Liquor: ಅಬಕಾರಿ ಇಲಾಖೆಯಲ್ಲಿ ಕಮಿಷನ್ ದಂಧೆ, ಏನಿದು ವಿವಾದ - ರಾಹುಲ್ಗೆ ದೂರು ನೀಡಲು ಸಿದ್ಧತೆ
ಕಾಂಗ್ರೆಸ್ ಸರ್ಕಾರದಡಿ ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಒಂದೊಂದು ಲೈಸೆನ್ಸ್ ನೀಡಲೂ ಕೋಟಿಗಟ್ಟಲೆ ಲಂಚ ನೀಡಬೇಕಾಗಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಪಾಲು ಸಿಗುತ್ತಿರುವ ಕಾರಣ ಸಿಎಂ ಅವರಿಗೆ ದೂರು ನೀಡಿದರೂ ಏನೂ ಸ್ಪಂದನೆ ನೀಡುತ್ತಿಲ್ಲ. ಈ ಕೂಡಲೇ ಸಿಎಂ ಭ್ರಷ್ಟ ಅಬಕಾರಿ ಸಚಿವರ ರಾಜೀನಾಮೆ ಪಡೆಯಬೇಕು. ಇಲ್ಲದಿದ್ದರೆ ನಮ್ಮ ಹೋರಾಟ ಮುಖ್ಯಮಂತ್ರಿಗಳ ವಿರುದ್ಧವೇ ನಡೆಯಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಎಚ್ಚರಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದಡಿ ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಒಂದೊಂದು ಲೈಸೆನ್ಸ್ ನೀಡಲೂ ಕೋಟಿಗಟ್ಟಲೆ ಲಂಚ ನೀಡಬೇಕಾಗಿದೆ. ಈ ಹಗರಣದಲ್ಲಿ ಸಿಎಂ ಅವರಿಗೂ ಪಾಲು ಸಿಗುತ್ತಿರುವ ಕಾರಣ ಸಿಎಂ ಅವರಿಗೆ ದೂರು ನೀಡಿದರೂ ಏನೂ ಸ್ಪಂದನೆ ನೀಡುತ್ತಿಲ್ಲ. ಈ ಕೂಡಲೇ ಸಿಎಂ ಭ್ರಷ್ಟ ಅಬಕಾರಿ ಸಚಿವರ ರಾಜೀನಾಮೆ ಪಡೆಯಬೇಕು. ಇಲ್ಲದಿದ್ದರೆ ನಮ್ಮ ಹೋರಾಟ ಮುಖ್ಯಮಂತ್ರಿಗಳ ವಿರುದ್ಧವೇ ನಡೆಯಲಿದೆ ಎಂದು ಹೇಳಿದ್ದಾರೆ.

ಈ ವಿಚಾರವಾಗಿ ಬಿಜೆಪಿ ಮತ್ತು ಜೆಡಿಎಸ್ ಸರಣಿ ಟ್ವೀಟ್ ಮಾಡಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ದಂಧೆ ನಿತ್ಯನಿರಂತರವಾಗಿದೆ. ಬಿಜೆಪಿ ಸರ್ಕಾರದ ಮೇಲೆ 40% ಎಂಬ ಸುಳ್ಳು ಆರೋಪ ಹೊರಿಸಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಈಗ ಕಮಿಷನ್ ದಂಧೆಯನ್ನೇ ನಿತ್ಯದ ಕಾಯಕವಾಗಿಸಿಕೊಂಡಿದೆ.
ಮದ್ಯದಂಗಡಿಗಳಲ್ಲಿ ಪರವಾನಗಿಯಿಂದ ಹಿಡಿದು ಪ್ರತಿ ಹಂತದಲ್ಲೂ ಸಚಿವರ, ಕರ್ನಾಟಕ ಕಾಂಗ್ರೆಸ್ ಶಾಸಕರ, ಅಧಿಕಾರಿಗಳ ಕೈಬಿಸಿ ಮಾಡಬೇಕು ಎಂದು ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷರು ಆರೋಪ ಹೊರಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ, ಕಾರಣ ಅಕ್ರಮದಲ್ಲಿ ಸಿಎಂ, ಡಿಸಿಎಂ, ಸಚಿವರ ಪಾಲೂ ಇದೆ. ಭ್ರಷ್ಟಾಚಾರ ಎಸಗಿದ ಸಚಿವರನ್ನು ಸಂಪುಟದಿಂದ ತೆಗೆಯಲು ಹಿಂದೆ ಮುಂದೆ ನೋಡುತ್ತಿರುವ ಮುಖ್ಯಮಂತ್ರಿಗಳು, ಅಬಕಾರಿ ಅಕ್ರಮಕ್ಕೆ ತಮ್ಮ ಸಹಮತವಿದೆ ಎಂಬುದನ್ನು ಸೂಚಿಸುತ್ತಿದ್ದಾರೆಯೇ ಎಂದು ಬಿಜೆಪಿ ಪ್ರಶ್ನೆ ಮಾಡಿದೆ.
ಈ ಸಂಬಂಧ ಜೆಡಿಎಸ್ ಟ್ವೀಟ್ ಮಾಡಿದ್ದು, ಅಬಕಾರಿ ಇಲಾಖೆಯ "ಮಂಥ್ಲಿ ಮನಿ ಮಿನಿಸ್ಟರ್" ಆರ್.ಬಿ. ತಿಮ್ಮಾಪುರ "ಕಮಿಷನ್" ಮತ್ತು "ಕಲೆಕ್ಷನ್" ದಂಧೆಗೆ ಮದ್ಯ ಮಾರಾಟಗಾರರು ಹೈರಾಣಾಗಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಕಮಿಷನ್ ದಂಧೆ, ಭ್ರಷ್ಟಾಚಾರಕ್ಕೆ ಸಿಡಿದೆದ್ದಿರುವ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷರು, ರಾಹುಲ್ ಗಾಂಧಿ, ಕಾಂಗ್ರೆಸ್ ಹೈಕಮಾಂಡ್ಗೆ ದೂರು ನೀಡಲು ಮುಂದಾಗಿದ್ದಾರೆ. ಮೊನ್ನೆಯಷ್ಟೇ ಬೆಂಗಳೂರು ಅಬಕಾರಿ ಡಿಸಿ 25 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆಯೇ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಇದು ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಬೇರೂರಿರುವ ಭ್ರಷ್ಟಾಚಾರಕ್ಕೆ ಹಿಡಿದಿರುವ ಕೈಗನ್ನಡಿ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ನಿಮಗೆ ಕಿಂಚಿತ್ತಾದರೂ ಮಾನ, ಮರ್ಯಾದೆ ಉಳಿಸಿಕೊಂಡಿದ್ದರೇ, ಮೊದಲು ಭ್ರಷ್ಟ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ಅವರನ್ನು ಸಂಪುಟದಿಂದ ಕಿತ್ತೊಗೆಯಿರಿ ಎಂದು ಜೆಡಿಎಸ್ ಹೇಳಿದೆ.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು, ಅಬಕಾರಿ ಇಲಾಖೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಕಮಿಷನ್ ದಂಧೆ, ಭ್ರಷ್ಟಾಚಾರದ ಬಗ್ಗೆ ಬೇಸತ್ತು ಮದ್ಯ ಮಾರಾಟಗಾರರ ಸಂಘದ ರಾಜ್ಯಾಧ್ಯಕ್ಷರಾದ ಎಸ್.ಗುರುಸ್ವಾಮಿ ಅವರು ಈ ಬಗ್ಗೆ ರಾಹುಲ್ ಗಾಂಧಿ ಅವರಿಗೆ ದೂರು ಕೊಡಲು ಮುಂದಾಗಿರುವ ನಡೆ,
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ನಾಚಿಕೆಗೇಡಿನ ವಿಷಯ.
ಅಬಕಾರಿ ಇಲಾಖೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಕಮಿಷನ್ ದಂಧೆ, ಭ್ರಷ್ಟಾಚಾರದ ಬಗ್ಗೆ ಬೇಸತ್ತು ಮದ್ಯ ಮಾರಾಟಗಾರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಎಸ್.ಗುರುಸ್ವಾಮಿ ಅವರು ಈ ಬಗ್ಗೆ ರಾಹುಲ್ ಗಾಂಧಿ ಅವರಿಗೆ ದೂರು ಕೊಡಲು ಮುಂದಾಗಿರುವ ನಡೆ, @CMofKarnataka ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ @DKShivakumar ಅವರಿಗೆ ನಾಚಿಕೆಗೇಡಿನ… pic.twitter.com/rfB7N67qCq
— Nikhil Kumar (@Nikhil_Kumar_k) January 27, 2026
ರಾಹುಲ್ ಗಾಂಧಿ ಅವರಿಗೆ ಈ ಬಗ್ಗೆ ದೂರು ನೀಡಿದರು ಕೂಡ ಮದ್ಯ ಮಾರಾಟಗಾರರಿಗೆ ಇದರಿಂದ ಯಾವುದೇ ಪ್ರಯೋಜನ ಆಗುವ ಸಾಧ್ಯತೆ ಇಲ್ಲ. ಕಾರಣ ವಸೂಲಿ ಮಾಡಲು ಆದೇಶ ಕೊಟ್ಟಿರೋದೇ ಹೈಕಮಾಂಟ್ ಆಗಿರುವುದರಿಂದ ಇನ್ನು ಅವರಿಂದ ಏನು ಪರಿಹಾರ ಸಿಗಲಿದೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ಎಲ್ಲ ರೀತಿಯಿಂದಲೂ ಲೂಟಿ ಹೊಡೆಯುತ್ತಿರುವ ಈ ಲೂಟಿಕೋರ ಕರ್ನಾಟಕ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಗುತ್ತಿಗೆದಾರರ, ಮದ್ಯ ಮಾರಾಟಗಾರರ ಸಮಸ್ಯೆ ಬಗೆಹರಿಯಲ್ಲ. ಸರ್ಕಾರಕ್ಕೆ ಕಿಂಚಿತ್ತಾದರೂ ಮಾನ, ಮರ್ಯಾದೆ ರಾಜ್ಯದ ಜನತೆಯ ಮೇಲೆ ಗೌರವವಿದ್ದರೆ ಈ ಕೂಡಲೇ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ರಾಜೀನಾಮೆ ಪಡೆಯಲು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications