ಕರ್ನಾಟಕದ ಸೋಮವಾರದ ತುಣುಕು ಸುದ್ದಿ
ಬೆಂಗಳೂರು, ನ. 24 : ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.
ಸಮಯ 5 ಗಂಟೆ : ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ವೈದ್ಯಕೀಯ ಪರೀಕ್ಷೆಗೆ ಅವಕಾಶ ನೀಡುವಂತೆ ಸಿಐಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರಕ್ಕೆ ಮುಂದೂಡಿದೆ. ಶುಕ್ರವಾರದಿಂದ ಅರ್ಜಿಯ ವಿಚಾರಣೆ ನಡೆಯುತ್ತಿದ್ದು, ವಾದ ಪ್ರತಿವಾದ ನಡೆಯುತ್ತಿದೆ.
ಸಮಯ 4 ಗಂಟೆ : ಗಂಗಾ ಪೂಜೆಗೆ ಹೋಗಿದ್ದ ಅಜ್ಜಿ, ಮೊಮ್ಮಗ ನೀರು ಪಾಲಾದ ಘಟನೆ ಶಿರಾದಲ್ಲಿ ನಡೆದಿದೆ. ಪೂಜೆ ಮಾಡುವಾಗ ಬಾವಿಗೆ ಬಿದ್ದ ಅಜ್ಜಿಯನ್ನು ರಕ್ಷಿಸಲು ಹೋದ ಮೊಮ್ಮಗನೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಸಮಯ 3 ಗಂಟೆ : ನ.30ರಂದು ಬೆಂಗಳೂರಿನಲ್ಲಿ ಕಿಸ್ ಆಫ್ ಲವ್, ಟೌನ್ ಹಾಲ್ ಬಳಿ 4 ಗಂಟೆಗೆ ನಡೆಯಲಿದೆ. ಆದರೆ, ಬೆಂಗಳೂರು ಪೊಲೀಸರು ಈ ಕಾರ್ಯಕ್ರಮಕ್ಕೆ ಇದುವರೆಗೂ ಅನುಮತಿ ನೀಡಿಲ್ಲ.
ಸಮಯ 2 ಗಂಟೆ : ಬೆಂಗಳೂರಿನಲ್ಲಿ ಕಳೆದ ಎರಡು ತಿಂಗಳಿನಿಂದ ವಾಸ್ತವ್ಯ ಹೂಡಿದ್ದ ಫರ್ವೀಜ್ ಖೋಖಾರ್ (71) ಎಂಬ ವಾಯುಪಡೆಯ ನಿವೃತ್ತ ಅಧಿಕಾರಿಯನ್ನು ಕೊಲೆ ಮಾಡಲಾಗಿದೆ. ಆನೇಕಲ್ ಬಳಿಯ ಉಸ್ಕೂರಿನ ಎಸ್ಟೇಟ್ ವಿಲ್ಲಾದಲ್ಲಿ ಖೋಖಾರ್ ವಾಸವಾಗಿದ್ದರು.
ಸಮಯ 1 ಗಂಟೆ : ಮೂರು ಸಾವಿರ ಮಠದ ಶ್ರೀ ರಾಜಯೋಗೇಂದ್ರ ಸ್ವಾಮಿಗಳಿಗೆ ಮಠದಲ್ಲಿ ಯಾರು ಕಿರುಕುಳ ನೀಡಿದ್ದರು ಎಂಬುದನ್ನು ಅವರು ಬಹಿರಂಗಪಡಿಸಬೇಕು ಎಂದು ಹಿರಿಯ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ಆಗ್ರಹಿಸಿದ್ದಾರೆ.

ಸಮಯ 12 ಗಂಟೆ : ಬಹುನಿರೀಕ್ಷಿತ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕದ ಪಟ್ಟಿ ಬಿಡುಗಡೆಯಾಗಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ 92 ನಿಗಮಗಳ ಅಧ್ಯಕ್ಷರ ಪಟ್ಟಿಗೆ ಒಪ್ಪಿಗೆ ನೀಡಿದ್ದಾರೆ. [ಪಟ್ಟಿ ಇಲ್ಲಿದೆ]
ಸಮಯ 11 ಗಂಟೆ : ಹುಬ್ಬಳ್ಳಿಯ ಮೂರು ಸಾವಿರ ಮಠದ ಸ್ವಾಮೀಜಿ ಶ್ರೀ ರಾಜಯೋಗೇಂದ್ರ ಅವರು ಪೀಠ ತ್ಯಾಗ ಮಾಡಿ ಮೂಲ ಹಾನಗಲ್ ಮಠಕ್ಕೆ ತೆರಳಿದ್ದಾರೆ. ಮಠದ ಮುಂದೆ ಧರಣಿ ಮಾಡಬೇಡಿ ಎಂದು ಕರೆ ನೀಡಿರುವ ಸ್ವಾಮೀಜಿ, ಉತ್ತರಾಧಿಕಾರಿ ಆಯ್ಕೆ ಬಗ್ಗೆ ತಮ್ಮನ್ನು ಯಾರೂ ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ.
ಸಮಯ 10 ಗಂಟೆ : ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಹಾಜಿ ಸುರ್ವೆ ಎಂಬ 3ನೇ ಸೆಮಿಸ್ಟರ್ ವಿದ್ಯಾರ್ಥಿನಿ ಪೆಸಿಟ್ ಕಾಲೇಜಿನ ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈಕೆ ಬಿಜಾಪುರದ ನಿವಾಸಿ ಎಂದು ತಿಳಿದುಬಂದಿದೆ.
ಸಮಯ 9 ಗಂಟೆ : ಚಿಕ್ಕಬಳ್ಳಾಪುರದ ಮಂಚೇನಹಳ್ಳಿಯಲ್ಲಿ ದುಷ್ಕರ್ಮಿಗಳಿಬ್ಬರು ಲಕ್ಷಮ್ಮ ಎಂಬುವವರ ಮೇಲೆ ಆಸಿಡ್ ದಾಳಿ ನಡೆಸಿದ್ದಾರೆ. ಇದರಿಂದ ಲಕ್ಷಮ್ಮ ಅವರ ಬಲಗೈ ಹಾಗೂ ಕಣ್ಣಿಗೆ ಗಾಯವಾಗಿದ್ದು ಚಿಕ್ಕಬಳ್ಳಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುರ್ಖಾಹಾಕಿಕೊಂಡು ಬಂದ ಇಬ್ಬರು ಇಂದು ಬೆಳಗ್ಗೆ ಈ ಕೃತ್ಯ ಎಸಗಿದ್ದಾರೆ.
ಸಮಯ 8 ಗಂಟೆ : 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಫೆ.1ರಿಂದ ಮೂರುದಿನಗಳ ಕಾಲ ನಡೆಯುವ ಸಾಧ್ಯತೆ ಇದೆ. ಹಾಸನದ ಶ್ರವಣಬೆಳಗೊಳದಲ್ಲಿ ಸಮ್ಮೇಳನ ನಡೆಯಲಿದ್ದು, ಪೂರ್ವಭಾವಿ ಸಭೆ ದಿನಾಂಕ ನಿಗದಿ ಮಾಡಿ ಕಸಾಪ ಕೇಂದ್ರ ಸಮಿತಿಗೆ ಕಳುಹಿಸಿದೆ. ಕಸಾಪ ಅಂತಿಮ ಒಪ್ಪಿಗೆ ಬಳಿಕ ದಿನಾಂಕ ಪ್ರಕಟವಾಗಲಿದೆ.
ಸಮಯ 7.30 : ಸಚಿವ ಶಾಮನೂರು ಶಿವಶಂಕರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕುಟುಂಬದ ನಡುವಿನ ನೆಂಟಸ್ಥಿಕೆಗೆ ಇಂದು ಅಧಿಕೃತ ಮುದ್ರೆ ಬೀಳಲಿದೆ. ದಾವಣಗೆರೆಯಲ್ಲಿ ಇಂದು ಸಂಜೆ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗಳ ಮತ್ತು ಜಗದೀಶ್ ಶೆಟ್ಟರ್ ಅವರ ಮಗ ಪ್ರಶಾಂತ್ ಶೆಟ್ಟರ್ ವಿವಾಹ ನಿಶ್ಚಿತಾರ್ಥ ನಡೆಯಲಿದೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications