Get Updates
Get notified of breaking news, exclusive insights, and must-see stories!

Karnataka LS Election 2024 LIVE: 2ನೇ ಹಂತದಲ್ಲಿ 61% ಮತದಾನ: ಕರ್ನಾಟಕದಲ್ಲಿ 64.4% ಮತದಾನ

ಬೆಂಗಳೂರು, ಏಪ್ರಿಲ್. 26: ಲೋಕಸಭೆ ಚುನಾವಣೆ 2024ರ 2ನೇ ಹಂತದ ಮತದಾನ ಏಪ್ರಿಲ್ 26ರ ಶುಕ್ರವಾರ ಬಹುತೇಕ ಶಾಂತಿಯುತವಾಗಿ ಮುಕ್ತಾಯವಾಗಿದೆ. ರಾಜ್ಯದ 14 ಕ್ಷೇತ್ರಗಳು ಸೇರಿ 13 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಸೇರಿ 88 ಕ್ಷೇತ್ರಗಳಲ್ಲಿ ಮತದಾನ ನಡೆಯಿತು. ಸಂಜೆ 7 ಗಂಟೆ ವೇಳೆಗೆ ಶೇ.60.96ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

2ನೇ ಹಂತದಲ್ಲಿ 13 ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳ 89 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಇವುಗಳಲ್ಲಿ ಕೇರಳ 20, ಕರ್ನಾಟಕ 14, ರಾಜಸ್ಥಾನದ 13, ಮಹಾರಾಷ್ಟ್ರ 8, ಉತ್ತರ ಪ್ರದೇಶ 8, ಮಧ್ಯ ಪ್ರದೇಶದ 7, ಅಸ್ಸಾಂ 5, ಬಿಹಾರ 5, ಛತ್ತೀಸ್‌ಗಢ 3, ಪಶ್ಚಿಮ ಬಂಗಾಳ 3, ಜಮ್ಮು ಮುತ್ತು ಕಾಶ್ಮೀರ, ಮಣಿಪುರ ಮತ್ತು ತ್ರಿಪುರ ರಾಜ್ಯದ ತಲಾ 1 ಸ್ಥಾನಗಳಿಗೆ ಮತದಾನ ನಡೆಯಿತು.

Karnataka LS Election 2024 Voting LIVE

ಈ ಮೊದಲು 89 ಕ್ಷೇತ್ರಗಳಿಗೆ ಈ ಹಂತದಲ್ಲಿ ಮತದಾನ ನಡೆಯಬೇಕಿತ್ತು. ಆದರೆ ಮಾಯಾವತಿಯವರ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯ ಮರಣದ ನಂತರ ಮಧ್ಯಪ್ರದೇಶದ ಬೇತುಲ್‌ನಲ್ಲಿ ಮತದಾನವನ್ನು ಮುಂದೂಡಲಾಗಿದೆ. ಮೂರನೇ ಹಂತದಲ್ಲಿ ಬೆತುಲ್‌ನಲ್ಲಿ ಮತದಾನ ನಡೆಯಲಿದೆ. ಮೇ 7 ರಂದು ಲೋಕಸಭಾ ಚುನಾವಣೆ 3ನೇ ಹಂತದ ಮತದಾನ ನಡೆಯಲಿದೆ.

Apr 26, 2024, 8:11 pm IST

2ನೇ ಹಂತದಲ್ಲಿ 61% ಮತದಾನ

13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 88 ಕ್ಷೇತ್ರಗಳಲ್ಲಿ ಮತದಾನ ಮತದಾನ ಮುಕ್ತಾಯವಾಗಿದೆ. ಲೋಕಸಭಾ ಚುನಾವಣೆಯ 2ನೇ ಹಂತದಲ್ಲಿ 61% ಮತದಾನವಾಗಿದೆ. ಕರ್ನಾಟಕದಲ್ಲಿ 64.4% ಮತದಾನವಾಗಿದೆ.
Apr 26, 2024, 8:02 pm IST
ಕರ್ನಾಟಕ

ಕರ್ನಾಟಕದ ಈ ಹಳ್ಳಿಯಲ್ಲಿ 100% ಮತದಾನ

ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಾಂಜಾರುಮಲೆ ಎಂಬ ಗ್ರಾಮದಲ್ಲಿ ಶೇಕಡಾ 100 ರಷ್ಟು ಮತದಾನವಾಗಿದೆ. ಗ್ರಾಮದಲ್ಲಿ 111 ಮತದಾರರಿದ್ದು, ಮತದಾನ ಮುಗಿಯುವ ಎರಡು ಗಂಟೆಗೆ ಎಲ್ಲರೂ ಮತದಾನ ಮಾಡಿದ್ದಾರೆ.
Apr 26, 2024, 7:21 pm IST
ಕರ್ನಾಟಕ

ಕರ್ನಾಟಕದಲ್ಲಿ 64.4% ಮತದಾನ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮುಕ್ತಾಯವಾಗಿದೆ. ಕರ್ನಾಟಕದಲ್ಲಿ ಒಟ್ಟು 14 ಜಿಲ್ಲೆಗಳಲ್ಲಿ ಮತದಾನ ನಡೆದಿದ್ದು, ಒಟ್ಟಾರೆ 64.4% ರಷ್ಟು ಮತದಾನವಾಗಿದೆ. ಮಂಡ್ಯದಲ್ಲಿ 74.87%ರಷ್ಟು ಮತದಾನವಾಗಿದೆ. ಬೆಂಗಳೂರು ಕೇಂದ್ರ 49.21%, ಬೆಂಗಳೂರು ಉತ್ತರ 50.91%, ಬೆಂಗಳೂರು ದಕ್ಷಿಣ 49.37%, ಬೆಂಗಳೂರು ಗ್ರಾಮಾಂತರ 61.78% ರಷ್ಟು ಮತದಾನವಾಗಿದೆ. ಚಾಮರಾಜನಗರ 69.6%, ಚಿಕ್ಕಬಳ್ಳಾಪುರ 71.85%, ಚಿತ್ರದುರ್ಗ 67.52%, ದಕ್ಷಿಣ ಕನ್ನಡ 72.3%, ಹಾಸನ 72.13%, ಕೋಲಾರ 73.25%, ಮೈಸೂರು 66.96%, ತುಮಕೂರು 72.1, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ 72.69% ರಷ್ಟು ಮತದಾನವಾಗಿದೆ.
Apr 26, 2024, 7:11 pm IST

ಮತದಾರರಿಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಎರಡನೇ ಹಂತದಲ್ಲಿ ಮತ ಚಲಾಯಿಸಿದ ಮತದಾರರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, "ಇಂದು ಮತ ಚಲಾಯಿಸಿದ ಜನರಿಗೆ ಕೃತಜ್ಞತೆಗಳು. ಎನ್‌ಡಿಎಗೆ ಇರುವ ಅಪ್ರತಿಮ ಬೆಂಬಲ ಪ್ರತಿಪಕ್ಷಗಳನ್ನು ಇನ್ನಷ್ಟು ನಿರಾಸೆಗೊಳಿಸಲಿದೆ. ಮತದಾರರು ಎನ್‌ಡಿಎಯ ಉತ್ತಮ ಆಡಳಿತವನ್ನು ಬಯಸುತ್ತಾರೆ. ಯುವಕರು ಮತ್ತು ಮಹಿಳಾ ಮತದಾರರು ಎನ್‌ಡಿಎಗೆ ಶಕ್ತಿ ತುಂಬುತ್ತಿದ್ದಾರೆ." ಎಂದು ಹೇಳಿದ್ದಾರೆ.
Apr 26, 2024, 6:56 pm IST
ಕರ್ನಾಟಕ

