ಬೆಂಗಳೂರು, ಏಪ್ರಿಲ್. 26: ಲೋಕಸಭೆ ಚುನಾವಣೆ 2024ರ 2ನೇ ಹಂತದ ಮತದಾನ ಏಪ್ರಿಲ್ 26ರ ಶುಕ್ರವಾರ ಬಹುತೇಕ ಶಾಂತಿಯುತವಾಗಿ ಮುಕ್ತಾಯವಾಗಿದೆ. ರಾಜ್ಯದ 14 ಕ್ಷೇತ್ರಗಳು ಸೇರಿ 13 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಸೇರಿ 88 ಕ್ಷೇತ್ರಗಳಲ್ಲಿ ಮತದಾನ ನಡೆಯಿತು. ಸಂಜೆ 7 ಗಂಟೆ ವೇಳೆಗೆ ಶೇ.60.96ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
2ನೇ ಹಂತದಲ್ಲಿ 13 ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳ 89 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಇವುಗಳಲ್ಲಿ ಕೇರಳ 20, ಕರ್ನಾಟಕ 14, ರಾಜಸ್ಥಾನದ 13, ಮಹಾರಾಷ್ಟ್ರ 8, ಉತ್ತರ ಪ್ರದೇಶ 8, ಮಧ್ಯ ಪ್ರದೇಶದ 7, ಅಸ್ಸಾಂ 5, ಬಿಹಾರ 5, ಛತ್ತೀಸ್ಗಢ 3, ಪಶ್ಚಿಮ ಬಂಗಾಳ 3, ಜಮ್ಮು ಮುತ್ತು ಕಾಶ್ಮೀರ, ಮಣಿಪುರ ಮತ್ತು ತ್ರಿಪುರ ರಾಜ್ಯದ ತಲಾ 1 ಸ್ಥಾನಗಳಿಗೆ ಮತದಾನ ನಡೆಯಿತು.
ಈ ಮೊದಲು 89 ಕ್ಷೇತ್ರಗಳಿಗೆ ಈ ಹಂತದಲ್ಲಿ ಮತದಾನ ನಡೆಯಬೇಕಿತ್ತು. ಆದರೆ ಮಾಯಾವತಿಯವರ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯ ಮರಣದ ನಂತರ ಮಧ್ಯಪ್ರದೇಶದ ಬೇತುಲ್ನಲ್ಲಿ ಮತದಾನವನ್ನು ಮುಂದೂಡಲಾಗಿದೆ. ಮೂರನೇ ಹಂತದಲ್ಲಿ ಬೆತುಲ್ನಲ್ಲಿ ಮತದಾನ ನಡೆಯಲಿದೆ. ಮೇ 7 ರಂದು ಲೋಕಸಭಾ ಚುನಾವಣೆ 3ನೇ ಹಂತದ ಮತದಾನ ನಡೆಯಲಿದೆ.
Apr 26, 2024, 8:11 pm IST
2ನೇ ಹಂತದಲ್ಲಿ 61% ಮತದಾನ
13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 88 ಕ್ಷೇತ್ರಗಳಲ್ಲಿ ಮತದಾನ ಮತದಾನ ಮುಕ್ತಾಯವಾಗಿದೆ. ಲೋಕಸಭಾ ಚುನಾವಣೆಯ 2ನೇ ಹಂತದಲ್ಲಿ 61% ಮತದಾನವಾಗಿದೆ. ಕರ್ನಾಟಕದಲ್ಲಿ 64.4% ಮತದಾನವಾಗಿದೆ.
Apr 26, 2024, 8:02 pm IST
ಕರ್ನಾಟಕ
ಕರ್ನಾಟಕದ ಈ ಹಳ್ಳಿಯಲ್ಲಿ 100% ಮತದಾನ
ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಾಂಜಾರುಮಲೆ ಎಂಬ ಗ್ರಾಮದಲ್ಲಿ ಶೇಕಡಾ 100 ರಷ್ಟು ಮತದಾನವಾಗಿದೆ. ಗ್ರಾಮದಲ್ಲಿ 111 ಮತದಾರರಿದ್ದು, ಮತದಾನ ಮುಗಿಯುವ ಎರಡು ಗಂಟೆಗೆ ಎಲ್ಲರೂ ಮತದಾನ ಮಾಡಿದ್ದಾರೆ.
Apr 26, 2024, 7:21 pm IST
ಕರ್ನಾಟಕ
ಕರ್ನಾಟಕದಲ್ಲಿ 64.4% ಮತದಾನ
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮುಕ್ತಾಯವಾಗಿದೆ. ಕರ್ನಾಟಕದಲ್ಲಿ ಒಟ್ಟು 14 ಜಿಲ್ಲೆಗಳಲ್ಲಿ ಮತದಾನ ನಡೆದಿದ್ದು, ಒಟ್ಟಾರೆ 64.4% ರಷ್ಟು ಮತದಾನವಾಗಿದೆ. ಮಂಡ್ಯದಲ್ಲಿ 74.87%ರಷ್ಟು ಮತದಾನವಾಗಿದೆ. ಬೆಂಗಳೂರು ಕೇಂದ್ರ 49.21%, ಬೆಂಗಳೂರು ಉತ್ತರ 50.91%, ಬೆಂಗಳೂರು ದಕ್ಷಿಣ 49.37%, ಬೆಂಗಳೂರು ಗ್ರಾಮಾಂತರ 61.78% ರಷ್ಟು ಮತದಾನವಾಗಿದೆ. ಚಾಮರಾಜನಗರ 69.6%, ಚಿಕ್ಕಬಳ್ಳಾಪುರ 71.85%, ಚಿತ್ರದುರ್ಗ 67.52%, ದಕ್ಷಿಣ ಕನ್ನಡ 72.3%, ಹಾಸನ 72.13%, ಕೋಲಾರ 73.25%, ಮೈಸೂರು 66.96%, ತುಮಕೂರು 72.1, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ 72.69% ರಷ್ಟು ಮತದಾನವಾಗಿದೆ.
Apr 26, 2024, 7:11 pm IST
ಮತದಾರರಿಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಎರಡನೇ ಹಂತದಲ್ಲಿ ಮತ ಚಲಾಯಿಸಿದ ಮತದಾರರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, "ಇಂದು ಮತ ಚಲಾಯಿಸಿದ ಜನರಿಗೆ ಕೃತಜ್ಞತೆಗಳು. ಎನ್ಡಿಎಗೆ ಇರುವ ಅಪ್ರತಿಮ ಬೆಂಬಲ ಪ್ರತಿಪಕ್ಷಗಳನ್ನು ಇನ್ನಷ್ಟು ನಿರಾಸೆಗೊಳಿಸಲಿದೆ. ಮತದಾರರು ಎನ್ಡಿಎಯ ಉತ್ತಮ ಆಡಳಿತವನ್ನು ಬಯಸುತ್ತಾರೆ. ಯುವಕರು ಮತ್ತು ಮಹಿಳಾ ಮತದಾರರು ಎನ್ಡಿಎಗೆ ಶಕ್ತಿ ತುಂಬುತ್ತಿದ್ದಾರೆ." ಎಂದು ಹೇಳಿದ್ದಾರೆ.
Phase Two has been too good!
Gratitude to the people across India who have voted today. The unparalleled support for NDA is going to disappoint the Opposition even more. Voters want NDA’s good governance. Youth and women voters are powering the strong NDA support.
ಚಿಕ್ಕಮಗಳೂರು ತಾಲೂಕಿನ ಉಜ್ಜಿನಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದಲೇ ಬಿಜೆಪಿ ಮುಖಂಡ ಪ್ರವೀಣ್ ಖಾಂಡ್ಯ ಮೇಲೆ ಹಲ್ಲೆ ನಡೆಸಲಾಗಿದೆ. ಖಾಂಡ್ಯ ಪ್ರವೀಣ್ ಕಾಂಗ್ರೆಸ್ ಪರ ಮತ ಚಲಾಯಿಸುತ್ತಿದ್ದಾರೆ ಎಂದು ಆರೋಪಿಸಿ ಹಲ್ಲೆ ಮಾಡಲಾಗಿದೆ. ವಿಧಾನಸಭಾ ಚುನಾವಣೆ ವೇಳೆ ಪ್ರವೀಣ್ ಖಾಂಡ್ಯ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. ಹಲ್ಲೆಗೊಳಗಾದ ಪ್ರವೀಣ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
Apr 26, 2024, 6:52 pm IST
ಕರ್ನಾಟಕ
ಚಾಮರಾಜನಗರದಲ್ಲಿ ಮತದಾನ ಪ್ರಕ್ರಿಯೆ ಅಂತ್ಯ
ಮತದಾನ ಕೇಂದ್ರದ ಬಾಗಿಲು ಕ್ಲೋಸ್ ಮಾಡಿರುವ ಅಧಿಕಾರಿಗಳು. ಮತ ಯಂತ್ರಗಳಲ್ಲಿ ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದ್ದು, ಇವಿಎಂಗಳು ಚಾಮರಾಜನಗರದ ಇಂಜಿನಿಯನಿರಿಂಗ್ ಕಾಲೇಜಿನ ಸ್ಟ್ರಾಂಗ್ ರೂಂ ಸೇರಲಿವೆ. ಪೊಲೀಸ್ ಭದ್ರತೆಯೊಂದಿಗೆ ಅಧಿಕಾರಿಗಳು ಇವಿಎಂ ತೆಗೆದುಕೊಂಡು ತೆರಳಲಿದ್ದಾರೆ.
Apr 26, 2024, 6:51 pm IST
ಕರ್ನಾಟಕ
ಸಿಟಿ ರವಿ ವಿರುದ್ಧ ಪ್ರಕರಣ ದಾಖಲು
ಬಿಜೆಪಿ ನಾಯಕ ಸಿಟಿ ರವಿ ವಿರುದ್ಧ ಚಿಕ್ಕಮಗಳೂರು ಚುನಾವಣಾ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಅಧಿಕೃತ ಎಕ್ಸ್ ಖಾತೆಯಲ್ಲಿ ದ್ವೇಷವನ್ನು ಉತ್ತೇಜಿಸುವ ವಿಡಿಯೋ ಹಂಚಿಕೊಂಡಿದ್ದಕ್ಕಾಗಿ ಅವರ ವಿರುದ್ಧ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
Chikkamagaluru Election Officials have booked an FIR (No. 0042/2024) against CT Ravi, BJP Leader for his post in X handle for violation u/s 125 of RP Act and 505(2) of IPC in Basavanahalli PS on 26.04.24 for promoting hatred and enmity between different classes of citizens.
— Chief Electoral Officer, Karnataka (@ceo_karnataka) April 26, 2024
Apr 26, 2024, 6:39 pm IST
ಕರ್ನಾಟಕ
ಮತದಾರನಿಗೆ ಡಿಕೆ ಸುರೇಶ್ ಧನ್ಯವಾದ
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತ ಹಾಕಲು ದುಬೈನಿಂದ ಬರುತ್ತಿದ್ದ ವ್ಯಕ್ತಿಯೊಬ್ಬರ ವಿಮಾನ ಮಿಸ್ ಆಗಿದ್ದು, ಮತ ಹಾಕಲು ಆಗುತ್ತಿಲ್ಲ, ಡಿಕೆ ಸುರೇಶ್ ಅವರಿಗೆ ಒಂದು ಮತ ಕಡಿಮೆ ಆಗಿದೆ ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಕೆ ಸುರೇಶ್ ನಿಮ್ಮ ಪ್ರೀತಿ, ಕನ್ನಡ ಪ್ರೇಮ ನನ್ನ ಹೃದಯ ಗೆದ್ದಿದೆ, ಕನ್ನಡಿಗರ ಹಿತ ಕಾಯುವುದು ನನ್ನ ಜವಾಬ್ದಾರಿ ಎಂದಿದ್ದಾರೆ.
ನಿಮ್ಮ ಈ ಪ್ರೀತಿ, ಕನ್ನಡ ಪ್ರೇಮ ನನ್ನ ಹೃದಯವನ್ನು ಗೆದ್ದಿದೆ.
ಕನ್ನಡಿಗರ ಹಿತ ಕಾಯುವುದು ನನ್ನ ಜವಾಬ್ದಾರಿ. ನಿಮ್ಮ ಪ್ರೀತಿ, ವಿಶ್ವಾಸ, ಅಭಿಮಾನ ಸದಾ ಹೀಗೆ ಇರಲಿ, ಧನ್ಯವಾದಗಳು. https://t.co/Hw8sG0zMb9
ಸಂಜೆ 5 ಗಂಟೆ ವೇಳೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಆಗಿರುವ ಮತದಾನದ ವಿವರ.
Apr 26, 2024, 6:33 pm IST
ಕ್ಷೇತ್ರವಾರು ಮತದಾನದ ವಿವರ
ಸಂಜೆ 5 ಗಂಟೆ ವೇಳೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಆಗಿರುವ ಮತದಾನದ ವಿವರ.
Apr 26, 2024, 6:05 pm IST
ಕರ್ನಾಟಕ
ಮಂಡ್ಯದಲ್ಲಿ 74.87% ಮತದಾನ
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ಗಂಟೆ ವೇಳೆಗೆ 74.87% ಮತದಾನವಾಗಿದೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ 79.03% ರಷ್ಟು ಮತದಾನವಾಗಿದ್ದು, ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 69.99% ಮತದಾನವಾಗಿದೆ.
Apr 26, 2024, 5:57 pm IST
ಸಂಜೆ 5 ಗಂಟೆಗೆ 60.7% ಮತದಾನ
ಸಂಜೆ 5 ಗಂಟೆಗೆ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 60.7% ಮತದಾನವಾಗಿದೆ. ಮಣಿಪುರ, ಛತ್ತೀಸ್ಗಢ, ಬಂಗಾಳ, ಅಸ್ಸಾಂ ಮತ್ತು ತ್ರಿಪುರದಲ್ಲಿ 70% ಕ್ಕಿಂತ ಹೆಚ್ಚು ಮತದಾನ ದಾಖಲಾಗಿದ್ದರೆ ಉತ್ತರ ಪ್ರದೇಶ, ಬಿಹಾರ ಮತ್ತು ಮಹಾರಾಷ್ಟ್ರದಲ್ಲಿ ಕ್ರಮವಾಗಿ 52.6%, 53% ಮತ್ತು 53.5% ಮತದಾನವಾಗಿದೆ.
Apr 26, 2024, 5:45 pm IST
ಕರ್ನಾಟಕ
ಕರ್ನಾಟಕದಲ್ಲಿ 63.9% ಮತದಾನ
ಸಂಜೆ 5 ಗಂಟೆ ವೇಳೆಗೆ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ 63.9% ಮತದಾನವಾಗಿದೆ. ಬೆಂಗಳೂರು ಕೇಂದ್ರದಲ್ಲಿ 48.61% ರಷ್ಟು ಮತದಾನವಾಗಿದ್ದರೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ 61.78% ಮತದಾನವಾಗಿದೆ. ಬೆಂಗಳೂರು ಉತ್ತರ 50.04%, ಬೆಂಗಳೂರು ದಕ್ಷಿಣ 49.37% ಮತದಾನವಾಗಿದೆ. ಚಾಮರಾಜನಗರ 69.6%, ಚಿಕ್ಕಬಳ್ಳಾಪುರ 70.97%, ಚಿತ್ರದುರ್ಗ 67%, ದಕ್ಷಿಣ ಕನ್ನಡ 71.83%, ಹಾಸನ 72.13%, ಕೋಲಾರ 71.26%, ಮಂಡ್ಯ 74.87%, ಮೈಸೂರು 65.85%, ತುಮಕೂರು 72.1%, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ 72.13% ಮತದಾನವಾಗಿದೆ.
Apr 26, 2024, 5:16 pm IST
ಉತ್ತರ ಪ್ರದೇಶ
ಮೊಹಮ್ಮದ್ ಶಮಿ ಮತದಾನ
ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ಮತದಾನ ಮಾಡಿದರು. ಉತ್ತರಪ್ರದೇಶದ ಅಮ್ರೋಹಾದಲ್ಲಿ ಸಂಜೆ ಕುಟುಂಬ ಸಮೇತ ಬಂದು ಮತ ಚಲಾಯಿಸಿದರು.
Apr 26, 2024, 4:58 pm IST
ಕರ್ನಾಟಕ
ತೇಜಸ್ವಿಸೂರ್ಯ ಅನರ್ಹಗೊಳಿಸಲು ಸೌಮ್ಯಾರೆಡ್ಡಿ ಒತ್ತಾಯ
ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಧರ್ಮದ ಆಧಾರದಲ್ಲಿ ಮತ ಕೇಳಿರುವ ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಒತ್ತಾಯಿಸಿದ್ದಾರೆ. ಸೋಲುತ್ತೇನೆ ಎಂದು ಈಗಾಗಲೇ ತೇಜಸ್ವಿ ಸೂರ್ಯ ಅವರಿಗೆ ಗೊತ್ತಾಗಿದೆ ಎಂದು ಅವರು ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಧಾಕರ್ ಅವರು ಮತ ಖರೀದಿಗಾಗಿ ಇಟ್ಟಿದ್ದ ₹4.8 ಕೋಟಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ, ಮತ್ತೊಂದೆಡೆ ಮಂಗಳೂರಿನಲ್ಲಿ ಬಿಜೆಪಿ ತನ್ನ ಗೂಂಡಾಪಡೆಯ ಮೂಲಕ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಗಲಾಟೆ ಎಬ್ಬಿಸಿದೆ ಎಂದು ಕಾಂಗ್ರೆಸ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ಬಿಜೆಪಿಯ ಈ ಹಣಮದದ ರೋಗಕ್ಕೆ ಕನ್ನಡಿಗರು ಮದ್ದು ನೀಡಲಿದ್ದಾರೆ ಎಂದು ಹೇಳಿದೆ.
ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಧಾಕರ್ ಅವರು ಮತ ಖರೀದಿಗಾಗಿ ಇಟ್ಟಿದ್ದ 4.8 ಕೋಟಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ, ಮತ್ತೊಂದೆಡೆ ಮಂಗಳೂರಿನಲ್ಲಿ ಬಿಜೆಪಿ ತನ್ನ ಗೂಂಡಾಪಡೆಯ ಮೂಲಕ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಗಲಾಟೆ ಎಬ್ಬಿಸಿದೆ.
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಮತದಾನದ ದಿನವೇ ಸಾಮಾಜಿಕ ಮಾಧ್ಯಮದಲ್ಲಿ ಧರ್ಮದ ಆಧಾರದ ಮೇಲೆ ಮತ ಕೇಳಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಕ್ಸ್ ಹ್ಯಾಂಡಲ್ನಲ್ಲಿ ಪೋಸ್ಟ್ ಮಾಡಿದ ವಿಡಿಯೋ ಆಧರಿಸಿ ಚುನಾವಣಾ ಆಯೋಗ ಅವರ ಮೇಲೆ ಪ್ರಕರಣವನ್ನು ದಾಖಲಿಸಿದೆ.
Case is booked against Tejasvi Surya MP and Candidate of Bengaluru South PC on 25.04.24 at Jayanagar PS u/s 123(3) for posting a video in X handle and soliciting votes on the ground of religion.
— Chief Electoral Officer, Karnataka (@ceo_karnataka) April 26, 2024
Apr 26, 2024, 4:04 pm IST
ಕರ್ನಾಟಕ
ಕೃಷಿ ಸಚಿವ ಚಲುವರಾಯಸ್ವಾಮಿ ಮತದಾನ
ಮಂಡ್ಯ ಲೋಕಸಭಾ ಕ್ಷೇತ್ರದ ನಾಗಮಂಗಲಕ್ಕೆ ಭೇಟಿ ನೀಡಿ ಕೃಷಿ ಸಚಿವ ಚಲುವರಾಯಸ್ವಾಮಿ ಇಜ್ಜಲಘಟ್ಟದಲ್ಲಿ ಕುಟುಂಬದ ಜೊತೆ ಮತ ಚಲಾಯಿಸಿದರು.
Apr 26, 2024, 4:01 pm IST
ಕರ್ನಾಟಕ
ಚಾಮರಾಜನಗರ ಕ್ಷೇತ್ರದಲ್ಲಿ 54.82% ಮತದಾನ
ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ 54.82% ಮತದಾನ ನಡೆದಿದೆ. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅತಿ ಹೆಚ್ಚು 61.91% ಮತದಾನವಾಗಿದೆ. ಹೆಚ್.ಡಿ. ಕೋಟೆ ಕ್ಷೇತ್ರದಲ್ಲಿ ಕಡಿಮೆ 50.99% ಮತದಾನವಾಗಿದೆ.
Apr 26, 2024, 3:48 pm IST
ಕರ್ನಾಟಕ
ಮಂಗಳೂರಿನಲ್ಲಿ ಬಿಜೆಪಿ ಗೂಂಡಾಗಿರಿ; ಕಾಂಗ್ರೆಸ್ ಆಕ್ರೋಶ
ಮಂಗಳೂರಿನಲ್ಲಿ ಮತಗಟ್ಟೆ ಬಳಿ ಗೂಂಡಾಗಿರಿ ನಡೆಸಿದ ಬಿಜೆಪಿ ಕಾರ್ಯಕರ್ತರು ಪೊಲೀಸರ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಬಗ್ಗೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಅಹಂಕಾರಕ್ಕೆ ಮತದಾರರು ಉತ್ತರ ನೀಡುತ್ತಾರೆ ಎಂದು ಹೇಳಿದೆ.
ಮಂಗಳೂರಿನಲ್ಲಿ ಮತಗಟ್ಟೆ ಬಳಿ ಗೂಂಡಾಗಿರಿ ನಡೆಸಿದ ಬಿಜೆಪಿ ಕಾರ್ಯಕರ್ತರು ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾರೆ.
ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವುದು ಬಿಜೆಪಿಯ ಹಳೆಯ ಚಾಳಿ, ಹಣ ಬಲ, ತೋಳ್ಬಲದ ಮೂಲಕ ಚುನಾವಣೆ ನಡೆಸಬಹುದು ಎನ್ನುವ @BJP4Karnataka ಪಕ್ಷದ ಅಹಂಕಾರಕ್ಕೆ ಮತದಾರರು ತಿರಸ್ಕಾರದ ಉತ್ತರ ನೀಡಲಿದ್ದಾರೆ.
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ 53.55% ರಷ್ಟು ಮತದಾನವಾಗಿದೆ. ಪೆರಿಯಾಪಟ್ಟಣದಲ್ಲಿ 59.50 % ಮತದಾನವಾಗಿದ್ದರೆ, ಚಾಮರಾಜದಲ್ಲಿ 47% ಮತದಾನವಾಗಿದೆ.
Apr 26, 2024, 3:39 pm IST
ಕರ್ನಾಟಕ
ರಾಜ್ಯದಲ್ಲಿ ಶೇಕಡ 50 ರಷ್ಟು ಮತದಾನ
ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಶೇಕಡಾ 50.93 ಮತದಾನವಾಗಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 58.76% ಮತದಾನವಾಗಿದ್ದು ರಾಜ್ಯದಲ್ಲಿ ಅತಿ ಹೆಚ್ಚು ಮತದಾನವಾಗ ಕ್ಷೇತ್ರವಾಗಿದೆ. ಉಳಿದಂತೆ ಉಡುಪಿ-ಚಿಕ್ಕಮಗಳೂರು ಕ್ಷೇಥ್ರದಲ್ಲಿ 57.49, ಮಂಡ್ಯ 57.44%, ತುಮಕೂರು 56.62% ಮತ್ತು ಹಾಸನದಲ್ಲಿ 55.92% ರಷ್ಟು ಮತದಾನವಾಗಿದೆ.
Apr 26, 2024, 3:19 pm IST
ಕರ್ನಾಟಕ
ಮಧ್ಯಾಹ್ನ 1 ಗಂಟೆಯವರೆಗೆ ಆದ ಮತದಾನ
ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶದ ಆರು ಲೋಕಸಭಾ ಕ್ಷೇತ್ರಗಳಲ್ಲಿ ಸುಮಾರು 38.96 ಪ್ರತಿಶತದಷ್ಟು ಮತದಾರರು ಮತ ಚಲಾಯಿಸಿದ್ದಾರೆ. ತ್ರಿಪುರಾ ರಾಜ್ಯದಲ್ಲಿ ಶೇ.54.47ರಷ್ಟು ಮತದಾನ ನಡೆದಿದ್ದು ಅತಿ ಹೆಚ್ಚು ಮತದಾನವಾದ ರಾಜ್ಯವಾಗಿದೆ. ಉತ್ತರ ಪ್ರದೇಶದ ಎಂಟು ಲೋಕಸಭಾ ಕ್ಷೇತ್ರಗಳಲ್ಲಿ ಶೇ.35.73ರಷ್ಟು ಮತದಾನವಾಗಿದೆ. ಮಹಾರಾಷ್ಟ್ರದ ಎಂಟು ಕ್ಷೇತ್ರಗಳಲ್ಲಿ ಶೇ.31.77ರಷ್ಟು ಮತದಾನವಾಗಿದೆ. ರಾಜಸ್ಥಾನದ 13 ಲೋಕಸಭಾ ಕ್ಷೇತ್ರಗಳಲ್ಲಿ 40.39 ರಷ್ಟು ಮತದಾನವಾಗಿದೆ.
Apr 26, 2024, 3:09 pm IST
ಕರ್ನಾಟಕ
ಲೊಕಸಭಾ ಚುನಾವಣೆ-2024ರ ಅಂಗವಾಗಿ ಚುನಾವಣಾ ರಾಯಭಾರಿಯಾಗಿ ಕಾರ್ಯನಿರ್ವಹಿಸಿದ ಚಲನಚಿತ್ರ ನಟ ಹಾಗೂ ನಿರ್ದೇಶಕರಾದ ರಮೇಶ್ ಅರವಿಂದ್ ರವರು ಪದ್ಮನಾಭನಗರದ ಬಿ.ಎನ್.ಎಂ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
Apr 26, 2024, 2:58 pm IST
ಕರ್ನಾಟಕ
ಮತದಾನ ಮಾಡುವುದು ನಮ್ಮ ಹಕ್ಕು: ಜಾವಗಲ್ ಶ್ರೀನಾಥ್
ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಇಂದು ಮೈಸೂರಿನ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಬಳಿಕ ಮಾತಾಡಿದ ಅವರು, " ಮತದಾನ ಮಾಡುವುದು ನಮ್ಮ ಹಕ್ಕು, ಜನರು ಹೊರಗೆ ಬಂದು ಮತದಾನ ಮಾಡಬೇಕೆಂದು ನಾನು ಮನವಿ ಮಾಡುತ್ತೇನೆ. ಇದುವರೆಗೆ 50% ಕ್ಕಿಂತ ಹೆಚ್ಚು ಮತದಾನ ನಡೆದಿರುವುದು ನನಗೆ ಸಂತೋಷವಾಗಿದೆ. ಜನರು ಹೊರಬರಬೇಕು. ಮತದಾನ ಮುಖ್ಯ" ಎಂದು ಹೇಳಿದರು.
Apr 26, 2024, 2:52 pm IST
ಕರ್ನಾಟಕ
ನಾವು ಭರ್ಜರಿ ಬಹುಮತದಿಂದ ಗೆಲ್ಲುತ್ತೇವೆ: ಡಿಕೆ ಶಿವಕುಮಾರ್
ಲೋಕಸಭೆ ಚುನಾವಣೆ 2024: "ಕಾಂಗ್ರೆಸ್ ಪಕ್ಷ ಕರ್ನಾಟಕದ ಜನತೆಗೆ ನೀಡಿದ್ದ ಎಲ್ಲ ಭರವಸೆಗಳನ್ನು ಜಾರಿಗೆ ತಂದಿದೆ. ಕಾಂಗ್ರೆಸ್ ಪಕ್ಷ ತನ್ನ ಮಾತಿನ ಮೇಲೆ ನಂಬಿಕೆ ಇಟ್ಟಿದೆ. ರಾಜ್ಯದ ಜನತೆ ಸಂತಸಗೊಂಡಿದ್ದು, ಮತದಾರರಿಂದ ಗೊತ್ತಾಗಿದೆ. ಬಿಜೆಪಿ ವಿಫಲವಾಗಿದೆ, ರಾಜ್ಯದಲ್ಲಿ ನಾವು ಭರ್ಜರಿ ಬಹುಮತದಿಂದ ಗೆಲ್ಲುತ್ತೇವೆ" ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
VIDEO | Lok Sabha Elections 2024: “Congress party has implemented all the promises that were made to the people of Karnataka. Congress party believes in its word. The people of the state are very happy, and it is evident from the voters' turnout. BJP has failed, we will win in… pic.twitter.com/WqBhwZvuAY
ಕಾಂಗ್ರೆಸ್ ಜನಪರ ಆಡಳಿತಕ್ಕೆ ಜನ ಸಹಮತ, ಗೆಲುವು ನಿಶ್ಚಿತ:ಬಿ.ಎನ್.ಚಂದ್ರಪ್ಪ
ಹೊಳಲ್ಕೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತ ಇಡೀ ದೇಶಕ್ಕೆ ಮಾದರಿಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮರ್ಮಘಾತದ ಫಲಿತಾಂಶ ಬರಲಿದೆ. ಗೃಹಲಕ್ಷ್ಮಿಯರು ಕೈ ಹಿಡಿದಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಹೊಳಲ್ಕೆರೆ ಪಟ್ಟಣ ತರಳಬಾಳು ಬಾಲಕಿಯರ ಪ್ರೌಢಶಾಲೆಯ ಬೂತ್ ನಂಬರ್ 172 ರಲ್ಲಿ ಶುಕ್ರವಾರ ಮತ ಚಲಾಯಿಸಿದರು.
Apr 26, 2024, 2:41 pm IST
ಕರ್ನಾಟಕ
ಗೆಲುವು ನನ್ನದೆ ಎಂದ ಕೋಟ ಶ್ರೀನಿವಾಸ ಪೂಜಾರಿ
ಕೋಟತಟ್ಟು ಗ್ರಾಮ ಪಂಚಾಯತ್ನಲ್ಲಿ ಕುಟುಂಬ ಸಮೇತ ಬಂದು ಮತದಾನ ಮಾಡಿ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, "ಭಾರತೀಯ ಜನತಾ ಪಕ್ಷದ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಎಂಟು ವಿಧಾನಸಭಾ ಕ್ಷೇತ್ರದ ತಿರುಗಾಟ ಮಾಡಿದ್ದೇನೆ. ಇಡೀ ಲೋಕಸಭಾ ಕ್ಷೇತ್ರದಲ್ಲಿ ಜನ ಉತ್ಸಾಹದಲ್ಲಿ ಮತದಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ರಾಷ್ಟ್ರಕ್ಜಾಗಿ, ರಾಷ್ಟ್ರದ ಭದ್ರತೆಗಾಗಿ, ರಾಷ್ಟ್ರದ ಐಕ್ಯತೆಗಾಗಿ ರಾಷ್ಟ್ರದಲ್ಲಿ ಶಾಂತಿ ನೆಮ್ಮದಿಗಾಗಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ನಿಶ್ಚಿತವಾಗಿ ಜಯ ನನ್ನದಾಗುತ್ತದೆ. ಬಿಜೆಪಿ ಗೆಲ್ಲುತ್ತದೆ" ಎಂದಿದ್ದಾರೆ.
Apr 26, 2024, 2:29 pm IST
ಕರ್ನಾಟಕ
ಸರ್ಕಾರದ ಹಸ್ತಕ್ಷೇಪ ಕಡಿಮೆಯಿರಬೇಕು: ನಟ ಯಶ್
ಲೋಕಸಭೆ ಚುನಾವಣೆ 2024: ನಟ ಯಶ್ ಬೆಂಗಳೂರಿನ ಹೊಸಕೆರೆಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಥಾಪಿಸಲಾದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಈ ವೇಳೆ, "ಸರ್ಕಾರವು ಏನು ಮಾಡಬೇಕೋ ಅದನ್ನು ಮಾಡಬೇಕು ಮತ್ತು ಜನರು ಏನು ಮಾಡುತ್ತಿದ್ದಾರೋ ಅದು ಮಾಡಲು ಬಿಡಬೇಕು. ಹಸ್ತಕ್ಷೇಪ ಕಡಿಮೆ ಇರಬೇಕು ಎಂದು ನಾನು ಭಾವಿಸುತ್ತೇನೆ. ಸಬಲೀಕರಣವನ್ನು ಮಾಡಬೇಕು. ಹಲವಾರು ಸಮಸ್ಯೆಗಳಿವೆ, ಅವುಗಳ ಪರಿಹಾರಕ್ಕೆ ನಾನು ನಾಗರಿಕನಾಗಿ ನಿರೀಕ್ಷಿಸುತ್ತೇನೆ" ಎಂದು ಹೇಳಿದರು.
VIDEO | Lok Sabha Elections 2024: Actor Yash (@TheNameIsYash) casts his vote at a polling booth set up in Government Higher Primary School in Hosakerehalli, #Bengaluru.
"The government should do what it is supposed to do and it should let people do what they are doing. I think… pic.twitter.com/XNVFQWZ0Hx
ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಇಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ಮತಗಟ್ಟೆಯಲ್ಲಿ ಮತದಾನ ಮಾಡಿದರು. ನಟ ದರ್ಶನ್ ಕೈಗೆ ಸರ್ಜರಿಯಾಗಿದ್ದು, ಅದರ ನಡುವೆಯೂ ಕಾಂಗ್ರೆಸ್ ಅಭ್ಯರ್ಥಿಗಳ ಬೆಂಬಲಕ್ಕಾಗಿ ಬಿರುಸಿನ ಪ್ರಚಾರ ನಡೆಸಿದ್ದರು.
#WATCH | Karnataka: Actor Darshan cast his vote at a polling booth in Rajarajeshwari Nagar, Bengaluru today.
ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿವೆ. ದೇಶದಲ್ಲಿ 2ನೇ ಹಂತದ ಮತದಾನ ನಡೆಯುತ್ತಿದೆ. ಆದರೆ, ಇದು ರಾಜ್ಯದ ಮೊದಲ ಹಂತದ ಮತದಾನ. 28 ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.
8:05 PM, 25 Apr
ಬೆಂಗಳೂರಿನ ಎಲ್ಲಾ ಕ್ಷೇತ್ರಗಳಲ್ಲಿ ಮತದಾನ
ಮೊದಲ ಹಂತದ ಮತದಾನದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಮತದಾನ ನಡೆಯಲಿದೆ.
8:06 PM, 25 Apr
ರಾಜ್ಯದಲ್ಲಿ ಎಷ್ಟು ಮತದಾರರು..?
ರಾಜ್ಯದಲ್ಲಿ ಇಂದು ಒಟ್ಟು 1,44,17,530 ಪುರುಷರು, 1,43,87,585 ಮಹಿಳೆಯರು ಹಾಗೂ 3,067 ತೃತೀಯ ಲಿಂಗಿಗಳು ಸೇರಿ ಒಟ್ಟು 2,88,08,182 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.
5:54 AM, 26 Apr
ಕರ್ನಾಟಕ
ವಿಶೇಷಚೇತನರ ಸ್ನೇಹಿ ಮತದಾನ ಕೇಂದ್ರಗಳು
ರಾಜ್ಯದ ಹಲವು ಲೋಕಸಭಾ ಕ್ಷೇತ್ರಗಳಲ್ಲಿ ವಿಶೇಷಚೇತನರ ಸ್ನೇಹಿ ಮತದಾನ ಕೇಂದ್ರಗಳು ಲೋಕಸಭಾ ಚುನಾವಣೆಗಾಗಿ ಸಜ್ಜಾಗಿವೆ.
5:58 AM, 26 Apr
ಕರ್ನಾಟಕ
247 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ರಾಜ್ಯದ ಒಟ್ಟು 14 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ. ಆಡಳಿತರೂಢ ಕಾಂಗ್ರೆಸ್ ಪಕ್ಷದಿಂದ 14, ಬಿಜೆಪಿ ಜೆಡಿಎಸ್ ಮೈತ್ರಿಯ ಸೀಟು ಹಂಚಿಕೆ ಪ್ರಕಾರ ಬಿಜೆಪಿಯಿಂದ 11, ಜೆಡಿಎಸ್ನ ಮೂವರು ಅಭ್ಯರ್ಥಿಗಳು ಸೇರಿದಂತೆ 247 ಅಭ್ಯರ್ಥಿಗಳ ಭವಿಷ್ಯ ಇಂದು ಮತಪೆಟ್ಟಿಗೆ ಸೇರಲಿದೆ.
6:02 AM, 26 Apr
ಮತ ಚಲಾಯಿಸಲು ಏನೇನು ಬೇಕು?
ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ, ಮತದಾನದ ವೇಳೆ ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಉದ್ಯೋಗ ಖಾತ್ರಿ ಯೋಜನೆಯ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಡ್ರೈವಿಂಗ್ ಲೈಸೆನ್ಸ್ ತೋರಿಸಿ ಮತದಾನ ಮಾಡಬಹುದು. 30,600 ಮತಗಟ್ಟೆಗಳ ಪೈಕಿ 19,701 ಮತಗಟ್ಟೆಗಳಲ್ಲಿ ಲೈವ್ವೆಬ್ಕಾಸ್ಟ್ ಇರಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
6:13 AM, 26 Apr
ಕರ್ನಾಟಕ
ಮತದಾರರಿಗಾಗಿ ಸಿದ್ಧವಾದ ಮತಗಟ್ಟೆಗಳು
ಏಪ್ರಿಲ್ 25ರಿಂದಲೇ ಚುನಾವಣೆ ನಡೆಯುವ ರಾಜ್ಯದ 14 ಕ್ಷೇತ್ರಗಳಲ್ಲಿ ಇವಿಎಂ, ವಿವಿಪ್ಯಾಟ್, ಮತದಾರರ ಪಟ್ಟಿ, ಶಾಹಿ ಸೇರಿದಂತೆ ಚುನಾವಣೆ ಸಾಮಾಗ್ರಿ ರವಾನಿಸಲಾಗಿದೆ. ಇವುಗಳನ್ನ ಹೊತ್ತು ಚುನಾವಣೆ ಸಿಬ್ಬಂದಿ ಮತಗಟ್ಟೆ ಸೇರಿದ್ದಾರೆ. ಈಗಾಗಲೇ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
6:20 AM, 26 Apr
ಕೇರಳ
ಕೇರಳದಲ್ಲಿ ಅಣುಕು ಮತದಾನ
ಕೇರಳ ಕೂಡ ಇಂದು ಎರಡನೇ ಹಂತದ ಮತದಾನಕ್ಕೆ ಸಿದ್ಧವಾಗುತ್ತಿದೆ. ಅದಕ್ಕೂ ಮುನ್ನ ತಿರುವನಂತಪುರಂನ ವಟ್ಟಿಯೂರ್ಕಾವು ಮತಗಟ್ಟೆಯಲ್ಲಿ ಅಣಕು ಮತದಾನ ನಡೆಯುತ್ತಿದೆ. 18 ನೇ ಲೋಕಸಭೆ ಚುನಾವಣೆಗೆ, 13 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಾದ್ಯಂತ 88 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
6:29 AM, 26 Apr
ಕರ್ನಾಟಕ
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಮತದಾನಕ್ಕೆ ಸಿದ್ಧತೆ
ಇಂದು ದೇಶದಲ್ಲಿ ಎರಡನೇ ಹಂತದ ಮತದಾನ, ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಪೂರ್ವಭಾವಿಯಾಗಿ ಬೆಂಗಳೂರು ಉತ್ತರ ಕ್ಷೇತ್ರದ ನಾಗಶೆಟ್ಟಿ ಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ 60,61,62,63 ರಲ್ಲಿ ಸಿದ್ಧತೆಗಳು ಭರದಿಂದ ನಡೆಯುತ್ತಿವೆ.
#WATCH | Karnataka: Preparations underway at polling booth number 60,61,62,63 at Govt Primary School, Nagashetty Halli in Bengaluru North constituency ahead of the second phase of polling today.
Karnataka is set to witness the 18th Lok Sabha elections in two phases, i.e. on… pic.twitter.com/yjoYtdeaNH
ಕೇರಳದ ತಿರುವನಂತಪುರಂ ಕ್ಷೇತ್ರದಿಂದ ಕಾಂಗ್ರೆಸ್ ಹಾಲಿ ಸಂಸದ ಶಶಿ ತರೂರ್ ಕಣದಲ್ಲಿದ್ದು, ಅವರ ವಿರುದ್ಧ ಕೇಂದ್ರದ ಹಾಲಿ ಸಚಿವ ರಾಜೀವ್ ಚಂದ್ರಶೇಖರ್ ಸ್ಪರ್ಧೆಗಿಳಿದಿದ್ದಾರೆ. ಮತದಾನಕ್ಕೂ ಮುನ್ನ, ಎನ್ಡಿಎ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಕೇರಳದ ವೆಟ್ಟುಕಾಡ್ ಚರ್ಚ್ ಚರ್ಚ್ಗೆ ಭೇಟಿ ನೀಡಿದರು.
ಇಂದು ಎರಡನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಕೇರಳದ 20 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
6:42 AM, 26 Apr
ಪಶ್ಚಿಮ ಬಂಗಾಳ
ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತ ಮತದಾರರು
ಪಶ್ಚಿಮ ಬಂಗಾಳದಲ್ಲಿ ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗುವ ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಜನರು ಬಲೂರ್ಘಾಟ್ನ ಮತಗಟ್ಟೆಯ ಹೊರಗೆ ಈಗಲೇ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಪಶ್ಚಿಮ ಬಂಗಾಳ ರಾಜ್ಯದ 42 ಕ್ಷೇತ್ರಗಳ ಪೈಕಿ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
#WATCH | West Bengal | People queue outside a polling station in Balurghat, to vote in the second phase of Lok Sabha polls which begins at 7am
Out of 42 constituencies, voting is on three parliamentary constituencies in the state today. pic.twitter.com/YmsavxSoev
ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ (ತಿರುವನಂತಪುರ), ಕಾಂಗ್ರೆಸ್ನ ಶಶಿ ತರೂರ್ (ತಿರುವನಂತಪುರಂ), ಭಾರತೀಯ ಜನತಾ ಪಕ್ಷದ ತೇಜಸ್ವಿ ಸೂರ್ಯ (ಬೆಂಗಳೂರು ದಕ್ಷಿಣ ಲೋಕಸಭೆ), ಹೇಮಾ ಮಾಲಿನಿ (ಮಥುರಾ), ಅರುಣ್ ಗೋವಿಲ್ (ಮೀರತ್), ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ (ವಯನಾಡು), ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಹೋದರ ಡಿ ಕೆ ಸುರೇಶ್ (ಬೆಂಗಳೂರು ಗ್ರಾಮಾಂತರ), ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ (ಮಂಡ್ಯ) ಮತ್ತು ಸ್ವತಂತ್ರ ಅಭ್ಯರ್ಥಿ ಪಪ್ಪು ಯಾದವ್ (ಪೂರ್ಣಿಯಾ), ಸಿಪಿಐನ ಆನಿ ರಾಜಾ (ವಯನಾಡು)
6:51 AM, 26 Apr
ಕರ್ನಾಟಕ
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಭಾರಿ ಪೈಪೋಟಿ
ಬೆಂಗಳೂರು ದಕ್ಷಿಣದ ಹಾಲಿ ಸಂಸದ ಮತ್ತು ಭಾರತೀಯ ಜನತಾ ಯುವ ಮೋರ್ಚಾದ (ಬಿಜೆವೈಎಂ) ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ 2024 ರ ಚುನಾವಣೆಯಲ್ಲಿ ಅದೇ ಕ್ಷೇತ್ರದಿಂದ ಮರುಚುನಾವಣೆಗೆ ಸಿದ್ಧರಾಗಿದ್ದಾರೆ. ತೇಜಸ್ವಿ ಸೂರ್ಯ ಅವರಿಗೆ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಟಫ್ ಫೈಟ್ ನೀಡುತ್ತಿದ್ದಾರೆ. 2019 ರ ಲೋಕಸಭಾ ಚುನಾವಣೆಯಲ್ಲಿ, ತೇಜಸ್ವಿ ಸೂರ್ಯ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ, ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್ ವಿರುದ್ಧ 3,31,192 ಮತಗಳ ಅಂತರದಿಂದ ನಿರ್ಣಾಯಕ ಗೆಲುವು ಸಾಧಿಸಿದರು.
6:56 AM, 26 Apr
ಬೆಂಗಳೂರು ಗ್ರಾಮಾಂತರ: ಡಿಕೆ ಸುರೇಶ್ V/s ಡಾ.ಎನ್ ಸಿ ಮಂಜುನಾಥ್
ಬೆಂಗಳೂರು ಗ್ರಾಮಾಂತರ: ಕರ್ನಾಟಕದಲ್ಲಿ 2019ರ ಲೋಕಸಭೆ ಚುನಾವಣೆಯಲ್ಲಿ ಗೆದ್ದ ಏಕೈಕ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಡಿ.ಕೆ.ಸುರೇಶ್ 2024ರ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರದಿಂದ ಮರು ಆಯ್ಕೆ ಬಯಸಿದ್ದಾರೆ. ದೇವೇಗೌಡರ ಅಳಿಯ ಮತ್ತು ಎಚ್ಡಿ ಕುಮಾರಸ್ವಾಮಿ ಅವರ ಸೋದರ ಮಾವ ಆಗಿರುವ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಸಿಎನ್ ಮಂಜುನಾಥ್ ಅವರನ್ನು ಬೆಂಗಳೂರು ಗ್ರಾಮಾಂತರದಿಂದ ಬಿಜೆಪಿ-ಜೆಡಿಎಸ್ ಕಣಕ್ಕಿಳಿಸಿದೆ.
7:00 AM, 26 Apr
ಜಮ್ಮು ಮತ್ತು ಕಾಶ್ಮೀರ
ಹಕ್ಕು ಚಲಾಯಿಸಲು ಬಂದ ಕಾಶ್ಮಿರದ ಮತದಾರರು
ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗುತ್ತಿದ್ದಂತೆ ಜಮ್ಮುವಿನ ಮತದಾನ ಕೇಂದ್ರದಲ್ಲಿ ಮತದಾರರ ಉದ್ದನೆಯ ಸರತಿ ಸಾಲು ಕಂಡು ಬಂದಿದೆ. ಇದು 5 ಸಂಸದೀಯ ಕ್ಷೇತ್ರಗಳನ್ನು ಹೊಂದಿದ್ದು ಅದರಲ್ಲಿ ಒಂದು ಕ್ಷೇತ್ರಕ್ಕೆ ಇಂದು ಚುನಾವಣೆ ನಡೆಯಲಿದೆ.
#WATCH | Long queue of voters at a polling station in Jammu as voting starts at 7am in UT of Jammu & Kashmir
The UT has 5 parliamentary constituencies of which one votes today in the second phase of Lok Sabha polls pic.twitter.com/Vm0brB6LmF
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ನಗರ ಸೇರಿ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ
7:08 AM, 26 Apr
ಕರ್ನಾಟಕ
ಮತದಾನದ ವೇಳೆ ಮೊಬೈಲ್ ನಿಷೇಧ
ಮತದಾನ ವೇಳೆ ಮೊಬೈಲ್ ತೆಗೆದುಕೊಂಡು ಹೋಗುವುದಕ್ಕೆ ನಿರ್ಬಂಧ ಹೇರಲಾಗಿದೆ. ಮತದಾನದ ವಿಡಿಯೋ ಫೋಟೋ ತೆಗೆದುಕೊಳ್ಳುವ ಸಾಧ್ಯತೆ ಇರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಮತದಾರರು ಮತಗಟ್ಟೆ ಹೊರಗೆ ತಮ್ಮ ಮೊಬೈಲ್ ಇಟ್ಟು ಹೋಗಲು ಸೂಚನೆ ನೀಡಲಾಗುತ್ತಿದೆ.
7:13 AM, 26 Apr
ಮಣಿಪುರ
ಮತ ಚಲಾಯಿಸಿದ 94 ವರ್ಷದ ವೃದ್ಧೆ
ಉಖ್ರುಲ್ ಔಟರ್ ಮಣಿಪುರದಲ್ಲಿ 94 ವರ್ಷದ ಮಹಿಳೆಯೊಬ್ಬರು ಮತದಾನ ಮಾಡಿದರು. ಮತದಾನ ಆರಂಭಕ್ಕೂ ಮುನ್ನವೆ ಮತಗಟ್ಟೆಗೆ ಬಂದಿದ್ದ ಅವರಿಂದಲೇ ಮೊದಲ ಮತ ಚಲಾವಣೆಯಾಗಿದೆ. ಮಣಿಪುರದ ಒಂದು ಸಂಸದೀಯ ಸ್ಥಾನಕ್ಕೆ ಮತದಾನ ನಡೆಯುತ್ತಿದೆ. ಮಣಿಪುರದ ಹೊರ ಕ್ಷೇತ್ರ ವ್ಯಾಪ್ತಿಯ 13 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಎರಡನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ರಾಜ್ಯದಲ್ಲಿ ಒಟ್ಟು ಎರಡು ಲೋಕಸಭಾ ಸ್ಥಾನಗಳಿವೆ.
#WATCH | A 94-year-old woman casts her vote in Ukhrul Outer Manipur as polling begins on one parliamentary seat
ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ಬೆಂಗಳೂರಿನ ಬಿಇಎಸ್ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಕರ್ನಾಟಕದ ಮೊದಲ ಹಂತದ ಲೋಕಸಭೆ ಚುನಾವಣೆಯಲ್ಲಿ ಇಂದು 14 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.
#WATCH | Karnataka: Infosys founder Narayana Murthy casts his vote at BES polling station in Bengaluru.
ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ ನಂತರ, ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಮಾತನಾಡಿ, "ಪ್ರತಿ ಐದು ವರ್ಷಗಳಿಗೊಮ್ಮೆ, ನಮ್ಮ ಸಂವಿಧಾನವು ನೀಡಿರುವ ಹಕ್ಕನ್ನು ಚಲಾಯಿಸಲು, ನಮ್ಮನ್ನು ಆಳಲು ಯಾವ ಪಕ್ಷದ ಅಭ್ಯರ್ಥಿ ಬೇಕು ಎಂಬುದನ್ನು ಆಯ್ಕೆ ಮಾಡಲು ನಮಗೆ ಅವಕಾಶ ಸಿಗುತ್ತದೆ. ಇಂದು ನಾವೆಲ್ಲರೂ ನಮ್ಮ ಹಕ್ಕನ್ನು ಚಲಾಯಿಸಲು ಉತ್ಸಾಹದಿಂದಿರಬೇಕು" ಎಂದಿದ್ದಾರೆ.
7:24 AM, 26 Apr
ಕರ್ನಾಟಕ
'ಮನೆಯಲ್ಲಿ ಕುಳಿತುಕೊಳ್ಳಬೇಡಿ, ಹೊರಗೆ ಬಂದು ಮತ ಚಲಾಯಿಸಿ'
ಲೇಖಕಿ ಸುಧಾ ಮೂರ್ತಿ ಅವರು ಲೋಕಸಭೆ ಚುನಾವಣೆಗಾಗಿ ಬೆಂಗಳೂರಿನಲ್ಲಿ ಮತ ಚಲಾಯಿಸಿದರು. ಈ ವೇಳೆ "ನಾನು ಎಲ್ಲರಿಗೂ ಹೇಳಲು ಬಯಸುತ್ತೇನೆ. ಮನೆಯಲ್ಲಿ ಕುಳಿತುಕೊಳ್ಳಬೇಡಿ, ಹೊರಗೆ ಬಂದು ಮತ ಚಲಾಯಿಸಿ. ನಿಮ್ಮ ನಾಯಕನನ್ನು ಆಯ್ಕೆ ಮಾಡಿ. ಗ್ರಾಮೀಣ ಪ್ರದೇಶದವರಿಗೆ ಹೋಲಿಸಿದರೆ ನಗರದ ಜನರು ಕಡಿಮೆ ಮತ ಚಲಾಯಿಸುತ್ತಾರೆ ಎಂದು ನಾನು ಯಾವಾಗಲೂ ಅಂದುಕೊಳ್ಳುತ್ತೇನೆ. ಯುವಕರು ಹೊರಗೆ ಬಂದು ಮತ ಚಲಾಯಿಸಬೇಕು" ಎಂದು ಮನವಿ ಮಾಡಿದ್ದಾರೆ.
#WATCH | Author and philanthropist Sudha Murty casts her votes in Lok Sabha elections in Bengaluru
"I want to tell everyone- don't sit at home, come out and vote, choose your leader. I always feel that urban people vote less as compared to those in rural areas. I request… pic.twitter.com/bl7NGqx0Gu
ತ್ರಿಶ್ಶೂರ್ನ ಎನ್ಡಿಎ ಅಭ್ಯರ್ಥಿ ಸುರೇಶ್ ಗೋಪಿ ಅವರು ತ್ರಿಶೂರ್ನ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಕೇರಳದ ವಿರೋಧ ಪಕ್ಷದ ನಾಯಕ ವಿಡಿ ಸತೀಶನ್ ಎರ್ನಾಕುಲಂನಲ್ಲಿ ಮತದಾನ ಮಾಡಿದರು. ಇಂದು ಲೋಕಸಭೆ ಚುನಾವಣೆಯಲ್ಲಿ ಕೇರಳದ ಎಲ್ಲಾ 20 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
7:35 AM, 26 Apr
ಕರ್ನಾಟಕ
ಮತದಾನ ಮಾಡಿ ಕನ್ನಡದಲ್ಲಿ ಮೋದಿ ಟ್ವೀಟ್
ಮತದಾನ ಮಾಡುವಂತೆ ಕನ್ನಡದಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. "ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾನು ವಿಶೇಷವಾಗಿ ಕೋರುತ್ತೇನೆ. ನಿಮ್ಮ ಮತ ನಿಮ್ಮ ಧ್ವನಿ" ಎಂದಿದ್ದಾರೆ.
ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾನು ವಿಶೇಷವಾಗಿ…
"ಲೋಕಸಭೆ ಚುನಾವಣೆಗಾಗಿ ನಾವು ಸುಮಾರು 45-50 ಸಾವಿರ ಸಿಬ್ಬಂದಿಯನ್ನು ನಿಯೋಜಿಸಿದ್ದೇವೆ. ಸುಮಾರು 11 ವಿಭಾಗಗಳ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಆಗಮಿಸಿದೆ. ಅದೇ ರೀತಿ ಕೆಎಸ್ ಆರ್ ಪಿ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ" ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದಾರೆ.
7:43 AM, 26 Apr
ರಾಜಸ್ಥಾನ
ಮತ ಚಲಾಯಿಸಿದ ಬಿಜೆಪಿ ನಾಯಕಿ ವಸುಂಧರಾ ರಾಜೇ
ರಾಜಸ್ಥಾನದಲ್ಲಿ ಬಿಜೆಪಿ ನಾಯಕಿ ವಸುಂಧರಾ ರಾಜೇ ಅವರು ಜಲಾವರ್ನ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನದಲ್ಲಿ ರಾಜಸ್ಥಾನದಲ್ಲಿ ಇಂದು 13 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.
7:50 AM, 26 Apr
ಕರ್ನಾಟಕ
ಬೆಂಗಳೂರು ಉತ್ತರ: ಶೋಭಾ ಕರಂದ್ಲಾಜೆ V/s ರಾಜೇಗೌಡ
ಬಿಜೆಪಿ ಈ ಬಾರಿ ಬೆಂಗಳೂರು ಉತ್ತರದಿಂದ ಹಿರಿಯ ನಾಯಕ ಡಿವಿ ಸದಾನಂದ ಗೌಡರನ್ನು ಕಣಕ್ಕಿಳಿಸಿಲ್ಲ. ಬದಲಾಗಿ ಉಡುಪಿ-ಚಿಕ್ಕಮಗಳೂರಿನ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಬೆಂಗಳೂರು ಉತ್ತರಕ್ಕೆ ಕರೆತರಲಾಗಿದೆ. ಇತ್ತ, ಕಾಂಗ್ರೆಸ್ ಈ ಭಾಗದಿಂದ ಅರ್ಥಶಾಸ್ತ್ರಜ್ಞ ಮತ್ತು ಮಾಜಿ ಐಐಎಂ ಪ್ರೊಫೆಸರ್ ರಾಜೀವ್ ಗೌಡ ಅವರನ್ನು ಕಣಕ್ಕಿಳಿಸಿದೆ.
7:53 AM, 26 Apr
ಕರ್ನಾಟಕ
ನಿರ್ಮಲಾ ಸೀತಾರಾಮನ್ ಮತ ಚಲಾವಣೆ
ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಲು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ತಂದೆಯೊಂದಿಗೆ ಬೆಂಗಳೂರಿನ ಬಿಇಎಸ್ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಕರ್ನಾಟಕದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಇಂದು 14 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.
#WATCH | Karnataka: Union Minister Nirmala Sitharaman along with her father, arrives at BES polling booth in Bengaluru to cast her vote in the Lok Sabha elections.
ಮಹಾರಾಷ್ಟ್ರದ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಲು ಅಮರಾವತಿಯ ವದರ್ಪುರ ಪ್ರದೇಶದಲ್ಲಿ ವರನೊಬ್ಬ ಮದುವೆ ವೇಷದಲ್ಲೆ ಮತಗಟ್ಟೆಗೆ ಆಗಮಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ 8 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.
#WATCH | A groom arrives at his designated polling station in the Vadarpura area of Amravati to cast his vote in the Lok Sabha elections in Maharashtra
8 parliamentary constituencies are voting in the second phase of Lok Sabha polls in the state pic.twitter.com/DSoSznF1Uj
ಮತದಾನ ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ ಮನವಿ. ಆತ್ಮೀಯ ಸಾರ್ವಜನಿಕ ಬಂಧುಗಳೇ, ಕರ್ನಾಟಕ ಇಂದು ಮೊದಲನೇ ಹಂತದ ಮತದಾನ ಮಾಡಲಿದ್ದು, 14 ಲೋಕಸಭಾ ಕ್ಷೇತ್ರಗಳ ಮತದಾರರು ತಮ್ಮ ಪ್ರತಿನಿಧಿಗಳ ಆಯ್ಕೆಗೆ ಜನಾದೇಶ ನೀಡಲಿದ್ದಾರೆ. ಎಲ್ಲರೂ ತಪ್ಪದೇ ಮತದಾನ ಮಾಡಿ. ವಿಶೇಷವಾಗಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ನಮ್ಮ ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ, ಪ್ರಜಾಪ್ರಭುತ್ವದ ಈ ಹಬ್ಬದಲ್ಲಿ ಎಲ್ಲರೂ ಪಾಲ್ಗೊಳ್ಳೋಣ.
8:06 AM, 26 Apr
ಕರ್ನಾಟಕ
ಮತದಾನ ಮಾಡಿದ ಬಿಬಿಎಂಪಿ ಮುಖ್ಯ ಆಯುಕ್ತ
ಬೆಂಗಳೂರು ಚುನಾವಣಾಧಿಕಾರಿ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಜಕ್ಕೂರಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಮತದಾನ ಮಾಡುವುದರಿಂದ ಯಾರೂ ಹಿಂದುಳಿಯಬೇಡಿ ತಪ್ಪದೇ ನಿಮ್ಮ ಹಕ್ಕನ್ನು ಚಲಾಯಿಸಿ ಎಂದು ವಿನಂತಿಸಿಕೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.