ಬೆಂಗಳೂರು, ನವೆಂಬರ್ 03: ಕರ್ನಾಟಕದ ಮೂರು ಲೋಕಸಭೆ ಮತ್ತು ಎರಡು ವಿಧಾನಸಭೆ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.
ಬೆಳಿಗ್ಗೆ 7 ರಿಂದ ಮತದಾನ ಆರಂಭವಾಗಿದ್ದು, ಸಂಜೆ 6 ರವರೆಗೆ ನಡೆಯಲಿದೆ.
ಮಂಡ್ಯದಲ್ಲಿ ಜೆಡಿಎಸ್ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿದ್ದ ಸಿ ಎಸ್ ಪುಟ್ಟರಾಜು, ಶಿವಮೊಗ್ಗದಲ್ಲಿ ಬಿಜೆಪಿಯಿಂದ ಸಂಸದರಾಗಿ ಆಯ್ಕೆಯಾಗಿದ್ದ ಬಿ ಎಸ್ ಯಡಿಯೂರಪ್ಪ ಮತ್ತು ಬಳ್ಳಾರಿ ಬಿಜೆಪಿ ಸಂಸದ ಶ್ರೀರಾಮುಲು ಅವರು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರಿಂದ ತೆರವಾದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿ ಎರಡೂ ಕಡೆಗಳಲ್ಲಿ ಗೆಲುವು ಸಾಧಿಸಿದ್ದರು. ನಂತರ ಚನ್ನಪಟ್ಟಣವನ್ನು ತಮ್ಮ ಬಳಿಯೇ ಉಳಿಸಿಕೊಂಡು ರಾಮನಗರ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರಿಂದ ತೆರವಾದ ಸ್ಥಾನಕ್ಕೆ ಇದೀಗ ಉಪಚುನಾವಣೆ ನಡೆಯುತ್ತಿದೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಕಾಂಗ್ರೆಸ್ ಶಾಸಕರಾಗಿದ್ದ ಸಿದ್ದು ನ್ಯಾಮಗೌಡ ಅವರು ಅಕಾಲಿಕ ಮರಣವನ್ನಪ್ಪಿದ್ದರಿಂದ ತೆರವಾದ ಸ್ಥಾನಕ್ಕೂ ಉಪಚುನಾವಣೆ ನಡೆಯುತ್ತಿದೆ. ಎಲ್ಲಾ ಕ್ಷೇತ್ರಗಳಿಗೂ ಇಂದು ಚುನಾವಣೆ ನಡೆಯಲಿದ್ದು, ಫಲಿತಾಂಶ ನವೆಂಬರ್ 6 ರಂದು ಹೊರಬೀಳಲಿದೆ.
ಉಪಚುನಾವಣೆಗೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಯನ್ನು ಒನ್ ಇಂಡಿಯಾ ನೀಡಲಿದೆ.
11 ಗಂಟೆವರೆಗೆ ಜಮಖಂಡಿಯಲ್ಲಿ 22%, ರಾಮನಗರದಲ್ಲಿ 16%, ಬಳ್ಳಾರಿಯಲ್ಲಿ 24.58% ರಷ್ಟು ಮತದಾನ
Nov 03, 2018, 10:43 am IST
ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆಯುತ್ತಿರು ಮತದಾನ ಪ್ರಕ್ರಿಯೆ. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಬೈಂದೂರು ವಿಧಾನಸಭಾ ಕ್ಷೇತ್ರ
Nov 03, 2018, 10:16 am IST
9 ಗಂಟೆಯ ಹೊತ್ತಿಗೆ ಐದು ಕ್ಷೇತ್ರಗಳ ಸರಾಸರಿ ಮತದಾನ: ಬಳ್ಳಾರಿ:4.40%, ಶಿವಮೊಗ್ಗ: 8.61, ಮಂಡ್ಯ: 4.18, ಜಮಖಂಡಿ:9%, ರಾಮನಗರ: 8%
Nov 03, 2018, 9:58 am IST
ರಾಮನಗರದ ಮೊಟ್ಟೆದೊಡ್ಡಿ ಮತಗಟ್ಟೆ ಸಂಖ್ಯೆ 179 ರಲ್ಲಿ ಇದ್ದಕ್ಕಿದ್ದಂತೆ ಹಾವು ಕಾಣಿಸಿಕೊಂಡು ಮತಗಟ್ಟೆ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿತ್ತು. ಇದರಿಂದಾಗಿ ಕೆಲಕಾಲ ಮತದಾನ ವಿಳಂಬವಾಗಿತ್ತು.
ಮೂಲಸೌಕರ್ಯ ಆಗ್ರಹಿಸಿ ಮತದಾನ ಬಹಿಷ್ಕರಿಸಿದ ಶಿವಮೊಗ್ಗ ತಾಲೂಕಿನ ಕುಂಸಿ ಬಳಿಯ ದೊಡ್ಡಮಟ್ಟಿ, ಭದ್ರಾವತಿಯ ಹೊಳೆಬೆಳಗಲು ಗ್ರಾಮದ ಜನರು
Nov 03, 2018, 9:08 am IST
9822 ಬ್ಯಾಲೆಟ್ ಯುನಿಟ್ , 8,438 ಕಂಟ್ರೋಲ್ ಯುನಿಟ್, 8,992 ವಿವಿ ಪ್ಯಾಟ್ ಗಳನ್ನು ಉಪಚುನಾವಣೆಗೆ ಬಳಸಲಾಗುತ್ತಿದೆ. 130 ವಿಡಿಯೋ ಕಾಸ್ಟಿಂಗ್ ಮಾಡಿಸಲಾಗುತ್ತಿದ್ದು, 1312 ಮಂದಿ ಮೈಕ್ರೋ ವೀಕ್ಷಕರನ್ನು ನೇಮಿಸಲಾಗಿದೆ.
Nov 03, 2018, 9:07 am IST
ಐದು ಕ್ಷೇತ್ರಗಳಲ್ಲಿ ಒಟ್ಟು 54.45 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ. 27.21 ಲಕ್ಷ ಪುರುಷ ಮತದಾರರು, 27.30 ಲಕ್ಷ ಮಹಿಳಾ ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ.
Nov 03, 2018, 9:06 am IST
ಜಮಖಂಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ನ್ಯಾಮಗೌಡ ಮತದಾನ
Nov 03, 2018, 7:55 am IST
ಶಿವಮೊಗ್ಗದಲ್ಲಿ ಕುಟುಂಬ ಸಮೇತರಾಗಿ ಮತದಾನ ಮಾಡಿದ ಬಿ ವೈ ರಾಘವೇಂದ್ರ ಮತ್ತು ಬಿ ವೈ ವಿಜಯೇಂದ್ರ
Nov 03, 2018, 7:54 am IST
ಜಮಖಂಡಿ ಕ್ಷೇತ್ರದಲ್ಲಿ ಮತದಾನ ಮಾಡಿದ ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ
#KarnatakaByElection2018: BJP candidate Srikant Kulkarni casts his vote at booth no. 150 in Hirepadasalgi village of Jamkhandi. Voting for 3 parliamentary constituencies Bellary, Shimoga, Mandya & 2 legislative assembly constituencies Jamkhandi, Ramanagaram began at 7 am today. pic.twitter.com/sQA72sbM2q
ರಾಮನಗರದ ಮೊಟ್ಟೆದಡ್ಡಿ ಮತಗಟ್ಟೆಯೊಳಗೆ ಕಾಣಿಸಿಕೊಂಡ ಹಾವು: ಬೆಚ್ಚಿಬಿದ್ದ ಮತಗಟ್ಟೆ ಸಿಬ್ಬಂದಿ
Nov 03, 2018, 7:41 am IST
"101% ಖಚಿತವಾಗಿ ಹೇಳಬಲ್ಲೆ, ಶಿವಮೊಗ್ಗದಲ್ಲಿ ನನ್ನ ಮಗ ಬಿ ವೈ ರಾಘವೇಂದ್ರನೇ ಗೆಲುವು ಸಾಧಿಸುವುದು. ಅಷ್ಟೇ ಅಲ್ಲ, ಜಮಖಂಡಿ ಮತ್ತು ಬಳ್ಳಾರಿಯಲ್ಲೂ ನಾವು ಜಯ ಸಾಧಿಸುತ್ತೇವೆ" - ಬಿ ಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ
Nov 03, 2018, 7:38 am IST
ಜಮಖಂಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆನಂದ್ ನ್ಯಾಮಗೌಡ, ಬಿಜೆಪಿ ಅಭ್ಯರ್ಥಿಯಾಗಿ ಶ್ರೀಕಾಂತ್ ಕುಲಕರ್ಣಿ, ಪ್ರಜಾ ಪರಿವರ್ತನಾ ಪಕ್ಷದ ಅಭ್ಯರ್ಥಿಯಾಗಿ ಪರುಶರಾಮ ಮಹಾರಾಜನವರ ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಯಮನಪ್ಪ ಗುಣದಾಳ ಕಣದಲ್ಲಿದ್ದಾರೆ.
Nov 03, 2018, 7:37 am IST
ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್ ನ ಅನಿತಾ ಕುಮಾರಸ್ವಾಮಿ ಸ್ಪರ್ಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಎಲ್.ಚಂದ್ರಶೇಖರ್ ಕಣದಲ್ಲಿದ್ದಾರೆ.
Nov 03, 2018, 7:18 am IST
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ಸ್ಪರ್ಧಿಸಿದ್ದರೆ, ಜೆಡಿಎಸ್ ನಿಂದ ಮಧು ಬಂಗಾರಪ್ಪ, ಜೆಡಿಯು ನಿಂದ ಮಹಿಮಾ ಪಟೇಲ್ ಕಣದಲ್ಲಿದ್ದಾರೆ.
Nov 03, 2018, 7:18 am IST
ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಜೆ.ಶಾಂತ ಅವರು ಕಣದಲ್ಲಿದ್ದರೆ ಕಾಂಗ್ರೆಸ್ ನಿಂದ ವಿ.ಎಸ್.ಉಗ್ರಪ್ಪ ಮತ್ತು ಬಿಜೆಪಿಯಿಂದ ಟಿಕೆಟ್ ವಂಚಿತರಾಗಿ ಬಂಡಾಯ ಎದ್ದು ಪಕ್ಷೇತರ ಅಭ್ಯರ್ಥಿಯಾಗಿ ಡಾ.ಟಿ.ಆರ್.ಶ್ರೀನಿವಾಸ್ ಕಣದಲ್ಲಿದ್ದಾರೆ.
Nov 03, 2018, 7:17 am IST
ಮತದಾಕ್ಕೂ ಮೊದಲು ಶಿಕಾರಿಪುರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ.
Former Karnataka CM BS Yeddyurappa and his son BS Raghavendra visit Hucharaya Swamy Temple in Shimoga. BS Raghavendra is contesting from parliamentary constituency of Shimoga. pic.twitter.com/Mm6cE44UDB
ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಜೆ.ಶಾಂತ ಅವರು ಕಣದಲ್ಲಿದ್ದರೆ ಕಾಂಗ್ರೆಸ್ ನಿಂದ ವಿ.ಎಸ್.ಉಗ್ರಪ್ಪ ಮತ್ತು ಬಿಜೆಪಿಯಿಂದ ಟಿಕೆಟ್ ವಂಚಿತರಾಗಿ ಬಂಡಾಯ ಎದ್ದು ಪಕ್ಷೇತರ ಅಭ್ಯರ್ಥಿಯಾಗಿ ಡಾ.ಟಿ.ಆರ್.ಶ್ರೀನಿವಾಸ್ ಕಣದಲ್ಲಿದ್ದಾರೆ.
Nov 03, 2018, 6:47 am IST
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಎಲ್.ಆರ್.ಶಿವರಾಮೇಗೌಡ ಅವರು ಸ್ಪರ್ಧಿಸಿದ್ದರೆ ಬಿಜೆಪಿಯಿಂದ ಡಾ.ಸಿದ್ದರಾಮಯ್ಯ ಸ್ಪರ್ಧಿಸಿದ್ದಾರೆ.
6:47 AM, 3 Nov
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಎಲ್.ಆರ್.ಶಿವರಾಮೇಗೌಡ ಅವರು ಸ್ಪರ್ಧಿಸಿದ್ದರೆ ಬಿಜೆಪಿಯಿಂದ ಡಾ.ಸಿದ್ದರಾಮಯ್ಯ ಸ್ಪರ್ಧಿಸಿದ್ದಾರೆ.
6:47 AM, 3 Nov
ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಜೆ.ಶಾಂತ ಅವರು ಕಣದಲ್ಲಿದ್ದರೆ ಕಾಂಗ್ರೆಸ್ ನಿಂದ ವಿ.ಎಸ್.ಉಗ್ರಪ್ಪ ಮತ್ತು ಬಿಜೆಪಿಯಿಂದ ಟಿಕೆಟ್ ವಂಚಿತರಾಗಿ ಬಂಡಾಯ ಎದ್ದು ಪಕ್ಷೇತರ ಅಭ್ಯರ್ಥಿಯಾಗಿ ಡಾ.ಟಿ.ಆರ್.ಶ್ರೀನಿವಾಸ್ ಕಣದಲ್ಲಿದ್ದಾರೆ.
7:17 AM, 3 Nov
ಮತದಾಕ್ಕೂ ಮೊದಲು ಶಿಕಾರಿಪುರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ.
Former Karnataka CM BS Yeddyurappa and his son BS Raghavendra visit Hucharaya Swamy Temple in Shimoga. BS Raghavendra is contesting from parliamentary constituency of Shimoga. pic.twitter.com/Mm6cE44UDB
ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಜೆ.ಶಾಂತ ಅವರು ಕಣದಲ್ಲಿದ್ದರೆ ಕಾಂಗ್ರೆಸ್ ನಿಂದ ವಿ.ಎಸ್.ಉಗ್ರಪ್ಪ ಮತ್ತು ಬಿಜೆಪಿಯಿಂದ ಟಿಕೆಟ್ ವಂಚಿತರಾಗಿ ಬಂಡಾಯ ಎದ್ದು ಪಕ್ಷೇತರ ಅಭ್ಯರ್ಥಿಯಾಗಿ ಡಾ.ಟಿ.ಆರ್.ಶ್ರೀನಿವಾಸ್ ಕಣದಲ್ಲಿದ್ದಾರೆ.
7:18 AM, 3 Nov
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ಸ್ಪರ್ಧಿಸಿದ್ದರೆ, ಜೆಡಿಎಸ್ ನಿಂದ ಮಧು ಬಂಗಾರಪ್ಪ, ಜೆಡಿಯು ನಿಂದ ಮಹಿಮಾ ಪಟೇಲ್ ಕಣದಲ್ಲಿದ್ದಾರೆ.
7:37 AM, 3 Nov
ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್ ನ ಅನಿತಾ ಕುಮಾರಸ್ವಾಮಿ ಸ್ಪರ್ಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಎಲ್.ಚಂದ್ರಶೇಖರ್ ಕಣದಲ್ಲಿದ್ದಾರೆ.
7:38 AM, 3 Nov
ಜಮಖಂಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆನಂದ್ ನ್ಯಾಮಗೌಡ, ಬಿಜೆಪಿ ಅಭ್ಯರ್ಥಿಯಾಗಿ ಶ್ರೀಕಾಂತ್ ಕುಲಕರ್ಣಿ, ಪ್ರಜಾ ಪರಿವರ್ತನಾ ಪಕ್ಷದ ಅಭ್ಯರ್ಥಿಯಾಗಿ ಪರುಶರಾಮ ಮಹಾರಾಜನವರ ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಯಮನಪ್ಪ ಗುಣದಾಳ ಕಣದಲ್ಲಿದ್ದಾರೆ.
7:41 AM, 3 Nov
"101% ಖಚಿತವಾಗಿ ಹೇಳಬಲ್ಲೆ, ಶಿವಮೊಗ್ಗದಲ್ಲಿ ನನ್ನ ಮಗ ಬಿ ವೈ ರಾಘವೇಂದ್ರನೇ ಗೆಲುವು ಸಾಧಿಸುವುದು. ಅಷ್ಟೇ ಅಲ್ಲ, ಜಮಖಂಡಿ ಮತ್ತು ಬಳ್ಳಾರಿಯಲ್ಲೂ ನಾವು ಜಯ ಸಾಧಿಸುತ್ತೇವೆ" - ಬಿ ಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ
7:50 AM, 3 Nov
ರಾಮನಗರದ ಮೊಟ್ಟೆದಡ್ಡಿ ಮತಗಟ್ಟೆಯೊಳಗೆ ಕಾಣಿಸಿಕೊಂಡ ಹಾವು: ಬೆಚ್ಚಿಬಿದ್ದ ಮತಗಟ್ಟೆ ಸಿಬ್ಬಂದಿ
7:54 AM, 3 Nov
ಜಮಖಂಡಿ ಕ್ಷೇತ್ರದಲ್ಲಿ ಮತದಾನ ಮಾಡಿದ ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ
#KarnatakaByElection2018: BJP candidate Srikant Kulkarni casts his vote at booth no. 150 in Hirepadasalgi village of Jamkhandi. Voting for 3 parliamentary constituencies Bellary, Shimoga, Mandya & 2 legislative assembly constituencies Jamkhandi, Ramanagaram began at 7 am today. pic.twitter.com/sQA72sbM2q
ರಾಮನಗರದ ಮೊಟ್ಟೆದೊಡ್ಡಿ ಮತಗಟ್ಟೆ ಸಂಖ್ಯೆ 179 ರಲ್ಲಿ ಇದ್ದಕ್ಕಿದ್ದಂತೆ ಹಾವು ಕಾಣಿಸಿಕೊಂಡು ಮತಗಟ್ಟೆ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿತ್ತು. ಇದರಿಂದಾಗಿ ಕೆಲಕಾಲ ಮತದಾನ ವಿಳಂಬವಾಗಿತ್ತು.
Karnataka Lok Sabha and Assembly by poll 2018 LIVE in Kannada. Lok Sabha - Shimoga(Shivamogga), Mandya, Bellary(Ballari); Assembly - Ramanagara and Jamakhandi