ಶಾಸನಸಭೆ ಒಪ್ಪಿದರೆ ಮತ್ತೆ ರಾಜ್ಯದಲ್ಲಿ 'ಸಾರಾಯಿ ಭಾಗ್ಯ'
ಬೆಂಗಳೂರು, ಮಾ. 28: ಬಡವರು ದುಬಾರಿ ಮದ್ಯಕ್ಕೆ ದಾಸರಾಗಿ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಸದನ ಒಪ್ಪಿಗೆ ನೀಡುವುದಾದರೆ ಹಳ್ಳಿಗಳಲ್ಲಿ ಸಾರಾಯಿ ನಿಷೇಧ ತೆರವು ಮಾಡಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹಳ್ಳಿಗಳ ಕಿರಾಣಿ ಅಂಗಡಿಗಳಲ್ಲೂ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ. ಇದಕ್ಕೆ ಬ್ರೇಕ್ ಹಾಕಬೇಕು ಎಂಬ ಕೂಗು ವಿಧಾನಸಭೆಯಲ್ಲಿ ಕೇಳಿಬಂದಿದಕ್ಕೆ ಸಿಎಂ ಸಿದ್ದರಾಮಯ್ಯ ಕೊಟ್ಟ ಉತ್ತರ ಹೀಗಿತ್ತು.[ಬೀಡಿ, ಸಿಗರೇಟು, ಹೆಂಡಕ್ಕೆ ತೆರಿಗೆ ಕಟ್ಟಿಕಟ್ಟಿ ಸುಸ್ತಾಯ್ತಾ?!]
ಬಜೆಟ್ ಚರ್ಚೆಯ ವೇಳೆ ಮಾತನಾಡಿದ ಮುಖ್ಯಮಂತ್ರಿ, ಕಡಿಮೆ ದರದಲ್ಲಿ ಮದ್ಯ ಬಡವರಿಗೆ ಸಿಗುವಂತೆ ಮಾಡುವುದರಲ್ಲಿ ತಪ್ಪೇನಿಲ್ಲ. ಹಿಂದಿನ ಸರ್ಕಾರ ರಾಜ್ಯದಲ್ಲಿ ಸಾರಾಯಿ ನಿಷೇಧ ಮಾಡಿದ್ದಕ್ಕೆ ನನ್ನ ಸಹಮತ ಇರಲಿಲ್ಲ. ನಮ್ಮ ಸರ್ಕಾರವೂ ನಿಷೇಧ ಮುಂದುವರಿಸಿದೆ. ಈಗಲೂ ಎಲ್ಲರ ಒಪ್ಪಿಗೆ ಸಿಕ್ಕರೆ ಸಾರಾಯಿ ಮಾರಾಟ ಮತ್ತೆ ಆರಂಭಿಸುವ ಬಗ್ಗೆ ಯೋಚಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಹಿಂದೆ 10-12 ರೂ.ಗೆ ಸಾರಾಯಿ ಪ್ಯಾಕ್ ಸಿಗುತ್ತಿತ್ತು ಇತ್ತು. ಹಾಗಾಗಿ ನಾನು ಸಾರಾಯಿ ನಿಲ್ಲಿಸಬಾರದು ಎಂದು ಸಲಹೆ ಮಾಡಿದ್ದೆ. ಆದರೆ, ನಿಷೇಧ ಆದ ಬಳಿಕ ಜನ ಹೆಚ್ಚಿನ ಬೆಲೆಯ ಮದ್ಯವನ್ನು ಸೇವಿಸಲಾರಂಭಿಸಿದ್ದಾರೆ. ಇದರಿಂದ ಸಾಲದಲ್ಲಿಯೂ ಮುಳುಗುತ್ತಿದ್ದಾರೆ ಎಂದರು.
ಇದಕ್ಕೆ ಉತ್ತರಿಸಿದ ಕಾಂಗ್ರೆಸ್ನ ರಮೇಶ್ ಕುಮಾರ್, ಆರೋಪ ಮಾಡುವವರು ಮಾಡುತ್ತಲೇ ಇರುತ್ತಾರೆ ಜನಹಿತಕ್ಕಾಗಿ ಯಾವುದೇ ಕಾರ್ಯ ಮಾಡುವುದಕ್ಕೆ ನಮ್ಮ ಬೆಂಬಲ ಇದ್ದೇ ಇದೆ ಎಂದರು.[ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಬೆಂಗಳೂರಿಗೆ ಕೊಟ್ಟಿದ್ದೇನು?]
ಅಗ್ಗದ ಮದ್ಯವನ್ನು ಜಾರಿಗೆ ತನ್ನಿ, ಮದ್ಯದ ಅಂಗಡಿಗಳನ್ನು ಪ್ರತಿ ವರ್ಷ ಹರಾಜು ಹಾಕಿ, ಆಗ ಹೆಚ್ಚಿನ ತೆರಿಗೆ ಸಂಗ್ರಹ ಸಾಧ್ಯವಾಗುತ್ತದೆ ಎಂಬ ಸಲಹೆಗಳು ಸದನದಲ್ಲಿ ಕೇಳಿಬಂದವು.
2007ರ ಜುಲೈನಲ್ಲಿ ಅಂದಿನ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸಾರಾಯಿ ನಿಷೇಧ ಜಾರಿಗೊಳಿಸಿತ್ತು. ಸಾರಾಯಿ ನಿಷೇಧ ಮಾಡುವಂತೆ ಸಾರ್ವಜನಿಕರು ನಡೆಸಿದ ಹೋರಾಟಕ್ಕೆ ಮಣಿದು ಅಂದಿನ ಸರ್ಕಾರ ನಿರ್ಧಾರ ಕೈಗೊಂಡಿತ್ತು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications