MLC Election 2025: ಶಿಕ್ಷಕರ ಕ್ಷೇತ್ರಗಳ ಚುನಾವಣೆಯ ಕರಡು ಮತದಾರ ಪಟ್ಟಿ ನ.25ಕ್ಕೆ ರಿಲೀಸ್, ಜಿಲ್ಲಾವಾರು ಅರ್ಜಿ ಸಲ್ಲಿಕೆ ಪಟ್ಟಿ
ಬೆಂಗಳೂರು, ನವೆಂಬರ್ 11: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ, ಆಗ್ನೇಯ ಪದವೀಧರರು ಹಾಗೂ ಈಶಾನ್ಯ, ಬೆಂಗಳೂರು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧ, ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಅವಕಾಶ ನೀಡಲಾಗಿತ್ತು. ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 6 ಅಂತಿಮ ದಿನವಾಗಿತ್ತು. ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಕರಡು ಪಟ್ಟಿ ನವೆಂಬರ್ 25 ರಂದು ಪ್ರಕಟಿಸಲಾಗುತ್ತದೆ. ಹಾಗಾದರೆ ಹೆಸರು ನೋಂದಾಯಿಸಲು ಸಲ್ಲಿಕೆಯಾದ ಅರ್ಜಿಗಳು, ಕ್ಷೇತ್ರವಾರು ಪಟ್ಟಿ ವಿವರ ಇಲ್ಲಿದೆ.
ಶಿಕ್ಷಕರ ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ ನಮೂನೆ 18 ಮತ್ತು 19 ಅರ್ಜಿಗಳನ್ನು ಅಂತಿಮ ದಿನಾಂಕದೊಳಗೆ ಸ್ವೀಕೃತವಾದ ಒಟ್ಟು ಅರ್ಜಿಗಳು ಜಿಲ್ಲಾವಾರು ಮಾಹಿತಿ ಇಲ್ಲಿದೆ.

ಮತದಾರರ ಪಟ್ಟಿ ವಿವರ
ಕರ್ನಾಟಕ ಪಶ್ಚಿಮ ಪದವೀಧರರ ಶಿಕ್ಷಕ ಕ್ಷೇತ್ರ (ಜಿಲ್ಲೆ, ಅರ್ಜಿಗಳು)
* ಧಾರವಾಡ: 26,324
* ಗದಗ: 17,911
* ಹಾವೇರಿ: 18,554
* ಉತ್ತರ ಕನ್ನಡ: 14,577
ಒಟ್ಟು: 77,366
ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರ
* ಚಿತ್ರದುರ್ಗ: 37,976
* ದಾವಣಗೆರೆ: 23,469
* ಶಿವಮೊಗ್ಗ: 24,876
* ಉಡುಪಿ: 41,094
ಒಟ್ಟು: 1,54,821
ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ
* ಬಳ್ಳಾರಿ: 3,162
* ಬಿದರ್: 5,937
* ಬೆಳಗಾವಿ: 9,482
* ವಿಜಯಪುರ: 4,216
* ರಾಯಚೂರು: 3,563
* ಯಾದಗಿರಿ: 5,951
ಒಟ್ಟು: 32,286
ಬೆಂಗಳೂರು ಶಿಕ್ಷಕರ ಕ್ಷೇತ್ರ
* ಬೆಂಗಳೂರು ನಗರ: 7,476
* ಬೆಂಗಳೂರು ಗ್ರಾಮಾಂತರ: 2,892
* ರಾಮನಗರ: 3,679
* ತುಮಕೂರು: 2,431
* ಚಿಕ್ಕಬಳ್ಳಾಪುರ: 2,417
* ಕೋಲಾರ: 3,751
ಒಟ್ಟು: 22,646
ಚುನಾವಣೆ ಯಾವಾಗ, ಪ್ರಮುಖ ದಿನಾಂಕಗಳು
ಸದರಿ ಶಿಕ್ಷಕರ ಕ್ಷೇತ್ರಗಳ ಚುನಾವಣಾ ಪ್ರಕ್ರಿಯೆ ನವೆಂಬರ್ 18ರಿಂದ ನವೆಂಬರ್ 19ರವರೆಗೆ ನಡೆಯಲಿದೆ. 25 ನವೆಂಬರ್ 2025 ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ಈ ವೇಳಾಪಟ್ಟಿಯಂತೆ ಸಂಬಂಧಿತ ಜಿಲ್ಲೆಗಳ ಶಿಕ್ಷಕರು ತಮ್ಮ ಮತದಾರರ ಪಟ್ಟಿಯನ್ನು ಪರಿಶೀಲಿಸಿ ತಿದ್ದುಪಡಿಗಳಿಗೆ 5 ದಿನಗಳೊಳಗೆ ಅರ್ಜಿ ಸಲ್ಲಿಸಬಹುದು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications