ವಿಧಾನ ಪರಿಷತ್ ಚುನಾವಣೆ: 6 ರಲ್ಲಿ ಎರಡು ಜೆಡಿಎಸ್, 1 ಬಿಜೆಪಿ ಗೆಲುವು
ಮೈಸೂರು, ಜೂನ್ 12: ಇಂದು ನೆಡಯುತ್ತಿರುವ ವಿಧಾನಪರಿಷತ್ ಚುನಾವಣೆ ಮತ ಎಣಿಕೆಯಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಫಲಿತಾಂಶ ಹೊರ ಬಿದ್ದಿದ್ದು ಜೆಡಿಎಸ್ನ ಮರಿತಿಬ್ಬೇಗೌಡ ಗೆದ್ದಿದ್ದಾರೆ.
ಈ ಗೆಲುವಿನ ಮೂಲಕ ನಾಲ್ಕನೇ ಬಾರಿ ಮರಿತಿಬ್ಬೇಗೌಡ ಅವರು ಪರಿಷತ್ಗೆ ಆಯ್ಕೆ ಆದಂತಾಗಿದೆ. ಅವರು ತಮ್ಮ ಸಮೀಪ ಪ್ರತಿಸ್ಪರ್ಧಿ ಕಾಂಗ್ರೆಸ್ನ ಎಂ.ಲಕ್ಷ್ಮಣ್ ಅವರನ್ನು 360 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣ ಸ್ವಾಮಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ನ ರಮೇಶ್ ಬಾಬು ಅವರು ಸೋಲನ್ನಪ್ಪಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಮಪ್ಪ ಅವರು ಸ್ಪರ್ಧಿಸಿದ್ದರು.
ಭೋಜೆಗೌಡ ಅವರು 907 ಮತಗಳ ಮುನ್ನೆಡೆ ಕಾಯ್ದುಕೊಂಡಿದ್ದಾರೆ. 8ನೇ ಸುತ್ತಿನ ಅಂತ್ಯಕ್ಕೆ ಅವರಿಗೆ 6329 ಮತಗಳು ದೊರೆತಿವೆ.
ಬಿಜೆಪಿಯ ಅಭ್ಯರ್ಥಿ ಗಣೇಶ್ ಕಾರ್ಣಿಕ್ 5407 ಮತಗಳನ್ನು ಪಡೆದಿದ್ದಾರೆ, ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ 2450 ಮತಗಳನ್ನು ಪಡೆದಿದ್ದಾರೆ. ಒಟ್ಟು 16479 ಮತಗಳು ಚಲಾವಣೆಯಾಗಿದ್ದು ಗೆಲುವಿಗೆ 7847 ಮತಗಳು ಬೇಕಿದೆ.
ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 2ನೇ ಸುತ್ತಿನ ಪ್ರಾಶಸ್ತ್ಯದ ಮತಗಳ ಎಣಿಕೆ ಮುಗಿದಿದ್ದು, ಜೆಡಿಎಸ್ನ ಪ್ರತಾಪ್ ರೆಡ್ಡಿ ಅವರು 8,176 ಮತಗಳು ಗಳಿಸಿದ್ದಾರೆ. ಬಿಜೆಪಿಯ ಶ್ರೀನಿವಾಸ್ ಅವರಿಗೆ 7,876 ಮತಗಳು ಪಡೆದಿದ್ದಾರೆ. ಪ್ರತಾಪ್ ರೆಡ್ಡಿ ಅವರು 270 ಮತಗಳು ಮುಂದೆ ಇದ್ದಾರೆ.
ಕಾಂಗ್ರೆಸ್ನ ಚಂದ್ರಶೇಖರ ಪಾಟೀಲ್ ಅಷ್ಟೇನು ಉತ್ತಮ ಸ್ಥಿತಿಯಲ್ಲಿಲ್ಲ ಅಲ್ಲದೆ ನಿರೀಕ್ಷೆ ಹುಟ್ಟಿಸಿದ್ದ ಹೋರಾಟಗಾರ ಡಾ.ರಝಾಕ್ ಉಸ್ತಾದ್ ಹಾಗೂ ವಾಟಾಳ್ ನಾಗರಾಜು ಅವರು ಹಿಂದೆ ಬಿದ್ದಿದ್ದಾರೆ.
ಒಟ್ಟು ಆರು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ ಫಲಿತಾಂಶ ಹೊರಬೀಳಲಿದೆ. ನೈರುತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ ಹಾಗೂ ಈಶಾನ್ಯ ಪದವೀಧರ ಕ್ಷೇತ್ರ, ನೈರುತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರಗಳಿಗೆ ಜೂನ್ 8ರಂದು ಮತದಾನ ನಡೆದಿತ್ತು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications