Get Updates
Get notified of breaking news, exclusive insights, and must-see stories!

ರೈತರು ಬರಗಾಲ ಬರಲಿ ಎಂದು ಆಸೆ ಪಡುತ್ತಾರೆ: ರೈತರ ಬಗ್ಗೆ ಕೇವಲವಾಗಿ ಮಾತನಾಡಿದ ಸಚಿವ ಶಿವಾನಂದ್ ಪಾಟೀಲ್

ಕೃಷಿ ಸಾಲ ಮನ್ನಾ ಆಗುವುದರಿಂದ ರಾಜ್ಯದ ರೈತರು ಬರಗಾಲ ಬರಲಿ ಎಂದು ಆಶಿಸುತ್ತಾರೆ ಎಂದು ಸಹಕಾರ ಸಚಿವ ಶಿವಾನಂದ ಪಾಟೀಲ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ. ಇದಕ್ಕೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

ಇತ್ತೀಚೆಗೆ ಚಿಕ್ಕೋಡಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪಾಟೀಲ್, ಕೃಷ್ಣಾ ನದಿ ನೀರು ಉಚಿತ, ಉತ್ತರ ಕರ್ನಾಟಕದ ಹಲವು ಪ್ರದೇಶಗಳು ಬರಗಾಲದಿಂದ ತತ್ತರಿಸಿರುವುದರಿಂದ ಮುಖ್ಯಮಂತ್ರಿಗಳು ಉಚಿತವಾಗಿ ಬಿತ್ತನೆಬೀಜ, ಗೊಬ್ಬರವನ್ನೂ ನೀಡುತ್ತಿದ್ದಾರೆ. ಈಗ ರೈತರು ತಮ್ಮ ಸಾಲವನ್ನು ಮನ್ನಾ ಆಗುವುದರಿಂದ ರಾಜ್ಯದಲ್ಲಿ ಪದೇ ಪದೇ ಬರಗಾಲ ಬರಲಿ ಎಂದು ಬಯಸುತ್ತಿದ್ದಾರೆ, ಇದು ಸರಿಯಾದ ಕ್ರಮವಲ್ಲ ಎಂದು ಹೇಳಿದ್ದರು.

 Karnataka Minister Sparks Controversy: Claims Farmers Wish for Drought; BJP Criticizes

ಸಚಿವ ಪಾಟೀಲ್‌ ಮಾತನಾಡಿ, ಹವಾಮಾನ ವೈಪರೀತ್ಯದಿಂದ ರಾಜ್ಯದಲ್ಲಿ ಮೂರ್ನಾಲ್ಕು ವರ್ಷಕ್ಕೊಮ್ಮೆ ಬರಗಾಲ ಎದುರಾಗುವ ಸಾಧ್ಯತೆ ಇದೆ. ರಾಜ್ಯವು ಪ್ರತಿ ಮೂರು ಅಥವಾ ನಾಲ್ಕು ವರ್ಷಗಳಿಗೊಮ್ಮೆ ಬರಗಾಲದಂತಹ ಪರಿಸ್ಥಿತಿಯನ್ನು ನೋಡುತ್ತದೆ ಮತ್ತು ರೈತರಿಗೆ ಸಹಾಯ ಮಾಡಲು ಸರ್ಕಾರ ಯಾವಾಗಲೂ ಇರುತ್ತದೆ ಎಂದು ಸಚಿವರು ಹೇಳಿದರು.

ವ್ಯಾಪಕ ಆಕ್ರೋಶ

ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಈ ಹಿಂದೆ ಇತರ ಮುಖ್ಯಮಂತ್ರಿಗಳು ಸಹಾಯ ಮಾಡಿದರು ಎಂದು ಸಚಿವ ಪಾಟೀಲ್ ಹೇಳಿದರು. ಯಡಿಯೂರಪ್ಪ, ಎಚ್‌ ಡಿ ಕುಮಾರಸ್ವಾಮಿ ಅಥವಾ ಸಿದ್ದರಾಮಯ್ಯ ಆಗಿರಲಿ, ಎಲ್ಲರೂ ಬಿಕ್ಕಟ್ಟಿನ ಸಂದರ್ಭದಲ್ಲಿ ರೈತರಿಗೆ ಸಹಾಯ ಮಾಡಲು ಬಯಸಿದ್ದರು. ಆದರೆ ಸರ್ಕಾರಗಳು ರೈತರಿಗೆ ಸಹಾಯ ಮಾಡಲು ಯಾವಾಗಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸಚಿವ ಪಾಟೀಲ್ ಹೇಳಿಕೆಯನ್ನು ಹಿಂಪಡೆಯುವಂತೆ ಕರ್ನಾಟಕ ಬಿಜೆಪಿ ಒತ್ತಾಯಿಸಿದೆ ಮತ್ತು ರೈತ ಸಮುದಾಯದ ಕ್ಷಮೆಯಾಚಿಸಬೇಕು. ರಾಜ್ಯ ಬಿಜೆಪಿ ಮುಖ್ಯಸ್ಥ ವಿಜಯೇಂದ್ರ ಯಡಿಯೂರಪ್ಪ ಮಾತನಾಡಿ, ಅನ್ನದಾತರನ್ನು ಪದೇ ಪದೇ ಅವಮಾನಿಸುವ, ರೈತರ ಜೀವನ ಹಾಳು ಮಾಡುವ, ರೈತರನ್ನು ನಿಂದಿಸುವ ಸಂಸ್ಕೃತಿಯನ್ನು ಕಾಂಗ್ರೆಸ್ ಅಳವಡಿಸಿಕೊಂಡಂತಿದೆ. ಕಾಂಗ್ರೆಸ್ ಸಚಿವ ಶಿವಾನಂದ ಪಾಟೀಲ ಅವರಿಗೆ ರೈತರನ್ನು ಅವಮಾನಿಸುವ ಮತ್ತು ಕೀಳಾಗಿ ಕಾಣುವ ಹೊಣೆಗಾರಿಕೆಯನ್ನು ವಹಿಸಿದಂತೆ ಕಾಣುತ್ತಿದೆ ಎಂದು ಆರೋಪಿಸಿದರು.

ಸಚಿವ ಶಿವಾನಂದ ಪಾಟೀಲ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತೇನೆ ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.

ಹೆಚ್‌ಡಿ ಕುಮಾರಸ್ವಾಮಿ ಆಕ್ರೋಶ

ಸಚಿವ ಶಿವಾನಂದ ಪಾಟೀಲ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ನಾನು ಕೃಷಿಸಾಲ ಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಪು ಮಾಡಿಕೊಂಡರೆ ಈಗಲೂ ನನ್ನ ಮೈ ನಡುಗುತ್ತದೆ. ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ. ಸಚಿವರು ಬೇಷರತ್ ಕ್ಷಮೆ ಕೇಳಬೇಕು, ತಮ್ಮ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+