ಕರ್ನಾಟಕದಿಂದ ಯಾತ್ರೆ ಹೋಗಲು ಆಧಾರ್ ಕಾರ್ಡ್ ಕಡ್ಡಾಯ
ಬೆಂಗಳೂರು, ಸೆಪ್ಟೆಂಬರ್ 01 : ಕರ್ನಾಟಕ ಸರ್ಕಾರ ದೇವರ ದರ್ಶನಕ್ಕೆ ಹೋಗುವವರಿಗೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದೆ. ಸಬ್ಸಿಡಿ ಹಣ ದುರ್ಬಳಕೆ ತಡೆಯಲು ಆಧಾರ್ ಕಡ್ಡಾಯಗೊಳಿಸಲಾಗಿದೆ.
ಆಗಸ್ಟ್ 17ರಂದು ಕರ್ನಾಟಕ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ. ಚಾರ್ ಧಮ್ ಯಾತ್ರಿಗಳಿಗೆ ನೀಡಲಾಗುವ ಸಬ್ಸಿಡಿ ಬಗ್ಗೆ ಮಾರ್ಗಸೂಚಿ ಪ್ರಕಟಿಸಿದ್ದು, ಆಧಾರ್ ಕಡ್ಡಾಯ ಎಂದು ಹೇಳಿದೆ.

ಬದ್ರಿನಾಥ್, ಕೇದಾರನಾಥ್, ಗಂಗೋತ್ರಿ ಮತ್ತು ಯಮುನೇತ್ರಿ ತೀರ್ಥ ಯಾತ್ರೆಗೆ ಹೋಗುವವರು ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ನೀಡಬೇಕು. ಈ ಯಾತ್ರಾರ್ಥಿಗಳಿಗೆ ಸರ್ಕಾರ 20 ಸಾವಿರ ರೂ. ಸಹಾಯಧವನ್ನು ನೀಡುತ್ತದೆ.
ಕರ್ನಾಟಕದಲ್ಲಿ ಪ್ರತಿ ವರ್ಷ ಸುಮಾರು 1000 ಜನರು ಸಬ್ಸಿಡಿ ಪಡೆಯುತ್ತಾರೆ. ಈ ವರ್ಷ ಯಾತ್ರಿಕರ ಸಂಖ್ಯೆ ಹೆಚ್ಚಾಗಲಿದೆ. ಸಬ್ಸಿಡಿ ಹಣದ ದುರುಪಯೋಗ ತಡೆಯಲು ಆಧಾರ್ ಕಡ್ಡಾಯಗೊಳಿಸಲಾಗಿದೆ ಎಂದು ಮುಜರಾಯಿ ಇಲಾಖೆ ಹೇಳಿದೆ.
ಈ ಯಾತ್ರೆ ತೆರಳುವವರು ಕರ್ನಾಟಕ ಖಾಯಂ ನಿವಾಸಿಯಾಗಿರಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧೀನಕ್ಕೆ ಒಳಪಟ್ಟ ಸಂಸ್ಥೆಗಳ ಮೂಲಕವೇ ಯಾತ್ರೆ ಕೈಗೊಳ್ಳಬೇಕು ಎಂಬ ನಿಯಮವಿದೆ.
ಯಾತ್ರೆ ಪೂರ್ಣಗೊಂಡ ಬಳಿಕ ಪ್ರವಾಸಿ ಸಂಸ್ಥೆಗಳಿಂದ ದೃಢೀಕೃತ ಪ್ರಮಾಣ ಪತ್ರ ಮತ್ತು ಯಾತ್ರಾ ಸ್ಥಳಗಳಲ್ಲಿ ಪಡೆದ ಪಿಲಿಗ್ರಿಮಿ ಕಾರ್ಡ್ ಅನ್ನು ಪಡೆದಿರಬೇಕು. ಯಾತ್ರೆ ಮುಗಿದ ಬಳಿಕ ನಾಲ್ಕು ತಿಂಗಳಿನಲ್ಲಿ ಅರ್ಜಿ ಸಲ್ಲಿಸಿದರೆ ಸಬ್ಸಿಡಿ ಹಣ ಪಾವತಿಯಾಗುತ್ತದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications