ಪೋಡಿ ದುರಸ್ತಿ, ಪೌತಿ ಖಾತೆ ಬಗ್ಗೆ ಮಹತ್ವದ ಮಾಹಿತಿ ಕೊಟ್ಟ ಸರ್ಕಾರ
ಪೋಡಿ ದುರಸ್ತಿ, ಪೌತಿ ಖಾತೆ ಬಗ್ಗೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲಾದ ತಹಶೀಲ್ದಾರ್ಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಡೆದಿದೆ. ಸಭೆಯಲ್ಲಿ ಪೋಡಿ ದುರಸ್ತಿ, ಪೌತಿ ಖಾತೆ ಕುರಿತು ಮಹತ್ವದ ಮಾಹಿತಿಗಳನ್ನು ಅವರು ಹಂಚಿಕೊಂಡಿದ್ದಾರೆ. ಇನ್ನು ಸರಿಯಾಗಿ ಕೆಲಸ ಮಾಡದ ತಹಶೀಲ್ದಾರರು ಹಾಗೂ ಅಧಿಕಾರಿಗಳನ್ನು ಸಭೆಯಲ್ಲೇ ಎಲ್ಲರ ಮುಂದೆ ತರಾಟೆಗೆ ತೆಗೆದುಕೊಂಡು ಎಚ್ಚರಿಕೆ ಕೊಟ್ಟಿದ್ದಾರೆ.
ಪೋಡಿ ದುರಸ್ತಿ ಬಗ್ಗೆ ಮಾಹಿತಿ ನೀಡಿರುವ ಅವರು, ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಅತಿವೃಷ್ಠಿಯಿಂದಾಗಿ ಪೋಡಿ ದುರಸ್ತಿ ಕೆಲಸ ತಡವಾಗಿದೆ. ಹೀಗಾಗಿ ಮತ್ತೆ ಆದ್ಯತೆ ಮೇಲೆ ಕೆಲಸ ಆರಂಭವಾಗಬೇಕು. ದುರಸ್ತಿಗಾಗಿ 1.40 ಲಕ್ಷ ಕೇಸ್ ಸರ್ವೇಗೆ ಹೋಗಿದೆ. ಇನ್ನೂ 1.50 ಲಕ್ಷ ಪ್ರಕರಣ ಮಿಸ್ಸಿಂಗ್ ರೆಕಾರ್ಡ್ ಕಮಿಟಿಗೆ ಹೋಗಿದೆ. 20 ಸಾವಿರ ಸರ್ವೇ ನಂಬರ್ ಇನ್ನೂ 1-5 ಆಗಬೇಕು. 20 ಸಾವಿರ ಸರ್ವೇ ನಂಬರ್ನಲ್ಲಿ ಮಂಜೂರುದಾರರ ಸಂಖ್ಯೆ 1ರಿಂದ 1.50 ಲಕ್ಷ ಇರುವ ಸಾಧ್ಯತೆ ಇದೆ ಎಂದು ವಿವರಿಸಿದ್ದಾರೆ.

ಎಲ್ಲ ತಾಲೂಕಿನಲ್ಲೂ ಮಂಜೂರುದಾರರಿದ್ದಾರೆ. ಬಂಟ್ವಾಳ, ಬೆಳ್ತಂಗಡಿ, ತಿಪಟೂರಲ್ಲಿ ಅಧಿಕ ಮಂಜೂರುದಾರರಿದ್ದಾರೆ. ಕುಣಿಗಲ್ ತುಮಕೂರಿನಲ್ಲೂ ಕೆಲಸ ಬಾಕಿ ಇದೆ. ಶಿರಾ, ತಿಪಟೂರು ಚಿಕ್ಕನಾಯಕನಹಳ್ಳಿಯಲ್ಲಿ ಕಳೆದ ಬಾರಿಗಿಂತ ಉತ್ತಮ ಕೆಲಸವಾಗಿದೆ. ಕನಕಪುರ 5,390, ಮುಳಬಾಗಿಲಿನಲ್ಲಿ ಮಾಗಡಿ 5,840 ರಾಮನಗರ 4,201 ಪ್ರಕರಣ ಮಿಸ್ಸಿಂಗ್ ರೆಕಾರ್ಡ್ಸ್ ಕಮಿಟಿಗೆ ಹೋಗಿದೆ. ಮಂಗಳೂರು, ಕಡಬ, ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಸುಳ್ಯ ತಾಲೂಕುಗಳಲ್ಲಿ ಅನುಬಂಧ 1ಕ್ಕೂ ಮಿಸ್ಸಿಂಗ್ ರೆಕಾರ್ಡ್ ತಾಳೆಯೇ ಇಲ್ಲ. ತಹಶೀಲ್ದಾರರು ತಮ್ಮ ಕೆಲಸವನ್ನು ಸರಿಯಾಗಿ ಮಾಡದೆ ಇಷ್ಟೊಂದು ಪ್ರಕರಣಗಳನ್ನ ಮಿಸ್ಸಿಂಗ್ ರೆಕಾರ್ಡ್ಸ್ ಕಮಿಟಿಗೆ ಕಳಿಸುವುದು ಸರಿಯಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಡಿಸೆಂಬರ್ವರೆಗೆ ಗಡುವು
ಹೊಸಕೋಟೆ 580 ಪ್ರಕರಣ ಸರ್ವೇಗೆ ಬಾಕಿ ಇದೆ. ಹೊಳಲ್ಕೆರೆ ಹೊಸದುರ್ಗ ಹೊನ್ನಾಳಿ ಬೇಲೂರು ಚನ್ನಪಟ್ಟಣದಲ್ಲೂ ತುಂಬಾ ಪ್ರಕರಣ ಬಾಕಿ ಇದೆ. ಕೈಗೆ ತೆಗೆದುಕೊಂಡಿರುವ ಪೈಕಿ 20 ಸಾವಿರ ಹಾಗೂ ಇನ್ನೂ ಕೈಗೆ ತೆಗೆದುಕೊಳ್ಳಬೇಕಾದ 25 ಸಾವಿರ ಸೇರಿ ಒಟ್ಟು 45 ಸಾವಿರ ಸರ್ವೇ ನಂಬರ್ ಬಾಕಿ ಇದೆ. ಡಿಸೆಂಬರ್ ಅಂತ್ಯದೊಳಗೆ ಮುಗಿಯುವಂತೆ ಯೋಜನೆ ರೂಪಿಸಿಕೊಳ್ಳಬೇಕು. ಡೇಟಾ ಎಂಟ್ರಿಯಿಂದ ತಹಶೀಲ್ದಾರ್ ಅನುಮೋದನೆವರೆಗೆ ಎಲ್ಲವೂ ಡಿಸೆಂಬರ್ ಅಂತ್ಯದೊಳಗೆ ಆಗಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ.
ಆಧಾರ್ ಸೀಡಿಂಗ್ ಬಗ್ಗೆಯೂ ಮಾಹಿತಿ ನೀಡಿರುವ ಸಚಿವ ಕೃಷ್ಣಬೈರೇಗೌಡರು, ಆಧಾರ್ ಸೀಡಿಂಗ್ ಹೆಬ್ರಿಯಲ್ಲಿ ಶೇ 46 ರಷ್ಟು ಮಾತ್ರ ಆಗಿದೆ. ಕಾರ್ಕಳದಲ್ಲಿ ಶೇ 78, ಬೆಂಗಳೂರು ದಕ್ಷಿಣದಲ್ಲಿ ಶೇ 75, ಆನೇಕಲ್ ಶೇ 68, ದೇವನಹಳ್ಳಿ ಶೇ 71ರಷ್ಟು ಆಗಿದೆ. ರೈತರಿಗೆ ಸರ್ಕಾರದ ಸೌಲಭ್ಯ ತಲುಪಿಸಲು ಆಧಾರ್ ಸೀಡಿಂಗ್ ಬಹುಮುಖ್ಯವಾಗಿದ್ದು, ಶೀಘ್ರವೇ ಎಲ್ಲ ತಾಲೂಕುಗಳಲ್ಲೂ ಆಧಾರ್ ಸೀಡಿಂಗ್ ಮುಗಿಸುವಂತೆ ಸೂಚನೆ ನೀಡಿದ್ದಾರೆ.
ಫೋಟೋ ದಾಖಲೆ ಇಲ್ಲದೆ ಪೌತಿ: ಸಚಿವ ಗರಂ
ಇನ್ನು ಪೌತಿ ಅಭಿಯಾನ ಆರಂಭವಾಗಿ ತಕ್ಕ ಮಟ್ಚಿಗೆ ಕೆಲಸ ಆಗುತ್ತಿದೆ. 41,62,000 ಲಕ್ಷ ನಮ್ಮ ಟಾರ್ಗೆಟ್ ಇದೆ. ಇಷ್ಟು ಜಮೀನು ಮೃತರ ಹೆಸರಲ್ಲಿದೆ. ಈ ಪೈಕಿ 2 ಲಕ್ಷ ಪ್ರಕರಣಗಳಲ್ಲಿ ಮೃತರ ಹೆಸರಲ್ಲಿದ್ದ ಜಮೀನನ್ನು ಈಗಿನ ಮಾಲೀಕರ ಹೆಸರಿಗೆ ಬದಲಿಸಲಾಗಿದೆ. ಶೇ. 5ರಷ್ಟು ಕೆಲಸವಷ್ಟೇ ಆಗಿದೆ. ಹುಬ್ಬಳ್ಳಿ, ಧಾರವಾಡ ಜಮಖಂಡಿ, ಶಿರಸಿ, ಕುಂದಗೋಳ, ದಾಂಡೇಲಿ, ಅಣ್ಣಿಗೇರಿ ನವಲಗುಂದದಲ್ಲಿ ಶೇ 25ಕ್ಕಿಂತ ಹೆಚ್ಚು ಆಗಿದೆ. ವಿರಾಜಪೇಟೆ, ಬೈಂದೂರು, ಪೊನ್ನಂಪೇಟೆ, ಮಡಿಕೇರಿ, ಆನೇಕಲ್, ಖಾನಾಪೂರ ಯಳಂದೂರು, ಗೋಕಾಕ್ ತಾಲೂಕಲ್ಲಿ ಶೇ 1ಕ್ಕಿಂತ ಕಡಿಮೆ ಆಗಿದೆ ಎಂದು ಮಾಹಿತಿ ನೀಡಿದ್ದಾರೆ.
ಶೇ.1ಕ್ಕಿಂತ ಕಡಿಮೆ ಸಾಧನೆ ಮಾಡಿದ ತಹಶೀಲ್ದಾರರುಗಳ ವಿರುದ್ಧ ಸಚಿವರು ಗರಂ ಆಗಿದ್ದಾರೆ. ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ ಹೆಗಡೆ, ಹೊಸಕೋಟೆ ತಹಶೀಲ್ದಾರ್ ಸೋಮಶೇಖರ್ ವಿರುದ್ಧ ಸಭೆಯಲ್ಲೇ ಅಸಮಾಧಾನ ಹೊರಹಾಕಿದ್ದಾರೆ. ಪೌತಿ ಖಾತೆಗೆ ಫೋಟೋ ದೃಢೀಕರಣ ಬೇಕು. ಅನೇಕ ತಾಲೂಕುಗಳಲ್ಲಿ ಫೋಟೋ ದಾಖಲೆ ಇಲ್ಲದೆ ಪೌತಿ ಖಾತೆ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಸಚಿವರು ಗರಂ ಆಗಿದ್ದಾರೆ. ಬಯೋಮೆಟ್ರಿಕ್ ಮುಖ ಗುರುತಿಸುವಿಕೆ ನಮ್ಮ ಮುಂದಿನ ಗುರಿ. ಅದಕ್ಕೆ ಪ್ರಸ್ತುತ ಜಮೀನಿನ ವಾರಸುದಾರರ ಫೋಟೋ ಅಗತ್ಯ ಎಂದು ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ












Click it and Unblock the Notifications