ಸೆ.30ರ ತನಕ ರಜೆ ಪಡೆದ ಲೋಕಾಯುಕ್ತ ಭಾಸ್ಕರರಾವ್
ಬೆಂಗಳೂರು, ಆ. 31 : ಕರ್ನಾಟಕ ಲೋಕಾಯುಕ್ತದಲ್ಲಿನ ಸಾಕಷ್ಟು ಕೆಲಸಗಳು ಬಾಕಿ ಉಳಿದಿವೆ. ಇದರ ನಡುವೆಯೇ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರರಾವ್ ಅವರು ಸೆಪ್ಟೆಂಬರ್ 30ರ ತನಕ ರಜೆಯನ್ನು ವಿಸ್ತರಣೆ ಮಾಡಿದ್ದಾರೆ. ಉಪ ಲೋಕಾಯುಕ್ತರಿಗೆ ಅವರು ತಮ್ಮ ಕೆಲಸಗಳನ್ನು ಹಸ್ತಾಂತರ ಮಾಡಿಲ್ಲ.
ಲೋಕಾಯುಕ್ತದಲ್ಲಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಭಾಸ್ಕರರಾವ್ ಪುತ್ರ ಅಶ್ವಿನ್ ರಾವ್ ಬಂಧನವಾದ ನಂತರ ಲೋಕಾಯುಕ್ತರು ರಜೆ ಹಾಕಿದ್ದರು. ಜುಲೈ 17ರಿಂದ ಆ.17ರ ತನಕ ರಜೆ ಹಾಕಿದ್ದರು. ನಂತರ ಅದನ್ನು ಆ.31ರ ತನಕ ವಿಸ್ತರಣೆ ಮಾಡಿದರು. ಈಗ ಅದನ್ನು ಸೆಪ್ಟೆಂಬರ್ 30ರ ತನಕ ವಿಸ್ತರಣೆ ಮಾಡಿದ್ದಾರೆ. [15 ದಿನಗಳ ರಜೆ ಪಡೆದ ಭಾಸ್ಕರ ರಾವ್]

ಸುದೀರ್ಘ ರಜೆ ಮೇಲೆ ತೆರಳುತ್ತಿರುವ ಲೋಕಾಯುಕ್ತರು ತಮ್ಮ ಕೆಲಸಗಳನ್ನು ಉಪ ಲೋಕಾಯುಕ್ತರಿಗೆ ವಹಿಸಿಲ್ಲ. ಆದ್ದರಿಂದ ನೂರಾರು ದೂರುಗಳು ಬಾಕಿ ಉಳಿದಿವೆ. ಹಿಂದೆ ದಾಖಲಾಗಿರುವ ಪ್ರಕರಣಗಳ ತನಿಖೆಯೂ ತ್ವರಿತಗತಿಯಲ್ಲಿ ನಡೆಯುತ್ತಿಲ್ಲ. [ಲೋಕಾಯುಕ್ತ ಪದಚ್ಯುತಿಗೆ ವಿಶೇಷ ಅಧಿವೇಶನ]
ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಒನ್ ಇಂಡಿಯಾದೊಂದಿಗೆ ಮಾತನಾಡಿದ್ದು, 'ಲೋಕಾಯುಕ್ತರು ರಜೆ ತೆಗೆದುಕೊಳ್ಳಬಹುದು, ಆದರೆ, ಅವರು ತಮ್ಮ ಜವಾಬ್ದಾರಿಗಳನ್ನು ಉಪ ಲೋಕಾಯುಕ್ತರಿಗೆ ವಹಿಸಬೇಕು. ಆದರೆ, ಜವಾಬ್ದಾರಿ ಹಸ್ತಾಂತರ ಮಾಡಿಲ್ಲವಾದ್ದರಿಂದ ಕೆಲಸಗಳ ಬಾಕಿ ಉಳಿಯುತ್ತಿರಬಹುದು' ಎಂದು ಹೇಳಿದ್ದಾರೆ.
ಕರ್ನಾಟಕದ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ವಿಧೇಯಕ -2015ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಸೆಪ್ಟೆಂಬರ್ನಲ್ಲಿ ವಿಶೇಷ ವಿಧಾನ ಮಂಡಲ ಅಧಿವೇಶನ ನಡೆಸಿ, ಲೋಕಾಯುಕ್ತರನ್ನು ಪದಚ್ಯತಿಗೊಳಿಸುವ ನಿರ್ಣಯವನ್ನು ಮಂಡನೆ ಮಾಡುವ ಸಾಧ್ಯತೆ ಇದೆ.
ಸರ್ಕಾರ ಮತ್ತು ಪ್ರತಿಪಕ್ಷಗಳು ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಆಯ್ಕೆ ವಿಚಾರದಲ್ಲಿ ಬ್ಯುಸಿಯಾಗಿವೆ. ಮೇಯರ್, ಉಪ ಮೇಯರ್ ಆಯ್ಕೆಯ ಚುನಾವಣೆ ಮುಗಿದ ಬಳಿಕ ಸರ್ಕಾರ ವಿಶೇಷ ಅಧಿವೇಶನದತ್ತ ಗಮನಹರಿಸುವ ಸಾಧ್ಯತೆ ಇದೆ. ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಲೋಕಾಯುಕ್ತ ಪದಚ್ಯುತಿಗೆ ಈಗಾಗಲೇ ಬೆಂಬಲ ಸೂಚಿಸಿವೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications