ವಿಧಾನ ಪರಿಷತ್ ಚುನಾವಣೆ: 6 ರಲ್ಲಿ ಎರಡು ಜೆಡಿಎಸ್, 1 ಬಿಜೆಪಿ ಗೆಲುವು
ಮೈಸೂರು, ಜೂನ್ 12: ಇಂದು ನೆಡಯುತ್ತಿರುವ ವಿಧಾನಪರಿಷತ್ ಚುನಾವಣೆ ಮತ ಎಣಿಕೆಯಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಫಲಿತಾಂಶ ಹೊರ ಬಿದ್ದಿದ್ದು ಜೆಡಿಎಸ್ನ ಮರಿತಿಬ್ಬೇಗೌಡ ಗೆದ್ದಿದ್ದಾರೆ.
ಈ ಗೆಲುವಿನ ಮೂಲಕ ನಾಲ್ಕನೇ ಬಾರಿ ಮರಿತಿಬ್ಬೇಗೌಡ ಅವರು ಪರಿಷತ್ಗೆ ಆಯ್ಕೆ ಆದಂತಾಗಿದೆ. ಅವರು ತಮ್ಮ ಸಮೀಪ ಪ್ರತಿಸ್ಪರ್ಧಿ ಕಾಂಗ್ರೆಸ್ನ ಎಂ.ಲಕ್ಷ್ಮಣ್ ಅವರನ್ನು 360 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣ ಸ್ವಾಮಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ನ ರಮೇಶ್ ಬಾಬು ಅವರು ಸೋಲನ್ನಪ್ಪಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಮಪ್ಪ ಅವರು ಸ್ಪರ್ಧಿಸಿದ್ದರು.
ಭೋಜೆಗೌಡ ಅವರು 907 ಮತಗಳ ಮುನ್ನೆಡೆ ಕಾಯ್ದುಕೊಂಡಿದ್ದಾರೆ. 8ನೇ ಸುತ್ತಿನ ಅಂತ್ಯಕ್ಕೆ ಅವರಿಗೆ 6329 ಮತಗಳು ದೊರೆತಿವೆ.
ಬಿಜೆಪಿಯ ಅಭ್ಯರ್ಥಿ ಗಣೇಶ್ ಕಾರ್ಣಿಕ್ 5407 ಮತಗಳನ್ನು ಪಡೆದಿದ್ದಾರೆ, ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ 2450 ಮತಗಳನ್ನು ಪಡೆದಿದ್ದಾರೆ. ಒಟ್ಟು 16479 ಮತಗಳು ಚಲಾವಣೆಯಾಗಿದ್ದು ಗೆಲುವಿಗೆ 7847 ಮತಗಳು ಬೇಕಿದೆ.
ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 2ನೇ ಸುತ್ತಿನ ಪ್ರಾಶಸ್ತ್ಯದ ಮತಗಳ ಎಣಿಕೆ ಮುಗಿದಿದ್ದು, ಜೆಡಿಎಸ್ನ ಪ್ರತಾಪ್ ರೆಡ್ಡಿ ಅವರು 8,176 ಮತಗಳು ಗಳಿಸಿದ್ದಾರೆ. ಬಿಜೆಪಿಯ ಶ್ರೀನಿವಾಸ್ ಅವರಿಗೆ 7,876 ಮತಗಳು ಪಡೆದಿದ್ದಾರೆ. ಪ್ರತಾಪ್ ರೆಡ್ಡಿ ಅವರು 270 ಮತಗಳು ಮುಂದೆ ಇದ್ದಾರೆ.
ಕಾಂಗ್ರೆಸ್ನ ಚಂದ್ರಶೇಖರ ಪಾಟೀಲ್ ಅಷ್ಟೇನು ಉತ್ತಮ ಸ್ಥಿತಿಯಲ್ಲಿಲ್ಲ ಅಲ್ಲದೆ ನಿರೀಕ್ಷೆ ಹುಟ್ಟಿಸಿದ್ದ ಹೋರಾಟಗಾರ ಡಾ.ರಝಾಕ್ ಉಸ್ತಾದ್ ಹಾಗೂ ವಾಟಾಳ್ ನಾಗರಾಜು ಅವರು ಹಿಂದೆ ಬಿದ್ದಿದ್ದಾರೆ.
ಒಟ್ಟು ಆರು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ ಫಲಿತಾಂಶ ಹೊರಬೀಳಲಿದೆ. ನೈರುತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ ಹಾಗೂ ಈಶಾನ್ಯ ಪದವೀಧರ ಕ್ಷೇತ್ರ, ನೈರುತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರಗಳಿಗೆ ಜೂನ್ 8ರಂದು ಮತದಾನ ನಡೆದಿತ್ತು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications