ಶಾಸಕರಿಗೆ ಒಲಿದು ಬರಲಿದೆ ಲ್ಯಾಪ್ಟಾಪ್ ಭಾಗ್ಯ!
ಬೆಂಗಳೂರು, ಜ.22 : ಕರ್ನಾಟಕದ ಶಾಸಕರಿಗೆ ಸದ್ಯ ಲ್ಯಾಪ್ಟಾಪ್ ಭಾಗ್ಯ ಒದಗಿ ಬಂದಿದೆ. ಹೌದು ಪ್ರತಿ ಶಾಸಕರಿಗೆ ಲ್ಯಾಲ್ ಟಾಪ್ ಖರೀದಿಸಲು ಸರ್ಕಾರ ಅನುದಾನ ನೀಡಲು ಮುಂದಾಗಿದೆ. ಈ ಕುರಿತು ಸ್ಪೀಕರ್ ಕಾಗೋಡು ತಿಮ್ಮಪ್ಪ ಮಾಹಿತಿ ನೀಡಿದ್ದು, ಲ್ಯಾಪ್ ಟಾಪ್ ಖರೀದಿ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಸ್ಪೀಕರ್ ಕಾಗೋಡು ತಿಮ್ಮಪ್ಪ, ಸರ್ಕಾರದ ವತಿಯಿಂದ ಪ್ರತಿ ಶಾಸಕರಿಗೆ ಲ್ಯಾಪ್ ಟಾಪ್ ಖರೀದಿಸಲು 60,000ರೂ ನೀಡಲಾಗುವುದು ಎಂದು ಹೇಳಿದರು. ಇದಕ್ಕಾಗಿ ಸುಮಾರು 1.34 ಕೋಟಿ ವೆಚ್ಚವಾಗಲಿದ್ದು, ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಸರ್ಕಾರ ನೀಡಿದ ಹಣಕಾಸಿನ ನೆರವಿನಲ್ಲಿ ಶಾಸಕರು ತಮ್ಮಿಷ್ಟದ ಕಂಪನಿಯ ಲ್ಯಾಪ್ ಟಾಪ್ ಖರೀದಿಸಬಹುದು. ಲ್ಯಾಪ್ ಟಾಲ್ ಖರೀದಿಸಿದ ಶಾಸಕರು ಅದರ ಬಿಲ್ ಅನ್ನು ವಿಧಾನಸಭೆಯ ಮುಖ್ಯ ಕಾರ್ಯರ್ಶಿಅವರಿಗೆ ಸಲ್ಲಿಸಬೇಕಾಗುತ್ತದೆ ಎಂದು ಹೇಳಿದರು. ಇಂದಿನ ತಂತ್ರಜ್ಞಾನದ ಯುಗದಲ್ಲಿ ಲ್ಯಾಪ್ ಟಾಪ್ ಶಾಸಕರಿಗೆ ಸಹಾಯಕವಾಗಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.[ಶಾಸಕರಿಗೆ ಐಪ್ಯಾಡ್]
ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಸಕರಿಗೆ ಐಪಾಡ್ ನೀಡಲಾಗಿತ್ತು. ಆದರೆ, ಐಪಾಡ್ ಗಿಂತ ಲ್ಯಾಪ್ ಟಾಪ್ ಶಾಸಕರಿಗೆ ಹೆಚ್ಚು ನೆರವಾಗಲಿದೆ. ಶಾಸಕರು ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಾರೆ ಎಂದು ಕಾಗೋಡು ತಿಮ್ಮಪ್ಪ ಹೇಳಿದರು. ಸರ್ಕಾರದಿಂದ ಕೇವಲ ಒಂದು ಬಾರಿ ಮಾತ್ರ ಖರೀದಿಗೆ ಅನುದಾನ ನೀಡಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.
ಮಾರ್ಗಸೂಚಿ ಬಳಿಕ ಕ್ರಮ : ಶಾಸಕರ ವಿದೇಶ ಪ್ರವಾಸ ಸದ್ಯಕ್ಕೆ ನಿಂತಿದ್ದು, ಈ ಕುರಿತು ಸ್ಪಷ್ಟ ಮಾರ್ಗಸೂಚಿ ಸಿದ್ಧವಾದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಾಗೋಡು ತಿಮ್ಮಪ್ಪ ಹೇಳಿದ್ದಾರೆ. ಶಾಸಕರ ವಿದೇಶ ಪ್ರವಾಸ ಕುರಿತಂತೆ ಮಾರ್ಗಸೂಚಿ ಸಿದ್ಧಪಡಿಸಲು ವಿಧಾನಸಭೆ, ವಿಧಾನ ಪರಿಷತ್ ಕಾರ್ಯದರ್ಶಿಗಳ ನೇತೃತ್ವದ ಸಮಿತಿ ರಚಿಸಲಾಗಿದೆ. ಪ್ರವಾಸದಿಂದ ಅರ್ಥಪೂರ್ಣ ಕೆಲಸವಾಗಬೇಕು ಎಂಬ ನಿಟ್ಟಿನಲ್ಲಿ ಮಾರ್ಗಸೂಚಿ ಸಿದ್ಧಪಡಿಸುವಂತೆ ಸೂಚಿಸಲಾಗಿದೆ. ಶಾಸಕರ ಅಭಿಪ್ರಾಯ ಪಡೆದು ಸಮಿತಿ ಫೆಬ್ರವರಿ 20ರೊಳಗೆ ಸಮಿತಿ ವರದಿ ನೀಡಲಿದೆ ಎಂದರು.
-
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ











Click it and Unblock the Notifications