Karnataka Dams Water Level News: ಜೂನ್ 9ರಂದು ಈ ಜಲಾಶಯಗಳ ಒಳ ಹರಿವು ಹೆಚ್ಚಳ, ಪೂರ್ಣ ಪಟ್ಟಿ ಇಲ್ಲಿದೆ
ಬೆಂಗಳೂರು, ಜೂನ್ 09: ಒಂದೇ ವಾರದಲ್ಲಿ ಕರ್ನಾಟಕದಲ್ಲಿ ರಾಜ್ಯಾದ್ಯಂತ ಆವರಿಸಿರುವ ಮುಂಗಾರು ಮಳೆ ರಣಮಳೆಯಾಗಿ ಪರಿವರ್ತನೆಗೊಂಡಿದೆ. ಕೆಲವು ಜಿಲ್ಲೆಗಳಿಗೆ ಸೋಮವಾರ (ಜೂನ್ 10) ವರೆಗೆ 'ರೆಡ್ ಅಲರ್ಟ್' ಘೋಷಿಸಲಾಗಿದೆ. ಅಂದರೆ ಈ ಜಿಲ್ಲೆಗಳಲ್ಲಿ ಗರಿಷ್ಠ 20 ಸೆಂಟಿ ಮೀಟರ್ಗೂ ಹೆಚ್ಚು ಮಳೆ ಬರುವ ಮುನ್ಸೂಚನೆ ಇದೆ. ಈಗಾಗಲೇ ವಾರದಿಂದ ಬಂದ ಮಳೆಗೆ ರಾಜ್ಯದ ಈ ಕೆಳಗಿನ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ನದಿಗಳು ಮೈದುಂಬಿಕೊಂಡಿವೆ.
ರಾಜ್ಯಕ್ಕೆ ಕಳೆದ ಶನಿವಾರ (ಜೂನ್ 01) ಆಸುಪಾಸಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿತ್ತು. ಇಂದಿನವರೆಗೆ ಬಹುತೇಕ ಎಲ್ಲ ಕಡೆ ಅದರಲ್ಲೂ ಕಾವೇರಿ, ಕಬಿನಿ, ಹಾರಂಗಿ, ಆಲಮಟ್ಟಿ, ಕೆಆರ್ಎಸ್ ಹಾಗೂ ಇನ್ನಿತರ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕವಾಗಿ ಮುಂಗಾರು ಸುರಿದಿದೆ. ಭಾರೀ ಮಳೆಗೆ ಕಾವೇರಿ, ತುಂಗಾ, ಭದ್ರಾ, ಶರಾವತಿ ಸೇರಿದಂತೆ ಅನೇಕ ನದಿಗಳ ಒಳಹರಿವು ಹೆಚ್ಚಾಗಿದೆ. ಇದರಿಂದ ಆಯಾ ಆಣೆಕಟ್ಟುಗಳಲ್ಲಿ (ಡ್ಯಾಮ್) ಒಳ ಮತ್ತು ಹೊರ ಹರಿವು ಏರಿಕೆ ಆಗಿದೆ.

ಕರ್ನಾಟಕ ರಾಜ್ಯದ ಪ್ರಮುಖ ಆಣೆಕಟ್ಟುಗಳ ಇಂದಿನ ಭಾನುವಾರದ (ಜೂನ್ 09) ಒಳಹರಿವು, ಸಂಗ್ರಹಣೆ, ಹೊರ ಹರಿವು ಮತ್ತು ಒಟ್ಟು ಸಂಗ್ರಹಣಾ ಸಾಮರ್ಥ್ಯದ ಮಾಹಿತಿಗೆ ಮುಂದೆ ಓದಿ.
ಕೃಷ್ಣರಾಜಸಾಗರ (KRS) ಆಣೆಕಟ್ಟು
ಒಟ್ಟು ಸಾಮರ್ಥ್ಯ -49.45 ಟಿಎಂಸಿ
ಇಂದಿನ ನೀರು ಸಂಗ್ರಹ - 13.14 ಟಿಎಂಸಿ
ಹೊರ ಹರಿವು - 444 ಕ್ಯೂಸೆಕ್ಸ್
ಒಳ ಹರಿವು- 1423 ಕ್ಯೂಸೆಕ್ಸ್
ಹಾರಂಗಿ ಜಲಾಶಯ
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ಸಂಗ್ರಹ- 3.6 ಟಿಎಂಸಿ
ಹೊರ ಹರಿವು - 200 ಕ್ಯೂಸೆಕ್ಸ್
ಒಳಹರಿವು - 289 ಕ್ಯೂಸೆಕ್ಸ್

ಹೇಮಾವತಿ ಜಲಾಶಯ
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ಸಾಮರ್ಥ್ಯ- 10.07 ಟಿಎಂಸಿ
ಹೊರ ಹರಿವು - 250 ಕ್ಯೂಸೆಕ್ಸ್
ಒಳಹರಿವು - 388 ಕ್ಯೂಸೆಕ್ಸ್
ಭದ್ರಾ ಆಣೆಕಟ್ಟು
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ಸಾಮರ್ಥ್ಯ- 14.39 ಟಿಎಂಸಿ
ಒಳಹರಿವು - 445 ಕ್ಯೂಸೆಕ್ಸ್
ಹೊರ ಹರಿವು - 341 ಕ್ಯೂಸೆಕ್ಸ್
ಕಬಿನಿ ಜಲಾಶಯ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ಸಾಮರ್ಥ್ಯ- 7.82 ಟಿಎಂಸಿ
ಒಳಹರಿವು - 1658 ಕ್ಯೂಸೆಕ್ಸ್
ಹೊರ ಹರಿವು -300 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ
ಒಟ್ಟು ಸಾಮರ್ಥ್ಯ- 151.75 ಟಿಎಂಸಿ
ಇಂದಿನ ಸಾಮರ್ಥ್ಯ- 14.70 ಟಿಎಂಸಿ
ಒಳಹರಿವು - 924 ಕ್ಯೂಸೆಕ್ಸ್
ಹೊರ ಹರಿವು - 2456 ಕ್ಯೂಸೆಕ್ಸ್
ತುಂಗಭದ್ರಾ ಜಲಾಶಯ
ಒಟ್ಟು ಸಾಮರ್ಥ್ಯ - 105.79 ಟಿಎಂಸಿ
ಇಂದಿನ ಸಾಮರ್ಥ್ಯ- 05.03 ಟಿಎಂಸಿ
ಒಳಹರಿವು - 1490 ಕ್ಯೂಸೆಕ್ಸ್
ಹೊರ ಹರಿವು - 43 ಕ್ಯೂಸೆಕ್ಸ್
ಕೆಲವು ಜಿಲ್ಲೆಗಳಿಗೆ 'ರೆಡ್ ಅಲರ್ಟ್'
ಕರ್ನಾಟಕ ರಾಜ್ಯದಲ್ಲಿ ಮುಂದಿನ ಮೂರು ದಿನ ಆರು ಜಿಲ್ಲೆಗಳಿಗೆ ಅತ್ಯಧಿಕ ಭಾರಿ ಮಳೆ ಆಗಲಿದೆ. ಹೀಗಾಗಿ ಈ ಜಿಲ್ಲೆಗಳಿಗೆ 'ರೆಡ್ ಅಲರ್ಟ್' ಘೋಷಿಸಲಾಗಿದೆ. ಇಲ್ಲಿ ಗರಿಷ್ಠ 20 ಸೆಂಟಿ ಮೀಟರ್ಗೂ ಹೆಚ್ಚು ಮಳೆ ದಾಖಲಾಗಿದೆ. ಉಳಿದ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾನುವಾರ ಐಎಂಡಿ ತಜ್ಞರು ಮಾಹಿತಿ ನೀಡಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications