿ - ಹಿಂದೂಸ್ತಾನಿ ಸಂಗೀತ
ತುಮಕೂರಿನ ಎಸ್.ಕೆ. ಹನುಮಂತದಾಸ್ - ಕಥಾಕೀರ್ತನ
ಮೈಸೂರಿನ ಸಿ.ಎಸ್. ನಾಗರತ್ನಮ್ಮ - ಪಿಟೀಲು - ಕರ್ನಾಟಕ ಸಂಗೀತ
ಬೆಂಗಳೂರಿನ ಸತ್ಯನಾರಾಯಣರಾಜು - ಭರತನಾಟ್ಯ
ಕೋಲಾರದ ಎಸ್. ಸೂರ್ಯನಾರಾಯಣಾಚಾರ್ - ಮೃದಂಗ - ಕರ್ನಾಟಕ ಸಂಗೀತ
ಬಳ್ಳಾರಿಯ ಎಂ. ಗುರುರಾಜ್ - ಮೋರ್ಚಿಂಗ್ - ಕರ್ನಾಟಕ ಸಂಗೀತ
ಬೆಂಗಳೂರಿನ ಡಾ. ಕೆ. ವರದರಂಗನ್ - ಗಾಯನ ಕರ್ನಾಟಕ ಸಂಗೀತ
ಮೈಸೂರಿನ ಡಾ. ಶೀಲಾ ಶ್ರೀಧರ್ - ಭರತನಾಟ್ಯ
ಬೆಂಗಳೂರಿನ ಪೂರ್ಣಿಮಾ ಅಶೋಕ್ - ಭರತನಾಟ್ಯ
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications