ಬೆಳಗಾವಿ, ಡಿಸೆಂಬರ್ 24: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನವು ಡಿಸೆಂಬರ್ 13ರ ಸೋಮವಾರದಿಂದ ಆರಂಭವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದ ನಂತರದಲ್ಲಿ ಮೊದಲ ಬಾರಿಗೆ ಚಳಿಗಾಲ ಅಧಿವೇಶನ ನಡೆಯುತ್ತಿದೆ. ಹತ್ತು ದಿನಗಳ ಅಧಿವೇಶನಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಈ ನಡುವೆ 40ಕ್ಕೂ ಹೆಚ್ಚು ಸಂಘ-ಸಂಸ್ಥೆಗಳು ಪ್ರತಿಭಟನೆಗೆ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದುಕೊಂಡಿವೆ.
ಚಳಿಗಾಲ ಅಧಿವೇಶನಕ್ಕೆ ಸರ್ಕಾರ ಒಂದು ಕಡೆ ಅಣಿಯಾಗಿದ್ದರೆ, ಇದೇ ವೇಳೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸನ್ನದ್ಧವಾಗಿವೆ. ಪ್ರವಾಹ, ಕೊರೊನಾವೈರಸ್ ಕಾರಣದಿಂದಾಗಿ ಬೆಂಗಳೂರಿನಲ್ಲೇ ಅಧಿವೇಶನವನ್ನು ನಡೆಸಲಾಗಿದ್ದು, 2018ರ ನಂತರ ಬೆಳಗಾವಿಯಲ್ಲಿ ಮೊದಲ ಬಾರಿ ಅಧಿವೇಶನ ನಡೆಯುತ್ತಿದೆ. ಡಿಸೆಂಬರ್ 13 ರಿಂದ ಡಿಸೆಂಬರ್ 24 ರವರೆಗೆ ಚಳಿಗಾಲ ಅಧಿವೇಶನ ನಡೆಯಲಿದೆ.
ಸುವರ್ಣ ಸೌಧದಲ್ಲಿ ಅಧಿವೇಶನಕ್ಕೆ 12 ಕೋಟಿ ಖರ್ಚು:
ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನಕ್ಕಾಗಿ ಸುಮಾರು 12 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಶಾಸಕರು, ಸಚಿವರು, ಅಧಿಕಾರಿಗಳು, ಸಿಬ್ಬಂದಿ ಸೇರಿ ಸುಮಾರು 4500 ಜನರಿಗೆ ಜಿಲ್ಲಾಡಳಿತದಿಂದ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಹತ್ತು ದಿನದ ಚಳಿಗಾಲದ ಅಧಿವೇಶನಕ್ಕಾಗಿ ಸರ್ಕಾರ ಹನ್ನೆರಡು ಕೋಟಿ ಖರ್ಚು ಮಾಡುತ್ತಿದೆ. ಈ ಹಿಂದಿನ ಅಧಿವೇಶನಕ್ಕೆ ಸುಮಾರು 24 ಕೋಟಿ ರೂಪಾಯಿಯನ್ನು ಖರ್ಚು ಮಾಡಲಾಗಿತ್ತು. ಆದರೆ ಈ ಬಾರಿ ಚಳಿಗಾಲದ ಅಧಿವೇಶನಕ್ಕೆ ಸುಮಾರು 12 ಕೋಟಿ ರೂ. ಮಾತ್ರ ಖರ್ಚು ಮಾಡಲಾಗುತ್ತಿದೆ. ಅಧಿವೇಶನ ಭದ್ರತೆಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುತ್ತಿರುವ ಸುಮಾರು 2800 ಪೊಲೀಸ್ ಸಿಬ್ಬಂದಿ, ಐನೂರಕ್ಕೂ ಅಧಿಕ ಪೊಲೀಸ್ ಅಧಿಕಾರಿಗಳಿಗೆ ನಗರ ಪೊಲೀಸ್ ಆಯುಕ್ತಾಲಯ ವಸತಿ ಸೌಲಭ್ಯ ಕಲ್ಪಿಸುತ್ತಿದೆ.
ಸರ್ಕಾರಕ್ಕೆ ವಿಪಕ್ಷಗಳ ಸವಾಲು:
ರಾಜ್ಯದಲ್ಲಿನ ಜ್ವಲಂತ ಸಮಸ್ಯೆಗಳನ್ನು ಇಟ್ಟುಕೊಂಡು ಸರ್ಕಾರದ ವಿರುದ್ಧ ಅಸ್ತ್ರ ಪ್ರಯೋಗಕ್ಕೆ ಪ್ರತಿಪಕ್ಷಗಳು ಅಣಿಯಾಗಿವೆ. ಆ ಪೈಕಿ ಅತಿವೃಷ್ಟಿ, ನೆರೆ ಹಾವಳಿ ಪರಿಹಾರ ಕಾರ್ಯ ಹಾಗೂ ಪುನರ್ ವ್ಯವಸ್ಥೆ, ಕೇಂದ್ರ ಸರ್ಕಾರ ನೆರವು ವಿಚಾರ, ಬಿಟ್ಕಾಯಿನ್ ಹಗರಣ, ಮೇಕೆದಾಟು ಯೋಜನೆ ವಿಳಂಬ, ವಿವಿಧ ಇಲಾಖೆಗಳಲ್ಲಿ ಶೇ.40ರಷ್ಟು ಪರ್ಸೆಂಟೇಜ್ ತೆಗೆದುಕೊಳ್ಳುತ್ತಿರುವ ಬಗ್ಗೆ ಗುತ್ತಿಗೆದಾರರ ಆರೋಪ, ಕೊವಿಡ್-19 ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡದ ಕುರಿತು ವಿಷಯಗಳನ್ನು ಪ್ರತಿಪಕ್ಷಗಳು ತಮ್ಮ ಬತ್ತಳಿಕೆಯಲ್ಲಿ ಇಟ್ಟುಕೊಂಡಿವೆ. ಇದೇ ವಿಷಯಗಳನ್ನು ಇಟ್ಟುಕೊಂಡು ಸದನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸನ್ನದ್ಧವಾಗಿವೆ. ಸೋಮವಾರದಿಂದ ಬೆಳಗಾವಿ ಸುವರ್ಣ ಸೌಧದದಲ್ಲಿ ಆರಂಭವಾಗುತ್ತಿರುವ ಚಳಿಗಾಲ ಅಧಿವೇಶನದ ಕ್ಷಣಕ್ಷಣದ ಅಪ್ಡೇಟ್ಗಾಗಿ ಇಲ್ಲಿ ಓದಿ.
Dec 24, 2021, 10:42 am IST
ವಿಧಾನ ಪರಿಷತ್ನಲ್ಲಿ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ 2021 ಮಂಡನೆ ಮಾಡಲಾಗಿದೆ. ಆದರೆ ವಿಧೇಯಕ ಅಂಗೀಕಾರ ಪಡೆಯಲು ಬಿಜೆಪಿಗೆ ಬಹುಮತವಿಲ್ಲ. ಪರಿಷತ್ ಒಟ್ಟು ಸದಸ್ಯ ಬಲ 75. ಬಹುಮತಕ್ಕೆ 38 ಸದಸ್ಯರ ಅಗತ್ಯವಿದೆ. ಆದರೆ ಬಿಜೆಪಿ ಸದಸ್ಯರ ಸಂಖ್ಯೆ 32. ಕಾಂಗ್ರೆಸ್ 29, ಜೆಡಿಎಸ್ 13, ಪಕ್ಷೇತರ 1 ಸದಸ್ಯರಿದ್ದಾರೆ.
Dec 24, 2021, 8:37 am IST
ವಿಧಾನಸಭೆ ಚಳಿಗಾಲದ ಅಧಿವೇಶನದ ಇಂದು ಅಂತ್ಯಗೊಳ್ಳಲಿದೆ. ವಿಧಾನ ಪರಿಷತ್ನಲ್ಲಿ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ 2021 ಮಂಡನೆ ಮಾಡಿ ಇಂದು ಒಪ್ಪಿಗೆ ಪಡೆಯಬೇಕಿದೆ.
Dec 24, 2021, 8:33 am IST
ವಿಧಾನಸಭೆಯಲ್ಲಿ ಅಂಗೀಕಾರಗೊಂಡಿರುವ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ 2021 ಇಂದು ವಿಧಾನ ಪರಿಷತ್ನಲ್ಲಿ ಮಂಡನೆಯಾಗಲಿದೆ.
Dec 23, 2021, 8:14 pm IST
5/11/2009ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದಾಗ ಆರ್ಎಸ್ಎಸ್ ಮೂಲದ ಚಿದಾನಂದ ಮೂರ್ತಿ, ನರಹರಿ, ಬಿ.ಎನ್. ಮೂರ್ತಿ, ಜಯದೇವ, ಆರ್. ಲೀಲಾ, ಮುತ್ತೂರು ಕೃಷ್ಣಮೂರ್ತಿ ಎಂಬುವವರು ಕಾನೂನು ಆಯೋಗಕ್ಕೆ ಮತಾಂತರ ನಿಷೇಧ ಕಾಯ್ದೆ ರೂಪಿಸಿ, ಜಾರಿಗೊಳಿಸುವಂತೆ ಮನವಿ ಮಾಡಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.
Dec 23, 2021, 5:19 pm IST
ಗೃಹ ಸಚಿವ ಆರಗ ಜ್ಞಾನೇಂದ್ರ ಕರ್ನಾಟಕ ವಿಧಾನಸಭೆ ಸದನದಲ್ಲಿ ಮಂಡಿಸಲಾದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ 2021 ಗುರುವಾರ ಧ್ವನಿ ಮತದ ಮೂಲಕ ಅಂಗೀಕಾರ ಪಡೆದಿದೆ.
Dec 23, 2021, 3:32 pm IST
ಸಂವಿಧಾನದ 21 ಮತ್ತು 25ನೇ ವಿಧಿಯನ್ವಯ ಒಬ್ಬ ವ್ಯಕ್ತಿ ತನಗಿಷ್ಟವಾದ (ಯಾವುದೇ ಧರ್ಮಕ್ಕೆ ಸೇರಿದವರಾದರೂ ಸರಿ) ವ್ಯಕ್ತಿಯನ್ನು ಪ್ರೀತಿಸಿ ಮದುವೆಯಾಗಲು ಸಂಪೂರ್ಣ ಸ್ವಾತಂತ್ರ್ಯ ನೀಡಿರುವಾಗ, ಅದನ್ನು ಬೇಡ ಎನ್ನಲು ಸರ್ಕಾರಕ್ಕೇನು ಹಕ್ಕಿದೆ?: ವಿಪಕ್ಷ ನಾಯಕ ಸಿದ್ದರಾಮಯ್ಯ
Dec 23, 2021, 3:30 pm IST
ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಪಿ. ರಾಜೀವ್, ಹಿಂದೂಗಳು 2001ರಲ್ಲಿ ಒಟ್ಟು ಜನಸಂಖ್ಯೆಯಲ್ಲಿ ಶೇ.83.86ರಷ್ಟಿದ್ದರು. 2011ರಲ್ಲಿ ಹಿಂದೂಗಳ ಸಂಖ್ಯೆ ಶೇಕಡಾ 79.80ರಷ್ಟು ಆಗಿದೆ ಎಂದು ಸರ್ಕಾರದ ದಾಖಲೆಯನ್ನು ಉಲ್ಲೇಖಿಸಿದರು.
Dec 23, 2021, 1:17 pm IST
ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021 ಬಗ್ಗೆ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕರ್ನಾಟಕ, ಗುಜರಾತ್, ಮಧ್ಯ ಪ್ರದೇಶ, ಉತ್ತರ ಪ್ರದೇಶ ರಾಜ್ಯದಲ್ಲಿ ಬಿಲ್ ತರಲಾಗಿದೆ. ನಾಲ್ಕು ಕಡೆ ಅದೇ ಅಂಶಗಳಿವೆ. ಪ್ರೀತಿಸಿ ಮದುವೆಯಾದವರನ್ನು ಪ್ರಶ್ನಿಸಲು ನೀವು ಯಾರು? ಎಂದು ಗುಜರಾತ್ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿದೆ ಎಂದರು.
Dec 23, 2021, 12:44 pm IST
ವಿಧಾನಸಭೆಯಲ್ಲಿ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021 ಬಗ್ಗೆ ಚರ್ಚೆ ನಡೆಯುತ್ತಿದೆ.
Belagavi | 'Anti-conversion bill being discussed in Karnataka Assembly today
JC Madhuswamy, State Law and Parliamentary Affairs minister places on record that this bill was actually initiated by Siddaramaiah lead govt in 2016 pic.twitter.com/7rWQlCiIPA
ಮುಸ್ಲಿಂಮರು 2001ರಲ್ಲಿ ಶೇಕಡಾ 12.23ರಷ್ಟು ಇದ್ದರು. 2011ರಲ್ಲಿ ಶೇಕಡಾ 12.92ರಷ್ಟು. 2001ರಲ್ಲಿ ಕ್ರೈಸ್ತರು ಒಟ್ಟು ಜನಸಂಖ್ಯೆಯಲ್ಲಿ 1.91ರಷ್ಟು ಇದ್ದರು. 2011ರಲ್ಲಿ ಕ್ರೈಸ್ತರು ಒಟ್ಟು ಜನಸಂಖ್ಯೆಯಲ್ಲಿ 1.87ರಷ್ಟು ಆಗಿದ್ದಾರೆ ಎಂದು ಸಿದ್ದರಾಮಯ್ಯ ಸದನದಲ್ಲಿ ವಿವರಣೆ ನೀಡಿದರು.
Dec 23, 2021, 12:36 pm IST
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಮಾತನಾಡಿದರು. ಮತಾಂತರದಿಂದ ಮುಸ್ಲಿಂಮರ ಜನಸಂಖ್ಯೆ ಹೆಚ್ಚಳವಾಗುತ್ತಿದೆ ಎಂದು ಹೇಳುತ್ತಿದ್ದಾರೆ. ನಾನು ಅಂಕಿ ಅಂಶ ನೀಡುತ್ತೇನೆ ಹಿಂದೂಗಳ ಜನಸಂಖ್ಯೆ 2001ರಲ್ಲಿ ಒಟ್ಟು ಜನಸಂಖ್ಯೆಯಲ್ಲಿ ಶೇ 83.86ರಷ್ಟಿದ್ದರು. 2011ರಲ್ಲಿ ಹಿಂದೂಗಳ ಸಂಖ್ಯೆ ಶೇಕಡಾ 84ರಷ್ಟು ಆಗಿದೆ. ಹಿಂದೂಗಳ ಸಂಖ್ಯೆಯೇ ಹೆಚ್ಚಾಗಿದೆ ಎಂದರು.
Dec 23, 2021, 11:30 am IST
ಸದನದಲ್ಲಿ ಮಾತನಾಡಿದ ಜೆ. ಸಿ. ಮಾಧುಸ್ವಾಮಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ಬಿಲ್ ರಚನೆ ಮಾಡಲು ಸೂಚನೆ ನೀಡಲಾಗಿತ್ತು. ಬಿಲ್ ಮಾಡಿ ತರುವಂತೆ ಕಾನೂನು ಆಯೋಗಕ್ಕೆ ಅವರೇ ಹೇಳಿದ್ದರು ಎಂದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿದ್ದರಾಮಯ್ಯ ದಾಖಲೆ ತೋರಿಸುವಂತೆ ಪಟ್ಟು ಹಿಡಿದರು. ಆಗ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು.
Dec 23, 2021, 11:21 am IST
ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021 ಬಗ್ಗೆ ಚರ್ಚೆಗಳು ಆರಂಭವಾದಾಗ ಮಾತನಾಡಿದ ಕಾನೂನು ಸಚಿವ ಜೆ. ಸಿ. ಮಾಧುಸ್ವಾಮಿ ನಾವು ಯಾವ ಧರ್ಮದ ವಿರುದ್ಧವೂ ಇಲ್ಲ. ವಿಧೇಯಕದಲ್ಲಿ ಧರ್ಮಗಳನ್ನು ಟಾರ್ಗೆಟ್ ಮಾಡಿಲ್ಲ. ಬಲವಂತವಾಗಿ ವಿವಾಹವಾಗುವುದಕ್ಕೆ ಆಕ್ಷೇಪವಿದೆ ಎಂದು ಹೇಳಿದರು.
Dec 23, 2021, 11:17 am IST
ಪ್ರತಿಪಕ್ಷಗಳ ಗದ್ದಲದ ಹಿನ್ನಲೆಯಲ್ಲಿ ವಿಧಾನಸಭೆ ಕಲಾಪವನ್ನು 10 ನಿಮಿಷಗಳ ಕಾಲ ಸ್ಪೀಕರ ವಿಶ್ವೇಶ್ವರ ಹೆಗಡೆ ಕಾಗೇರಿ ಮುಂದೂಡಿದರು.
Dec 23, 2021, 11:14 am IST
ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021 ಬಗ್ಗೆ ವಿಧಾನಸಭೆಯಲ್ಲಿ ಕಾವೇರಿದ ಚರ್ಚೆ ನಡೆಯುತ್ತಿದೆ. ಸಂವಿಧಾನ ಬಾಹಿರವಾಗಿ ಜಾರಿಗೆ ತಂದಿರುವ ಈ ವಿಧೇಯಕವನ್ನು ನಾನು ವಿರೋಧಿಸುತ್ತೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
Dec 23, 2021, 11:08 am IST
ಸುಮ್ಮನೆ ಮಾತಾಡಿ ಅಪಹಾಸ್ಯಕ್ಕೆ ಇಡಾಗಬೇಡಿ, ಸರ್ವಾನುಮತದಿಂದ ವಿಧೇಯಕ ಅಂಗೀಕರಿಸಿ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಸಲಹೆ ನೀಡಿದರು.
Dec 23, 2021, 10:28 am IST
ಮಧ್ಯಾಹ್ನದ ನಂತರ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021 ಅಂಗೀಕಾರ ಮಾಡುವ ಕುರಿತು ತೀರ್ಮಾನ ಮಾಡುತ್ತೇವೆ. ವಿಧೇಯಕಗಳಿಗೆ ವಿರೋಧ ಮಾಡುವುದು ಪ್ರತಿಪಕ್ಷಗಳ ಸಾಮಾನ್ಯ ಕೆಲಸವಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ ಹೇಳಿದರು.
Dec 23, 2021, 10:22 am IST
ಮತಾಂತರ ನಿಯಂತ್ರಣ ಕಾಯ್ದೆ ಬಗ್ಗೆ ರಾಜ್ಯದ ಜನರಿಗೆ ತಿಳಿಯಬೇಕು ಎಂದರೆ ಸದಸನದಲ್ಲಿ ಚರ್ಚೆಯಗಬೇಕು. ಸದನದಲ್ಲಿ ಗದ್ದಲ ಮಾಡದಂತೆ ಕಾಂಗ್ರೆಸ್ ಸದಸ್ಯರಿಗೆ ಮನವಿ ಮಾಡುತ್ತೇವೆ. ವಿಧೇಯಕ ಅಂಗೀಕಾರಕ್ಕೆ ನಮಗೆ ಪೂರ್ಣ ಬಹುಮತವಿದೆ ಎಂದು ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು.
Dec 22, 2021, 3:46 pm IST
ನಾಳೆ ಮಧ್ಯಾಹ್ನ 2.30ರಿಂದ ರಿಂದ 5 ಗಂಟೆಯವರೆಗೆ ಉತ್ತರ ಕರ್ನಾಟಕ ಬಗ್ಗೆ ಚರ್ಚೆ ನಡೆಸಿದ ಬಳಿಕ ನಾಳೆ ಸಂಜೆ 5 ಗಂಟೆಗೆ ಪ್ರಶ್ನೋತ್ತರ ನಡೆಯಲಿದೆ ಎಂದು ಸದನದಲ್ಲಿ ಸ್ಪೀಕರ್ ತಿಳಿಸಿದ್ದಾರೆ.
Dec 22, 2021, 3:45 pm IST
ವಿಪಕ್ಷಗಳ ಮಾತಿಗೆ ಮಣಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು 6 ಗಂಟೆಯವರೆಗೆ ಉತ್ತರ ಕರ್ನಾಟಕ ಬಗ್ಗೆ ಚರ್ಚೆ ನಡೆಸಿ ನಾಳೆ 10 ಗಂಟೆಯಿಂದ ಮಧ್ಯಾಹ್ನ 1.30 ರ ವರೆಗೆ ಮತಾಂತರ ವಿಧೇಯಕ ಬಗ್ಗೆ ಚರ್ಚೆ ನಡೆಸೋಣ ಎಂದಿದ್ದಾರೆ.
Dec 22, 2021, 3:17 pm IST
ರಾಜ್ಯ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಮತಾಂತರ ನಿಷೇಧ ಕಾಯ್ದೆಯಿಂದ ನಮಗೆ ಯಾವುದೇ ಭಯವಿಲ್ಲ ಎಂದು ಮೈಸೂರು ಕ್ರೈಸ್ತ ಧರ್ಮಾಧಿಕಾರಿ ಡಾ.ಕೆ.ಎ. ವಿಲಿಯಂ ಹೇಳಿದರು.
Dec 22, 2021, 2:43 pm IST
ಸಮಾಜದಲ್ಲಿ ಯಾವುದೇ ರೀತಿ ಮತಾಂತರಗಳು ನಡೆಯಬಾರದು. ಎಲ್ಲರೂ ಅವರ ಮೂಲ ಧರ್ಮದಲ್ಲಿ ಬದುಕಬೇಕು ಎಂಬುದು ನಮ್ಮ ಆಶಯ. ಆದರೆ ಕಾಂಗ್ರೆಸ್ಸಿಗರು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಮತಾಂತರ ನಿಷೇಧ ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ ಎಂದು ಶೋಧಾ ಕರಂದ್ಲಾಜೆ ಆರೋಪಿಸಿದ್ದಾರೆ.
Dec 22, 2021, 2:36 pm IST
ಬೆಳಗಾವಿ ವಿಧಾನಸಭೆ ಕಲಾಪವನ್ನು ಭೋಜನ ವಿರಾಮದ ಹಿನ್ನೆಲೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆಯ ಬಳಿಕ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಚರ್ಚೆ ನಡೆಯಲಿದೆ.
Dec 22, 2021, 2:04 pm IST
ಮತಾಂತರ ನಿಯಂತ್ರಣದ ಮಸೂದೆ ವಿಚಾರದಲ್ಲಿ ವಿಧಾನಸಭೆಯಲ್ಲಿ ಗದ್ದಲ ಉಂಟಾಯಿತು. ಪ್ರತಿಪಕ್ಷಗಳ ಸದಸ್ಯರು ಧರಣಿ ವಾಪಸ್ ಪಡೆಯಿರಿ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದರು. ಸರ್ಕಾರ, ಸಚಿವರು ಮತ್ತು ವಿಪಕ್ಷದ ಮೇಲೆ ಸಿಡಿಮಿಡಿಗೊಂಡರು. ಈ ಸ್ಥಾನದಲ್ಲಿ ಕೂತಿರುವ ನನ್ನ ಕಷ್ಟವನ್ನು ಖುಷಿ ಪಡುವ ರೀತಿ ಕೂತಿರುತ್ತೀರಿ ಎಂದರು.
Dec 22, 2021, 1:59 pm IST
ವಿಧಾನಸಭೆ ಕಲಾಪದಿಂದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಪಸ್ ಆಗಿದ್ದಾರೆ. ನೆಗಡಿಯಿಂದ ಬಳಲುತ್ತಿರುವ ಅವರು ಮಧ್ಯಾಹ್ನದ ತನಕ ವಿಶ್ರಾಂತಿ ಪಡೆಯಲಿದ್ದು, ಬಳಿಕ ಸದನಕ್ಕೆ ಆಗಮಿಸಲಿದ್ದಾರೆ.
Dec 22, 2021, 12:58 pm IST
ರಾಯಭಾಗ ಪಟ್ಟಣದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮಗಳ ಜೊತೆ ಮಾತನಾಡಿದರು, "ನಮ್ಮ ಸಂವಿಧಾನ ದೊಡ್ಡ ಮಟ್ಟದ ಸ್ವಾತಂತ್ರ್ಯ ನೀಡಿದೆ. ಸ್ವಾತಂತ್ರ್ಯ ದುರುಪಯೋಗ ಆಗಬಾರದು. ಸಾವಿರಾರು ಕುಟುಂಬಗಳನ್ನು ಮತಾಂತರ ಮಾಡಿ ದೇಶದಲ್ಲಿ ಗಲಭೆ ಸೃಷ್ಟಿಸುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು.
Dec 22, 2021, 12:14 pm IST
ಸುವರ್ಣ ವಿಧಾನಸೌದಲ್ಲಿ ಮಾಧ್ಯಮಗಳ ಜೊತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದರು, "ಮತಾಂತರ ಕಾಯ್ದೆಯನ್ನು ಸರಕಾರದವರು ಕಳ್ಳರ ಹಾಗೆ ಜಾರಿಗೆ ತರಲು ಹೊರಟಿದ್ದಾರೆ. ಕಾಯ್ದೆಯ ವಿರುದ್ಧ ಸದಸನದ ಒಳಗೆ ಮತ್ತು ಹೊರಗೆ ಹೋರಾಟ ಮಾಡುತ್ತೇವೆ. ಸದನದಲ್ಲಿ ಚರ್ಚೆ ಮಾಡಲು ಸಾಕಷ್ಟು ವಿಚಾರಗಳಿವೆ. 2019ರ ನೆರೆಯಿಂದ ಮನೆ ಕಳೆದುಕೊಂಡ ಜನರಿಗೆ ಇನ್ನೂ ಪರಿಹಾರ ಕೊಟ್ಟಿಲ್ಲ" ಎಂದು ಆರೋಪಿಸಿದರು.
Dec 22, 2021, 11:49 am IST
ಯಾರನ್ನೂ ಕೂಡಾ ಬಲವಂತವಾಗಿ ಮತಾಂತರ ಮಾಡಬಾರದು. ಆಸೆ, ಆಮಿಷವೊಡ್ಡಿ, ಬಡತನ ದುರುಪಯೋಗ ಮಾಡಿಕೊಂಡು ಮತಾಂತರ ಮಾಡಬಾರದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು.
Dec 22, 2021, 11:24 am IST
ಮತಾಂತರ ನಿಷೇಧ ವಿಧೇಯಕವನ್ನು ನಾವು ವಿರೋಧಿಸುತ್ತೇವೆ. ನಮ್ಮಲ್ಲಿರುವ ಲೋಪಗಳನ್ನು ಮೊದಲು ಸರಿಪಡಿಸಬೇಕು. ರಾಜ್ಯದಲ್ಲಿರುವ ಹಿಂದುಳಿದವರನ್ನು ಆರ್ಥಿಕವಾಗಿ ಮೊದಲು ಸಧೃಢಗೊಳಿಸಬೇಕು. ಆಗ ಯಾವುದೇ ರೀತಿಯ ಮತಾಂತರ ನಡೆಯುವುದಿಲ್ಲ. ಇದು ಕೇವಲ ವೋಟ್ ಬ್ಯಾಂಕ್ಗಾಗಿ ಮಾಡಿದ ವಿಧೇಯಕ ಎಂದು ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದರು.
Dec 22, 2021, 11:19 am IST
ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತಾಂತರ ನಿಯಂತ್ರಣ ಕಾಯ್ದೆಗೆ ಕಾಂಗ್ರೆಸ್ ವಿರೋಧ ಮಾಡುತ್ತಿರುವುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ, "ಹಿಂದೂಗಳನ್ನು ಇಸ್ಲಾಂಗೆ ಮತಾಂತರ ಮಾಡುವುದು ಹಿಂದಿನಿಂದಲೂ ನಡೆದಿದೆ. ಅದು ದೇಶದ ಭದ್ರತೆಗೆ ಧಕ್ಕೆ ತರುತ್ತಿದೆ. ಕಾಂಗ್ರೆಸ್ ಪಾಕಿಸ್ತಾನ ಪಕ್ಷ, ಅವರ ಪಕ್ಷದ ಅಧ್ಯಕ್ಷರೇ ಹಿಂದೂಗಳಲ್ಲ. ಮಸೂದೆಯಲ್ಲಿ ಯಾವುದೇ ಧರ್ಮದ ಹೆಸರು ತೆಗದುಕೊಂಡಿಲ್ಲ ಆಸೆ ಆಮಿಷಗಳನ್ನು ಒಡ್ಡಿ ಮತಾಂತರ ಮಾಡುವವರಿಗೆ ಇದು ಅನ್ವಯವಾಗುತ್ತದೆ" ಎಂದು ಹೇಳಿದರು.
READ MORE
6:59 AM, 13 Dec
ಸುವರ್ಣ ಸೌಧದಲ್ಲಿ ಅಧಿವೇಶನ
2018ರ ನಂತರ ಮೊದಲ ಬಾರಿಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಇವೇಶನ.
7:00 AM, 13 Dec
ಡಿಸೆಂಬರ್ 13 ರಿಂದ ಡಿಸೆಂಬರ್ 24 ರವರೆಗೆ ಚಳಿಗಾಲ ಅಧಿವೇಶನ ನಡೆಯಲಿರುವ ಅಧಿವೇಶನಕ್ಕಾಗಿ 12 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ.
7:01 AM, 13 Dec
ರಾಜ್ಯದ ವಿವಿಧ ಜಿಲ್ಲೆಗಳಿಂದ ಅಧಿವೇಶನ ಭದ್ರತೆಗಾಗಿ ಆಗಮಿಸುತ್ತಿರುವ ಸುಮಾರು 2800 ಪೊಲೀಸ್ ಸಿಬ್ಬಂದಿ, ಐನ್ನೂರಕ್ಕೂ ಅಧಿಕ ಪೊಲೀಸ್ ಅಧಿಕಾರಿಗಳಿಗೆ ನಗರ ಪೊಲೀಸ್ ಆಯುಕ್ತಾಲಯ ವಸತಿ ಸೌಲಭ್ಯ ಕಲ್ಪಿಸುತ್ತಿದೆ.
7:02 AM, 13 Dec
ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆಗೆ ಹಲವಾರು ಸಂಘಟನೆಗಳು ಮುಂದಾಗಿದೆ. ಈ ರೀತಿ ಪ್ರತಿಭಟನೆಗಾಗಿಯೇ ಸರ್ಕಾರವು ಹಲಗಾ ಗ್ರಾಮದ ಸುವರ್ಣ ಉದ್ಯಾನವನದಲ್ಲಿ ಏಳು ಟೆಂಟ್, ಕೊಂಡಸಕೊಪ್ಪ ಗ್ರಾಮದಲ್ಲಿ ಒಂದು ಟೆಂಟ್ ವ್ಯವಸ್ಥೆ ಮಾಡಿದೆ.
7:03 AM, 13 Dec
ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಮಾಡಲು 75 ಸಂಘಟನೆಗಳು ಮುಂದಾಗಿದೆ. ಕೋವಿಡ್ ಕಾರಣದಿಂದಾಗಿ ಒಂದು ಟೆಂಟ್ನಲ್ಲಿ ಐನ್ನೂರು ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ.
9:46 AM, 13 Dec
ಖಾನಾಪುರ To ಸುವರ್ಣ ಸೌಧ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ:
ಖಾನಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಅವರು ಹಮ್ಮಿಕೊಂಡಿದ್ದ ಖಾನಾಪುರದಿಂದ ಸುವರ್ಣ ಸೌಧದವರೆಗಿನ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು. ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ, ಗಣೇಶ್ ಹುಕ್ಕೇರಿ ಸಹ ಪಾಲ್ಗೊಂಡು ಹೋರಾಟಕ್ಕೆ ಬೆಂಬಲ ಸೂಚಿಸಿದರು.
11:05 AM, 13 Dec
ಬೆಳಗಾವಿ ಸುವರ್ಣಸೌಧಕ್ಕೆ ಜೊತೆಯಾಗಿ ಬಂದ ಸಿದ್ದರಾಮಯ್ಯ ಮತ್ತು ಸಚಿವ ಎಸ್ ಟಿ ಸೋಮಶೇಖರ್. ಪರಿಷತ್ ಚುನಾವಣೆ ಬಗ್ಗೆ ಪರಸ್ಪರ ಮಾತನಾಡಿಕೊಂಡ ಸಿದ್ದರಾಮಯ್ಯ ಮತ್ತು ಎಸ್ ಟಿ ಸೋಮಶೇಖರ್. ಎಲೆಕ್ಷನ್ ಎನಾಯ್ತಯ್ಯ ಎಂಬ ಪ್ರಶ್ನೆಗೆ ನಮ್ಮದೊಂದು ನಿಮ್ಮದೊಂದು ಎಂದು ಹೇಳಿದ ಎಸ್ ಟಿ ಸೋಮಶೇಖರ್.
11:36 AM, 13 Dec
ಮಳೆಯಿಂದ ಹಾನಿಯಾದ ಬೆಳೆಗೆ ಪರಿಹಾರ ಸಿಕ್ಕಿಲ್ಲ. ಅದನ್ನು ಮೊದಲು ಕೊಡಿ ಎಂದು ಶಾಸಕಿ ಅಂಜಲಿ ನಿಂಬಾಳ್ಕರ್ ಖಾನಾಪುರದಿಂದ ಬೆಳಗಾವಿ ಸುವರ್ಣ ಸೌಧಕ್ಕೆ ಭಜನಾ ತಂಡದ ಜೊತೆ ಭಜನೆ ಮಾಡುತ್ತಾ ಪಾದಯಾತ್ರೆ ಮುಂದುವರಿಸಿದ್ದಾರೆ.
12:08 PM, 13 Dec
ಬೆಳಗಾವಿ ಅಧಿವೇಶನದ ಮೊದಲ ದಿನವೇ ಕಲಾಪಕ್ಕೆ ಬಹುತೇಕ ಶಾಸಕರು ಗೈರಾಗಿದ್ದಾರೆ. ಆಡಳಿತ, ವಿಪಕ್ಷ ಸದಸ್ಯರ ಆಸನ ಖಾಲಿ ಖಾಲಿಯಾಗಿವೆ. ಆಡಳಿತ ಪಕ್ಷದ ಸುಮಾರು 45, ಕಾಂಗ್ರೆಸ್ನ 22, ಜೆಡಿಎಸ್ ಪಕ್ಷದ 13 ಶಾಸಕರಷ್ಟೇ ಹಾಜರಾಗಿದ್ದಾರೆ.
12:22 PM, 13 Dec
ಮೊದಲ ದಿನದ ಕಲಾಪಕ್ಕೆ ಎಚ್.ಡಿ. ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್ ಗೈರಾಗಿದ್ದು, ವಿಧಾನಸಭೆ ಕಲಾಪ ಆರಂಭವಾಗಿದೆ.
12:36 PM, 13 Dec
ವಿಧಾನಸಭೆ ಕಲಾಪ ಆರಂಭವಾಗುವ ಮುನ್ನ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಅನೌಪಚಾರಿಕ ಮಾತುಕತೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
1:04 PM, 13 Dec
ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾತನಾಡಿದ ಇಂಧನ ಸಚಿವ ಸುನಿಲ್ ಕುಮಾರ್, ಮತಾಂತರ ನಿಷೇಧ ಕಾಯ್ದೆ ನಂತರ ಲವ್ ಜಿಹಾದ್ ವಿರುದ್ಧ ಕಾಯ್ದೆಯನ್ನು ತರುತ್ತೇವೆ ಎಂದು ಹೇಳಿದ್ದಾರೆ.
1:07 PM, 13 Dec
ಬೆಳಗಾವಿಯ ವಿಧಾನಸಭೆ ಕಲಾಪದಲ್ಲಿ ಇತ್ತೀಚೆಗೆ ನಿಧನರಾದ ರಾಜ್ಯ ಹಾಗೂ ರಾಷ್ಟ್ರದ ಗಣ್ಯ ವ್ಯಕ್ತಿಗಳಿಗೆ ಸಂತಾಪ ಸೂಚಕ ಮಂಡನೆಯಲ್ಲಿ ಹಲವು ಹಿರಿಯ ಶಾಸಕರು ಮಾತನಾಡಿದರು.
1:26 PM, 13 Dec
ಪುನೀತ್ ರಾಜ್ಕುಮಾರ್ ಒತ್ತಾಯದಿಂದಾಗಿ ರಾಜಕುಮಾರ್ ಸಿನಿಮಾವನ್ನು ಥಿಯೇಟರ್ಗೆ ಹೋಗಿ ನೋಡಿದ್ದೆ ಎಂದು ಮೃತರಿಗೆ ಸಂತಾಪ ಸೂಚಕದಲ್ಲಿ ಸಿದ್ದರಾಮಯ್ಯ ಹೇಳಿದರು.
1:26 PM, 13 Dec
ಸದನದಲ್ಲಿ ಸಂತಾಪ ಸೂಚನೆ: ಇತ್ತೀಚೆಗೆ ನಿಧನರಾದ ಸಿಡಿಎಸ್ ಬಿಪಿನ್ ರಾವತ್, ನಟ ಪುನೀತ್ ರಾಜ್ಕುಮಾರ್, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕೆ. ರೋಸಯ್ಯ, ಜನಸಂಘದ ನಾಯಕ, ಮಾಜಿ ಶಾಸಕ ಉರಿಮಜಲು ರಾಮಭಟ್ಟ, ಸಂಸ್ಕೃತಿ ವಿದ್ವಾಂಸ ಕೆ.ಎಸ್. ನಾರಾಯಣಾಚಾರ್ಯ ಸೇರಿ ಹಲವರಿಗೆ ಸದನದಲ್ಲಿ ಸಂತಾಪ ಸೂಚಿಸಲಾಯಿತು.
1:26 PM, 13 Dec
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಕೆ.ಎಸ್. ಈಶ್ವರಪ್ಪ, ಜೆ.ಸಿ. ಮಾಧುಸ್ವಾಮಿ ಸಹಿತ ಹಲವರು ಮೃತರ ಗುಣಗಾನ ಮಾಡಿದರು.
1:36 PM, 13 Dec
ಜಿಮ್ನಲ್ಲಿ ವರ್ಕೌಟ್ ಮಾಡಿದ ಬಳಿಕ ಪುನೀತ್ ಅವರಿಗೆ ಈ ರೀತಿ ಆಗುತ್ತೆ ಎಂದು ಯಾರಿಗೂ ಅನಿಸಿರಲಿಲ್ಲ. ವಿಷಯ ತಿಳಿದು ನಾನು ಆಸ್ಪತ್ರೆಗೆ ಹೋಗುವುದಕ್ಕೂ ಮುನ್ನ ಅವರು ನಿಧನರಾಗಿದ್ದರು. ಕೂಡಲೇ ಅವರ ಕುಟುಂಬದವರ ಜತೆ ಮಾತನಾಡಿ ಸಹಕಾರ ಕೋರಿದೆವು. ಡಾ. ರಾಜ್ಕುಮಾರ್ ಅಂತ್ಯ ಸಂಸ್ಕಾರದ ವೇಳೆ ನಡೆದ ಅಹಿತಕರ ಘಟನೆಗಳು ಮತ್ತೆ ಸಂಭವಿಸಬಾರದು ಎಂಬುದು ನಮ್ಮ ಉದ್ದೇಶ ಆಗಿತ್ತು. ಅದಕ್ಕೆ ಪುನೀತ್ ಕುಟುಂಬದವರ ಸಹಕಾರ ಸಿಕ್ಕಿತು ಎಂದು ಬಸವರಾಜ ಬೊಮ್ಮಾಯಿ ಸಂತಾಪ ಸೂಚನೆಯಲ್ಲಿ ಹೇಳಿದರು.
