ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ವಿಜಯಣ್ಣ'ನಿಗೆ ತಪ್ಪಿದ ಪರಿಷತ್ ಟಿಕೆಟ್: ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ

|
Google Oneindia Kannada News

ಬೆಂಗಳೂರು, ಮೇ. 24: ಕರ್ನಾಟಕ ಬಿಜೆಪಿ ಪ್ರಶ್ನಾತೀತ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರ ಸಚಿವನಾಗುವ ಕನಸು ಭಗ್ನವಾಗಿದೆ.

ವಿಧಾನ ಪರಿಷತ್ ಅಭ್ಯರ್ಥಿಯಾಗಿ ವಿಧಾನಸೌಧ ಪ್ರವೇಶಿಸುತ್ತಾರೆ ಎಂಬ ಬಿಎಸ್ ವೈ ಆಶಯಕ್ಕೆ ಬಿಜೆಪಿ ಹೈಕಮಾಂಡ್ ನೀರೆರಚಿದೆ. ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ವಿಜಯೇಂದ್ರ ಬೆಂಬಲಿಗರು ಸಾಮಾಜಿಕ ಜಾಲ ತಾಣದಲ್ಲಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಬಲಿಗರು ಸೌಜನ್ಯದಿಂದ ವರ್ತಿಸುವಂತೆ ವಿಜಯೇಂದ್ರ ಮನವಿ ಮಾಡಿದ್ದಾರೆ.

Breaking; ಯಡಿಯೂರಪ್ಪ ಭೇಟಿಯಾದ ಜಮೀರ್ ಅಹ್ಮದ್ Breaking; ಯಡಿಯೂರಪ್ಪ ಭೇಟಿಯಾದ ಜಮೀರ್ ಅಹ್ಮದ್

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿರುವ ಬಿ.ವೈ. ವಿಜಯೇಂದ್ರ ಹಲವು ಉಪ ಚುನಾವಣೆಯಗಳ ಹೊಣೆ ಹೊತ್ತು ಪಕ್ಷಕ್ಕೆ ಜಯ ತಂದುಕೊಟ್ಟಿದ್ದರು. ಯಡಿಯೂರಪ್ಪ ಸಿಎಂ ಸ್ಥಾನದಿಂದ ಇಳಿದ ಬಳಿಕ ವಿಜಯೇಂದ್ರ ಅವರಿಗೆ ವಿಧಾನಸೌಧ ಎಂಟ್ರಿ ಕೊಡಿಸಲು ಯಡಿಯೂರಪ್ಪ ಆಸಕ್ತಿ ವಹಿಸಿದ್ದರು.

Karnataka MLC Election: reason for BY Vijayendra BJP Ticket missing

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆದಿತ್ತು. ಅಲ್ಲಿ ವಿಜಯೇಂದ್ರ ಅವರನ್ನು ಮೇಲ್ಮನೆಗೆ ಆಯ್ಕೆ ಮಾಡುವಂತೆ ಕೋರ್ ಕಮಿಟಿ ಬಿಜೆಪಿ ಹೈಕಮಾಂಡ್ ಗೆ ಶಿಫಾರಸು ಮಾಡಿತ್ತು. ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಿ ಸಚಿವ ಸ್ಥಾನ ಅಲಂಕರಿಸಲಿದ್ದಾರೆ ಎಂದೇ ಹೇಳಲಾಗಿತ್ತು. ಕೊನೆ ಕ್ಷಣದಲ್ಲಿ ಬಿಜೆಪಿ ಹೈಕಮಾಂಡ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ವಿಜಯೇಂದ್ರ ಅವರಿಗೆ ಟಿಕೆಟ್ ಕೈ ತಪ್ಪಿದೆ.

Karnataka MLC Election: reason for BY Vijayendra BJP Ticket missing

ವಿಜಯೇಂದ್ರ ಅವರಿಗೆ ಟಿಕೆಟ್ ಕೈತಪ್ಪುತ್ತಿದ್ದಂತೆ ಅವರ ಬೆಂಬಲಿಗರು ಸಾಮಾಜಿಕ ಜಾಲ ತಾಣದಲ್ಲಿ ರೊಚ್ಚಿಗೆದ್ದಿದ್ದಾರೆ. ಬಿಜೆಪಿ ಹೈ ಕಮಾಂಡ್ ತೀರ್ಮಾನದ ಬಗ್ಗೆ ಕಿಡಿ ಕಾರಿದ್ದಾರೆ. ಅನಿರೀಕ್ಷಿತ ತಿರುವಿನಲ್ಲಿ ರಾಜಕೀಯ ಪ್ರವೇಶಿಸಿದ ನನಗೆ ಬಿಜೆಪಿ ಉಪಾಧ್ಯಕ್ಷನಾಗಿ ಮಹತ್ವದ ಜವಾಬ್ದಾರಿ ನೀಡಿ ಬೆನ್ನು ತಟ್ಟಿ ಬಿಜೆಪಿ ಪಕ್ಷ ಬೆಳೆಸುತ್ತಿದೆ. ರಾಜಕೀಯ ಅಧಿಕಾರ ನಿಂತ ನೀರಲ್ಲ. ಅದು ಹರಿಯುವ ನದಿ ಹಾಗೆ. ಇದನ್ನು ಕಾರ್ಯಕರ್ತರು ಮತ್ತು ಅಭಿಮಾನಿಗಳು ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ.

