ಬೆಂಗಳೂರು, ಡಿಸೆಂಬರ್ 14; ಕರ್ನಾಟಕ ವಿಧಾನ ಪರಿಷತ್25 ಸ್ಥಾನಗಳಿಗೆ ಶುಕ್ರವಾರ ಮತದಾನ ನಡೆದಿತ್ತು. ಮಂಗಳವಾರ ಮತ ಎಣಿಕೆ ನಡೆಯುತ್ತಿದ್ದು, ಸಂಜೆಯ ವೇಳೆಗೆ ಫಲಿತಾಂಶದ ನಿಖರವಾದ ಚಿತ್ರಣ ದೊರೆಯುವ ನಿರೀಕ್ಷೆ ಇದೆ.
ಬೆಳಗ್ಗೆ 8 ಗಂಟೆಗೆ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಲಿದೆ. ಬ್ಯಾಲೆಟ್ ಪೇಪರ್ನಲ್ಲಿ ಮತ ಚಲಾವಣೆ ಮಾಡಲಾಗಿದೆ. ಅಲ್ಲದೇ ಪ್ರಥಮ ಮತ್ತು ದ್ವಿತೀಯ ಆದ್ಯತೆ ಮತಗಳ ಎಣಿಕೆ ನಡೆಯಬೇಕಿರುವುದರಿಂದ ಸಂಜೆ ವೇಳೆಗೆ ಫಲಿತಾಂಶ ಸಿಗಲಿದೆ.
ಒಟ್ಟು 90 ಅಭ್ಯರ್ಥಿಗಳು ಕಣದಲ್ಲಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್ 20 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು. ಜೆಡಿಎಸ್ನ 6 ಅಭ್ಯರ್ಥಿಗಳು ಮತ್ತು 33 ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದರು. ಸ್ಥಳೀಯ ಸಂಸ್ಥೆಗಳ ಸದಸ್ಯರು ಶುಕ್ರವಾರ ಉತ್ಸಾಹದಿಂದಲೇ ಮತದಾನ ಮಾಡಿದ್ದರು.
ಮತ ಎಣಿಕೆ ಕೇಂದ್ರಕ್ಕೆ ಆಗಮಿಸಲು ಗುರುತಿನ ಚೀಟಿ ಕಡ್ಡಾಯವಾಗಿದೆ. ಕೋವಿಡ್ ನಿಯಮ ಪಾಲನೆ ಮಾಡಬೇಕಿದೆ. ಮತ ಎಣಿಕೆ ಕೇಂದ್ರದ ಸುತ್ತ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಣಿಕೆ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
Recommended Video
General Bipin Rawat Army journey | India's First Chief of Defence | Oneindia Kannada
ವಿಧಾನ ಪರಿಷತ್ ಚುನಾವಣೆ ಮತ ಎಣಿಕೆಯ ಸುದ್ದಿ, ಫೋಟೋ, ವಿಡಿಯೋ ಈ ಪುಟದಲ್ಲಿ ಸಿಗಲಿದೆ. ಪರಿಷತ್ ಚುನಾವಣೆ ಮತ ಎಣಿಕೆ ಕ್ಷಣ-ಕ್ಷಣದ ಮಾಹಿತಿಗಾಗಿ ಈ ಪುಟವನ್ನು ನೋಡಿ, ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿ.....
Dec 14, 2021, 3:43 pm IST
ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು, ಬಿಜೆಪಿಯ 12, ಕಾಂಗ್ರೆಸ್ನ 11, ಜೆಡಿಎಸ್ನ 1 ಮತ್ತು ಒಬ್ಬರು ಪಕ್ಷೇತರರು ವಿಧಾನ ಪರಿಷತ್ನ ನೂತನ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
Dec 14, 2021, 3:00 pm IST
ಉತ್ತರ ಕನ್ನಡ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ವಿಧಾನ ಪರಿಷತ್ ಚುನಾವಣೆಯಲ್ಲಿ ಸೋತಿದ್ದಾರೆ. ಹಿಂದೆ ಶಿರಸಿ-ಸಿದ್ದಾಪುರ ವಿಧಾನಸಭೆ ಚುನಾವಣೆ, ಯಲ್ಲಾಪುರ ಉಪ ಚುನಾವಣೆ, ಲೋಕಸಭೆ ಚುನಾವಣೆಯಲ್ಲಿಯೂ ಅವರು ಸೋಲು ಕಂಡಿದ್ದರು.
Dec 14, 2021, 2:53 pm IST
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್. ರವಿ 2,262 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಹೆಚ್. ಎಮ್. ರಮೇಶ್ಗೌಡ 1540 ಮತ, ಬಿಜೆಪಿಯ ಬಿ. ಸಿ. ನಾರಾಯಣಸ್ವಾಮಿ 54 ಮತಗಳನ್ನು ಪಡೆದಿದ್ದಾರೆ.
Dec 14, 2021, 2:48 pm IST
ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ. ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ನಾವು ಹಿನ್ನಡೆ ಅನುಭವಿಸಿದ್ದೇವೆ. ಆಣೆ, ಪ್ರಮಾಣಗಳ ನಡುವೆಯೂ ನೈತಿಕ ನೆಲೆಯಲ್ಲಿ ಸೆಣಸಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
Dec 14, 2021, 2:42 pm IST
ಇದು ಜನಾಭಿಪ್ರಾಯವಲ್ಲ. ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ನೀಡಿರುವ ತೀರ್ಪು, ಅದು ನಮ್ಮ ಪರವಾಗಿದೆ. ನಾವು 12 ಗೆಲ್ಲಬಹುದು ಎಂಬ ನಿರೀಕ್ಷೆ ಇತ್ತು. ಚಿಕ್ಕಮಗಳೂರಿನಲ್ಲಿ ಗಾಯತ್ರಿ ಕೇವಲ 6 ಮತಗಳಲ್ಲಿ ಸೋತರು. ಅಲ್ಲಿ 10 ಮಂದಿ ನಾಮ ನಿರ್ದೇಶಿತ ಸದಸ್ಯರು ಮತ ಹಾಕಿಲ್ಲ. ಅವರು ಮತದಾನ ಮಾಡಿದ್ದರೆ ಗೆಲ್ಲುತ್ತಿದ್ದರು. ಉಳಿದ ಕಡೆ ನಾವು ಉತ್ತಮ ಪೈಪೋಟಿ ನೀಡಿದ್ದೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
Dec 14, 2021, 1:40 pm IST
ಬೆಂಗಳೂರು ಗ್ರಾಮಾಂತರ ವಿಧಾನ ಪರಿಷತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್. ರವಿ ಗೆಲುವು ಸಾಧಿಸಿದ್ದಾರೆ.
Dec 14, 2021, 1:13 pm IST
ಕಲಬುರಗಿ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಜಿ. ಪಾಟೀಲ್ ಗೆಲುವು, ಕಾಂಗ್ರೆಸ್ ಅಭ್ಯರ್ಥಿ ಶಿವಾನಂದ್ ಪಾಟೀಲ್ ಸೋಲು.
Dec 14, 2021, 1:10 pm IST
ಬೆಳಗಾವಿ ವಿಧಾನ ಪರಿಷತ್ ದ್ವಿಸದಸ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
Dec 14, 2021, 1:01 pm IST
ಮಂಡ್ಯ ವಿಧಾನ ಪರಿಷತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗೂಳಿಗೌಡ ಗೆಲುವು ಬಹುತೇಕ ಖಚಿತ.
Dec 14, 2021, 12:58 pm IST
ಮೈಸೂರು- ಚಾಮರಾಜನಗರ ದ್ವಿಸದಸ್ಯ ವಿಧಾನ ಪರಿಷತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ. ತಿಮ್ಮಯ್ಯ ಭರ್ಜರಿ ಜಯ ಗಳಿಸಿದ್ದಾರೆ.
Dec 14, 2021, 12:56 pm IST
ಧಾರವಾಡ ದ್ವಿಸದಸ್ಯ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಎರಡನೇ ಸ್ಥಾನದಲ್ಲಿದ್ದಾರೆ.
Dec 14, 2021, 12:55 pm IST
ಬೆಳಗಾವಿ ವಿಧಾನ ಪರಿಷತ್ ದ್ವಿಸದಸ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಎರಡನೇ ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
Dec 14, 2021, 12:52 pm IST
ಕಲಬುರಗಿ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಜಿ. ಪಾಟೀಲ್ ಮುನ್ನಡೆ, ಕಾಂಗ್ರೆಸ್ ಅಭ್ಯರ್ಥಿ ಶಿವಾನಂದ್ ಪಾಟೀಲ್ ಹಿನ್ನಡೆ.
Dec 14, 2021, 12:51 pm IST
ರಾಯಚೂರು ವಿಧಾನ ಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಬನಹಟ್ಟಿ 400 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.
Dec 14, 2021, 12:48 pm IST
ರಾಯಚೂರು ವಿಧಾನ ಪರಿಷತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಗೌಡ ಬಯ್ಯಾಪುರ ಗೆಲುವು ಸಾಧಿಸಿದ್ದಾರೆ.
Dec 14, 2021, 12:47 pm IST
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್. ರವಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
Dec 14, 2021, 12:47 pm IST
ಬಳ್ಳಾರಿ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೈ.ಎಂ. ಸತೀಶ್ 757 ಮತಗಳಿಂದ ಗೆಲುವು ಸಾಧಿಸಿದ್ದಾರೆ.
Dec 14, 2021, 12:37 pm IST
ಧಾರವಾಡ ದ್ವಿಸದಸ್ಯ ವಿಧಾನ ಪರಿಷತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಮೊದಲ ಪ್ರಾಶಸ್ತ್ಯದ ಮತದಲ್ಲಿ ಗೆಲುವು ಸಾಧಿಸಿದ್ದಾರೆ.
Dec 14, 2021, 12:34 pm IST
ಮೈಸೂರು- ಚಾಮರಾಜನಗರ ದ್ವಿಸದಸ್ಯ ವಿಧಾನ ಪರಿಷತ್ ಕ್ಷೇತ್ರದಲ್ಲಿ ಮೂರನೇ ಸ್ಥಾನಕ್ಕೆ ಕುಸಿದ ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ.
Dec 14, 2021, 12:33 pm IST
ರಾಯಚೂರು ವಿಧಾನ ಪರಿಷತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
Dec 14, 2021, 12:30 pm IST
ಮೈಸೂರು- ಚಾಮರಾಜನಗರ ದ್ವಿಸದಸ್ಯ ವಿಧಾನ ಪರಿಷತ್ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಮೂರನೇ ಸ್ಥಾನದಲ್ಲಿ ಹಿನ್ನಡೆ ಪಡೆದಿದೆ.
Dec 14, 2021, 12:30 pm IST
ಮೈಸೂರು- ಚಾಮರಾಜನಗರ ದ್ವಿಸದಸ್ಯ ವಿಧಾನ ಪರಿಷತ್ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಮೂರನೇ ಸ್ಥಾನದಲ್ಲಿ ಹಿನ್ನಡೆ ಪಡೆದಿದೆ.
Dec 14, 2021, 12:24 pm IST
ಬೆಳಗಾವಿ ವಿಧಾನ ಪರಿಷತ್ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಹಿನ್ನಡೆ ಅನುಭವಿಸಿದ್ದಾರೆ.
Dec 14, 2021, 12:23 pm IST
ಬೆಳಗಾವಿ ವಿಧಾನ ಪರಿಷತ್ ದ್ವಿಸದಸ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
Dec 14, 2021, 12:22 pm IST
ಮಂಡ್ಯ ವಿಧಾನ ಪರಿಷತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗೂಳಿಗೌಡ ಮುನ್ನಡೆ ಕಾಯ್ದುಕೊಂಡಿದ್ದಾರೆ.
Dec 14, 2021, 12:19 pm IST
ಬೆಳಗಾವಿ ವಿಧಾನ ಪರಿಷತ್ ದ್ವಿಸದಸ್ಯ ಕ್ಷೇತ್ರದಲ್ಲಿ ಮತ ಎಣಿಕೆ ಕಾರ್ಯ ವಿಳಂಬ.
Dec 14, 2021, 12:15 pm IST
ಕೋಲಾರ- ಚಿಕ್ಕಬಳ್ಳಾಪುರ ವಿಧಾನ ಪರಿಷತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಕುಮಾರ್ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ. ಕೆ.ಎನ್. ವೇಣುಗೋಪಾಲ್ ಸೋಲು ಕಂಡಿದ್ದಾರೆ.
Dec 14, 2021, 12:13 pm IST
ಕಲಬುರಗಿ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಜಿ. ಪಾಟೀಲ್ ಮುನ್ನಡೆ ಕಾಯ್ದುಕೊಂಡಿದ್ದಾರೆ.
Dec 14, 2021, 12:09 pm IST
ದಕ್ಷಿಣ ಕನ್ನಡ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಮೊದಲ ಪ್ರಾಶಸ್ತ್ಯದ ಮತದಲ್ಲಿ ಗೆಲುವು ಸಾಧಿಸಿದ್ದಾರೆ.
Dec 14, 2021, 12:06 pm IST
ವಿಜಯಪುರ- ಬಾಗಲಕೋಟೆ ವಿಧಾನ ಪರಿಷತ್ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಎಚ್. ಪೂಜಾರ್ ಎರಡನೇ ಸ್ಥಾನದಲ್ಲಿದ್ದಾರೆ.
READ MORE
6:03 AM, 10 Dec
ಕರ್ನಾಟಕ
ವಿಧಾನ ಪರಿಷತ್ ಚುನಾವಣೆ
ಸ್ಥಳೀಯ ಸಂಸ್ಥೆಗಳಿಂದ ಒಟ್ಟು 25 ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಮತದಾನ ನಡೆಯುತ್ತಿದೆ. ಸಂಜೆ 4 ಗಂಟೆಯ ತನಕ ಮತದಾನ ಮಾಡಲು ಅವಕಾಶ ನೀಡಲಾಗಿದೆ.
ಚುನಾವಣೆಯಲ್ಲಿ ಇವಿಎಂ ಬಳಕೆ ಇಲ್ಲ. ಮತಪತ್ರದ ಮೂಲಕ ಸದಸ್ಯರು ಮತದಾನ ಮಾಡಬೇಕಿದೆ.
6:26 AM, 10 Dec
ಶಿವಮೊಗ್ಗ ಮಹಾನಗರ ಪಾಲಿಕೆಯ ಸಭಾಂಗಣದ ಮತಗಟ್ಟೆಯಲ್ಲಿ ಮತದಾನ ನಡೆಯುವುದರಿಂದ 10/12/2021ರಂದು ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಕಚೇರಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯುವುದಿಲ್ಲ.
6:58 AM, 10 Dec
ಕೊಪ್ಪಳ ಜಿಲ್ಲೆಯ 7 ತಾಲ್ಲೂಕುಗಳಲ್ಲಿ 1358 ಪುರುಷ ಮತ್ತು 1518 ಮಹಿಳೆಯರು ಸೇರಿ ಒಟ್ಟು 2876 ಮತದಾರರಿದ್ದಾರೆ. ಕೊಪ್ಪಳ 39, ಗಂಗಾವತಿ 19, ಕಾರಟಗಿ 13, ಕನಕಗಿರಿ 11, ಕುಷ್ಟಗಿ 37, ಯಲಬುರ್ಗಾ 23 ಹಾಗೂ ಕುಕನೂರು 15 ಸೇರಿ ಒಟ್ಟು 157 ಮತದಾನ ಕೇಂದ್ರಗಳಿವೆ.
7:33 AM, 10 Dec
ಮಂಡ್ಯ ಜಿಲ್ಲೆಯಲ್ಲಿ ಒಟ್ಟು 4024 ಮತದಾರರು ಇದ್ದಾರೆ. ಇವರಲ್ಲಿ 2095 ಮಹಿಳಾ ಮತ್ತು 1929 ಪುರುಷರು. ಅಂಧ, ದುರ್ಬಲ ಮತ್ತು ಅನಕ್ಷರಸ್ಥ 70 ಮತದಾರರಿಗೆ ಸಂಗಡಿಗರೊಂದಿಗೆ ಬಂದು ಮತಚಲಾಯಿಸಲು ಅನುಮತಿ ನೀಡಲಾಗಿದೆ.
8:05 AM, 10 Dec
ಪರಿಷತ್ ಚುನಾವಣೆ ಮತದಾನ ಆರಂಭಗೊಂಡಿದೆ.
9:13 AM, 10 Dec
ಮತದಾನ ಇದ್ದರೂ ಮತದಾನ ಕೇಂದ್ರಕ್ಕೆ ಮುಖ್ಯಾಧಿಕಾರಿ ಆಗಮಿಸದ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರದ ಪುರಸಭೆಯಲ್ಲಿ ನಡೆದಿದೆ. ಈ ಬಗ್ಗೆ ಮತದಾನ ಕೇಂದ್ರದ ಒಳಗಿದ್ದ ಮತಗಟ್ಟೆ ಸಿಬ್ಬಂದಿಗಳು ಹಾಗೂ ಏಜೆಂಟ್ಗಳು ಅಸಮಾಧಾನ ವ್ಯಕ್ತಪಡಿಸಿದರು. ಸದಸ್ಯರು ಮತ ಚಲಾಯಿಸಲು ಬಂದರೂ ಮುಖ್ಯಾಧಿಕಾರಿ ಬಂದಿರಲಿಲ್ಲ.
9:23 AM, 10 Dec
ಕೋಟ ಶ್ರೀನಿವಾಸ ಪೂಜಾರಿಗೆ ಬೆಂಬಲ ನೀಡಿದ ಗ್ರಾಮ ಪಂಚಾಯಿತಿ ಸದಸ್ಯರು. ಕೋಟ ಶ್ರೀನಿವಾಸ ಪೂಜಾರಿ ದಕ್ಷಿಣ ಕನ್ನಡ ಕ್ಷೇತ್ರದ ಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ. ಮತದಾನಕ್ಕೂ ಮುನ್ನ ಅಭ್ಯರ್ಥಿ ಭಾವಚಿತ್ರದ ಮುಖವಾಡ ಧರಿಸಿದ ಸದಸ್ಯರು.
9:26 AM, 10 Dec
ವಿಧಾನ ಪರಿಷತ್ ಚುನಾವಣೆಗೆ ಕಲಬುರಗಿಯ ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ಮತದಾನ ಮಾಡಿದರು.
9:57 AM, 10 Dec
ಪರಿಷತ್ ಚುನಾವಣೆಗೆ ಮತದಾನ ಮಾಡಿದ ಬಳಿಕ ಬಿ. ಎಸ್. ಯಡಿಯೂರಪ್ಪ ಮಾತನಾಡಿದರು.
10:14 AM, 10 Dec
ವಿಧಾನ ಪರಿಷತ್ ಚುನಾವಣೆಗೆ ರಾಮನಗರದಲ್ಲಿ ಮತದಾನ ಆರಂಭ. ಸಂಸದ, ಶಾಸಕರು ಸೇರಿದಂತೆ 2062 ಮತದಾರರು ಇದ್ದಾರೆ. ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಸೇರಿ 3,898 ಮತದಾರರು ಇದ್ದಾರೆ. 2036 ಮಹಿಳಾ ಹಾಗೂ 1862 ಪುರುಷ ಮತದಾರರು. ಒಟ್ಟು 126 ಮತಗಟ್ಟೆ ಸ್ಥಾಪನೆ ಮಾಡಲಾಗಿದೆ.
10:23 AM, 10 Dec
ವಿಧಾನ ಪರಿಷತ್ ಚುನಾವಣೆಗೆ ಶೃಂಗೇರಿಯಲ್ಲಿ ಕಾಂಗ್ರೆಸ್ ಶಾಸಕ ಟಿ. ಡಿ. ರಾಜೇಗೌಡ ಮತದಾನ ಮಾಡಿದರು. ಶೃಂಗೇರಿ ಪಟ್ಟಣ ಪಂಚಾಯಿತಿಯ ಮತಗಟ್ಟೆಯಲ್ಲಿ ಶಾಸಕರು ಮತ ಚಲಾವಣೆ ಮಾಡಿದರು.
10:44 AM, 10 Dec
ಕೋಲಾರ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ 5208 ಗ್ರಾಮ ಪಂಚಾಯಿತಿ ಸದಸ್ಯರು, 372 ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು, ಇಬ್ಬರು ಲೋಕಸಭಾ ಸದಸ್ಯರು, 11 ವಿಧಾನಸಭಾ ಸದಸ್ಯರು ಮತ್ತು 5 ವಿಧಾನ ಪರಿಷತ್ ಸದಸ್ಯರು ಸೇರಿ ಒಟ್ಟು 5598 ಮತದಾರರು ಇದ್ದಾರೆ.
10:58 AM, 10 Dec
ರಾಮನಗರ
ರಾಮನಗರ ಜಿಲ್ಲೆಯಲ್ಲಿ 10 ಗಂಟೆಯ ತನಕ ಶೇ 7.14 ಮತದಾನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
11:03 AM, 10 Dec
ವಿಧಾನ ಪರಿಷತ್ ಚುನಾವಣೆಗೆ ಚಿಕ್ಕಬಳ್ಳಾಪುರದಲ್ಲಿ ಮತದಾನ ಮಾಡಿದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್
ವಿಧಾನಪರಿಷತ್ ಚುನಾವಣೆಯ ಮತದಾನದ ದಿನವಾದ ಇಂದು ಚಿಕ್ಕಬಳ್ಳಾಪುರದಲ್ಲಿ ನನ್ನ ಹಕ್ಕು, ಅಮೂಲ್ಯ ಮತವನ್ನು ಚಲಾಯಿಸಿದೆ. ರಾಜ್ಯದ ಅಭಿವೃದ್ಧಿಗಾಗಿ, ಜನಕಲ್ಯಾಣಕ್ಕಾಗಿ ಉತ್ತಮ ಅಭ್ಯರ್ಥಿಯನ್ನು ಆರಿಸಲು ಈ ಮತವನ್ನು ನೀಡಿದ್ದೇನೆ. ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಕೂಡ ಜನಹಿತದೃಷ್ಟಿಯಿಂದ ಮತ ಚಲಾಯಿಸಿ ಎಂದು ಕೋರುತ್ತೇನೆ.#MLCElectionspic.twitter.com/GXFH7TXZEb
ಹಾಸನದಲ್ಲಿ ವಿಧಾನ ಪರಿಷತ್ ಚುನಾವಣೆಗೆ ಮತದಾನ ಮಾಡಿದ ಸದಸ್ಯರೊಬ್ಬರು ಮತಪತ್ರದ ಫೋಟೋವನ್ನು ತೆಗೆದುಕೊಂಡಿದ್ದಾರೆ. ಸೂರಜ್ ರೇವಣ್ಣಗೆ ಮತದಾನ ಮಾಡಿರುವ ಮತಪತ್ರದ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ್ದಾರೆ.
11:35 AM, 10 Dec
ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಪರಿಷತ್ ಚುನಾವಣೆಗೆ ಮತದಾನ ಮಾಡಿದರು.
11:54 AM, 10 Dec
ವಿಧಾನ ಪರಿಷತ್ ಚುನಾವಣೆಗೆ ಹೊಸಪೇಟೆಯ ಕಮಲಾಪುರ ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿ ಸಚಿವ ಆನಂದ್ ಸಿಂಗ್ ಮತದಾನ ಮಾಡಿದರು.
12:08 PM, 10 Dec
ಕೇಂದ್ರ ಸಚಿವ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ವಿಧಾನ ಪರಿಷತ್ ಚುನಾವಣೆಗೆ ಹುಬ್ಬಳ್ಳಿಯಲ್ಲಿ ಮತದಾನ ಮಾಡಿದರು.
12:29 PM, 10 Dec
ವಿಧಾನ ಪರಿಷತ್ ಚುನಾವಣೆಗೆ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಮತದಾನ ಮಾಡಿದರು. ಬಳಿಕ ಮಾತನಾಡಿ, ಈ ಬಾರಿ ಎಲ್ಲಾ ಪಕ್ಷದವರು ಎಂಎಲ್ ಸಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಆದರೆ ನಮ್ಮ ಅಭ್ಯರ್ಥಿ ಚುನಾವಣೆಯಲ್ಲಿ ಗೆಲ್ಲುತ್ತಾರೆ. ನಾನು ನಮ್ಮ ನಗರಸಭಾ ಸದಸ್ಯರ ಜೊತೆ ಮತ ಹಾಕಿದ್ದೇನೆ. ಕುಮಾರಸ್ವಾಮಿ ಈ ಜಿಲ್ಲೆಯ ಮನೆಮಗ. ಮನೆಮಗನನ್ನು ನಮ್ಮ ಜನರು ಬಿಟ್ಟುಕೊಡಲ್ಲ ಎಂದರು.
12:52 PM, 10 Dec
ವಿಧಾನ ಪರಿಷತ್ ಚುನಾವಣೆಗಾಗಿ ಮುಧೋಳ ನಗರ ಸಭೆಯ ಮತಗಟ್ಟೆಯಲ್ಲಿ ಸಚಿವ ಗೋವಿಂದ ಕಾರಜೋಳ ಮತದಾನ ಮಾಡಿದರು.
1:23 PM, 10 Dec
ವಿಧಾನ ಪರಿಷತ್ ಚುನಾವಣೆಗೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ನವಲಗುಂದ ನಗರದಲ್ಲಿ ಮತದಾನ ಮಾಡಿದರು.
1:56 PM, 10 Dec
ನನಗೇ ಮತ ನೀಡುವಂತೆ ಚನ್ನಪಟ್ಟಣ ನಗರಸಭಾ ಜೆಡಿಎಸ್ ಸದಸ್ಯರಿಗೆ ಕಾಂಗ್ರೆಸ್ ಅಭ್ಯರ್ಥಿ ಎಸ್. ರವಿ ಮನವಿ ಮಾಡಿದರು. ಈ ವೇಳೆ ಮಾತಾಡ್ರಪ್ಪ ಹೋಗಲಿ, ನಮ್ಮನ್ನು ಹತ್ತಿರಕ್ಕೂ ಸೇರಿಸಲ್ವ ಎಂದು ನಗೆಚಟಾಕಿ ಹಾರಿಸಿದರು.
2:05 PM, 10 Dec
ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ಮತದಾನ ಮಾಡಿದರು. ಬಳಿಕ ಮತನಾಡಿದ ಅವರು, ಈ ಬಾರಿ ಹೊಸಮುಖ ಗೆಲ್ಲಬೇಕು. ಈ ಚುನಾವಣೆ ಮೂಲಕ ಒಂದು ಬದಲಾವಣೆ ಬರಲಿದೆ ಎಂದು ಹೇಳಿದರು.
2:09 PM, 10 Dec
ಸ್ಥಳೀಯಾಡಳಿತ ಸಂಸ್ಥೆಗಳ ಕ್ಷೇತ್ರ ದಕ್ಷಿಣ ಕನ್ನಡ- ಉಡುಪಿ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಕಾರ್ಕಳದಲ್ಲಿ ಮತ ಚಲಾವಣೆ ಮಾಡಿದ ಸಚಿವ ಸುನಿಲ್ ಕುಮಾರ್.
2:14 PM, 10 Dec
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಬೀಳಗಿ ಮತದಾನ ಕೇಂದ್ರ ಸಂಖ್ಯೆ 334ರಲ್ಲಿ ಮತದಾನ ಚಲಾಯಿಸಿದ ಎಸ್.ಆರ್. ಪಾಟೀಲ್.
2:22 PM, 10 Dec
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣ ಪಂಚಾಯತಿ ಕೇಂದ್ರದಲ್ಲಿ ಮತದಾನ ಮಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ.
2:32 PM, 10 Dec
ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಬೆಳಗಾವಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
2:50 PM, 10 Dec
ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ಬೆಳಗಾವಿಯಲ್ಲಿ ಬಿಜೆಪಿಗೆ ಹಿನ್ನಡೆ ಇಲ್ಲ, ಗೆದ್ದೆ ಗೆಲ್ಲುತ್ತೇವೆ ಎಂದು ಅರಣ್ಯ ಹಾಗೂ ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
Karnataka MLC Election Results 2021 Live Updates : Check out the Karnataka Legislative Council Election 2021 Results live updates, latest news, winners, losers and highlights in Kannada.