1:43 PM, 13 Dec
ಕೇಂದ್ರದಂತೆ ರಾಜ್ಯ ಸರ್ಕಾರವೂ ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಬೆಳಗಾವಿಯ ಸುವರ್ಣಸೌಧ ಮುತ್ತಿಗೆಗೆ ಯತ್ನಸಿದ್ದ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೂಡಿಹಳ್ಳಿ ಚಂದ್ರಶೇಖರ್ ಸೇರಿ ನೂರಾರು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
2:45 PM, 13 Dec
ಸರ್ಕಾರಿ ವೈದ್ಯರು ಬೆಳಗ್ಗೆ ಆಸ್ಪತ್ರೆಗೆ ಬಂದು ಸಹಿ ಮಾಡುತ್ತಾರೆ. ಕೇವಲ ಒಂದು ಗಂಟೆ ಇದ್ದು ಅವರ ಖಾಸಗಿ ಆಸ್ಪತ್ರೆ ಹೋಗಿ ಕೆಲಸ ಮಾಡುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹೇಳಿದರು. ಇದಕ್ಕೆ ಉತ್ತರಿಸಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮುಂದಿನ ದಿನಗಳಲ್ಲಿ ಅಂತಹ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.
3:12 PM, 13 Dec
ಕೊರೊನಾ ಸಮಯದಲ್ಲಿ ಕಾರ್ಖಾನೆಗಳಿಗೆ ವಿದ್ಯುತ್ ಬಿಲ್ ವಿನಾಯಿತಿ ನೀಡಿದ್ದೀರಿ. ಅದರಂತೆ ದೇವಾಲಯ, ಮಸೀದಿ, ಚರ್ಚ್ಗಳ ವಿದ್ಯುತ್ ಬಿಲ್ ಮನ್ನಾ ಮಾಡಲು ವಿಧಾನ ಪರಿಷತ್ ಸದಸ್ಯ ತುಳಸಿ ಮುನಿರಾಜುಗೌಡ ಮನವಿ ಮಾಡಿದ್ದಾರೆ.
ಬಿಜೆಪಿಯ ಎಲ್ಲ ನಾಯಕರು ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಬೇಕು ಎನ್ನುತ್ತಿದ್ದಾರೆ. ಮತಾಂತರ ನಿಷೇಧ ಕಾಯ್ದೆ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ವಿಪಕ್ಷ ನಾಯಕರು ಏನಾದರೂ ಹೇಳಲಿ. ನಾವು ಪ್ರತಿಕ್ರಿಯಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
5:05 PM, 13 Dec
ಪುನೀತ್ ರಾಜ್ಕುಮಾರ್ ಜೊತೆ ನಮಗೆ ಒಡನಾಟ ಜಾಸ್ತಿ. ಅವರು ನಮ್ಮ ಸಂಬಂಧಿ. ಆದರೆ ಡಾ. ರಾಜ್ಕುಮಾರ್ ಕುಟುಂಬದವರು ಯಾವತ್ತೂ ಸಂಬಂಧ, ಜಾತಿ, ಧರ್ಮ ಇಟ್ಟುಕೊಂಡು ಮಾತನಾಡುವವರಲ್ಲ ಎಂದು ಶಾಸಕ ಕುಮಾರ ಬಂಗಾರಪ್ಪ ಬೆಳಗಾವಿ ವಿಧಾನಸಭೆ ಅಧಿವೇಶನದ ಸಂತಾಪ ಸೂಚಕ ಭಾಷಣದಲ್ಲಿ ಹೇಳಿದರು.
7:23 AM, 14 Dec
2ನೇ ದಿನದ ಕಲಾಪ:
ಮಂಗಳವಾರ ಸುವರ್ಣಸೌಧದಲ್ಲಿ ಎರಡನೇ ದಿನದ ಅಧಿವೇಶನ ನಡೆಯಲಿದೆ. ಮತಾಂತರ ನಿಷೇಧ ಕಾಯ್ದೆ ಸೇರಿದಂತೆ ಹಲವು ವಿಷಯಗಳು ಇಂದು ಚರ್ಚೆಗೆ ಬರುವ ಸಾಧ್ಯತೆಗಳಿವೆ. ಈಗಾಗಲೇ ಈ ಕಾಯ್ದೆಗೆ ಸಂಬಂಧಿಸಿದಂತೆ ಸರ್ಕಾರದ ನಿಲುವು ಸ್ಪಷ್ಟವಾಗಿದೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
3:01 PM, 14 Dec
ಬೆಳಗಾವಿ ಆಧಿವೇಶನದಲ್ಲಿ ಬೆಂಗಳೂರಿನ ರಸ್ತೆಗಳ ಕುರಿತು ಚರ್ಚೆ.
3:02 PM, 14 Dec
ಬೆಂಗಳೂರಿನಲ್ಲಿ ರಸ್ತೆಗಳ ದುರಸ್ತಿ ಕಾರ್ಯಗಳಿಗೆ ಸಂಬಂಧಿಸಿದಂತೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಮಾಜಿ ಸಚಿವ ಕೃಷ್ಣಬೈರೇಗೌಡ ಆರೋಪಿಸಿದರು.
11:12 AM, 15 Dec
ಹಾನಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಮಾನೆ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.
12:11 PM, 15 Dec
ರಾಜ್ಯದ ಹಳ್ಳಿಗಳಲ್ಲಿ ಮದ್ಯದ ಅಂಗಡಿಯಿಂದಾಗುವ ಸಮಸ್ಯೆಗಳ ಬಗ್ಗೆ ಪ್ರಶ್ನೋತ್ತರ ನಡೆಯಿತು.
12:13 PM, 15 Dec
ಕರ್ನಾಟಕ ಭೂಕಂದಾಯ ತಿದ್ದುಪಡಿ ಕಾಯ್ದೆ 2021 ವಿಧೇಯಕವನ್ನು ಮಂಡಿಸಲಾಯಿತು.
1:02 PM, 15 Dec
ಇತರೆ ಹಿಂದುಳಿದ ವರ್ಗಗಳ ವಸತಿ ನಿಲಯಕ್ಕೆ ವಿಶೇಷ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Karnataka Assembly Winter Session 2021 Live Updates: Winter session of the Karnataka Legislature will be held at the Suvarna Vidhan Soudha Belagavi from December 13, 2021. Stay Tuned for Live Updates, News and Highlights.