ಸೆ.30ರ ತನಕ ರಜೆ ಪಡೆದ ಲೋಕಾಯುಕ್ತ ಭಾಸ್ಕರರಾವ್
ಬೆಂಗಳೂರು, ಆ. 31 : ಕರ್ನಾಟಕ ಲೋಕಾಯುಕ್ತದಲ್ಲಿನ ಸಾಕಷ್ಟು ಕೆಲಸಗಳು ಬಾಕಿ ಉಳಿದಿವೆ. ಇದರ ನಡುವೆಯೇ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರರಾವ್ ಅವರು ಸೆಪ್ಟೆಂಬರ್ 30ರ ತನಕ ರಜೆಯನ್ನು ವಿಸ್ತರಣೆ ಮಾಡಿದ್ದಾರೆ. ಉಪ ಲೋಕಾಯುಕ್ತರಿಗೆ ಅವರು ತಮ್ಮ ಕೆಲಸಗಳನ್ನು ಹಸ್ತಾಂತರ ಮಾಡಿಲ್ಲ.
ಲೋಕಾಯುಕ್ತದಲ್ಲಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಭಾಸ್ಕರರಾವ್ ಪುತ್ರ ಅಶ್ವಿನ್ ರಾವ್ ಬಂಧನವಾದ ನಂತರ ಲೋಕಾಯುಕ್ತರು ರಜೆ ಹಾಕಿದ್ದರು. ಜುಲೈ 17ರಿಂದ ಆ.17ರ ತನಕ ರಜೆ ಹಾಕಿದ್ದರು. ನಂತರ ಅದನ್ನು ಆ.31ರ ತನಕ ವಿಸ್ತರಣೆ ಮಾಡಿದರು. ಈಗ ಅದನ್ನು ಸೆಪ್ಟೆಂಬರ್ 30ರ ತನಕ ವಿಸ್ತರಣೆ ಮಾಡಿದ್ದಾರೆ. [15 ದಿನಗಳ ರಜೆ ಪಡೆದ ಭಾಸ್ಕರ ರಾವ್]

ಸುದೀರ್ಘ ರಜೆ ಮೇಲೆ ತೆರಳುತ್ತಿರುವ ಲೋಕಾಯುಕ್ತರು ತಮ್ಮ ಕೆಲಸಗಳನ್ನು ಉಪ ಲೋಕಾಯುಕ್ತರಿಗೆ ವಹಿಸಿಲ್ಲ. ಆದ್ದರಿಂದ ನೂರಾರು ದೂರುಗಳು ಬಾಕಿ ಉಳಿದಿವೆ. ಹಿಂದೆ ದಾಖಲಾಗಿರುವ ಪ್ರಕರಣಗಳ ತನಿಖೆಯೂ ತ್ವರಿತಗತಿಯಲ್ಲಿ ನಡೆಯುತ್ತಿಲ್ಲ. [ಲೋಕಾಯುಕ್ತ ಪದಚ್ಯುತಿಗೆ ವಿಶೇಷ ಅಧಿವೇಶನ]
ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಒನ್ ಇಂಡಿಯಾದೊಂದಿಗೆ ಮಾತನಾಡಿದ್ದು, 'ಲೋಕಾಯುಕ್ತರು ರಜೆ ತೆಗೆದುಕೊಳ್ಳಬಹುದು, ಆದರೆ, ಅವರು ತಮ್ಮ ಜವಾಬ್ದಾರಿಗಳನ್ನು ಉಪ ಲೋಕಾಯುಕ್ತರಿಗೆ ವಹಿಸಬೇಕು. ಆದರೆ, ಜವಾಬ್ದಾರಿ ಹಸ್ತಾಂತರ ಮಾಡಿಲ್ಲವಾದ್ದರಿಂದ ಕೆಲಸಗಳ ಬಾಕಿ ಉಳಿಯುತ್ತಿರಬಹುದು' ಎಂದು ಹೇಳಿದ್ದಾರೆ.
ಕರ್ನಾಟಕದ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ವಿಧೇಯಕ -2015ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಸೆಪ್ಟೆಂಬರ್ನಲ್ಲಿ ವಿಶೇಷ ವಿಧಾನ ಮಂಡಲ ಅಧಿವೇಶನ ನಡೆಸಿ, ಲೋಕಾಯುಕ್ತರನ್ನು ಪದಚ್ಯತಿಗೊಳಿಸುವ ನಿರ್ಣಯವನ್ನು ಮಂಡನೆ ಮಾಡುವ ಸಾಧ್ಯತೆ ಇದೆ.
ಸರ್ಕಾರ ಮತ್ತು ಪ್ರತಿಪಕ್ಷಗಳು ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಆಯ್ಕೆ ವಿಚಾರದಲ್ಲಿ ಬ್ಯುಸಿಯಾಗಿವೆ. ಮೇಯರ್, ಉಪ ಮೇಯರ್ ಆಯ್ಕೆಯ ಚುನಾವಣೆ ಮುಗಿದ ಬಳಿಕ ಸರ್ಕಾರ ವಿಶೇಷ ಅಧಿವೇಶನದತ್ತ ಗಮನಹರಿಸುವ ಸಾಧ್ಯತೆ ಇದೆ. ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಲೋಕಾಯುಕ್ತ ಪದಚ್ಯುತಿಗೆ ಈಗಾಗಲೇ ಬೆಂಬಲ ಸೂಚಿಸಿವೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications