ಸದಾ ಬಿಜೆಪಿ ಟೀಕಿಸುವ ಸಿದ್ದರಾಮಯ್ಯಗೆ ಶೆಟ್ಟರ್ ಎಸೆದ ಗುರುತರ ಚಾಲೆಂಜ್
ಹುಬ್ಬಳ್ಳಿ, ಸೆ 2: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮತ್ತು ಮಾಜಿ ಸಿದ್ದರಾಮಯ್ಯನವರಿಗೆ, ಸಚಿವ ಜಗದೀಶ್ ಶೆಟ್ಟರ್ ಬುದ್ದಿವಾದದ ಜೊತೆಗೆ ಸವಾಲೊಂದನ್ನು ಹಾಕಿದ್ದಾರೆ.
' ಸದಾ ಬಿಜೆಪಿ ಟೀಕಿಸುತ್ತಿರುವ ಸಿದ್ದರಾಮಯ್ಯನವರು ಮೊದಲು ತಮ್ಮ ಪಕ್ಷದ ಪರಿಸ್ಥಿತಿ ಏನಾಗಿದೆ ಎನ್ನುವುದನ್ನು ಮೊದಲು ಅರಿತುಕೊಳ್ಳಲಿ" ಎಂದು ಜಗದೀಶ್ ಶೆಟ್ಟರ್ ಬುದ್ದಿಮಾತನ್ನು ಹೇಳಿದ್ದಾರೆ.
ಜೊತೆಗೆ, " ಸಿದ್ದರಾಮಯ್ಯನವರ ಮಾತು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಬಿಜೆಪಿಯನ್ನು ಟೀಕಿಸುವ ಮೊದಲು, ವಿರೋಧ ಪಕ್ಷದ ನಾಯಕನನ್ನು ಮೊದಲು ಆಯ್ಕೆಮಾಡಿಕೊಳ್ಳಿ" ಎಂದು ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.
ನನ್ನನ್ನು ಕೆಣಕಿದರೆ ಹುತ್ತದಲ್ಲಿರುವ ನಾಗರಹಾವನ್ನು ಕೆಣಕಿದಂತೆ, ಎಂಟಿಬಿ
" ಯಡಿಯೂರಪ್ಪನವರ ಬಗ್ಗೆ ಹೇಳಿಕೆ ನೀಡುವ ಸಿದ್ದರಾಮಯ್ಯನವರ ಮಾತಿಗೆ ಹೆಚ್ಚಿನ ಮಹತ್ವವನ್ನು ಕೊಡಬೇಕಾಗಿಲ್ಲ. ರಾಜ್ಯ ಕಾಂಗ್ರೆಸ್ಸಿನಲ್ಲಿ ಎಷ್ಟು ಬಣಗಳಿವೆ ಎನ್ನುವುದನ್ನು ಮೊದಲು ಸಿದ್ದರಾಮಯ್ಯ ಮೊದಲು ಲೆಕ್ಕಹಾಕಿಕೊಳ್ಳಲಿ" ಎಂದು ಶೆಟ್ಟರ್, ಸಿದ್ದರಾಮಯ್ಯನವರಿಗೆ ಸವಾಲನ್ನು ಎಸೆದಿದ್ದಾರೆ.
" ರಾಜ್ಯ ಬಿಜೆಪಿ ಸರ್ಕಾರ 'ಆಪರೇಷನ್ ಕಮಲದ ಅನೈತಿಕ ಕೂಸು'. ಹಣ, ಆಮಿಷ, ಒತ್ತಡ ತಂತ್ರ ಉಪಯೋಗಿಸಿ ಶಾಸಕರನ್ನು ಕೊಂಡು, ವಾಮಮಾರ್ಗದ ಮೂಲಕ ಅಧಿಕಾರ ಹಿಡಿದಿರುವ ಯಡಿಯೂರಪ್ಪನವರ ಸರ್ಕಾರಕ್ಕೆ ಸ್ಪಷ್ಟ ಜನಾದೇಶವಿಲ್ಲ. ಈ ಸರ್ಕಾರ ಯಾವ ಕ್ಷಣದಲ್ಲಾದರೂ ಬಿದ್ದು, ಮಧ್ಯಂತರ ಚುನಾವಣೆ ಬರಬಹುದು" ಎಂದು ಸಿದ್ದರಾಮಯ್ಯ ಟೀಕಿಸಿದ್ದರು.
ಎಂಟಿಬಿ ನಾಗರಾಜ್ ಮಾತಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅಚ್ಚರಿಯ ಪ್ರತಿಕ್ರಿಯೆ
" ನಮ್ಮದು ಹೈಕಮಾಂಡ್ ಪಕ್ಷ ಅಲ್ಲ ಅಂದಿದ್ದ ಬಿಜೆಪಿ ನಾಯಕರು ಈಗ ಮಾಡುತ್ತಿರುವುದು ಏನು? ವಾರದಲ್ಲಿ 3 ದಿನ ದೆಹಲಿಗೆ ಓಡಿ ಹೋಗುತ್ತಿದ್ದಾರೆ. ಅಮಿತ್ ಶಾ ಅನುಮತಿಯಿಲ್ಲದೆ ಯಡಿಯೂರಪ್ಪನವರು ಏನೂ ಮಾಡದಂತಹ ಅಸಹಾಯಕ ಸ್ಥಿತಿಯಲ್ಲಿದ್ದಾರೆ. ಪ್ರತಿಯೊಂದಕ್ಕೂ ಹೈಕಮಾಂಡ್ ಒಪ್ಪಿಗೆ ಪಡೆಯಬೇಕಾಗಿದೆ. ಇದೇ ಬಿಜೆಪಿಗರ ನಿಜಬಣ್ಣ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.