ಅನಗತ್ಯ ಟೀಕೆ, ಉದ್ಘೋಷ, ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿದರೆ, ಅದು ನನ್ನ ವ್ಯಕ್ತಿತ್ವಕ್ಕೆ ಹಾಗೂ ತಂದೆ ಬಿಎಸ್ ವೈ ಅವರ ಭಾವನೆಗಳಿಗೆ ಮನಸಿ ಬಳಿದಂತಾಗುತ್ತದೆ. ಹೀಗಾಗಿ ನನ್ನ ಹಿತೈಷಿಗಳು ಯಾರೂ ಸಾಮಾಜಿಕ ಜಾಲ ತಾಣದಲ್ಲಿ ಅನಗತ್ಯ ಟೀಕೆ ಮಾಡಬೇಡಿ. ಬಿಜೆಪಿ ಶಿಸ್ತಿನ ಪಕ್ಷ, ನಾವೆಲ್ಲರೂ ಸಾಮಾನ್ಯ ಕಾರ್ಯಕರ್ತರು. ಸಾಮರ್ಥ ಇರುವವರನ್ನು ಪಕ್ಷ ಎಂದೂ ಕೈ ಬಿಡಲ್ಲ. ಈ ನಿಟ್ಟಿನಲ್ಲಿ ಎಲ್ಲರೂ ಸೌಜನ್ಯದಿಂದ ನಡೆದುಕೊಳ್ಳಬೇಕು. ನಿಮ್ಮ ಬೆಂಬಲ ಸದಾ ಇರಲಿ ಎಂದು ವಿಜಯೇಂದ್ರ ವಿನಂತಿ ಮಾಡಿದ್ದಾರೆ.

Karnataka MLC Election: reason for BY Vijayendra BJP Ticket missing

ಟಿಕೆಟ್ ನಿರಾಕರಣೆ ಕಾರಣ:

ಚುನಾವಣಾ ಕಣದಲ್ಲಿ ನಿಂತು ಜಯ ಗಳಿಸುವ ವ್ಯಕ್ತಿಗಳನ್ನು ಪರಿಗಣಿಸಿಲ್ಲ. ಹೀಗಾಗಿ ವಿಜಯೇಂದ್ರ ಅವರಿಗೆ ಹೈಕಮಾಂಡ್ ಟಿಕೆಟ್ ನೀಡಿಲ್ಲ. ಸರಣಿ ಚುನಾವಣೆಗಳು ಎದುರಾಗುತ್ತಿವೆ. ಹೀಗಾಗಿ ಪಕ್ಷವನ್ನು ಸಂಘಟನೆ ಜತೆಗೆ ಗೆಲುವು ಸಾಧಿಸುವ ಅಗತ್ಯವಿದೆ. ಇದನ್ನು ಅರಿತು ಬಿಜೆಪಿ ಉಪಾಧ್ಯಕ್ಷರಾಗಿರುವ ವಿಜಯೇಂದ್ರ ಅವರಿಗೆ ಟಿಕೆಟ್ ನೀಡಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ವಿಜಯೇಂದ್ರ ಜಯ ಗಳಿಸುವ ಶಕ್ತಿ ಇರುವುದರಿಂದ ಅವರಿಗೆ ವಿಧಾನ ಪರಿಷತ್ ಟಿಕೆಟ್ ನಿರಾಕರಣೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

Karnataka MLC Election: reason for BY Vijayendra BJP Ticket missing

ಬಿಎಸ್ ವೈ ಪ್ಲಾನ್ ಪ್ಲಾಪ್ :

ವಿಜಯೇಂದ್ರ ಅವರನ್ನು ಮೇಲ್ಮನೆ ಸದಸ್ಯನನ್ನಾಗಿ ಆಯ್ಕೆ ಮಾಡಿ ಸಚಿವ ಸ್ಥಾನ ಕೊಡಿಸುವುದು. ಸಚಿವರಾಗಿ ವಿಜಯೇಂದ್ರ ಚುನಾವಣೆ ಹೊಸ್ತಿಲಲ್ಲಿ ಜನಪ್ರಿಯ ಕೆಲಸ ಮಾಡಿದರೆ ವರ್ಚಸ್ಸು ಹೆಚ್ಚಾಗುತ್ತದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಅನುಕೂಲವಾಗಲಿದೆ ಎಂಬುದು ಬಿಎಸ್ ವೈ ಅವರ ಆಲೋಚನೆಯಾಗಿತ್ತು. ಹೀಗಾಗಿಯೇ ಕೋರ್ ಕಮಿಟಿ ಸಭೆಗೂ ಮುನ್ನ ವಿಜಯೇಂದ್ರ ಅವರ ಹೆಸರನ್ನು ಅಂತಿಮಗೊಳಿಸಿ ಬಿಜೆಪಿ ಕೋರ್ ಕಮಿಟಿ ರವಾನಿಸಿತ್ತು. ಆದ್ರೆ ಹೈ ಕಮಾಂಡ್ ವಿಜಯೇಂದ್ರ ಅವರಿಗೆ ವಿಧಾನ ಪರಿಷತ್ ಸ್ಥಾನಕ್ಕೆ ಸ್ಪರ್ಧಿಸಲು ಅವಕಾಶ ನೀಡಿಲ್ಲ. ಇದು ಬಿಎಸ್ ವೈ ಹಾಗೂ ವಿಜಯೇಂದ್ರ ಅವರಲ್ಲಿ ಬೇಸರ ಮೂಡಿಸಿದೆ.

Recommended Video

Protein Shake ಕುಡಿಯುವುದು ಎಷ್ಟು ಡೇಂಜರ್ ಗೊತ್ತಾ? ದೇಹಕ್ಕೆ ಎಷ್ಟು ಪ್ರೊಟೀನ್ ಬೇಕು? | Oneindia Kannada

English summary
Karnataka MLC Election: BJP released candidates for Karnataka legislative council election, BY Vijayendra has Missed BJP Ticket. BY Vijayendra requests His supporters to maintain peace.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X