ಸುಪ್ರೀಂ ಆದೇಶವೇ ಕಾನೂನು ಬಾಹಿರ : ಬಿವಿ ಆಚಾರ್ಯ
ಬೆಂಗಳೂರು, ಸೆ 13: ಕಾವೇರಿ ನದಿನೀರು ಹಂಚಿಕೆಯ ವಿಚಾರದಲ್ಲಿ ಸುಪ್ರೀಂಕೋರ್ಟ್ ಸೋಮವಾರ (ಸೆ 12) ನೀಡಿದ ತೀರ್ಪಿಗೆ ಹಿರಿಯ ವಕೀಲ ಬಿ ವಿ ಆಚಾರ್ಯ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಕಾವೇರಿ ಜಲವಿವಾದ ಬಗೆಹರಿಸಲು ನ್ಯಾಯಮಂಡಳಿಯನ್ನು ನೇಮಿಸಲಾಗಿದೆ. ಹಾಗಿರುವಾಗ ಸುಪ್ರೀಂಕೋರ್ಟ್ ಆದೇಶ ನೀಡಿ ಅಂತರರಾಜ್ಯ ನದಿನೀರು ಕಾಯ್ದೆಯನ್ನು ಉಲ್ಲಂಘಿಸಿದಂತಾಗಿದೆ ಎಂದು ಮಾಜಿ ಅಡ್ವೋಕೇಟ್ ಜನರಲ್ ಬಿ ವಿ ಆಚಾರ್ಯ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. (ಬೆಂಗಳೂರಿನ 16 ಪ್ರದೇಶಗಳಲ್ಲಿ ಕರ್ಫ್ಯೂ)
ಎರಡು ಬಾರಿ ಸರ್ವೋಚ್ಚ ನ್ಯಾಯಾಲಯ ತಮಿಳುನಾಡಿಗೆ ನೀರು ಬಿಡಬೇಕು ಆದೇಶ ನೀಡಿದೆ. ಈ ಆದೇಶವೇ ಕಾನೂನು ಬಾಹಿರ.

ಸುಪ್ರೀಂ ಆದೇಶವನ್ನು ರಾಜ್ಯ ಸರಕಾರ ಪಾಲಿಸಬೇಕಾದ ಅವಶ್ಯಕತೆಯಿಲ್ಲ. ಆದೇಶ ಪಾಲಿಸುವುದಿಲ್ಲ ಎನ್ನುವ ಧೈರ್ಯದ ನಿರ್ಧಾರಕ್ಕೆ ಸರಕಾರ ಬರಬೇಕು ಅಷ್ಟೇ ಎಂದು ಆಚಾರ್ಯ ಪ್ರತಿಪಾದಿಸಿದ್ದಾರೆ.
ಸುಪ್ರೀಂ ತೀರ್ಪು ಕಾನೂನು ಬಾಹಿರ, ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಪಾಲಿಸುವ ಅವಶ್ಯಕತೆಯಿಲ್ಲ. ಸರಕಾರ ನನ್ನ ಸಲಹೆ ಕೇಳಿದರೆ, ನನ್ನ ಸಲಹೆ ಕೊಡಲು ಸಿದ್ದನಿದ್ದೇನೆ.
ಈ ವಿಚಾರದಲ್ಲಿ ಸರಕಾರ ಗಟ್ಟಿಯಾದ ನಿರ್ಧಾರ ತೆಗೆದುಕೊಳ್ಳಬೇಕು, ಎಲ್ಲಾ ಪಕ್ಷಗಳು ಸರಕಾರದ ಪರವಾಗಿ ನಿಲ್ಲಬೇಕೆಂದು ಆಚಾರ್ಯ ಹೇಳಿದ್ದಾರೆ. (ಬೆಂಗಳೂರು ಹೊತ್ತಿ ಉರಿಯಲು ಮೂಲ ಕಾರಣ)
2013 ರಲ್ಲಿ ಕಾವೇರಿ ಮೇಲುಸ್ತುವಾರಿ ಸಮಿತಿ ಅಸ್ತಿತ್ವಕ್ಕೆ ಬಂದಿದೆ. ಈ ಸಂಬಂಧ ಗೆಜೆಟ್ ಅಧಿಸೂಚನೆ ಹೊರಡಿಸಿದ ಬಳಿಕ ನೀರಿನ ಹಂಚಿಕೆ ವಿಚಾರ ಸಮಿತಿಯ ಮುಂದೆ ಬರಬೇಕೇ ವಿನಃ ಸುಪ್ರೀಂಕೋರ್ಟ್ ಮುಂದೆ ಅಲ್ಲ ಎಂದು ಆಚಾರ್ಯ ಸುಪ್ರೀಂ ತೀರ್ಪಿಗೆ ಆಕ್ಷೇಪಣೆ ವ್ಯಕ್ತ ಪಡಿಸಿದ್ದಾರೆ.
-
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications