ಮೂರನೇ ಬಾರಿ ರಜೆ ವಿಸ್ತರಣೆ ಮಾಡಿದ ನ್ಯಾ. ಭಾಸ್ಕರರಾವ್
ಬೆಂಗಳೂರು, ಸೆಪ್ಟೆಂಬರ್ 29 : ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರರಾವ್ ಮತ್ತೊಮ್ಮೆ ಸರಣಿ ರಜೆ ಪಡೆದಿದ್ದಾರೆ. ಅಕ್ಟೋಬರ್ 21ರ ತನಕ ಅವರು ರಜೆಯನ್ನು ವಿಸ್ತರಣೆ ಮಾಡಿದ್ದಾರೆ. ಲೋಕಾಯುಕ್ತದಲ್ಲಿನ ಭ್ರಷ್ಟಾಚಾರ ಪ್ರಕರಣದಲ್ಲಿ ಪುತ್ರನ ಬಂಧನವಾದ ಬಳಿಕ ಲೋಕಾಯುಕ್ತರು ಸರಣಿ ರಜೆ ಪಡೆಯುತ್ತಿದ್ದಾರೆ.
ಒನ್ ಇಂಡಿಯಾಕ್ಕೆ ಲಭ್ಯವಾಗಿರುವ ಮಾಹಿತಿಯಂತೆ ಲೋಕಾಯುಕ್ತದ ರಿಜಿಸ್ಟ್ರಾರ್ ಅವರಿಗೆ ರಜೆ ವಿಸ್ತರಣೆ ಮಾಡುವ ಕುರಿತು ನ್ಯಾ.ಭಾಸ್ಕರರಾವ್ ಪತ್ರ ಬರೆದಿದ್ದಾರೆ. ಆದರೆ, ರಜೆ ವಿಸ್ತರಣೆ ಮಾಡಲು ನಿಖರವಾದ ಕಾರಣವನ್ನು ಅವರು ಪತ್ರದಲ್ಲಿ ತಿಳಿಸಿಲ್ಲ. [ಸೆ.30ರ ತನಕ ರಜೆ ವಿಸ್ತರಣೆ ಮಾಡಿದ ಭಾಸ್ಕರರಾವ್]

3ನೇ ಬಾರಿ ರಜೆ ವಿಸ್ತರಣೆ : ಮೊದಲು ಭಾಸ್ಕರರಾವ್ ಅವರು ಜುಲೈ 17ರಿಂದ ಆ.17ರ ತನಕ ರಜೆ ಹಾಕಿದ್ದರು. ನಂತರ ಅದನ್ನು ಸೆಪ್ಟೆಂಬರ್ 30ರ ತನಕ ವಿಸ್ತರಣೆ ಮಾಡಿದ್ದರು. ಸದ್ಯ, ಅಕ್ಟೋಬರ್ 21ರ ತನಕ ಮತ್ತೆ ರಜೆ ವಿಸ್ತರಣೆ ಮಾಡಿದ್ದಾರೆ. [ಲೋಕಾದಲ್ಲಿ ಭ್ರಷ್ಟಾಚಾರ, ಚಾರ್ಜ್ ಶೀಟ್ ವಿವರ]
ಸರಣಿ ರಜೆಗಳನ್ನು ಪಡೆಯುತ್ತಿರುವ ನ್ಯಾಯಮೂರ್ತಿ ಭಾಸ್ಕರರಾವ್ ಅವರು ತಮ್ಮ ಕೆಲಸಗಳನ್ನು ಯಾರಿಗೂ ಹಸ್ತಾಂತರ ಮಾಡಿಲ್ಲ. ಆದ್ದರಿಂದ, ಲೋಕಾಯುಕ್ತ ಕಚೇರಿಯಲ್ಲಿ ಹಲವಾರು ಕಡತಗಳು ಬಾಕಿ ಉಳಿದಿವೆ. ಹೊಸ ದೂರುಗಳ ತನಿಖೆಯೂ ನಡೆಯುತ್ತಿಲ್ಲ. [ಲೋಕಾಯುಕ್ತರನ್ನು ಬಂಧಿಸಿ, ವಿಚಾರಿಸಲು ಸಕಾಲ]
ಒನ್ ಇಂಡಿಯಾಕ್ಕೆ ಲಭ್ಯವಾಗಿರುವ ಮಾಹಿತಿಯಂತೆ ಲೋಕಾಯುಕ್ತ ಕಚೇರಿಯಲ್ಲಿ ಕೆಲಸಗಳು ಬಾಕಿ ಇರುವ ಬಗ್ಗೆ ರಾಜ್ಯಪಾಲರು ಮತ್ತು ಅಡ್ವೊಕೇಟ್ ಜನರಲ್ ಅವರಿಗೆ ಮಾಹಿತಿ ರವಾನಿಸಲಾಗಿದೆ. ರಾಜ್ಯಪಾಲರು ಮತ್ತು ಅಡ್ವೊಕೇಟ್ ಜನರಲ್ ಅವರು ಈ ಕುರಿತು ಚರ್ಚಿಸಿ, ಮುಂದಿನ ತೀರ್ಮಾನವನ್ನು ಕೈಗೊಳ್ಳುವ ಸಾಧ್ಯತೆ ಇದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications