ಉಡುಪಿ - ಚಿಕ್ಕಮಗಳೂರು : ಮುದುಡಿದ ತಾವರೆ ಅರಳಿತು
ಉಡುಪಿ, ಮೇ 16: ಉಡುಪಿ - ಚಿಕ್ಕಮಗಳೂರು ಕ್ಷೇತ್ರಕ್ಕೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮತ್ತು ಮಾಜಿ ಬಿಜೆಪಿ ಸಚಿವೆ ಶೋಭಾ ಕರಂದ್ಲಾಜೆ ಜಯಭೇರಿ ಭಾರಿಸಿದ್ದಾರೆ.
ಶೋಭಾ ತನ್ನ ಸಮೀಪದ ಪ್ರತಿಸ್ಪರ್ಧಿ ಹಾಲಿ ಕಾಂಗ್ರೆಸ್ ಸಂಸದ ಕೆ ಜಯಪ್ರಕಾಶ್ ಹೆಗ್ಡೆ ಅವರನ್ನು 181,643 ಮತಗಳ ಅಂತರದಿಂದ ಸೋಲಿಸಿ ಚೊಚ್ಚಲ ಪ್ರಯತ್ನದಲ್ಲೇ ಯಶಸ್ಸು ಸಾಧಿಸಿದ್ದಾರೆ. (ಕರ್ನಾಟಕ ಸೀಟುಗಳಿಗೆ ಮತ ಎಣಿಕೆ : ಹಿನ್ನಡೆ ಮುನ್ನಡೆ)
ರಾಜ್ಯದ ಜಿದ್ದಾಜಿದ್ದಿನ ಕ್ಷೇತ್ರಗಳಲ್ಲೊಂದಾಗಿದ್ದ ಉಡುಪಿ - ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ತೊರೆದು, ಕೆಜಿಪಿ ಸೇರಿ ಆ ಪಕ್ಷವನ್ನೂ ತೊರೆದು ಜೆಡಿಎಸ್ ಟಿಕೆಟಿನಿಂದ ಸ್ಪರ್ಧಿಸಿದ್ದ ಧನಂಜಯ ಕುಮಾರ್ ಮೂರನೇ ಸ್ಥಾನಕ್ಕೆ ತೃಪ್ತಿ ಪಡಬೇಕಾಗಿದ್ದಲ್ಲದೇ, ಠೇವಣಿಯನ್ನೂ ಕಳೆದುಕೊಂಡಿದ್ದಾರೆ.

ಏಪ್ರಿಲ್ 17ರಂದು ನಡೆದ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ದಾಖಲೆಯ ಶೇ. 74.46 ಮತದಾನವಾಗಿತ್ತು. (ಕರ್ನಾಟಕ ಲೋಕಸಭೆ : ಗೆದ್ದವರು ಸೋತವರು)2009ರ ಚುನಾವಣೆಯಲ್ಲಿ ಬಿಜೆಪಿ ಟಿಕೆಟಿನಿಂದ ಸ್ಪರ್ಧಿಸಿದ್ದ ಸದಾನಂದ ಗೌಡ, ಕಾಂಗ್ರೆಸ್ಸಿನ ಜಯಪ್ರಕಾಶ್ ಹೆಗ್ಡೆ ವಿರುದ್ದ 26,685 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ನಂತರ ಬಿಜೆಪಿಯಲ್ಲಿ ಬದಲಾದ ಸನ್ನಿವೇಶದಲ್ಲಿ ಸದಾನಂದ ಗೌಡ ರಾಜ್ಯದ ಮುಖ್ಯಮಂತ್ರಿಯಾದ ನಂತರ ಉಡುಪಿ - ಚಿಕ್ಕಮಗಳೂರು ಕ್ಷೇತ್ರಕ್ಕೆ ಮರುಚುನಾವಣೆ ನಡೆಯಿತು.
ಮರುಚುನಾವಣೆಯಲ್ಲಿ ಕಾಂಗ್ರೆಸ್ಸಿನ ಕೆ ಜಯಪ್ರಕಾಶ್ ಹೆಗ್ಡೆ ಬಿಜೆಪಿಯ ಸುನೀಲ್ ಕುಮಾರ್ ಅವರನ್ನು ಸೋಲಿಸಿ ಆಯ್ಕೆಯಾಗಿದ್ದರು. ಈಗ ಮತ್ತೆ ಬಿಜೆಪಿ ಗೆಲ್ಲುವ ಮೂಲಕ ಕ್ಷೇತ್ರದ ಮೇಲೆ ತನ್ನ ಹಿಡಿತ ಮುಂದಿವರಿಸಿದೆ.
| ಉಡುಪಿ- ಚಿಕ್ಕಮಗಳೂರು | ಪಡೆದ ಸ್ಥಾನ | ಪಕ್ಷ | ಪಡೆದ ಮತಗಳು |
| ಶೋಭಾ ಕರಂದ್ಲಾಜೆ | 1 | ಬಿಜೆಪಿ | 581168 |
| ಜಯಪ್ರಕಾಶ್ ಹೆಗ್ಡೆ | 2 | ಕಾಂಗ್ರೆಸ್ | 399525 |
| ಧನಂಜಯ್ ಕುಮಾರ್ | 3 | ಜೆಡಿಎಸ್ | 14895 |
| ಎಸ್ ವಿಜಯ್ ಕುಮಾರ್ | 4 | ಸಿಪಿಐ | 9691 |
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications