ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಸಿದ್ದರಾಮಯ್ಯ ಬೆಂಬಲಿಗರದ್ದೇ ಮೇಲುಗೈ
ಬೆಂಗಳೂರು, ಮೇ 27: ಕಳೆದ ಮೂರು ದಿನಗಳಿಂದ ಕರ್ನಾಟಕದ ಸಚಿವ ಸಂಪುಟ ವಿಸ್ತರಣೆ ಕುರಿತು ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ನಡುವೆ ಚರ್ಚೆಗಳು ನಡೆದಿದ್ದವು. ಅಂತಿಮವಾಗಿ ಕಾಂಗ್ರೆಸ್ ನಾಯಕರು 24 ಸಚಿವರ ಹೆಸರುಗಳನ್ನು ಪ್ರಕಟಿಸಿದ್ದರು. ಶುಕ್ರವಾರ ರಾತ್ರಿ 24 ಶಾಸಕರ ಹೆಸರನ್ನು ಅಂತಿಮಗೊಳಿಸಿದ್ದು, ಶನಿವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲೀಗ ಒಟ್ಟು 34 ಸಚಿವರು ನೇಮಕಗೊಂಡಿದ್ದಾರೆ.
ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಕೇಂದ್ರದ ಉನ್ನತ ನಾಯಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವೆ ಹಲವು ಗಂಟೆಗಳ ಕಾಲ ಚರ್ಚೆಗಳು ನಡೆದಿದ್ದವು.

ಹಲವು ಸುತ್ತಿನ ಮಾತುಕತೆಗಳ ನಂತರ ಪಕ್ಷವು ಅಂತಿಮವಾಗಿ ನಿರ್ಧಾರ ತೆಗೆದುಕೊಂಡಿದೆ. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಎಐಸಿಸಿ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಅವರು ಪಟ್ಟಿಗೆ ತಮ್ಮ ಅನುಮೋದನೆಯನ್ನು ನೀಡಿದ್ದರು. ನೂತನ ಸಚಿವರ ಪಟ್ಟಿಯು ಜಾತಿ ಹಾಗೂ ಪ್ರಾದೇಶಿಕ ಸಮತೋಲನವನ್ನು ಹೊಂದಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.
ತೀವ್ರ ಲಾಬಿ ನಡೆಸಿದ ಬಳಿಕ ಸಿದ್ದರಾಮಯ್ಯ ಪಾಳಯಕ್ಕೆ ಹೆಚ್ಚು ಸಚಿವ ಸ್ಥಾನ ನೀಡಲಾಗಿದೆ. ಸಿದ್ದರಾಮಯ್ಯ ಅವರು ಒಟ್ಟು 10 ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏಳು ಬೆಂಬಲಿಗರನ್ನು ಪಟ್ಟಿಯಲ್ಲಿ ಸೇರಿಸಿಕೊಳ್ಳುವಲ್ಲಿ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ. ಉಳಿದ ಸಚಿವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಅವರಲ್ಲಿ ಹಿರಿಯ ಮುಖಂಡರಾದ ಎಚ್ಕೆ ಪಾಟೀಲ್ ಮತ್ತು ಈಶ್ವರ ಖಂಡ್ರೆ ಸೇರಿದ್ದಾರೆ ಎಂದು ತಿಳಿದುಬಂದಿದೆ.

ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಕೆಲ ಹೆಸರುಗಳ ವಿಚಾರದಲ್ಲಿ ಉಂಟಾಗಿದ್ದ ಭಿನ್ನಾಭಿಪ್ರಾಯವನ್ನು ಸುದೀರ್ಘ ಚರ್ಚೆಯ ಮೂಲಕ ಬಗೆಹರಿಸಲಾಗಿದೆ. ಅರ್ಹತೆ, ಸರ್ವಾಂಗೀಣ ಪ್ರಾತಿನಿಧ್ಯ ಮತ್ತು ಹಿರಿತನದ ಆಧಾರದ ಮೇಲೆ ಶಾಸಕರ ಹೆಸರನ್ನು ಆಯ್ಕೆ ಮಾಡಿರುವುದರಿಂದ ಯಾವುದೇ ಅಸಮಾಧಾನವಿಲ್ಲವೆಂದು ಪಕ್ಷ ಹೇಳಿಕೊಂಡಿದೆ.

ಕೃಷ್ಣ ಬೈರೇಗೌಡ, ಕೆ.ವೆಂಕಟೇಶ್, ದಿನೇಶ್ ಗುಂಡೂರಾವ್, ಎಚ್.ಸಿ.ಮಹದೇವಪ್ಪ, ಕೆ.ಎನ್.ರಾಜಣ್ಣ, ಶಿವಾನಂದ ಪಾಟೀಲ್, ಆರ್ ಬಿ ತಿಮ್ಮಾಪುರ, ಎಚ್ ವೈ ಮೇಟಿ, ಬೈರತಿ ಸುರೇಶ್ ಮತ್ತು ರಹೀಮ್ ಖಾನ್ ಅವರು ಸಿದ್ದರಾಮಯ್ಯ ಆಪ್ತರ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ.
ಶಿವಕುಮಾರ್ ಪಾಳಯದಲ್ಲಿ ಮಧು ಬಂಗಾರಪ್ಪ, ಡಿ.ಸುಧಾಕರ್, ಚೆಲುವರಾಯಸ್ವಾಮಿ, ಮಂಕಾಳ್ ವೈದ್ಯ, ಎಂ.ಸಿ.ಸುಧಾಕರ್, ಎನ್.ಎಸ್.ಬೋಸರಾಜು ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಗುರುತಿಸಿಕೊಂಡಿದ್ದಾರೆ.
-
ಬೆಂಗಳೂರಿಗರಿಗೆ ಬಂಪರ್ ಗಿಫ್ಟ್: ನೀರಿನ ಬಿಲ್ ಮೇಲಿನ ಬಡ್ಡಿ ಶೇ.100ರಷ್ಟು ಮನ್ನಾ; ಡಿಕೆಶಿ ಮಹತ್ವದ ಘೋಷಣೆ -
ಬೆಂಗಳೂರಲ್ಲಿ 'ಹೊಸ ಪಾದಚಾರಿ ನೀತಿ': ನೋಂದಣಿ ಆಗದವರ ವ್ಯಾಪಾರಕ್ಕಿಲ್ಲ ಅವಕಾಶ: ಡಿಕೆ ಶಿವಕುಮಾರ್ -
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಮರ್ಯಾದೆ ಹತ್ಯೆಗೆ ಬೀಳಲಿದೆ ಬ್ರೇಕ್: ವಿಧಾನಸಭೆಯಲ್ಲಿ ಐತಿಹಾಸಿಕ 'ಇವ ನಮ್ಮವ' ಮಸೂದೆ ಮಂಡಿಸಿದ ಸರ್ಕಾರ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ












Click it and Unblock the Notifications