Karnataka Name@50: ಕನ್ನಡ-ಸಂಸ್ಕೃತಿ ಇಲಾಖೆಯಿಂದ ರಾಜ್ಯಾದ್ಯಂತ ವಿಶೇಷ ಕಾರ್ಯಕ್ರಮ: ಸಚಿವ
ಬೆಂಗಳೂರು, ಜೂನ್ 09: ಮೈಸೂರು ರಾಜ್ಯ ಎಂಬುದಕ್ಕೆ 'ಕರ್ನಾಟಕ 'ಎಂದು ನಾಮಕರಣ ಗೊಂಡು 50 ವರ್ಷ ಪೂರ್ಣ ಗೊಳ್ಳುತ್ತಿದೆ. ಈ ವಿಶೇಷ 'ಸುವರ್ಣ' ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹತ್ತು ಹಲವು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.
ಶುಕ್ರವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇಲಾಖೆಯ ಆಯವ್ಯಯ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು, ಮೈಸೂರು ರಾಜ್ಯವಾಗಿದ್ದು 1973ರ ಅಕ್ಟೋಬರ್ 20 ರಂದು ಕರ್ನಾಟಕ ಎಂದು ಮರುನಾಮಕರಣವಾಯಿತು. ಇದೀಗ ಆ ಸಂಭ್ರಮಕ್ಕೆ 50 ವರ್ಷ ಪೂರೈಸುತ್ತಿದೆ. ಈ ಐತಿಹಾಸಿಕ ಸಂದರ್ಭದಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿ ಸಾರುವಂತಹ ವಿಶೇಷವಾದ ಕಾರ್ಯಕ್ರಮಗಳನ್ನು ರೂಪಿಸಿ ವರ್ಷವಿಡಿ ಆಯೋಜಿಸಲು ಸೂಕ್ತ ರೂಪರೇಷೆಗಳನ್ನು ಸಿದ್ಧಪಡಿಸಿ ಸಲ್ಲಿಸಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಈ ಬಾರಿ ಆಯವ್ಯಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಲಿದ್ದೇನೆ. ಆ ಮೂಲಕ ಸಂಸ್ಕೃತಿ ಇಲಾಖೆಯ ಕಾರ್ಯಕ್ರಮಗಳು ವ್ಯಾಪಕವಾಗಿ ಮತ್ತು ಹೆಚ್ಚು ಆಕರ್ಷಣೀಯವಾಗಿ ಯೋಜಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.
ರವೀಂದ್ರ ಕಲ್ಲಾಕ್ಷೇತ್ರವನ್ನು ನವೀಕರಿಸಿ ಅಲ್ಲಿನ ಆಸನ ವ್ಯವಸ್ಥೆ ಧ್ವನಿ ಮತ್ತು ಬೆಳಕು ಗಳ ಸುಧಾರಣೆ ಮಾಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
''ಕರ್ನಾಟಕದ ಪರಂಪರೆಯನ್ನು ಬಿಂಬಿಸುವಂತಹ ಚಾಲುಕ್ಯ ಉತ್ಸವ, ಆನೆಗುಂದಿ ಉತ್ಸವ ,ಲಕ್ಕುಂಡಿ ಉತ್ಸವ ,ಹಂಪಿ ಉತ್ಸವ, ನವರಸಪುರ ಉತ್ಸವ, ಕದಂಬ ಉತ್ಸವ, ಇಟಗಿ ಉತ್ಸವ ಹಾಗೂ ಕನಕಗಿರಿ ಉತ್ಸವ ಮುಂತಾದ ಉತ್ಸವಗಳನ್ನು'' ಇನ್ನು ಮುಂದೆ ನಿಗದಿತ ದಿನಾಂಕ ಗಳಂದು ಪ್ರವಾಸಿಗರ ಅನುಕೂಲವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಆಯೋಜಿಸಲಾಗುವುದು. ಈ ಸಂಬಂಧ ವೇಳಾಪಟ್ಟಿಯನ್ನು ಸಿದ್ಧಪಡಿಸಬೇಕು ಎಂದರು.
ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಭಾಗಗಳಲ್ಲಿ ಜಾನಪದ ಲೋಕ ಸ್ಥಾಪನೆಗೆ ಸೂಕ್ತ ಯೋಜನೆ ರೂಪಿಸಬೇಕು. ಐತಿಹಾಸಿಕ ಸ್ಮಾರಕಗಳ ಮುಂದೆ ಪ್ರತಿ ತಿಂಗಳು ರಜಾ ದಿನಗಳಂದು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಕಾರ್ಯಕ್ರಮ ರೂಪಿಸಲು ಕ್ರಮ ಕೈಗೊಳ್ಳುವಂತೆ ಸಚಿವರು ಸಭೆಯಲ್ಲಿ ಸೂಚಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ. ಎನ್. ಮಂಜುಳಾ ,ನಿರ್ದೇಶಕ ವಿಶ್ವನಾಥ ಪಿ ಹಿರೇಮಠ ಹಾಗೂ ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications