ಲೋಕಾಯುಕ್ತರಿಗೆ ಚೂರಿ ಇರಿದಾತನ ಹಿಂದೆ ಸರಕಾರಿ ಅಧಿಕಾರಿಗಳ ಲಂಚದ ಕಥೆ!
ಬೆಂಗಳೂರು, ಮಾರ್ಚ್ 7: ಕರ್ನಾಟಕದ ಲೋಕಾಯುಕ್ತ ನ್ಯಾ. ಪಿ. ವಿಶ್ವನಾಥ ಶೆಟ್ಟಿ ಮೇಲೆ ಕಚೇರಿಯಲ್ಲೇ ಚಾಕುವಿನಿಂದ ಇರಿದವನ ಹಿನ್ನಲೆಯನ್ನು ಪೊಲೀಸರು ಕೆದಕಿದ್ದಾರೆ.
ಪ್ರಾಥಮಿಕ ತನಿಖೆಗಳ ಪ್ರಕಾರ ಚೂರಿ ಹಾಕಿದವ ತೇಜರಾಜ್ ಶರ್ಮಾ ಎಂದು ತಿಳಿದು ಬಂದಿದೆ. ಈತ ರಾಜಸ್ಥಾನ ಮೂಲದವನಾಗಿದ್ದು ತುಮಕೂರಿನಲ್ಲಿ ವಾಸವಾಗಿದ್ದ ಎಂದು ಗೊತ್ತಾಗಿದೆ.
ತೇಜರಾಜ್ ಶರ್ಮ ಅಂಗಡಿಯೊಂದನ್ನು ಹೊಂದಿದ್ದು ಸರಕಾರಿ ಕಚೇರಿಗಳಿಗೆ ಪೀಠೋಪಕರಣಗಳನ್ನು ಪೂರೈಸುತ್ತಿದ್ದ. ಈತ ಲಂಚ ಕೇಳಿದ್ದಾರೆ ಎಂಬ ಕಾರಣಕ್ಕೆ ಕೆಲವು ಸರಕಾರಿ ಅಧಿಕಾರಿಗಳ ವಿರುದ್ಧ ಅಸಮಧಾನಗೊಂಡಿದ್ದ.

ಲೋಕಾಯುಕ್ತರಿಗೆ ಮೂರು ದೂರು
ಪ್ರಾಥಮಿಕ ವಿಚಾರಣೆಯಲ್ಲಿ ಆತ ಕೆಲವು ವಿಚಾರಗಳನ್ನು ಬಾಯಿ ಬಿಟ್ಟಿದ್ದು, ಲೋಕಾಯುಕ್ತರ ಬಳಿ ಕೆಲವು ಸರಕಾರಿ ಅಧಿಕಾರಿಗಳ ವಿರುದ್ಧ ಮೂರು ದೂರು ನೀಡಿದ್ದಾಗಿ ಹೇಳಿದ್ದಾನೆ. ಆದರೆ ಇದರ ವಿಚಾರಣೆ ನಡೆಸಿದ್ದ ಲೋಕಾಯುಕ್ತರು ಮೂರು ದೂರುಗಳನ್ನು ರದ್ದುಪಡಿಸಿದ್ದರು ಎಂದಿದ್ದಾನೆ.

ಹತಾಶೆಯಿಂದ ಕೃತ್ಯ
ಈ ಬಗ್ಗೆ ಆತ ಆಕ್ರೋಶಗೊಂಡಿದ್ದ ಮತ್ತು ಕೊನೆಯದಾಗಿ ಹತಾಶೆಯಿಂದ ಈ ಗಂಭೀರ ಕೃತ್ಯಕ್ಕೆ ಕೈ ಹಾಕಿದ್ದ. ತಾನು ಹತಾಶೆಗೊಂಡಿದ್ದು ಇದಕ್ಕೂ ಮೊದಲು ಈ ಕೃತ್ಯ ಎಸಗಲು ಯೋಚಿಸಿದ್ದೆ ಎಂದು ಶರ್ಮಾ ತನಿಖೆ ವೇಳೆ ಬಾಯಿ ಬಿಟ್ಟಿದ್ದಾನೆ.
ತನ್ನ ಪ್ರಕರಣಗಳ ಬಗ್ಗೆ ಚರ್ಚೆ ನಡೆಸಲು ಆತ ಲೋಕಾಯುಕ್ತ ನ್ಯಾಯಮೂರ್ತಿಗಳ ಕಚೇರಿಗೆ ಇಂದು ಬಂದಿದ್ದ.
ಆತನಿಗೆ ಲೋಕಾಯುಕ್ತರ ಭೇಟಿಗೆ ಅವಕಾಶ ನೀಡಲಾಗಿತ್ತು ಮತ್ತು ಈ ಸಂಬಂಧ ಆತನಿಗೆ ಸ್ಲಿಪ್ ಕೂಡ ನೀಡಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

ನುಗ್ಗಿ ದಾಳಿ
ಯಾವಾಗ ಕಚೇರಿ ಒಳಕ್ಕೆ ಆತನನ್ನು ಕರೆಯಲಾಯಿತೋ ಆಗ ಆತ ತನ್ನ ಚೂರಿ ತೆಗೆದು ನ್ಯಾ. ಶೆಟ್ಟಿ ಮೇಲೆ ಮೂರು ಬಾರಿ ಇರಿದಿದ್ದಾನೆ. ಈ ಸಂದರ್ಭದಲ್ಲಿ ಅಲ್ಲಿ ವಾಗ್ವಾದಗಳು ಏನಾದರೂ ನಡೆದಿವೆಯೇ ಎಂಬ ಬಗ್ಗೆ ಯಾವುದೇ ಮಾಹಿತಿಗಳಿಲ್ಲ. ಚಾಕು ಇರಿಯುವ ವೇಳೆ ಲೋಕಾಯುಕ್ತರ ಗನ್ ಮ್ಯಾನ್ ಕೊಠಡಿಯಿಂದ ಹೊರಗಿದ್ದ.

ಕೊಠಡಿ ಹೊರಗಿದ್ದ ಗನ್ ಮ್ಯಾನ್
ನಿಯಮಗಳ ಪ್ರಕಾರ ಲೋಕಾಯುಕ್ತರಿಗೆ ಸಾರ್ವಜನಿಕರು ದೂರು ನೀಡಡುವ ವೇಳೆ ಅಲ್ಲಿ ಯಾರೂ ಉಪಸ್ಥಿತರಿರಬಾರದು. ಹೀಗಾಗಿ ಗನ್ ಮ್ಯಾನ್ ಹೊರಗಿದ್ದರು. ಈ ಘಟನೆ ಸಂಪೂರ್ಣ ಪೂರ್ವ ನಿಯೋಜಿತ ಎಂದು ಪೊಲೀಸರು ಹೇಳಿದ್ದಾರೆ. ಲೋಕಾಯುಕ್ತರನ್ನು ಕೊಲ್ಲುವ ಯೋಜನೆ ರೂಪಿಸಿಯೇ ಆತ ಬಂದಿದ್ದ ಎಂದು ಪೊಲೀಸರು ವಿಶ್ಲೇಷಿಸಿದ್ದಾರೆ.

ಮೂರು ಬಾರಿ ಇರಿತ
ಘಟನೆ ಬಗ್ಗೆ ವಿವರ ನೀಡಿರುವ ಪ್ರತ್ಯಕ್ಷದರ್ಶಿ ಜೇ ಅನ್ನಾ, "ಓರ್ವ ವ್ಯಕ್ತಿ ಲೋಕಾಯುಕ್ತರನ್ನು ಕೊಲ್ಲಲು ಯತ್ನಿಸಿದ. ಆತ ಚೂರಿಯಿಂದ ಮೂರು ಬಾರಿ ನ್ಯಾಯಮೂರ್ತಿಗಳಿಗೆ ಇರಿದ. ನಂತರ ಅವರು ನೆಲಕ್ಕೆ ಬಿದ್ದರು. ಸಿದ್ದರಾಮಯ್ಯ ಸರಕಾರ ನಮಗೆ ಯಾವ ರೀತಿಯ ಭದ್ರತೆ ನೀಡಿದೆ ಎಂಬುದನ್ನು ನೀವು ನೋಡಬಹುದು. ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ," ಎಂದು ಅವರು ಹೇಳಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications