ಅಧ್ಯಯನಕ್ಕಾಗಿ ವಿದೇಶಕ್ಕೆ ಹೊರಟ ಶಾಸಕರು!
ಬೆಂಗಳೂರು, ಡಿ. 26 : ರಾಜ್ಯದ 100 ತಾಲೂಕುಗಳಲ್ಲಿ ಬರ ಪರಿಸ್ಥಿತಿ, ರಾಜ್ಯದ ಆರ್ಥಿಕ ಸ್ಥಿತಿ ಸಂಕಷ್ಟದಲ್ಲಿದ್ದರೂ ಶಾಸಕರು ವಿದೇಶ ಪ್ರವಾಸಕ್ಕೆ ಹೊರಟಿರುವುದು ತೀವ್ರ ಟೀಕೆಗೆ ಗುರಿಯಾಗಿದೆ. ವಿಧಾನಮಂಡಲದ ವಿವಿಧ ಸಮಿತಿಗಳು ವಿದೇಶ ಪ್ರವಾಸ ಕೈಗೊಳ್ಳಲು ಸಜ್ಜಾಗುತ್ತಿದ್ದು, ಸ್ಪೀಕರ್ ಅನುಮತಿಗಾಗಿ ಕಾಯುತ್ತಿವೆ.
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಶಾಸಕರು ವಿದೇಶ ಪ್ರವಾಸ ಕೈಗೊಂಡಿದ್ದು ತೀವ್ರ ಟೀಕೆಗೆ ಗುರಿಯಾಗಿತ್ತು. ಸದ್ಯ ಕಾಂಗ್ರೆಸ್ ಸರ್ಕಾರದಲ್ಲೂ ಶಾಸಕರು ವಿದೇಶ ಪ್ರವಾಸ ಹೋಗಲು ಸಜ್ಜಾಗುತ್ತಿದ್ದಾರೆ. ಅಧ್ಯಯನ ನೆಪದಲ್ಲಿ ಶಾಸಕರು ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಆದರೆ, ಕೆಲವು ಸಮಿತಿ ಭೇಟಿ ನೀಡುತ್ತಿರುವ ದೇಶ ಹಾಗೂ ಸ್ಥಳಗಳು ಕೇವಲ ಪ್ರವಾಸಿ ಸ್ಥಳಗಳಾಗಿವೆ.

ವಿಧಾನಸಭೆ ಮತ್ತು ವಿಧಾನಪರಿಷತ್ತಿನ ಸೇರಿ 15 ರಿಂದ 20 ಸದಸ್ಯರಿರುವ ಸಮಿತಿ ವಿದೇಶ ಪ್ರವಾಸ ಕೈಗೊಳ್ಳುತ್ತದೆ. ಒದೊಂದು ಸಮಿತಿಗೆ ಒಂದೂವರೆಯಿಂದ ಎರಡು ಕೋಟಿ ರೂ. ವೆಚ್ಚ ಅಂದರೆ, ಪ್ರತಿ ಸದಸ್ಯರಿಗೆ 5 ರಿಂದ 7 ಲಕ್ಷ ರೂ. ವೆಚ್ಚ ಮಾಡಲಾಗುತ್ತದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದುವರೆಗೂ ನಾಲ್ಕು ಸಮಿತಿಗಳಿಗೆ ವಿದೇಶ ಪ್ರವಾಸ ಅನುಮತಿ ನೀಡಲಾಗಿದೆ.
ಉಭಯ ಸದನಗಳಿಂದ ಸೇರಿ ಒಟ್ಟು ಹದಿನೈದು ಸಮಿತಿಗಳಿವೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅಧ್ಯಕ್ಷತೆಯ 20 ಸದಸ್ಯರ ಸಾರ್ವಜನಿಕ ಉದ್ದಿಮೆ ಸಮಿತಿ ಒಂದು ತಿಂಗಳ ಹಿಂದೆ ಜಪಾನ್, ಚೀನಾ, ಸಿಂಗಾಪುರ, ಮಲೇಷಿಯಾ, ಥಾಯ್ಲೆಂಡ್ ಪ್ರವಾಸ ಮುಗಿಸಿ ಮರಳಿದೆ. ಸದ್ಯ ಉಳಿದ ಸಮಿತಿಗಳು ಅನುಮತಿಗಾಗಿ ಕಾಯುತ್ತಿವೆ.
ಒಂದು ಸಮಿತಿ ನ್ಯೂಜಿಲೆಂಡ್, ಆಸ್ಟ್ರೇಲಿಯಾ, ಫಿಜಿ ಪ್ರವಾಸದಲ್ಲದೆ. ಎರಡು ಸಮಿತಿಗಳು ಬ್ರೆಜಿಲ್, ಅರ್ಜೆಂಟೈನಾ, ಪೆರು ಪ್ರವಾಸಕ್ಕೆ ಅನುಮತಿ ಪಡೆದುಕೊಂಡಿವೆ. ಇನ್ನೂ ಕೆಲವು ಸಮಿತಿಗಳು ಸ್ಪೀಕರ್ ಅನುಮತಿಗಾಗಿ ಕಾಯುತ್ತಿವೆ. ಬಿ.ಆರ್.ಯಾವಗಲ್ ಅಧ್ಯಕ್ಷತೆಯ ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಡಿ.24 ರಿಂದ 8 ದಿನಗಳ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಫಿಜಿ ಪ್ರವಾಸ ಕೈಗೊಂಡಿದೆ.
ಕೆಲವು ಸಮಿತಿಗಳು ವಿದೇಶ ಪ್ರವಾಸಕ್ಕೆ ಅನುಮತಿ ಕೋರಿವೆ. ಆದರೆ, ಜನವರಿಯಲ್ಲಿ ವಿಧಾನಮಂಡಲ ಜಂಟಿ ಅಧಿವೇಶನ ನಡೆಯುವ ಸಾಧ್ಯತೆ ಇದ್ದು, ಆದ್ದರಿಂದ ಕೆಲವು ಸಮಿತಿಗಳಿಗೆ ಇನ್ನೂ ಅನುಮತಿ ನೀಡಿಲ್ಲ. ವಿದೇಶಗಳಲ್ಲಿನ ಅಭಿವೃದ್ಧಿ ಕುರಿತು ಅಧ್ಯಯನ ನಡೆಸಲು ಪ್ರತಿ ಶಾಸಕರಿಗೂ ಐದು ವರ್ಷಗಳಲ್ಲಿ ಎರಡು ಬಾರಿ ವಿದೇಶ ಪ್ರವಾಸ ಕೈಗೊಳ್ಳಲು ಅವಕಾಶವಿದೆ.
ಸದ್ಯ ರಾಜ್ಯದಲ್ಲಿ 100 ತಾಲೂಕುಗಳಲ್ಲಿ ಬರಪರಿಸ್ಥಿತಿ ಇದೆ. ಇಂತಹ ಸಮಯದಲ್ಲಿ ಶಾಸಕರ ವಿದೇಶ ಪ್ರವಾಸ ಅಗತ್ಯವಿತ್ತೆ ಎಂಬುದು ಸದ್ಯ ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿದೇಶ ಪ್ರವಾಸಕ್ಕಾಗಿ ಕಾಯುತ್ತಿರುವ ಸಮಿತಿಗಳಿಗೆ ಅನುಮತಿ ದೊರೆಯಲಿದೆಯೇ?
-
ಬಾಗಲಕೋಟೆಗೆ ಸಿದ್ದರಾಮಯ್ಯ ದ್ರೋಹ ಮಾಡಿದ್ರೆ ಪಕ್ಷ ಮತ್ತೆ ಗೆಲ್ಲುತ್ತಿತ್ತೇ? ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್ ತಿರುಗೇಟು -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು?












Click it and Unblock the Notifications