ಕಾರ್ಯಕರ್ತರಿಂದಲೇ ಬಿಜೆಪಿ ನಾಯಕನಿಗೆ ಥಳಿತ

ಚಿಕ್ಕಮಗಳೂರು ತಾಲೂಕಿನ ಉಜ್ಜಿನಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದಲೇ ಬಿಜೆಪಿ ಮುಖಂಡ ಪ್ರವೀಣ್ ಖಾಂಡ್ಯ ಮೇಲೆ ಹಲ್ಲೆ ನಡೆಸಲಾಗಿದೆ. ಖಾಂಡ್ಯ ಪ್ರವೀಣ್ ಕಾಂಗ್ರೆಸ್ ಪರ ಮತ ಚಲಾಯಿಸುತ್ತಿದ್ದಾರೆ ಎಂದು ಆರೋಪಿಸಿ ಹಲ್ಲೆ ಮಾಡಲಾಗಿದೆ. ವಿಧಾನಸಭಾ ಚುನಾವಣೆ ವೇಳೆ ಪ್ರವೀಣ್ ಖಾಂಡ್ಯ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. ಹಲ್ಲೆಗೊಳಗಾದ ಪ್ರವೀಣ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
Apr 26, 2024, 6:52 pm IST
ಕರ್ನಾಟಕ

ಚಾಮರಾಜನಗರದಲ್ಲಿ ಮತದಾನ ಪ್ರಕ್ರಿಯೆ ಅಂತ್ಯ

ಮತದಾನ ಕೇಂದ್ರದ ಬಾಗಿಲು ಕ್ಲೋಸ್ ಮಾಡಿರುವ ಅಧಿಕಾರಿಗಳು. ಮತ ಯಂತ್ರಗಳಲ್ಲಿ ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದ್ದು, ಇವಿಎಂಗಳು ಚಾಮರಾಜನಗರದ ಇಂಜಿನಿಯನಿರಿಂಗ್ ಕಾಲೇಜಿನ ಸ್ಟ್ರಾಂಗ್ ರೂಂ ಸೇರಲಿವೆ. ಪೊಲೀಸ್ ಭದ್ರತೆಯೊಂದಿಗೆ ಅಧಿಕಾರಿಗಳು ಇವಿಎಂ ತೆಗೆದುಕೊಂಡು ತೆರಳಲಿದ್ದಾರೆ.
Apr 26, 2024, 6:51 pm IST
ಕರ್ನಾಟಕ

ಸಿಟಿ ರವಿ ವಿರುದ್ಧ ಪ್ರಕರಣ ದಾಖಲು

ಬಿಜೆಪಿ ನಾಯಕ ಸಿಟಿ ರವಿ ವಿರುದ್ಧ ಚಿಕ್ಕಮಗಳೂರು ಚುನಾವಣಾ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಅಧಿಕೃತ ಎಕ್ಸ್ ಖಾತೆಯಲ್ಲಿ ದ್ವೇಷವನ್ನು ಉತ್ತೇಜಿಸುವ ವಿಡಿಯೋ ಹಂಚಿಕೊಂಡಿದ್ದಕ್ಕಾಗಿ ಅವರ ವಿರುದ್ಧ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
Apr 26, 2024, 6:39 pm IST
ಕರ್ನಾಟಕ

ಮತದಾರನಿಗೆ ಡಿಕೆ ಸುರೇಶ್ ಧನ್ಯವಾದ

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತ ಹಾಕಲು ದುಬೈನಿಂದ ಬರುತ್ತಿದ್ದ ವ್ಯಕ್ತಿಯೊಬ್ಬರ ವಿಮಾನ ಮಿಸ್ ಆಗಿದ್ದು, ಮತ ಹಾಕಲು ಆಗುತ್ತಿಲ್ಲ, ಡಿಕೆ ಸುರೇಶ್ ಅವರಿಗೆ ಒಂದು ಮತ ಕಡಿಮೆ ಆಗಿದೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಕೆ ಸುರೇಶ್ ನಿಮ್ಮ ಪ್ರೀತಿ, ಕನ್ನಡ ಪ್ರೇಮ ನನ್ನ ಹೃದಯ ಗೆದ್ದಿದೆ, ಕನ್ನಡಿಗರ ಹಿತ ಕಾಯುವುದು ನನ್ನ ಜವಾಬ್ದಾರಿ ಎಂದಿದ್ದಾರೆ.
Apr 26, 2024, 6:34 pm IST

ಕ್ಷೇತ್ರವಾರು ಮತದಾನದ ವಿವರ

ಕ್ಷೇತ್ರವಾರು ಮತದಾನದ ವಿವರ
ಸಂಜೆ 5 ಗಂಟೆ ವೇಳೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಆಗಿರುವ ಮತದಾನದ ವಿವರ.
Apr 26, 2024, 6:33 pm IST

ಕ್ಷೇತ್ರವಾರು ಮತದಾನದ ವಿವರ

ಕ್ಷೇತ್ರವಾರು ಮತದಾನದ ವಿವರ
ಸಂಜೆ 5 ಗಂಟೆ ವೇಳೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಆಗಿರುವ ಮತದಾನದ ವಿವರ.
Apr 26, 2024, 6:05 pm IST
ಕರ್ನಾಟಕ

ಮಂಡ್ಯದಲ್ಲಿ 74.87% ಮತದಾನ

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ಗಂಟೆ ವೇಳೆಗೆ 74.87% ಮತದಾನವಾಗಿದೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ 79.03% ರಷ್ಟು ಮತದಾನವಾಗಿದ್ದು, ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 69.99% ಮತದಾನವಾಗಿದೆ.
Apr 26, 2024, 5:57 pm IST

ಸಂಜೆ 5 ಗಂಟೆಗೆ 60.7% ಮತದಾನ

ಸಂಜೆ 5 ಗಂಟೆಗೆ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 60.7% ಮತದಾನವಾಗಿದೆ. ಮಣಿಪುರ, ಛತ್ತೀಸ್‌ಗಢ, ಬಂಗಾಳ, ಅಸ್ಸಾಂ ಮತ್ತು ತ್ರಿಪುರದಲ್ಲಿ 70% ಕ್ಕಿಂತ ಹೆಚ್ಚು ಮತದಾನ ದಾಖಲಾಗಿದ್ದರೆ ಉತ್ತರ ಪ್ರದೇಶ, ಬಿಹಾರ ಮತ್ತು ಮಹಾರಾಷ್ಟ್ರದಲ್ಲಿ ಕ್ರಮವಾಗಿ 52.6%, 53% ಮತ್ತು 53.5% ಮತದಾನವಾಗಿದೆ.
Apr 26, 2024, 5:45 pm IST
ಕರ್ನಾಟಕ

ಕರ್ನಾಟಕದಲ್ಲಿ 63.9% ಮತದಾನ

ಕರ್ನಾಟಕದಲ್ಲಿ 63.9% ಮತದಾನ
ಸಂಜೆ 5 ಗಂಟೆ ವೇಳೆಗೆ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ 63.9% ಮತದಾನವಾಗಿದೆ. ಬೆಂಗಳೂರು ಕೇಂದ್ರದಲ್ಲಿ 48.61% ರಷ್ಟು ಮತದಾನವಾಗಿದ್ದರೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ 61.78% ಮತದಾನವಾಗಿದೆ. ಬೆಂಗಳೂರು ಉತ್ತರ 50.04%, ಬೆಂಗಳೂರು ದಕ್ಷಿಣ 49.37% ಮತದಾನವಾಗಿದೆ. ಚಾಮರಾಜನಗರ 69.6%, ಚಿಕ್ಕಬಳ್ಳಾಪುರ 70.97%, ಚಿತ್ರದುರ್ಗ 67%, ದಕ್ಷಿಣ ಕನ್ನಡ 71.83%, ಹಾಸನ 72.13%, ಕೋಲಾರ 71.26%, ಮಂಡ್ಯ 74.87%, ಮೈಸೂರು 65.85%, ತುಮಕೂರು 72.1%, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ 72.13% ಮತದಾನವಾಗಿದೆ.
Apr 26, 2024, 5:16 pm IST
ಉತ್ತರ ಪ್ರದೇಶ

ಮೊಹಮ್ಮದ್ ಶಮಿ ಮತದಾನ

ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ಮತದಾನ ಮಾಡಿದರು. ಉತ್ತರಪ್ರದೇಶದ ಅಮ್ರೋಹಾದಲ್ಲಿ ಸಂಜೆ ಕುಟುಂಬ ಸಮೇತ ಬಂದು ಮತ ಚಲಾಯಿಸಿದರು.
Apr 26, 2024, 4:58 pm IST
ಕರ್ನಾಟಕ

ತೇಜಸ್ವಿಸೂರ್ಯ ಅನರ್ಹಗೊಳಿಸಲು ಸೌಮ್ಯಾರೆಡ್ಡಿ ಒತ್ತಾಯ

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಧರ್ಮದ ಆಧಾರದಲ್ಲಿ ಮತ ಕೇಳಿರುವ ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಒತ್ತಾಯಿಸಿದ್ದಾರೆ. ಸೋಲುತ್ತೇನೆ ಎಂದು ಈಗಾಗಲೇ ತೇಜಸ್ವಿ ಸೂರ್ಯ ಅವರಿಗೆ ಗೊತ್ತಾಗಿದೆ ಎಂದು ಅವರು ಹೇಳಿದ್ದಾರೆ.
Apr 26, 2024, 4:42 pm IST
ಕರ್ನಾಟಕ

ಬಿಜೆಪಿಗೆ ಹಣದ ಮದ: ಕಾಂಗ್ರೆಸ್

ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಧಾಕರ್ ಅವರು ಮತ ಖರೀದಿಗಾಗಿ ಇಟ್ಟಿದ್ದ ₹4.8 ಕೋಟಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ, ಮತ್ತೊಂದೆಡೆ ಮಂಗಳೂರಿನಲ್ಲಿ ಬಿಜೆಪಿ ತನ್ನ ಗೂಂಡಾಪಡೆಯ ಮೂಲಕ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಗಲಾಟೆ ಎಬ್ಬಿಸಿದೆ ಎಂದು ಕಾಂಗ್ರೆಸ್‌ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಬಿಜೆಪಿಯ ಈ ಹಣಮದದ ರೋಗಕ್ಕೆ ಕನ್ನಡಿಗರು ಮದ್ದು ನೀಡಲಿದ್ದಾರೆ ಎಂದು ಹೇಳಿದೆ.
Apr 26, 2024, 4:18 pm IST
ಕರ್ನಾಟಕ

ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಮತದಾನದ ದಿನವೇ ಸಾಮಾಜಿಕ ಮಾಧ್ಯಮದಲ್ಲಿ ಧರ್ಮದ ಆಧಾರದ ಮೇಲೆ ಮತ ಕೇಳಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್‌ ಮಾಡಿದ ವಿಡಿಯೋ ಆಧರಿಸಿ ಚುನಾವಣಾ ಆಯೋಗ ಅವರ ಮೇಲೆ ಪ್ರಕರಣವನ್ನು ದಾಖಲಿಸಿದೆ.
Apr 26, 2024, 4:04 pm IST
ಕರ್ನಾಟಕ

ಕೃಷಿ ಸಚಿವ ಚಲುವರಾಯಸ್ವಾಮಿ ಮತದಾನ

ಕೃಷಿ ಸಚಿವ ಚಲುವರಾಯಸ್ವಾಮಿ ಮತದಾನ
ಮಂಡ್ಯ ಲೋಕಸಭಾ ಕ್ಷೇತ್ರದ ನಾಗಮಂಗಲಕ್ಕೆ ಭೇಟಿ ನೀಡಿ ಕೃಷಿ ಸಚಿವ ಚಲುವರಾಯಸ್ವಾಮಿ ಇಜ್ಜಲಘಟ್ಟದಲ್ಲಿ ಕುಟುಂಬದ ಜೊತೆ ಮತ ಚಲಾಯಿಸಿದರು.
Apr 26, 2024, 4:01 pm IST
ಕರ್ನಾಟಕ

ಚಾಮರಾಜನಗರ ಕ್ಷೇತ್ರದಲ್ಲಿ 54.82% ಮತದಾನ

ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ 54.82% ಮತದಾನ ನಡೆದಿದೆ. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅತಿ ಹೆಚ್ಚು 61.91% ಮತದಾನವಾಗಿದೆ. ಹೆಚ್.ಡಿ. ಕೋಟೆ ಕ್ಷೇತ್ರದಲ್ಲಿ ಕಡಿಮೆ 50.99% ಮತದಾನವಾಗಿದೆ.
Apr 26, 2024, 3:48 pm IST
ಕರ್ನಾಟಕ

ಮಂಗಳೂರಿನಲ್ಲಿ ಬಿಜೆಪಿ ಗೂಂಡಾಗಿರಿ; ಕಾಂಗ್ರೆಸ್ ಆಕ್ರೋಶ

ಮಂಗಳೂರಿನಲ್ಲಿ ಮತಗಟ್ಟೆ ಬಳಿ ಗೂಂಡಾಗಿರಿ ನಡೆಸಿದ ಬಿಜೆಪಿ ಕಾರ್ಯಕರ್ತರು ಪೊಲೀಸರ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಬಗ್ಗೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಅಹಂಕಾರಕ್ಕೆ ಮತದಾರರು ಉತ್ತರ ನೀಡುತ್ತಾರೆ ಎಂದು ಹೇಳಿದೆ.
Apr 26, 2024, 3:43 pm IST
ಕರ್ನಾಟಕ

ಮೈಸೂರು ಕೊಡಗು ಕ್ಷೇತ್ರದಲ್ಲಿ 53.55% ಮತದಾನ

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ 53.55% ರಷ್ಟು ಮತದಾನವಾಗಿದೆ. ಪೆರಿಯಾಪಟ್ಟಣದಲ್ಲಿ 59.50 % ಮತದಾನವಾಗಿದ್ದರೆ, ಚಾಮರಾಜದಲ್ಲಿ 47% ಮತದಾನವಾಗಿದೆ.
Apr 26, 2024, 3:39 pm IST
ಕರ್ನಾಟಕ

ರಾಜ್ಯದಲ್ಲಿ ಶೇಕಡ 50 ರಷ್ಟು ಮತದಾನ

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಶೇಕಡಾ 50.93 ಮತದಾನವಾಗಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 58.76% ಮತದಾನವಾಗಿದ್ದು ರಾಜ್ಯದಲ್ಲಿ ಅತಿ ಹೆಚ್ಚು ಮತದಾನವಾಗ ಕ್ಷೇತ್ರವಾಗಿದೆ. ಉಳಿದಂತೆ ಉಡುಪಿ-ಚಿಕ್ಕಮಗಳೂರು ಕ್ಷೇಥ್ರದಲ್ಲಿ 57.49, ಮಂಡ್ಯ 57.44%, ತುಮಕೂರು 56.62% ಮತ್ತು ಹಾಸನದಲ್ಲಿ 55.92% ರಷ್ಟು ಮತದಾನವಾಗಿದೆ.
Apr 26, 2024, 3:19 pm IST
ಕರ್ನಾಟಕ

ಮಧ್ಯಾಹ್ನ 1 ಗಂಟೆಯವರೆಗೆ ಆದ ಮತದಾನ

ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶದ ಆರು ಲೋಕಸಭಾ ಕ್ಷೇತ್ರಗಳಲ್ಲಿ ಸುಮಾರು 38.96 ಪ್ರತಿಶತದಷ್ಟು ಮತದಾರರು ಮತ ಚಲಾಯಿಸಿದ್ದಾರೆ. ತ್ರಿಪುರಾ ರಾಜ್ಯದಲ್ಲಿ ಶೇ.54.47ರಷ್ಟು ಮತದಾನ ನಡೆದಿದ್ದು ಅತಿ ಹೆಚ್ಚು ಮತದಾನವಾದ ರಾಜ್ಯವಾಗಿದೆ. ಉತ್ತರ ಪ್ರದೇಶದ ಎಂಟು ಲೋಕಸಭಾ ಕ್ಷೇತ್ರಗಳಲ್ಲಿ ಶೇ.35.73ರಷ್ಟು ಮತದಾನವಾಗಿದೆ. ಮಹಾರಾಷ್ಟ್ರದ ಎಂಟು ಕ್ಷೇತ್ರಗಳಲ್ಲಿ ಶೇ.31.77ರಷ್ಟು ಮತದಾನವಾಗಿದೆ. ರಾಜಸ್ಥಾನದ 13 ಲೋಕಸಭಾ ಕ್ಷೇತ್ರಗಳಲ್ಲಿ 40.39 ರಷ್ಟು ಮತದಾನವಾಗಿದೆ.
Apr 26, 2024, 3:09 pm IST
ಕರ್ನಾಟಕ

ಲೊಕಸಭಾ ಚುನಾವಣೆ-2024ರ ಅಂಗವಾಗಿ ಚುನಾವಣಾ ರಾಯಭಾರಿಯಾಗಿ ಕಾರ್ಯನಿರ್ವಹಿಸಿದ ಚಲನಚಿತ್ರ ನಟ ಹಾಗೂ ನಿರ್ದೇಶಕರಾದ ರಮೇಶ್ ಅರವಿಂದ್ ರವರು ಪದ್ಮನಾಭನಗರದ ಬಿ.ಎನ್.ಎಂ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
Apr 26, 2024, 2:58 pm IST
ಕರ್ನಾಟಕ

ಮತದಾನ ಮಾಡುವುದು ನಮ್ಮ ಹಕ್ಕು: ಜಾವಗಲ್ ಶ್ರೀನಾಥ್

ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಇಂದು ಮೈಸೂರಿನ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಬಳಿಕ ಮಾತಾಡಿದ ಅವರು, " ಮತದಾನ ಮಾಡುವುದು ನಮ್ಮ ಹಕ್ಕು, ಜನರು ಹೊರಗೆ ಬಂದು ಮತದಾನ ಮಾಡಬೇಕೆಂದು ನಾನು ಮನವಿ ಮಾಡುತ್ತೇನೆ. ಇದುವರೆಗೆ 50% ಕ್ಕಿಂತ ಹೆಚ್ಚು ಮತದಾನ ನಡೆದಿರುವುದು ನನಗೆ ಸಂತೋಷವಾಗಿದೆ. ಜನರು ಹೊರಬರಬೇಕು. ಮತದಾನ ಮುಖ್ಯ" ಎಂದು ಹೇಳಿದರು.
Apr 26, 2024, 2:52 pm IST
ಕರ್ನಾಟಕ

ನಾವು ಭರ್ಜರಿ ಬಹುಮತದಿಂದ ಗೆಲ್ಲುತ್ತೇವೆ: ಡಿಕೆ ಶಿವಕುಮಾರ್

ಲೋಕಸಭೆ ಚುನಾವಣೆ 2024: "ಕಾಂಗ್ರೆಸ್ ಪಕ್ಷ ಕರ್ನಾಟಕದ ಜನತೆಗೆ ನೀಡಿದ್ದ ಎಲ್ಲ ಭರವಸೆಗಳನ್ನು ಜಾರಿಗೆ ತಂದಿದೆ. ಕಾಂಗ್ರೆಸ್ ಪಕ್ಷ ತನ್ನ ಮಾತಿನ ಮೇಲೆ ನಂಬಿಕೆ ಇಟ್ಟಿದೆ. ರಾಜ್ಯದ ಜನತೆ ಸಂತಸಗೊಂಡಿದ್ದು, ಮತದಾರರಿಂದ ಗೊತ್ತಾಗಿದೆ. ಬಿಜೆಪಿ ವಿಫಲವಾಗಿದೆ, ರಾಜ್ಯದಲ್ಲಿ ನಾವು ಭರ್ಜರಿ ಬಹುಮತದಿಂದ ಗೆಲ್ಲುತ್ತೇವೆ" ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
Apr 26, 2024, 2:46 pm IST
ಕರ್ನಾಟಕ

ಕಾಂಗ್ರೆಸ್ ಜನಪರ ಆಡಳಿತಕ್ಕೆ ಜನ ಸಹಮತ, ಗೆಲುವು ನಿಶ್ಚಿತ:ಬಿ.ಎನ್.ಚಂದ್ರಪ್ಪ

chandrappa
ಹೊಳಲ್ಕೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತ ಇಡೀ ದೇಶಕ್ಕೆ ಮಾದರಿಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮರ್ಮಘಾತದ ಫಲಿತಾಂಶ ಬರಲಿದೆ. ಗೃಹಲಕ್ಷ್ಮಿಯರು ಕೈ ಹಿಡಿದಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಹೊಳಲ್ಕೆರೆ ಪಟ್ಟಣ ತರಳಬಾಳು ಬಾಲಕಿಯರ ಪ್ರೌಢಶಾಲೆಯ ಬೂತ್ ನಂಬರ್ 172 ರಲ್ಲಿ ಶುಕ್ರವಾರ ಮತ ಚಲಾಯಿಸಿದರು.
Apr 26, 2024, 2:41 pm IST
ಕರ್ನಾಟಕ

ಗೆಲುವು ನನ್ನದೆ ಎಂದ ಕೋಟ ಶ್ರೀನಿವಾಸ ಪೂಜಾರಿ

ಕೋಟತಟ್ಟು ಗ್ರಾಮ ಪಂಚಾಯತ್‌ನಲ್ಲಿ ಕುಟುಂಬ ಸಮೇತ ಬಂದು ಮತದಾನ ಮಾಡಿ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, "ಭಾರತೀಯ ಜನತಾ ಪಕ್ಷದ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಎಂಟು ವಿಧಾನಸಭಾ ಕ್ಷೇತ್ರದ ತಿರುಗಾಟ ಮಾಡಿದ್ದೇನೆ. ಇಡೀ ಲೋಕಸಭಾ ಕ್ಷೇತ್ರದಲ್ಲಿ ಜನ ಉತ್ಸಾಹದಲ್ಲಿ ಮತದಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ರಾಷ್ಟ್ರಕ್ಜಾಗಿ, ರಾಷ್ಟ್ರದ ಭದ್ರತೆಗಾಗಿ, ರಾಷ್ಟ್ರದ ಐಕ್ಯತೆಗಾಗಿ ರಾಷ್ಟ್ರದಲ್ಲಿ ಶಾಂತಿ ನೆಮ್ಮದಿಗಾಗಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ನಿಶ್ಚಿತವಾಗಿ ಜಯ ನನ್ನದಾಗುತ್ತದೆ. ಬಿಜೆಪಿ ಗೆಲ್ಲುತ್ತದೆ" ಎಂದಿದ್ದಾರೆ.
Apr 26, 2024, 2:29 pm IST
ಕರ್ನಾಟಕ

ಸರ್ಕಾರದ ಹಸ್ತಕ್ಷೇಪ ಕಡಿಮೆಯಿರಬೇಕು: ನಟ ಯಶ್

ಲೋಕಸಭೆ ಚುನಾವಣೆ 2024: ನಟ ಯಶ್ ಬೆಂಗಳೂರಿನ ಹೊಸಕೆರೆಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಥಾಪಿಸಲಾದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಈ ವೇಳೆ, "ಸರ್ಕಾರವು ಏನು ಮಾಡಬೇಕೋ ಅದನ್ನು ಮಾಡಬೇಕು ಮತ್ತು ಜನರು ಏನು ಮಾಡುತ್ತಿದ್ದಾರೋ ಅದು ಮಾಡಲು ಬಿಡಬೇಕು. ಹಸ್ತಕ್ಷೇಪ ಕಡಿಮೆ ಇರಬೇಕು ಎಂದು ನಾನು ಭಾವಿಸುತ್ತೇನೆ. ಸಬಲೀಕರಣವನ್ನು ಮಾಡಬೇಕು. ಹಲವಾರು ಸಮಸ್ಯೆಗಳಿವೆ, ಅವುಗಳ ಪರಿಹಾರಕ್ಕೆ ನಾನು ನಾಗರಿಕನಾಗಿ ನಿರೀಕ್ಷಿಸುತ್ತೇನೆ" ಎಂದು ಹೇಳಿದರು.
Apr 26, 2024, 2:23 pm IST
ಕರ್ನಾಟಕ

ಆರ್‌ಆರ್‌ ನಗರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತದಾನ

ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಇಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ಮತಗಟ್ಟೆಯಲ್ಲಿ ಮತದಾನ ಮಾಡಿದರು. ನಟ ದರ್ಶನ್ ಕೈಗೆ ಸರ್ಜರಿಯಾಗಿದ್ದು, ಅದರ ನಡುವೆಯೂ ಕಾಂಗ್ರೆಸ್ ಅಭ್ಯರ್ಥಿಗಳ ಬೆಂಬಲಕ್ಕಾಗಿ ಬಿರುಸಿನ ಪ್ರಚಾರ ನಡೆಸಿದ್ದರು.
READ MORE

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+