ಕರ್ನಾಟಕ: ವಿದ್ಯಾರ್ಥಿಗಳಿಗೆ ಬಿಸಿಯೂಟದ ಬದಲು 2 ಕಂತುಗಳಲ್ಲಿ ಆಹಾರ ಧಾನ್ಯ ವಿತರಣೆ
ಬೆಂಗಳೂರು, ನವೆಂಬರ್ 07: ಕೊರೊನಾ ಸೋಂಕಿನಿಂದಾಗಿ ಸರ್ಕಾರಿ ಶಾಲೆಗಳಲ್ಲಿ ಕಳೆದ ಐದಾರು ತಿಂಗಳಿನಿಂದ ಬಿಸಿಯೂಟ ನೀಡಲು ಸಾಧ್ಯವಾಗಿಲ್ಲ, ಹೀಗಾಗಿ ಬಿಸಿಯೂಟದ ಬದಲು ಧಾನ್ಯ ನೀಡಲು ಸರ್ಕಾರ ಮುಂದಾಗಿದೆ.
ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಎರಡು ಕಂತುಗಳನ್ನು ಆಹಾರ ಧಾನ್ಯಗಳನ್ನು ನೀಡುತ್ತಿದೆ.
1 ರಿಂದ 5ನೇ ತರಗತಿ ವರೆಗಿನ ಮಕ್ಕಳಿದೆ ಪ್ರತಿ ದಿನ ತಲಾ 100 ಗ್ರಾಂ ಅಕ್ಕಿ ಅಥವಾ ಗೋಧಿ ಮತ್ತು ರೂ.4.97. ಅಡುಗೆ ತಯಾರಿಕಾ ವೆಚ್ಚಕ್ಕೆ ಸಮನಾಗಿ 58 ಗ್ರಾಂ. ತೊಗರಿ ಬೇಳೆ ನೀಡಲು ನಿರ್ಧರಿಸಲಾಗಿದೆ. ಅದೇ ರೀತಿ 6 ರಿಂದ 10ನೇ ತರಗತಿ ವರೆಗಿನ ಮಕ್ಕಳಿಗೆ ಪ್ರತಿನಿತ್ಯ 150 ಗ್ರಾಂ ಅಕ್ಕಿ/ಗೋಧಿ ಮತ್ತು ರೂ.7.45 ಮೊತ್ತಕ್ಕೆ ಸಮನಾಗಿ 87 ಗ್ರಾಂ ತೊಗರಿ ಬೇಳೆ ನೀಡಲು ತೀರ್ಮಾನಿಸಲಾಗಿದೆ.

ಈ ಪೈಕಿ 1 ರಿಂದ 8ನೇ ತರಗತಿ ಮಕ್ಕಳಿದೆ ಮೊದಲ ಹಂತದಲ್ಲಿ 53 ದಿನಗಳಲ್ಲಿ 45 ದಿನಗಳಿಗೆ ಅಕ್ಕಿ ಮತ್ತು ಬಾಕಿ 8 ದಿನಗಳಿಗೆ ಗೋಳಿ ಲೆಕ್ಕ ನೀಡಲು ನಿರ್ಧರಿಸಲಾಗಿದೆ.
ಮೊದಲ ಹಂತದಲ್ಲಿ ಜೂನ್ ಮತ್ತು ಜುಲೈ ತಿಂಗಳ 53 ದಿನಗಳಿಗೆ ಅನ್ವಯಿಸುವಂತೆ ಆಹಾರ ಧಾನ್ಯ ಪೂರೈಸಬೇಕು. ಈಗಾಗಲೇ ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದಿಂದ ಮೊದಲ ಹಂತದ ಆಹಾರ ಧಾನ್ಯಗಳ ಖರೀದಿ ಪ್ರಕ್ರಿಯೆ ಮುಗಿದಿದ್ದು, ಪ್ರತಿ ಜಿಲ್ಲೆ, ತಾಲೂಕುಗಳಿಗೆ ಸರಬರಾಜು ಆರಂಭಿಸಲಾಗಿದೆ.
ಮಕ್ಕಳಿಗೆ ನಿಗದಿತ ಪ್ರಮಾಣದ ಅಕ್ಕಿ, ಗೋಧಿ, ಮತ್ತು ತೊಗರಿ ಬೇಳೆಗಳನ್ನು ವಿತರಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
1 ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಜೂನ್ ತಿಂಗಳಿನಿಂದ ಅಕ್ಟೋಬರ್ ವರೆಗೆ ನೀಡಬೇಕಿದ್ದ ಬಿಸಿಯೂಟಕ್ಕೆ ಬದಲಾಗಿ ರಜಾ ದಿನಗಳನ್ನು ಹೊರತುಪಡಿಸಿ 108 ದಿನಗಳಿಗೆ ಅನ್ವಯಿಸುವಂತೆ ಆಹಾರ ಧಾನ್ಯಗಳನ್ನು ನೀಡಲು ಸೂಚಿಸಲಾಗಿದೆ.
9 ಮತ್ತು 10ನೇ ತರಗತಿ ಮಕ್ಕಳಿಗೆ ಪೂರ್ತಿ 53 ದಿನಗಳಿಗೂ ಅಕ್ಕಿಯನ್ನೇ ನೀಡಲು ಸೂಚಿಸಲಾಗಿದೆ. ಅದರಂತೆ 1ರಿಂದ 5ನೇ ತರಗತಿಯ ಪ್ರತಿ ಮಕ್ಕಳಿಗೆ ಮೊದಲ ಹಂತದ 53 ದಿನಗಳ ಲೆಕ್ಕದಲ್ಲಿ ತಲಾ 4.50 ಕೆಜಿ ಅಕ್ಕಿ, 800 ಗ್ರಾಂ ಗೋಧಿ ಮತ್ತು 3.74 ಕೆಜಿ ತೊಗರಿಬೇಳೆ, 6 ರಿಂದ 8ನೇ ತರಗತಿ ಮಕ್ಕಳಿಕೆ 6.75 ಕೆಜಿ ಅಕ್ಕಿ, 1.20 ಕೆಜಿ ಗೋಧಿ, 4.61 ಕೆಜಿ ಬೇಳೆ, 9 ಮತ್ತು 10ನೇ ತರಗತಿ ಮಕ್ಕಳಿಗೆ 7.95 ಕೆಜಿ ಅಕ್ಕಿ, 4.61 ಕೆಜಿ ಬೇಳೆ ವಿತರಣೆಗೆ ಆದೇಶಿಸಲಾಗಿದೆ.
ದಾಸ್ತಾನು ಸಮಸ್ಯೆ ಉಂಟಾಗುವ ಕಾರಣ ಎರಡು ಹಂತದಲ್ಲಿ ಧಾನ್ಯಗಳನ್ನು ವಿತರಿಸುವಂತೆ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru PG: ಬೆಂಗಳೂರಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ: ಪಿಜಿಗಳಲ್ಲಿ ಊಟ ಬಂದ್, ವೈರಲ್ ಪೋಸ್ಟ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ











Click it and Unblock the Notifications