ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ, ಏನಾಗಲಿದೆ?
ಎರಡು ಕ್ಷೇತ್ರಗಳನ್ನು ಆಡಳಿತಾರೂಢ ಕಾಂಗ್ರೆಸ್ ಉಳಿಸಿಕೊಳ್ಳಲು ಯತ್ನಿಸುತ್ತಿದೆ. ಆದರೆ, ಒಂದು ಪಕ್ಷ ಸೋಲು ಅನುಭವಿಸಿದರೆ, 2018ರ ಅಸೆಂಬ್ಲಿ ಚುನಾವಣೆಯನ್ನು ಅವಧಿಗೆ ಮುನ್ನ ಎದುರಿಸಬೇಕಾದೀತು ಎಂದು ರಾಜಕೀಯ ವಿಶ್ಲೇಷಕರು ಮುನ್ಸೂಚನೆ ನೀಡಿದ್ದಾರೆ
ಮೈಸೂರು, ಮಾರ್ಚ್ 20: ಬಿಜೆಪಿ ಹಾಗೂ ಕಾಂಗ್ರೆಸ್ಸಿನ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿರುವ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದೆ. ಎರಡು ಕ್ಷೇತ್ರಗಳನ್ನು ಆಡಳಿತಾರೂಢ ಕಾಂಗ್ರೆಸ್ ಉಳಿಸಿಕೊಳ್ಳಲು ಯತ್ನಿಸುತ್ತಿದೆ.
ಆದರೆ, ಒಂದು ಪಕ್ಷ ಸೋಲು ಅನುಭವಿಸಿದರೆ, 2018ರ ಅಸೆಂಬ್ಲಿ ಚುನಾವಣೆಯನ್ನು ಅವಧಿಗೆ ಮುನ್ನ ಎದುರಿಸಬೇಕಾದೀತು ಎಂದು ರಾಜಕೀಯ ವಿಶ್ಲೇಷಕರು ಮುನ್ಸೂಚನೆ ನೀಡಿದ್ದಾರೆ.[2018ರ ಚುನಾವಣೆಗೆ ಪ್ರಚಾರ ಶುರುವಿಟ್ಟುಕೊಂಡ ಕಾಂಗ್ರೆಸ್]

ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆಗೆ ಪ್ರಚಾರ, ತಂತ್ರಗಾರಿಕೆ, ಹೊಂದಾಣಿಕೆ ಭರದಿಂದ ಸಾಗಿದೆ. ಸೋಮವಾರ(ಮಾರ್ಚ್ 20)ದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವ್ಯಾಪ್ತಿಗೆ ಒಳಪಡುವ ಈ ಎರಡು ಕ್ಷೇತ್ರಗಳನ್ನು ಕಳೆದುಕೊಂಡರೆ ಪ್ರತಿಷ್ಠೆ ಮಣ್ಣುಪಾಲಾಗಲಿದೆ. ಜತೆಗೆ ಸರ್ಕಾರವನ್ನು ಕೆಳಗಿಳಿಸಲು ವಿಪಕ್ಷಗಳು ಹಾಗಿರಲಿ, ಸ್ವತಃ ಕಾಂಗ್ರೆಸ್ಸಿಗರಿಂದಲ್ಲೇ ಒತ್ತಡ ಶುರುವಾಗಲಿದೆ.[ಸಿದ್ದು, ಎಚ್ಡಿಕೆ ಬಿಟ್ಟು ಬಿಎಸ್ ವೈ ಪರ ಒಲವು ತೋರಿದ ಓದುಗರು]
ಕಾಂಗ್ರೆಸ್ ತೊರೆದು ಬಿಜೆಪಿ ಕೈ ಹಿಡಿದಿರುವ ದಲಿತ ನಾಯಕ ಒಂದು ಕಾಲದ ಸಿದ್ದರಾಮಯ್ಯ ಅವರ ಆಪ್ತರಾದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರ ಸವಾಲನ್ನು ಸಿದ್ದರಾಮಯ್ಯ ಗೆಲ್ಲಬೇಕಿದೆ. ನಂಜನಗೂಡಿನಲ್ಲಿ ಕಾಂಗ್ರೆಸ್ಸಿನ ಕಳಲೆ ಕೇಶವಮೂರ್ತಿ ವಿರುದ್ಧ ಶ್ರೀನಿವಾಸ್ ಪ್ರಸಾದ್ ಸೆಣೆಸುತ್ತಿದ್ದಾರೆ.
ಗುಂಡ್ಲುಪೇಟೆಯಲ್ಲಿ ದಿವಂಗತ ಸಚಿವ ಮಹದೇವ್ ಪ್ರಸಾದ್ ಅವರ ಪತ್ನಿ ಗೀತಾ ಮಹದೇವಪ್ರಸಾದ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರೆ, ಬಿಜೆಪಿಯಿಂದ ನಿರಂಜನ್ ಕುಮಾರ್ ಕಣದಲ್ಲಿದ್ದಾರೆ. ಅನುಕಂಪದ ಆಧಾರ ಮೇಲೆ ಈ ಕ್ಷೇತ್ರವನ್ನು ಕಾಂಗ್ರೆಸ್ ಉಳಿಸಿಕೊಳ್ಳುವ ಸಾಧ್ಯತೆಯಿದೆ. ಆದರೆ, ನಂಜನಗೂಡು ಕ್ಷೇತ್ರದಿಂದ ಕಾಂಗ್ರೆಸ್ಸಿಗೆ ಒಳ್ಳೆ ಸುದ್ದಿ ಬರುವುದು ಕಷ್ಟ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಫಲಿತಾಂಶ 1-1 ಆದರೂ ಸಿದ್ದರಾಮಯ್ಯ ಅವರಿಗೆ ಕಷ್ಟ. ಒಂದು ವೇಳೆ ಬಿಜೆಪಿ 2 ಕ್ಷೇತ್ರಗಳನ್ನು ಗೆದ್ದರೆ, ಸಿದ್ದರಾಮಯ್ಯ ಅವರ ಸರ್ಕಾರ ಅವಧಿ ಮುಕ್ತಾಯ ಮಾಡುವುದು ಕಷ್ಟ. 2018ರ ಅಸೆಂಬ್ಲಿ ಚುನಾವಣೆಯನ್ನು ಮುಂಚಿತವಾಗಿ ಎದುರಿಸುವ ಪ್ರಸಂಗ ಎದುರಾಗಲಿದೆ ಎಂಬ ಮುನ್ಸೂಚನೆ ಸಿಕ್ಕಿದೆ.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications