ಅಧ್ಯಯನಕ್ಕಾಗಿ ವಿದೇಶಕ್ಕೆ ಹೊರಟ ಶಾಸಕರು!
ಬೆಂಗಳೂರು, ಡಿ. 26 : ರಾಜ್ಯದ 100 ತಾಲೂಕುಗಳಲ್ಲಿ ಬರ ಪರಿಸ್ಥಿತಿ, ರಾಜ್ಯದ ಆರ್ಥಿಕ ಸ್ಥಿತಿ ಸಂಕಷ್ಟದಲ್ಲಿದ್ದರೂ ಶಾಸಕರು ವಿದೇಶ ಪ್ರವಾಸಕ್ಕೆ ಹೊರಟಿರುವುದು ತೀವ್ರ ಟೀಕೆಗೆ ಗುರಿಯಾಗಿದೆ. ವಿಧಾನಮಂಡಲದ ವಿವಿಧ ಸಮಿತಿಗಳು ವಿದೇಶ ಪ್ರವಾಸ ಕೈಗೊಳ್ಳಲು ಸಜ್ಜಾಗುತ್ತಿದ್ದು, ಸ್ಪೀಕರ್ ಅನುಮತಿಗಾಗಿ ಕಾಯುತ್ತಿವೆ.
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಶಾಸಕರು ವಿದೇಶ ಪ್ರವಾಸ ಕೈಗೊಂಡಿದ್ದು ತೀವ್ರ ಟೀಕೆಗೆ ಗುರಿಯಾಗಿತ್ತು. ಸದ್ಯ ಕಾಂಗ್ರೆಸ್ ಸರ್ಕಾರದಲ್ಲೂ ಶಾಸಕರು ವಿದೇಶ ಪ್ರವಾಸ ಹೋಗಲು ಸಜ್ಜಾಗುತ್ತಿದ್ದಾರೆ. ಅಧ್ಯಯನ ನೆಪದಲ್ಲಿ ಶಾಸಕರು ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಆದರೆ, ಕೆಲವು ಸಮಿತಿ ಭೇಟಿ ನೀಡುತ್ತಿರುವ ದೇಶ ಹಾಗೂ ಸ್ಥಳಗಳು ಕೇವಲ ಪ್ರವಾಸಿ ಸ್ಥಳಗಳಾಗಿವೆ.

ವಿಧಾನಸಭೆ ಮತ್ತು ವಿಧಾನಪರಿಷತ್ತಿನ ಸೇರಿ 15 ರಿಂದ 20 ಸದಸ್ಯರಿರುವ ಸಮಿತಿ ವಿದೇಶ ಪ್ರವಾಸ ಕೈಗೊಳ್ಳುತ್ತದೆ. ಒದೊಂದು ಸಮಿತಿಗೆ ಒಂದೂವರೆಯಿಂದ ಎರಡು ಕೋಟಿ ರೂ. ವೆಚ್ಚ ಅಂದರೆ, ಪ್ರತಿ ಸದಸ್ಯರಿಗೆ 5 ರಿಂದ 7 ಲಕ್ಷ ರೂ. ವೆಚ್ಚ ಮಾಡಲಾಗುತ್ತದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದುವರೆಗೂ ನಾಲ್ಕು ಸಮಿತಿಗಳಿಗೆ ವಿದೇಶ ಪ್ರವಾಸ ಅನುಮತಿ ನೀಡಲಾಗಿದೆ.
ಉಭಯ ಸದನಗಳಿಂದ ಸೇರಿ ಒಟ್ಟು ಹದಿನೈದು ಸಮಿತಿಗಳಿವೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅಧ್ಯಕ್ಷತೆಯ 20 ಸದಸ್ಯರ ಸಾರ್ವಜನಿಕ ಉದ್ದಿಮೆ ಸಮಿತಿ ಒಂದು ತಿಂಗಳ ಹಿಂದೆ ಜಪಾನ್, ಚೀನಾ, ಸಿಂಗಾಪುರ, ಮಲೇಷಿಯಾ, ಥಾಯ್ಲೆಂಡ್ ಪ್ರವಾಸ ಮುಗಿಸಿ ಮರಳಿದೆ. ಸದ್ಯ ಉಳಿದ ಸಮಿತಿಗಳು ಅನುಮತಿಗಾಗಿ ಕಾಯುತ್ತಿವೆ.
ಒಂದು ಸಮಿತಿ ನ್ಯೂಜಿಲೆಂಡ್, ಆಸ್ಟ್ರೇಲಿಯಾ, ಫಿಜಿ ಪ್ರವಾಸದಲ್ಲದೆ. ಎರಡು ಸಮಿತಿಗಳು ಬ್ರೆಜಿಲ್, ಅರ್ಜೆಂಟೈನಾ, ಪೆರು ಪ್ರವಾಸಕ್ಕೆ ಅನುಮತಿ ಪಡೆದುಕೊಂಡಿವೆ. ಇನ್ನೂ ಕೆಲವು ಸಮಿತಿಗಳು ಸ್ಪೀಕರ್ ಅನುಮತಿಗಾಗಿ ಕಾಯುತ್ತಿವೆ. ಬಿ.ಆರ್.ಯಾವಗಲ್ ಅಧ್ಯಕ್ಷತೆಯ ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಡಿ.24 ರಿಂದ 8 ದಿನಗಳ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಫಿಜಿ ಪ್ರವಾಸ ಕೈಗೊಂಡಿದೆ.
ಕೆಲವು ಸಮಿತಿಗಳು ವಿದೇಶ ಪ್ರವಾಸಕ್ಕೆ ಅನುಮತಿ ಕೋರಿವೆ. ಆದರೆ, ಜನವರಿಯಲ್ಲಿ ವಿಧಾನಮಂಡಲ ಜಂಟಿ ಅಧಿವೇಶನ ನಡೆಯುವ ಸಾಧ್ಯತೆ ಇದ್ದು, ಆದ್ದರಿಂದ ಕೆಲವು ಸಮಿತಿಗಳಿಗೆ ಇನ್ನೂ ಅನುಮತಿ ನೀಡಿಲ್ಲ. ವಿದೇಶಗಳಲ್ಲಿನ ಅಭಿವೃದ್ಧಿ ಕುರಿತು ಅಧ್ಯಯನ ನಡೆಸಲು ಪ್ರತಿ ಶಾಸಕರಿಗೂ ಐದು ವರ್ಷಗಳಲ್ಲಿ ಎರಡು ಬಾರಿ ವಿದೇಶ ಪ್ರವಾಸ ಕೈಗೊಳ್ಳಲು ಅವಕಾಶವಿದೆ.
ಸದ್ಯ ರಾಜ್ಯದಲ್ಲಿ 100 ತಾಲೂಕುಗಳಲ್ಲಿ ಬರಪರಿಸ್ಥಿತಿ ಇದೆ. ಇಂತಹ ಸಮಯದಲ್ಲಿ ಶಾಸಕರ ವಿದೇಶ ಪ್ರವಾಸ ಅಗತ್ಯವಿತ್ತೆ ಎಂಬುದು ಸದ್ಯ ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿದೇಶ ಪ್ರವಾಸಕ್ಕಾಗಿ ಕಾಯುತ್ತಿರುವ ಸಮಿತಿಗಳಿಗೆ ಅನುಮತಿ ದೊರೆಯಲಿದೆಯೇ?
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications