ನಾಳೆಯಿಂದ ವಿಧಾನಮಂಡಲ ಜಂಟಿ ಅಧಿವೇಶನ, ನರೇಗಾ ಬಗ್ಗೆ ವಿಶೇಷ ಚರ್ಚೆ: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಜನವರಿ 22ರಿಂದ ಜನವರಿ 31ರವರೆಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಅಧಿವೇಶನದಲ್ಲಿ ಮಹತ್ವದ ವಿಷಯವಾಗಿ ನರೇಗಾ (MGNREGA) ಯೋಜನೆ ಕುರಿತಂತೆ ವಿಶೇಷ ಚರ್ಚೆ ನಡೆಯಲಿದೆ ಎಂದು ಅವರು ತಿಳಿಸಿದರು.
ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಜಂಟಿ ಅಧಿವೇಶನದ ಮೊದಲ ದಿನ ರಾಜ್ಯಪಾಲರ ಭಾಷಣ ನಡೆಯಲಿದ್ದು, ಅದರ ಬಳಿಕ ನರೇಗಾ ಯೋಜನೆಯಲ್ಲಿ ಆಗಿರುವ ಬದಲಾವಣೆಗಳು, ಅದರ ಅನುಷ್ಠಾನ, ಲಾಭ ಹಾಗೂ ಸವಾಲುಗಳ ಬಗ್ಗೆ ಸದನದಲ್ಲಿ ಸಮಗ್ರ ಚರ್ಚೆ ನಡೆಸಲಾಗುವುದು ಎಂದರು.

ಅಧಿವೇಶನ ಬಳಿಕ ಆಯವ್ಯಯ ಸಿದ್ಧತೆ
ಅಧಿವೇಶನ ಮುಕ್ತಾಯವಾದ ನಂತರ ರಾಜ್ಯ ಬಜೆಟ್ (ಆಯವ್ಯಯ) ಸಿದ್ಧತೆ ಪ್ರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು. "ಅಧಿವೇಶನದಲ್ಲಿ ಚರ್ಚೆಯಾಗುವ ವಿಷಯಗಳು ಬಜೆಟ್ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಲಿವೆ. ವಿಶೇಷವಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಉದ್ಯೋಗ ಭದ್ರತೆ ಸಂಬಂಧಿತ ಯೋಜನೆಗಳ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ" ಎಂದು ಅವರು ಸ್ಪಷ್ಟಪಡಿಸಿದರು.
ರಾಜಕೀಯ ಹಾಗೂ ಆಡಳಿತದ ದೃಷ್ಟಿಯಿಂದ ಈ ಜಂಟಿ ಅಧಿವೇಶನವು ನರೇಗಾ ಯೋಜನೆಯ ಭವಿಷ್ಯ, ಗ್ರಾಮೀಣ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಕಾರ್ಯಗಳ ದಿಕ್ಕು, ಮುಂದಿನ ಬಜೆಟ್ಗೆ ಪೂರ್ವಭಾವಿ ಚರ್ಚೆ ಇವುಗಳ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. ಅಧಿವೇಶನದಲ್ಲಿ ಪ್ರತಿಪಕ್ಷಗಳ ಪಾತ್ರ ಹಾಗೂ ಚರ್ಚೆಗಳ ಮೇಲೆ ರಾಜ್ಯದ ರಾಜಕೀಯ ಗಮನ ಕೇಂದ್ರೀಕೃತವಾಗಲಿದೆ.
ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ರದ್ದು ಮಾಡಿ, ಕೋಟ್ಯಂತರ ಬಡಜನರಿಗೆ ಉದ್ಯೋಗದ ಖಾತರಿಯೂ ಇಲ್ಲದ, ಮಹಾತ್ಮ ಗಾಂಧಿಯವರ ಹೆಸರಿನ ನೈತಿಕ ಬಲವೂ ಇಲ್ಲದ ವಿಬಿ ಜಿ ರಾಮ್ ಜಿ ಯೋಜನೆಯನ್ನು ಜಾರಿ ಮಾಡುತ್ತಿರುವುದು ಗ್ರಾಮೀಣ ಭಾರತದ ಆರ್ಥಿಕತೆಗೆ ನೀಡುತ್ತಿರುವ ಕೊಡಲಿಯೇಟು. ಈಗ ಈ ಅನ್ಯಾಯದ ವಿರುದ್ಧ ಧ್ವನಿಯೆತ್ತದೆ ಸುಮ್ಮನಾದರೆ ಮುಂದೆ ಕರಾಳ ದಿನಗಳನ್ನು ಎದುರಿಸಲು ದೇಶ ಸಿದ್ಧವಾಗಬೇಕಿದೆ ಎಂದು ಸಿದ್ದರಾಮಯ್ಯ ಈ ಹಿಂದೆಯೂ ಎಚ್ಚರಿಸಿದ್ದರು.
ಡಿಜಿಪಿ ರಾಮಚಂದ್ರರಾವ್ ಅವರ ಅನುಚಿತ ವರ್ತನೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, "ಅವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗಿದೆ. ಅಮಾನತು ಮಾಡಲಾಗಿದೆ" ಎಂದು ತಿಳಿಸಿದರು. ಸರ್ಕಾರ ಯಾವುದೇ ಅಧಿಕಾರಿಯ ತಪ್ಪುಗಳನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ಅವರು ಈ ಮೂಲಕ ನೀಡಿದ್ದಾರೆ. ನವದೆಹಲಿಗೆ ಭೇಟಿ ಕುರಿತು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ತಮ್ಮ ನವದೆಹಲಿಗೆ ಭೇಟಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, "ಪಕ್ಷದ ವರಿಷ್ಠರು ಕರೆ ನೀಡಿದರೆ ನವದೆಹಲಿಗೆ ತೆರಳುತ್ತೇನೆ" ಎಂದು ಪ್ರತಿಕ್ರಿಯಿಸಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications