Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ಡಿಸೆಂಬರ್ 16ರ ಅಂಕಿಅಂಶಗಳು
Karnataka Reservoirs Water Level: ರಾಜ್ಯಾದಂತ ಹಿಂದೆಂದೂ ಕಂಡುಕಂಡರಿಯದ ವಿಪರೀತ ಚಳಿ ಮುಂದುವರೆದಿದೆ. ಈ ನಡುವೆಯೇ ಕೆಲವೇ ಭಾಗಗಳಲ್ಲಿ ಮಾತ್ರ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ. ಈಗಾಗಲೇ ಮುಂಗಾರು ಮಳೆ ವೇಳೆ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಹಾಗಾದ್ರೆ, ಇಂದು (ಡಿಸೆಂಬರ್ 16) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜಸಾಗರ (KRS) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮುಂಗಾರು ಮಳೆ ಆರ್ಭಟದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ತುಂಬಿ ಹರಿದಿವೆ. ಅಲ್ಲದೆ, ಪ್ರಮುಖ ಜಲಾಶಯಗಳು ಭರ್ತಿ ಆಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಹೆಚ್ಚಾಗಿದೆ. ಕೆಲ ಜಲಾಶಯಗಳು ಇದೇ ವರ್ಷ ಎರಡು ಬಾರಿ ಭರ್ತಿ ಆಗಿವೆ.

ಸದ್ಯ ರಾಜ್ಯದಲ್ಲಿ ಮಳೆರಾಯನ ಆರ್ಭಟ ತಗ್ಗಿದ್ದು, ಚಳಿ ಆವರಿಸಿದೆ. ಈ ನಡುವೆಯೇ ಕೆಲವು ಭಾಗಗಳ ಅಲ್ಲಲ್ಲಿ ಮಾತ್ರ ಜಿನುಗು ಮಳೆಯಾಗುತ್ತುದೆ. ಉಳಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭೀಕರ ಚಳಿ ವಾತಾವರಣ ಮುಂದುವರೆದಿದ್ದು, ಜನರು ಮನೆಯಿಂದ ಹೊರಗಡೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಗ್ಗೆ ಹಾಗೂ ಸಂಜೆ ವೇಳೆ ದಟ್ಟ ಮಂಜಿನ ಜೊತೆ ಶೀತಾಗಳಿ ಬೀಸುತ್ತಿದೆ.
ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಚಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಹಾಗಾದ್ರೆ, ಇದೀಗ ಪ್ರಸ್ತುತ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
1. ಕೆಆರ್ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 123.18 ಅಡಿ
* ಒಳಹರಿವು - 2,498 ಕ್ಯೂಸೆಕ್
* ಹೊರಹರಿವು - 2,292 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 65 ಅಡಿ
* ಇಂದಿನ ನೀರಿನ ಮಟ್ಟ - 56.56 ಅಡಿ
* ಒಳಹರಿವು - 952 ಕ್ಯೂಸೆಕ್
* ಹೊರಹರಿವು - 633 ಕ್ಯೂಸೆಕ್
3. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1807.30 ಅಡಿ
* ಒಳಹರಿವು - 952 ಕ್ಯೂಸೆಕ್
* ಹೊರಹರಿವು - 3986.38 ಕ್ಯೂಸೆಕ್
4. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 181.1 ಅಡಿ
* ಒಳಹರಿವು - 220 ಕ್ಯೂಸೆಕ್
* ಹೊರಹರಿವು - 509 ಕ್ಯೂಸೆಕ್
5. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 129 ಅಡಿ
* ಇಂದಿನ ನೀರಿನ ಮಟ್ಟ - 101.26 ಅಡಿ
* ಒಳಹರಿವು - 149 ಕ್ಯೂಸೆಕ್
* ಹೊರಹರಿವು - 300 ಕ್ಯೂಸೆಕ್
6. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 117 ಅಡಿ
* ಇಂದಿನ ನೀರಿನ ಮಟ್ಟ - 103.21 ಅಡಿ
* ಒಳಹರಿವು - 737 ಕ್ಯೂಸೆಕ್
* ಹೊರಹರಿವು - 4,300 ಕ್ಯೂಸೆಕ್
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications