Karnataka Lokayukta: ಬೆಳ್ಳಂಬೆಳಗ್ಗೆಯೇ ರಾಜ್ಯದ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್
ಬೆಂಗಳೂರು, ಜನವರಿ 31: ಇಂದು ಬೆಳ್ಳಂಬೆಳಗ್ಗೆಯೇ ರಾಜ್ಯದ ವಿವಿಧ ಜಿಲ್ಲೆಯ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಳಗಾವಿ, ಬಾಗಲಕೋಟೆ, ರಾಯಚೂರು ಹಾಗೂ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಳಗಾವಿ ನಗರದ ಅನಗೋಳದಲ್ಲಿರುವ, ಬೆಳಗಾವಿ ಪ್ರಭಾರಿ ಸಬ್ ರಿಜಿಸ್ಟರ್ ಸಚಿನ್ ಮಂಡೇದ್ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮನೆ, ಕಚೇರಿ ಸೇರಿದಂತೆ ಸಚಿನ್ ಮಂಡೇದ್ಗೆ ಸಂಬಂಧಿಸಿದ 3 ಕಡೆಗಳಲ್ಲಿ ದಾಳಿ ನಡೆಸಲಾಗಿದೆ.

ಇನ್ನು ಬೆಳಗಾವಿ ಜಿಲ್ಲೆಯ ಹಾರೂಗೇರಿ ವೆಟರ್ನರಿ ಇನ್ಸ್ಪೆಕ್ಟರ್ ಸಂಜಯ್ ಎನ್ನುವವರ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ. ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ಸಂಜಯ್ ನಿವಾಸದ ಮೇಲೆ ಹಾಗೂ ಕಚೇರಿಯ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ದಾಖಲೆಗಳ ಪರಿಶೀಲನೆ ಮುಂದುವರಿಸಿದ್ದಾರೆ.
ಬೆಂಗಳೂರಿನಲ್ಲಿಯೂ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ಬಿಬಿಎಂಪಿ ಎಂಜಿನಿಯರಿಂಗ್ ವಿಭಾಗದ ಎಇಇ ಮಾಧವ ರಾವ್ ಎನ್ನುವವರ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮುಂದುವರಿಸಿದ್ದಾರೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ












Click it and Unblock the Notifications