KSRTC Fly Bus: ಬೆಂಗಳೂರು ಏರ್ಪೋರ್ಟ್-ದಾವಣಗೆರೆ ನೇರ ಫ್ಲೈ ಬಸ್ ಸೇವೆಗೆ ಚಾಲನೆ: ಸಮಯ, ಟಿಕೆಟ್ ದರ, ವೇಳಾಪಟ್ಟಿ
KSRTC Fly Bus in Karnataka: ರಾಜಧಾನಿ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳ ಮಾರ್ಗವಾಗಿ ಬೆಣ್ಣೆ ನಗರಿ ದಾವಣಗೆರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ನೂತನ ನೇರ ಫ್ಲೈ ಬಸ್ ಸೇವೆ (KSRTC Fly Bus Service) ಆರಂಭಿಸಿದೆ. ಇಂದು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾನ (KIA) ಟರ್ಮಿನಲ್ 2ರಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಚಾಲನೆ ನೀಡಿದರು.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ದಿಂದಲೇ ದಾವಣಗೆರೆಗೆ ನೂತನವಾಗಿ ನೇರ ಫ್ಲೈ ಬಸ್ ಸೇವೆ ಇದಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೇವೆಯನ್ನು ನೀಡುವ ಉದ್ದೇಶದಿಂದ ಈ ಸೇವೆ ಆರಂಭಿಸಿದೆ. ಈ ಬಸ್ ಯಾವ ಮಾರ್ಗದಲ್ಲಿ ಸಂಚರಿಸಲಿದೆ, ಟಿಕೆಟ್ ದರ, ಸಮಯ ವೇಳಾಪಟ್ಟಿ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.

ನೂತನ ಬಸ್ ಸೇವೆಗೆ ಚಾಲನೆ ನೀಡಿದ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ ಅವರು, ನಾನು ಸಚಿವರಾಗಿ ಮೊದಲ ಅವಧಿಯಲ್ಲಿ ಮೊದಲ ಬಾರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿಂದ ಮೈಸೂರಿಗೆ 2013ರಲ್ಲಿ ಆಗಸ್ಟ್ ತಿಂಗಳಲ್ಲಿ ನೇರ ಫ್ಲೈಬಸ್ ಸಾರಿಗೆ ವ್ಯವಸ್ಥೆಯು ಪ್ರಾರಂಭಿಸಲಾಗಿತ್ತು. ಕೆಲವು ದಿನಗಳ ಬಳಿಕ ಅದನ್ನು ಮಡಿಕೇರಿ, ಕುಂದಾಪುರಕ್ಕೆ ಫ್ಲೈ ಬಸ್ ಸೇವೆಯನ್ನು ವಿಸ್ತರಿಸಲಾಯಿತು ಎಂದು ತಿಳಿಸಿದರು.
ಸಾರ್ವಜನಿಕ ಸಾರಿಗೆಯನ್ನು ಉತ್ತೀಜಿಸುವುದು ಹೆಚ್ಚು ಹೆಚ್ಚು ಬಳಸುವಂತೆ ಮಾಡುವುದು ನಮ್ಮ ಪ್ರಥಮ ಆದ್ಯತೆ ಆಗಿರಬೇಕು. ಆ ನಿಟ್ಟಿನಲ್ಲಿ ಇಂದು ಬೆಂಗಳೂರು - ದಾವಣಗೆರೆ ನಡುವೆ ನೇರ ಫ್ಲೈ ಬಸ್ ಸೇವೆ ಆರಂಭಿಸಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಹೊಸ ಹೊಸ ಸೇವೆ ಮತ್ತು ಉಪಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಮುಂಚೂಣಿಯಲ್ಲಿದೆ. ಭಾರತ ಸರ್ಕಾರದಿಂದ ಇತ್ತೀಚೆಗೆ ಮೈಸೂರು ನಗರದ ಧ್ವನಿಸ್ಪಂದನ ಉಪಕ್ರಮಕ್ಕೆ ಉತ್ಕೃಷ್ಟತಾ ಪ್ರಶಸ್ತಿ ಲಭಿಸಿದೆ. ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸಲು ಫ್ಲೈ ಬಸ್ ಗಳಲ್ಲಿ ಇನ್ನು ಮುಂದೆ ಸ್ಯ್ನಾಕ್ಸ್ ಕಿಟ್ ಉಚಿತವಾಗಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಫ್ಲೈಬಸ್ ಸೇವೆ ವೇಳಾಪಟ್ಟಿ, ಸಂಚಾರ ಸಮಯ
KSRTC ನೂತನ ಫ್ಲೈಬಸ್ ಸೇವೆಯು ಬೆಂಗಳೂರು ಏರ್ಪೋರ್ಟ್ನಿಂದ ನಿತ್ಯ ಬೆಳಗ್ಗೆ (ಮಧ್ಯರಾತ್ರಿ) 00.45 ಗಂಟೆಗೆ ಇಲ್ಲಿಂದ ಹೊರಟು ಬೆಳಗಿನ ಜಾವ 5.45ಕ್ಕೆ ದಾವಣಗೆರೆ ತಲುಪಲಿದೆ. ಅದೇ ರೀತಿ ಮತ್ತೊಂದು ಬಸ್ ಬೆಂಗಳೂರು ಏರ್ಪೋರ್ಟ್ ನಿಂದ ಬೆಳಗ್ಗೆ 10 ಗಂಟೆಗೆ ಹೊರಟು ಮಧ್ಯಾಹ್ನ 15 ಗಂಟೆಗೆ ದಾವಣಗೆರೆ ನಗರ ತಲುಪುತ್ತದೆ.
ಮರಳಿ ದಾವಣಗೆರೆಯಿಂದ ಬೆಳಗ್ಗೆ 08 ಗಂಟೆಗೆ ಹೊರಡುವ ಕೆಎಸ್ಆರ್ಟಿ ನೇರ ಫ್ಲೈಬಸ್ ಮಧ್ಯಾಹ್ನ 01 ಗಂಟೆಗೆ ಬೆಂಗಳೂರು ಏರ್ಪೋರ್ಟ್ ತಲುಪುತ್ತದೆ. ಮತ್ತೊಂದು ಬಸ್ ಸಂಜೆ 17 ಗಂಟೆಗೆ ದಾಣವಗೆರೆಯಿಂದ ಹೊರಟು ರಾತ್ರಿ 22 ಗಂಟೆಗೆ ಬೆಂಗಳೂರು ಏರ್ಪೋರ್ಟ್ ನಿಲ್ದಾಣ ಬಂದು ಸೇರುತ್ತದೆ ರಾಜ್ಯ ಸಾರಿಗೆ ನಿಗಮ ತಿಳಿಸಿದೆ.

ನೇರ ಫ್ಲೈಬಸ್ ಸಂಚಾರ ಮಾರ್ಗ ಯಾವುದು?
ಬೆಂಗಳೂರು ಏರ್ಪೋರ್ಟ್ನಿಂದ ಈ ಫ್ಲೈ ಬಸ್ ಸ್ಯಾಟ್ ಲೈಟ್ ಟೌನ್ ರಿಂಗ್ ರಸ್ತೆ ಮೂಲಕ ದೊಡ್ಡ ಬಳ್ಳಾಪುರ ಬೈಪಾಸ್- ದಾಬಾಸ್ ಪೇಟೆ, ತುಮಕೂರು ಬೈಪಾಸ್, ಚಿತ್ರದುರ್ಗ ಬೈಪಾಸ್ ಮೂಲಕ ನೇರವಾಗಿ ದಾವಣಗೆರೆಗೆ ತಲುಪುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ತುಮಕೂರು ಬೈಪಾಸ್ ಮತ್ತು ಚಿತ್ರದುರ್ಗ ಬೈಪಾಸ್ ಸೇರಿ ಎರಡು ಮಾರ್ಗ ಮಧ್ಯ ಪಿಕಪ್ ಮತ್ತು ಡ್ರಾಪ್ ಪಾಯಿಂಟ್ ಮಾಡಲಾಗಿದೆ ಎಂದು ಸಾರಿಗೆ ಅಧಿಕಾರಿಗಳು ಹೇಳಿದ್ದಾರೆ.
ತಪುತ್ತೆ ಟ್ರಾಫಿಕ್ ಬಿಸಿ, ಹಣ-ಸಮಯ ಉಳಿತಾಯ
ಈ ಸೇವೆಯಿಂದ ಮಾರ್ಗ ಹಾಗೂ ನಡುವಿನ ಕೆಲವು ಜಿಲ್ಲೆಗಳ ಜನರಿಗೆ ನೇರ ಬಸ್ ಸಾರಿಗೆ ಸೇವೆ ಸಿಗುತ್ತಿದೆ. ಬೆಂಗಳೂರು ಏರ್ಪೋರ್ಟ್ನಿಂದ ನಗರದ ಬಸ್ ನಿಲ್ದಾಣಗಳಿಗೆ ಈ ಟ್ರಾಫಿಕ್ ನಲ್ಲಿ ಬರಬೇಕಿತ್ತು. ಮತ್ತೆ ಇಲ್ಲಿಂದ ದಾವಣಗೆರೆ ತೆರಳಬೇಕಿತ್ತು. ಇದರಿಂದ ಸಮಯ, ಹಣ ಉಳಿತಾಯವಾಗುತ್ತದೆ. ಸಂಚಾರ ದಟ್ಟಣೆಯ ಕಿರಿ ಕಿರಿ ತಪ್ಪುತ್ತದೆ. ಜೊತೆಗೆ ಜನರಿಗೆ ನೇರ ಬಸ್ ಸೇವೆ ಸಿಕ್ಕಂತಾಗಿದೆ.
ಟಿಕೆಟ್ ಬುಕ್ಕಿಂಗ್ ಹೇಗೆ?
www.ksrtc.in ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಆನ್ಲೈನ್ನಲ್ಲಿ ಟಿಕೆಟ್ ಬುಕ್ ಮಾಡಬಹುದಾಗಿದೆ. ಅಷ್ಟೇ ಅಲ್ಲದೇ KIAB ಬುಕ್ಕಿಂಗ್ ಕೌಂಟರ್ ಸಂಖ್ಯೆ 99722 13726 ಗೆ ಕರೆ ಮಾಡಿ ಅಥವಾ ಕಾಲ್ ಸೆಂಟರ್ ಸಂಖ್ಯೆ 080 2625 2625 ಗೆ ಕರೆ ಮಾಡುವ ಮೂಲಕ
ಫ್ಲೈಬಸ್ ಟಿಕೆಟ್ ದರ ವಿವರ
* ಬೆಂಗಳೂರು ವಿಮಾನ ನಿಲ್ದಾಣದಿಂದ - ತುಮಕೂರು ₹400
* ಬೆಂಗಳೂರು ವಿಮಾನ ನಿಲ್ದಾಣದಿಂದ - ಚಿತ್ರದುರ್ಗ ₹980
* ಬೆಂಗಳೂರು ವಿಮಾನ ನಿಲ್ದಾಣದಿಂದ -ದಾವಣಗೆರೆ ₹1250
ರಾಜ್ಯದಲ್ಲಿರುವ ಒಟ್ಟು ಫ್ಲೈಬಸ್ ಸಾರಿಗೆಗಳು ಎಷ್ಟು?
* ಒಟ್ಟು ಮಾರ್ಗಗಳಲ್ಲಿ 13 ಫ್ಲೈ ಬಸ್ ಸಂಚಾರ.
* ಮೈಸೂರು: 09
* ಮಡಿಕೇರಿ: 02
* ದಾವಣಗೆರೆ: 02
* ಕುಂದಾಪುರ: 02 (ಅಂಬಾರಿ ಉತ್ಸವ)
* ದಿನವಹಿ ಟ್ರಿಪ್ ಗಳು: 44
* ದಿನವಹಿ ಕಿಮೀ: 10240
* ಪ್ರತಿ ಕಿಮೀ ಆದಾಯ: ₹90
* ದಿನವಹಿ ಸರಾಸರಿ ಪ್ರಯಾಣಿಕರ ಸಂಖ್ಯೆ: 1050
-
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications