ಭೂ ಕಂದಾಯ ಕಾಯ್ದೆ ತಿದ್ದುಪಡಿ- 2022 ವಿಧಾನ ಪರಿಷತ್ತಿನಲ್ಲಿ ಅಂಗೀಕಾರ, ಏನಿದು?
ಬೆಂಗಳೂರು, ಸೆಪ್ಟೆಂಬರ್ 19: ವಿಧಾನ ಪರಿಷತ್ತಿನ ಮುಂಗಾರು ಅಧಿವೇಶನದಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ ತಿದ್ದುಪಡಿ- 2022" ಅಂಗೀಕಾರವನ್ನು ಸೋಮವಾರದಂದು ಪಡೆಯಲಾಗಿದೆ. ಕಾನೂನು ಸಚಿವ ಮಾಧುಸ್ವಾಮಿ ವಿಧಾನಪರಿಷತ್ತಿ ಮುಂಗಾರು ಅಧಿವೇಶನದಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ ತಿದ್ದುಪಡಿ- 2022 ಅನ್ನು ಮಂಡನೆಯನ್ನು ಮಾಡಿದರು. ಈ ವೇಳೆ ಬಗರ್ ಹುಕುಂ ಅರ್ಜಿ ಹಾಕಲು ಸಮಯಾವಧಿ ವಿಸ್ತರಣೆ ಮಾಡಿ ಬಿಲ್ ತರಲಾಗಿದೆ. ಅನಧಿಕೃತ ಸಾಗುವಳಿ ಭೂಮಿಗಳನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ ಎಂದು ಸದನಕ್ಕೆ ತಿಳಿಸಿದರು.
ಈ ವೇಳೆ ವಿಧಾನ ಪರಿಷತ್ತಿನ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಮಾತನಾಡಿ, 7,15,700 ಅಪ್ಲಿಕೇಶನ್ ಗಳು ಪೆಂಡಿಂಗ್ ಇವೆ. ಅಕ್ರಮ-ಸಕ್ರಮ ಮಾಡುವುದರ ಪರಿಣಾಮವನ್ನು ಬೆಂಗಳೂರಲ್ಲಿ ಅನುಭವಿಸಿದ್ದೇವೆ. ಅರಣ್ಯ ಕಾಯ್ದೆ ಬಂದ ನಂತರ ಲಕ್ಷಾಂತರ ಜನ ಸಾಗುವಳಿ ಮಾಡ್ತಿರುವವರ ಮೇಲೆ ತೂಗುಗತ್ತಿ ನೇತಾಡ್ತಾ ಇದೆ. ಈ ಬಗ್ಗೆ ಯೋಚಿಸಬೇಕು. ಗೋಮಾಳದಲ್ಲೂ ಅಕ್ರಮವಾಗಿ ಸಾಗುವಳಿ ನಡೆಯುತ್ತಿದೆ. ಮಠ, ಸಂಸ್ಥೆಗೂ ಕೊಟ್ಟಿರುವ ಗೋಮಾಳ ಜಾಗವನ್ನು ಸಕ್ರಮ ಮಾಡುವ ಮೊದಲು ಯೋಚಿಸಬೇಕು. ಗೋಮಾಳ ಗೋಮಾಳವಾಗಿಯೇ ಇರಬೇಕು. ಕೋಟ್ಯಾಂತರ ರೂ ಬೆಲೆಬಾಳುವ ಜಾಗವನ್ನು ಸಾವಿರಾರು ರುಪಾಯಿಗೆ ಕೊಡಲಾಗಿದೆ. ಅಕ್ರಮ - ಸಕ್ರಮ ಮಾಡುವಾಗ ಎಷ್ಟು ಅಕ್ರಮ ನಡೆಯುತ್ತದೆ ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ತಿಳಿಸಿದರು.
ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಮಂಡಿಸಿದ್ದ ಕರ್ನಾಟಕ ಭೂ ಕಂದಾಯ ಕಾಯ್ದೆ ತಿದ್ದುಪಡಿ- 2022 ಅಂಗೀಕಾರವನ್ನು ಪಡೆಯಲಾಯಿತು.

ಕರ್ನಾಟಕ ಭೂ ಕಂದಾಯ ಕಾಯ್ದೆ ತಿದ್ದುಪಡಿ- 2022ಯಲ್ಲಿ ಏನಿದೆ?
ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ ಮಂಡಿಸಿ ದಿನಾಂಕ 1-1-2005 ರ ಹಿಂದಿನಿಂದ ಸಾಗುವಳಿ ಮಾಡಲಾಗುತ್ತಿರುವ 17-3-2018 ರಿಂದ 16-3-2019 ರವರೆಗೆ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಸರ್ಕಾರಿ ಭೂಮಿಗಳನ್ನು ಸಕ್ರಮಗೊಳಿಸಲು ನಮೂನೆ-57 ನ್ನು ಸಲ್ಲಿಸುವುದಕ್ಕೆ ಒಂದು ವರ್ಷ ಕಾಲಾವಕಾಶ ನೀಡುವ ಸಲುವಾಗಿ ಈ ತಿದ್ದುಪಡಿ ವಿಧೇಯಕದಲ್ಲಿ ಸೇರಿಸಲಾಗಿದೆ.

ಸಂಸತ್ತಿನ ಸಾರ್ವತ್ರಿಕ ಚುನಾವಣೆ ಮಾದರಿ ನೀತಿ ಸಂಹಿತೆ ಕಾರಣ 10-3-2019 ರಿಂದ ಅರ್ಜಿಗಳನ್ನು ಸ್ವೀಕರಿಸಿರುವುದಿಲ್ಲ ಮತ್ತು ಶಾಸಕರು ಹಾಗೂ ಸಾರ್ವಜನಿಕರಿಂದ ಈ ಬಗ್ಗೆ ಹಲವು ಮನವಿಗಳು ಸ್ವೀಕೃತಗೊಂಡಿವೆ. ಹಾಗಾಗಿ ಕರ್ನಾಟಕ ಭೂ ಕಂದಾಯ ಅಧಿನಿಯಮ-1964 ರ 94 ಎ ಪ್ರಕರಣವನ್ನು ತಿದ್ದುಪಡಿ ಮಾಡುವುದರ ಮೂಲಕ ನಮೂನೆ-57 ನ್ನು ಸಲ್ಲಿಸುವುದಕ್ಕಾಗಿ ಸಮಯ ವಿಸ್ತರಿಸಲು ಕಂದಾಯ ಅಧಿನಿಯಮಕ್ಕೆ ತಿದ್ದುಪಡಿ ಅವಶ್ಯವೆಂದು ಪರಿಗಣಿಸಿ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಗಿತ್ತು. ಇದೀಗ ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ ತಿದ್ದುಪಡಿ- 2022ಕ್ಕೆ ಅಂಗೀಕಾರ ಸಿಗುವ ಮೂಲಕ ಉಭಯ ಸದನದಲ್ಲಿ ವಿಧೇಯಕ ಅಂಗೀಕಾರಗೊಂಡಂತೆ ಆಗಿದೆ.
-
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications